Homeಮುಖಪುಟದೇಶದಲ್ಲಿ 20 ವರ್ಷಗಳಲ್ಲಿ 1,888 ಲಾಕಪ್ ಡೆತ್: ಕೇವಲ 26 ಮಂದಿ ಪೊಲೀಸರಿಗೆ ಶಿಕ್ಷೆ

ದೇಶದಲ್ಲಿ 20 ವರ್ಷಗಳಲ್ಲಿ 1,888 ಲಾಕಪ್ ಡೆತ್: ಕೇವಲ 26 ಮಂದಿ ಪೊಲೀಸರಿಗೆ ಶಿಕ್ಷೆ

- Advertisement -
- Advertisement -

ಕಳೆದ 20 ವರ್ಷಗಳಲ್ಲಿ, ದೇಶಾದ್ಯಂತ 1,888 ಲಾಕಪ್ ಡೆತ್ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಪೊಲೀಸ್ ಸಿಬ್ಬಂದಿ ವಿರುದ್ಧ 893 ಪ್ರಕರಣಗಳನ್ನು ದಾಖಲಿಸಲಾಗಿದೆ. 358 ಸಿಬ್ಬಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಆದರೆ ಈ ಅವಧಿಯಲ್ಲಿ ಕೇವಲ 26 ಪೊಲೀಸರಿಗೆ ಶಿಕ್ಷೆಯಾಗಿದೆ ಎಂದು ಅಧಿಕೃತ ದಾಖಲೆಗಳು ತಿಳಿಸಿವೆ.

2001-2020 ರವರೆಗಿನ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ(National Crime Records Bureau) ವಾರ್ಷಿಕ ಅಪರಾಧದ (CII) ವರದಿಗಳು ಈ ನಿರಾಶದಾಯಕ ಸತ್ಯವನ್ನು ಹೊರಗೆಡವಿದೆ. 1,888 ಜನರ ಲಾಕಪ್‌ ಡೆತ್‌ ಆಗಿದ್ದರೂ ಕೂಡ ಶಿಕ್ಷೆ ಕೇವಲ 26 ಪೊಲೀಸರಿಗೆ ಎನ್ನುವುದನ್ನು ಈ ದಾಖಲೆಗಳು ಬಿಚ್ಚಿಟ್ಟಿವೆ.

ಉತ್ತರ ಪ್ರದೇಶದ ಕಾಸ್‌ಗಂಜ್‌ನಲ್ಲಿ ಕಳೆದ ಮಂಗಳವಾರ 22 ವರ್ಷದ ಅಲ್ತಾಫ್‌ನ ಕಸ್ಟಡಿ ಸಾವಿನ ಹಿನ್ನೆಲೆಯಲ್ಲಿ ಈ ವರದಿ ಮಹತ್ವ ಪಡೆದುಕೊಂಡಿದೆ. ಹಿಂದೂ ಸಮುದಾಯದ ಅಪ್ರಾಪ್ತ ಬಾಲಕಿ ನಾಪತ್ತೆಯಾದ ಪ್ರಕರಣದಲ್ಲಿ ಮುಸ್ಲಿಂ ಸಮುದಾಯದ ಅಪ್ತಾಫ್‌ನನ್ನು ಬಂಧಿಸಲಾಗಿತ್ತು. ಕಾಸ್‌ಗಂಜ್‌ ಲಾಕಪ್ ಡೆತ್ ನಂತರ, ಕಾಸ್‌ಗಂಜ್‌ನ ಕೊಟ್ವಾಲಿ ಪೊಲೀಸ್ ಠಾಣೆಯ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. 

ಇದನ್ನೂ ಓದಿ: ಕಾಸ್‌ಗಂಜ್ ಮುಸ್ಲಿಂ ಯುವಕನ ಲಾಕಪ್ ಡೆತ್: ಸರ್ಕಾರದಿಂದ ವರದಿ ಕೇಳಿದ ಅಲ್ಪಸಂಖ್ಯಾತರ ಆಯೋಗ

