Homeಮುಖಪುಟಆದಿವಾಸಿ ವ್ಯಕ್ತಿಯ ಕಸ್ಟಡಿ ಸಾವು: ಪೊಲೀಸ್ ಅಧಿಕಾರಿಗಳ ಬಂಧನಕ್ಕೆ ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಆದಿವಾಸಿ ವ್ಯಕ್ತಿಯ ಕಸ್ಟಡಿ ಸಾವು: ಪೊಲೀಸ್ ಅಧಿಕಾರಿಗಳ ಬಂಧನಕ್ಕೆ ಗಡುವು ವಿಧಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಆದಿವಾಸಿ ವ್ಯಕ್ತಿಯೊಬ್ಬರ ಕಸ್ಟಡಿ ಚಿತ್ರಹಿಂಸೆ ಮತ್ತು ಸಾವಿನ ಆರೋಪ ಹೊತ್ತಿರುವ ಮೇಲೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಕ್ಟೋಬರ್ 7ರೊಳಗೆ ಬಂಧಿಸಲು ವಿಫಲವಾದರೆ ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ಮಧ್ಯಪ್ರದೇಶ ಸರ್ಕಾರದ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ಎಚ್ಚರಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

“ನ್ಯಾಯಾಲಯದ ನಿರ್ದೇಶನವನ್ನು ಪಾಲಿಸಿ. ಇಲ್ಲದಿದ್ದರೆ ಈ ವಿಷಯವನ್ನು ಹೇಗೆ ಇತ್ಯರ್ಥಪಡಿಸಬೇಕೆಂದು ನಮಗೆ ಗೊತ್ತಿದೆ. ನಾವು ಸೂಕ್ತ ಕ್ರಮ ಕೈಗೊಳ್ಳುತ್ತೇವೆ” ಎಂದು ಸಿಬಿಐ ಮತ್ತು ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌  ಎಚ್ಚರಿಕೆ ನೀಡಿದೆ.

ಜುಲೈ 2024ರಲ್ಲಿ, ಮದುವೆಗೆ ಕೆಲ ದಿನಗಳ ಮುನ್ನ, 25 ವರ್ಷದ ದೇವ ಪಾರ್ಧಿ ಎಂಬ ಆದಿವಾಸಿ ಯುವಕ ಮತ್ತು ಅವರ ಚಿಕ್ಕಪ್ಪ ಗಂಗಾರಾಮ್ ಪಾರ್ಧಿ ಅವರನ್ನು ಕಳ್ಳತನದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದರು. ಬಳಿಕ ದೇವ ಪಾರ್ಧಿ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅವರ ಕುಟುಂಬಕ್ಕೆ ತಿಳಿಸಲಾಗಿತ್ತು.

ದೇವ ಪಾರ್ಧಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿಕೊಂಡರೂ, ಕಸ್ಟಡಿಯಲ್ಲಿ ಇಬ್ಬರೂ ವ್ಯಕ್ತಿಗಳಿಗೆ ಚಿತ್ರಹಿಂಸೆ ನೀಡಲಾಗಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಮಧ್ಯಪ್ರದೇಶ ಪೊಲೀಸರು ಈ ಪ್ರಕರಣದ ತನಿಖೆಯನ್ನು ‘ನ್ಯಾಯಯುತ’ ಮತ್ತು ‘ಪಾರದರ್ಶಕ ರೀತಿಯಲ್ಲಿ’ ನಡೆಸಿಲ್ಲ ಎಂದು ಸುಪ್ರೀಂ ಕೋರ್ಟ್ ಕಂಡುಕೊಂಡ ನಂತರ, ಮೇ 15 ರಂದು ಪ್ರಕರಣವನ್ನು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸಿತ್ತು.

ಅಧಿಕಾರಿಗಳು ಹೊಣೆಗಾರರೆಂದು ಕಂಡುಬಂದರೆ, ಒಂದು ತಿಂಗಳೊಳಗೆ ಅವರನ್ನು ಬಂಧಿಸಬೇಕು ಎಂದು ಸುಪ್ರೀಂ ಕೋರ್ಟ್ ಆ ಸಮಯದಲ್ಲಿ ನಿರ್ದೇಶಿಸಿತ್ತು.

ಮಂಗಳವಾರ, ದೇವ ಪಾರ್ಧಿ ಅವರ ತಾಯಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರಕರಣದ ಆರೋಪಿಗಳಾದ ಪೊಲೀಸ್ ಅಧಿಕಾರಿಗಳನ್ನು ಬಂಧಿಸಲು ಸಿಬಿಐಗೆ ಎರಡು ದಿನಗಳ ಕಾಲಾವಕಾಶ ನೀಡಿತ್ತು.

