Homeಕರ್ನಾಟಕಬ್ಯಾಟರಾಯನಪುರ ಠಾಣೆಯಲ್ಲಿ ಯುವಕನಿಗೆ ಕಸ್ಟಡಿ ಹಿಂಸೆ: ಪಾಪ್ಯುಲರ್ ಫ್ರಂಟ್ ಆಕ್ರೋಶ

ಬ್ಯಾಟರಾಯನಪುರ ಠಾಣೆಯಲ್ಲಿ ಯುವಕನಿಗೆ ಕಸ್ಟಡಿ ಹಿಂಸೆ: ಪಾಪ್ಯುಲರ್ ಫ್ರಂಟ್ ಆಕ್ರೋಶ

ಮತ್ತೊಬ್ಬ ಮುಸ್ಲಿಮ್ ಯುವಕನನ್ನು ಬಂಧನದಲ್ಲಿಟ್ಟು ಸತತ ಚಿತ್ರಹಿಂಸೆ ನೀಡಿ ಆತನ ಬಲಗೈ ಕಳೆದುಕೊಳ್ಳುವಂತೆ ಮಾಡಿದ ಆರೋಪದಲ್ಲಿ ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆಯ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

- Advertisement -
- Advertisement -

ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆಯಲ್ಲಿ ಚಿತ್ರಹಿಂಸೆಗೊಳಗಾಗಿ ಯುವಕಬ್ಬ ತನ್ನ ಬಲಗೈ ಕಳೆದುಕೊಂಡ ಘಟನೆ ಬೆನ್ನಲ್ಲೆ ತೌಸೀಫ್ ಎಂಬ ಮುಸ್ಲಿಮ್ ಯುವಕನಿಗೆ ಬ್ಯಾಟರಾಯನಪುರ ಠಾಣೆ ಪೊಲೀಸರು ಗಂಭೀರವಾಗಿ ಥಳಿಸಿರುವ ಮತ್ತೊಂದು ಪ್ರಕರಣ ವರದಿಯಾಗಿದೆ.

ಇತ್ತೀಚೆಗೆ ಮುಸ್ಲಿಮ್ ಯುವಕರ ಮೇಲೆ ಪೂರ್ವಗ್ರಹಪೀಡಿತ ಪೊಲೀಸರು ಕಸ್ಟಡಿ ಚಿತ್ರಹಿಂಸೆ ನೀಡುವ ಘಟನೆಗಳು ವರದಿಯಾಗುತ್ತಿವೆ. ಈ ಕಾನೂನುಬಾಹಿರ ಪೊಲೀಸ್ ಗೂಂಡಾಗಿರಿ ನಿಲ್ಲಬೇಕೇಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಬೆಂಗಳೂರು ಜಿಲ್ಲಾಧ್ಯಕ್ಷ ಸೈಯ್ಯದ್ ಜಾವೇದ್ ತೀವ್ರ ಆಗ್ರಹಿಸಿದ್ದಾರೆ.

ಘಟನೆಯ ವಿವರ

ಯುವಕನೋರ್ವ ಗುದ್ದದಹಳ್ಳಿಯ ತಮ್ಮ ಮನೆ ಬಳಿ ಕುಳಿತುಕೊಂಡಿದ್ದನ್ನು ತೌಸೀಫ್ ಆಕ್ಷೇಪಿಸಿದ್ದ. ಆ ನಂತರ ಊರ ಮಂದಿಯ ಮಧ್ಯಸ್ಥಿಕೆಯೊಂದಿಗೆ ಆ ಯುವಕನಿಗೆ ಗುದ್ದದಹಳ್ಳಿಗೆ ಬರದಂತೆ ಎಚ್ಚರಿಕೆ ನೀಡಲಾಗಿತ್ತು. ಆದರೆ 8 ತಿಂಗಳ ನಂತರ, ಮೂರು ದಿನಗಳ ಹಿಂದೆ ಆ ಯುವಕ ಮತ್ತೇ ಗುದ್ದದಹಳ್ಳಿಗೆ ಬಂದಿದ್ದ. ಆ ವೇಳೆ ತೌಸೀಫ್ ಆ ಯುವಕನನ್ನು ದೂರ ಕರೆದುಕೊಂಡು ಹೋಗಿ ಪ್ರಶ್ನಿಸಿದ್ದಾನೆ. ಇದು ಪೊಲೀಸರಿಗೆ ತಿಳಿದು ಪೊಲೀಸರು ಇಬ್ಬರನ್ನೂ ವಿಚಾರಿಸಿದ ಬಳಿಕ ತೌಸೀಫ್ ನನ್ನು ಬ್ಯಾಟರಾಯನಪುರ ಠಾಣೆಗೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ ಎಂದು ತೌಸಿಫ್ ಆರೋಪಿಸಿದ್ದಾರೆ.

ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತೌಸೀಫ್ ಹೇಳುವಂತೆ, ‘ಠಾಣೆಯಲ್ಲಿ ಸರ್ಕಲ್ ಪೊಲೀಸ್ ಶಂಕರ್ ನಾಯಕ್, ಸಬ್ ಇನ್ಸ್ ಪೆಕ್ಟರ್ ಹರೀಶ್ ಉಪಸ್ಥಿತಿಯಲ್ಲಿ ಇತರ ಸಿಬ್ಬಂದಿ ತನ್ನ ಗಡ್ಡ ಕತ್ತರಿಸಿದ್ದಾರೆ. ಮುಂಜಾನೆ 2 ಗಂಟೆಯಿಂದ ಸುಮಾರು 5 ಗಂಟೆಯವರಗೆ ನಿರಂತರ 3 ಗಂಟೆಗಳ ಕಾಲ ಥಳಿಸಿದ್ದಾರೆ. ಬಾಯಾರಿಕೆ ತಣಿಸಲು ನೀರು ಕೇಳಿದಾಗ ಮೂತ್ರ ನೀಡಲಾಗಿದೆ. ಕಾಲು, ಬೂಟುಗಳಿಂದ ತಲೆ, ಮುಖ, ಭುಜ, ಗುಪ್ತಾಂಗಕ್ಕೆ ಒದೆಯಲಾಗಿದೆ. ತೀವ್ರ ತೆರನಾದ ಥಳಿತದಿಂದ ಯುವಕನ ಕಾಲು ಬಾತುಕೊಂಡಿದೆ. ನಡೆದಾಡಲೂ ಸಾಧ್ಯವಾಗದೇ ಕೊನೆಗೆ ಮೂರ್ಛೆ ತಪ್ಪಿದ್ದೆ. ಯಾವುದೇ ಪ್ರಕರಣ ದಾಖಲಿಸದ ಪೊಲೀಸರು, ಆತನ ಬಿಡುಗಡೆಗಾಗಿ 1 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದು, 30 ಸಾವಿರ ರೂಪಾಯಿ ನೀಡಿದ ಬಳಿಕ ಆತನನ್ನು ಬಿಡುಗಡೆಗೊಳಿಸಿದ್ದಾರೆ’ ಎಂದು ಆರೋಪಿಸಲಾಗಿದೆ.