ನೆಲದಿಂದ ಕೇವಲ ಒಂದೆರಡು ಅಡಿ ಎತ್ತರದಲ್ಲಿರುವ ಶೌಚಾಲಯದ ನೀರಿನ ಪೈಪ್‌ಗೆ ಅಲ್ತಾಫ್ ತನ್ನ ಜಾಕೆಟ್‌ನ ಹುಡ್‌ನಿಂದ ನೇಣು ಬಿಗಿದುಕೊಂಡಿದ್ದರು ಎಂದು ಪೊಲೀಸರು ಹೇಳಿದ್ದರು. ಕಸ್ಟಡಿ ಸಾವಿನ ಬಗ್ಗೆ ಇಲಾಖಾ ವಿಚಾರಣೆ ಮತ್ತು ಮ್ಯಾಜಿಸ್ಟ್ರೇಟ್ ತನಿಖೆಯನ್ನು ಏಕಕಾಲದಲ್ಲಿ ನಡೆಸಲಾಗುತ್ತಿದೆ ಎಂದು ಯುಪಿ ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಮಾಹಿತಿಯ ಪ್ರಕಾರ, 2020 ರಲ್ಲಿ 76 ಲಾಕಪ್ ಡೆತ್ ವರದಿಯಾಗಿವೆ. ಗುಜರಾತ್‌ನಲ್ಲಿ ಅತಿ ಹೆಚ್ಚು ಅಂದರೆ, 15 ಸಾವುಗಳು ವರದಿಯಾಗಿವೆ. ಉಳಿದಂತೆ ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಉತ್ತರ ಪ್ರದೇಶ, ಹರಿಯಾಣ, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ರಾಜಸ್ಥಾನ, ತಮಿಳುನಾಡು, ತೆಲಂಗಾಣ ಮತ್ತು ಪಶ್ಚಿಮ ಬಂಗಾಳ ಸೇರಿವೆ.

ಎನ್‌ಸಿಆರ್‌ಬಿ 2017 ರಿಂದ ಲಾಕಪ್ ಡೆತ್ ಪ್ರಕರಣಗಳಲ್ಲಿ ಬಂಧಿತ ಪೊಲೀಸರ ಡೇಟಾವನ್ನು ಬಿಡುಗಡೆ ಮಾಡುತ್ತಿದೆ. ಕಳೆದ ನಾಲ್ಕು ವರ್ಷಗಳಲ್ಲಿ ‌ಈ ಸಾವುಗಳಿಗೆ ಸಂಬಂಧಿಸಿದಂತೆ 96 ಪೊಲೀಸರನ್ನು ಬಂಧಿಸಲಾಗಿದೆ.

ಎನ್‌ಸಿಆರ್‌ಬಿ ಪೊಲೀಸ್ ಕಸ್ಟಡಿ/ಲಾಕಪ್‌ ಡೆತ್‌‌ಗಳನ್ನು ರಿಮಾಂಡ್‌ನಲ್ಲಿ ಇಲ್ಲದ ವ್ಯಕ್ತಿಗಳು ಮತ್ತು ರಿಮಾಂಡ್‌ನಲ್ಲಿರುವ ವ್ಯಕ್ತಿಗಳು ಎಂದು ಎರಡು ವಿಭಾಗಗಳ ಅಡಿಯಲ್ಲಿ ವರ್ಗೀಕರಿಸಿದೆ.

ರಿಮಾಂಡ್‌ನಲ್ಲಿ ಇಲ್ಲದ ವ್ಯಕ್ತಿಗಳು ಎಂದರೆ, ಬಂಧಿಸಲ್ಪಟ್ಟವರನ್ನು ಇನ್ನೂ ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕಾದವರು. ರಿಮಾಂಡ್‌ನಲ್ಲಿರುವ ವ್ಯಕ್ತಿಗಳು ಎಂದರೆ ಪೊಲೀಸ್ ಅಥವಾ ನ್ಯಾಯಾಂಗ ಬಂಧನದಲ್ಲಿರುವವರು.

2006 ರಲ್ಲಿ ಉತ್ತರ ಪ್ರದೇಶದಲ್ಲಿ ಏಳು ಮತ್ತು ಮಧ್ಯಪ್ರದೇಶದಲ್ಲಿ ನಾಲ್ವರು ಪೊಲೀಸರು ಲಾಕಪ್ ಡೆತ್ ಪ್ರಕರಣದಲ್ಲಿ ತಪ್ಪಿತಸ್ಥರೆಂದು ವರದಿಯಾಗಿತ್ತು. ಈ 11 ಮಂದಿ ಪೊಲೀಸರಿಗೂ ಶಿಕ್ಷೆಯಾಗಿದ್ದು, 20 ವರ್ಷಗಳಲ್ಲಿ ಒಂದೇ ಬಾರಿಗೆ ಶಿಕ್ಷೆಗೆ ಗುರಿಯಾದ ಅತ್ಯಧಿಕ ಪೊಲೀಸರು ಇವರು ಎಂಬುದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ದತ್ತಾಂಶದಲ್ಲಿ ಕಾಣಸಿಗುತ್ತದೆ. ಆದರೆ, ಇವರೆಲ್ಲಾ ಅದೇ ವರ್ಷ ಮಾಡಿದ ಅಪರಾಧಕ್ಕೆ ಶಿಕ್ಷೆ ಅನುಭವಿಸಿದ್ದಾರೆಯೇ ಎಂಬ ಬಗ್ಗೆ ಯಾವುದೇ ಮಾಹಿತಿಯಿಲ್ಲ.


ಇದನ್ನೂ ಓದಿ: ಕಾಸ್‌ಗಂಜ್ ಲಾಕಪ್‌ ಡೆತ್: ಅಪರಿಚಿತ ಪೊಲೀಸರ ವಿರುದ್ಧ ಕೊಲೆ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...