ಈ ವೇಳೆ ಪ್ರತಿಕ್ರಿಯಿಸಿದ್ದ ಸಿಬಿಐ, ಆರೋಪಿ ಪೊಲೀಸ್ ಅಧಿಕಾರಿಗಳಾದ ಸಂಜೀವ್ ಸಿಂಗ್ ಮಾಳವೀಯ ಮತ್ತು ಉತ್ತಮ್ ಸಿಂಗ್ ಕುಶ್ವಾಹ ಏಪ್ರಿಲ್‌ನಿಂದ ತಲೆಮರೆಸಿಕೊಂಡಿದ್ದಾರೆ ಎಂದು ಹೇಳಿತ್ತು. ಇದನ್ನು ಕೇಳಿದ ನ್ಯಾಯಾಧೀಶರು ಕೆಂಡಾಮಂಡಲರಾಗಿದ್ದರು.

ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಆರ್. ಮಹಾದೇವನ್ ಅವರ ಪೀಠವು, ಸಮವಸ್ತ್ರದಲ್ಲಿರುವವರಿಗೆ ಕಾನೂನು ಭಿನ್ನವಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ.

ಆರೋಪಿಗಳು ಖಾಸಗಿ ವ್ಯಕ್ತಿಗಳಾಗಿದ್ದರೆ ಅವರನ್ನು 15 ದಿನಗಳಲ್ಲಿ ಬಂಧಿಸುತ್ತಿದ್ದರಿ. ಇವರು ಇನ್ಸ್‌ಪೆಕ್ಟರ್‌ಗಳಾಗಿರುವುದರಿಂದ ಬಂಧಿಸಲು ನಿಮಗೆ ಕಷ್ಟವಾಗುತ್ತಿದೆಯಾ? ಎಂದು ನ್ಯಾಯಾಧೀಶರು ಖಾರವಾಗಿ ಪ್ರಶ್ನಿಸಿದ್ದಾರೆ.

ತಲೆಮರೆಸಿಕೊಂಡಿರುವ ಅಧಿಕಾರಿಗಳು ಇನ್ನೂ ಸಂಬಳ ಪಡೆಯುತ್ತಿದ್ದಾರೆ. ಅವರನ್ನು ಏಕೆ ಅಮಾನತುಗೊಳಿಸಿಲ್ಲ? ಎಂದು ಗುರುವಾರದ ವಿಚಾರಣೆ ವೇಳೆ ನ್ಯಾಯಾಧೀಶರು ಕೇಳಿದ್ದರು.

ಆರೋಪಿ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಅವರ ಸಂಬಳವನ್ನು ನಿಲ್ಲಿಸಲಾಗಿದೆ ಎಂದು ಪ್ರಾಸಿಕ್ಯೂಷನ್ ಪರ ವಕೀಲರು ಶುಕ್ರವಾರ ಪೀಠಕ್ಕೆ ತಿಳಿಸಿದ್ದಾರೆ.

ಆರೋಪಿ ಅಧಿಕಾರಿಗಳನ್ನು ಪತ್ತೆಹಚ್ಚಲು ಕಷ್ಟವಾಗುತ್ತಿದೆ ಎಂಬ ಸಿಬಿಐ ಹೇಳಿಕೆಯನ್ನು ನ್ಯಾಯ ಪೀಠ ತಿರಸ್ಕರಿಸಿದೆ.

ಆರೋಪಿಗಳ ಮಾಹಿತಿ ನೀಡುವವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿದೆ. ಅವರ ಹಣಕಾಸಿನ ವಹಿವಾಟುಗಳನ್ನು ಟ್ರ್ಯಾಕ್ ಮಾಡಲಾಗಿದೆ. ಟೋಲ್ ಮತ್ತು ಸಾಮಾಜಿಕ ಮಾಧ್ಯಮ ಮಾಹಿತಿಗಳನ್ನು ಸಂಗ್ರಹಿಸಲಾಗಿದೆ. ಅಲ್ಲದೆ, ಭೌತಿಕ ಕಣ್ಗಾವಲು ಇರಿಸಲಾಗಿದೆ ಎಂಬ ಸಿಬಿಐ ಹೇಳಿಕೆಯನ್ನು ‘ಕಣ್ಣೊರೆಸುವ ತಂತ್ರ’ ಎಂದು ನ್ಯಾಯಾಲಯ ಟೀಕಿಸಿದೆ.

ಅಕ್ಟೋಬರ್ 7 ರೊಳಗೆ ಆರೋಪಿಗಳನ್ನು ಬಂಧಿಸಿ, ಆದೇಶ ಅನುಸರಣಾ ವರದಿಯನ್ನು ಸಲ್ಲಿಸಬೇಕು. ಅಕ್ಟೋಬರ್ 8 ರಂದು ಮುಂದಿನ ವಿಚಾರಣೆಯನ್ನು ನಡೆಸಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ.

‘ಐ ಲವ್ ಮುಹಮ್ಮದ್’ ವಿವಾದ: ದೇಶದಾದ್ಯಂತ 3000ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...