ಠಾಣೆಯಲ್ಲಿ ಪ್ರಕರಣ ಇತ್ಯರ್ಥಪಡಿಸಲು ಪೊಲೀಸರು ಇಂತಿಷ್ಟು ಮೊತ್ತಕ್ಕೆ ಬೇಡಿಕೆ ಇಡುವ ವಿಚಾರ ಗುಪ್ತವಾಗಿರುವುದೇನಲ್ಲ. ಬ್ಯಾಟರಾಯನ ಠಾಣೆಯಲ್ಲಿ ಕೇಳಿ ಬಂದಿರುವ ಪೊಲೀಸರು ಹಣಕ್ಕಾಗಿ ಬೇಡಿಕೆ ಇಟ್ಟಿರುವ ವಿಚಾರವೇ ವಾರದ ಹಿಂದೆ ವರ್ತೂರು ಠಾಣೆಯಲ್ಲೂ ಕೇಳಿ ಬಂದಿತ್ತು. ತಮ್ಮ ಹಣದಾಹಕ್ಕಾಗಿ ಯುವಕರಿಗೆ ಚಿತ್ರಹಿಂಸೆ ನೀಡುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಂಡು, ಜನಸಾಮಾನ್ಯರಿಗೆ ಕಿರುಕುಳ ನೀಡುವ ಇಂತಹ ಅನಿಷ್ಟ ಪದ್ಧತಿಗೆ ಅಂತ್ಯ ಕಾಣಿಸಬೇಕು ಎಂದು ಪಿಎಫ್‌ಐ ಒತ್ತಾಯಿಸಿದೆ.

ತೌಸೀಫ್‌ಗೆ ಗಂಭೀರವಾಗಿ ಥಳಿಸಿರುವ ಪೊಲೀಸರನ್ನು ಕೂಡಲೇ ಅಮಾನತುಗೊಳಿಸಿ ಅವರ ವಿರುದ್ಧ ಇಲಾಖಾ ವಿಚಾರಣೆ ನಡೆಸಬೇಕು. ಮಾನವ ಹಕ್ಕುಗಳ ಆಯೋಗವು ಕೂಡ ಇಂತಹ  ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಸಂತ್ರಸ್ತ ಯುವಕನ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಬೇಕು ಮತ್ತು 10 ಲಕ್ಷ ರೂಪಾಯಿ ಪರಿಹಾರ ಘೋಷಿಸಬೇಕೆಂದು ಸೈಯ್ಯದ್ ಜಾವೇದ್ ಆಗ್ರಹಿಸಿದ್ದಾರೆ.

ಇನ್ನೊಂದೆಡೆ 22 ವರ್ಷದ ಯುವಕರೊಬ್ಬನನ್ನು ಬಂಧನದಲ್ಲಿಟ್ಟು ಸತತ ಚಿತ್ರಹಿಂಸೆ ನೀಡಿ ಆತ ತನ್ನ ಬಲಗೈ ಕಳೆದುಕೊಳ್ಳುವಂತೆ ಮಾಡಿದ ಆರೋಪದಲ್ಲಿ ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆಯ ಮೂವರು ಪೊಲೀಸರನ್ನು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಅಮಾನತುಗೊಳಿಸಿದ್ದಾರೆ. ಸಲ್ಮಾನ್ ಮೇಲೆ ಹಲ್ಲೆ ನಡೆಸಿರುವುದು ಹಿರಿಯ ಅಧಿಕಾರಿಯ ವಿಚಾರಣೆಯ ನಂತರ ಬೆಳಕಿಗೆ ಬಂದಿದ್ದು, ಹೆಡ್ ಕಾನ್‌ಸ್ಟೆಬಲ್‌ಗಳಾದ ನಾಗಭೂಷಣ ಗೌಡ, ನಾಗರಾಜ್ ಬಿ.ಎನ್ ಮತ್ತು ಶಿವಕುಮಾರ್ ಹೆಚ್ ಎಂಬುವವರನ್ನು ಅಮಾನತುಗೊಳಿಸಲಾಗಿದೆ. ಈ ಪ್ರಕರಣವನ್ನು ಪಿಎಫ್‌ಐ ಬೆಳಕಿಗೆ ತಂದು ನ್ಯಾಯಕ್ಕಾಗಿ ಆಗ್ರಹಿಸಿತ್ತು.


ಇದನ್ನೂ ಓದಿ: ಬೆಂಗಳೂರು: ಯುವಕನ ಬಲಗೈ ಕಟ್ ಆಗುವಂತೆ ಚಿತ್ರಹಿಂಸೆ ನೀಡಿದ್ದ ಮೂವರು ಪೊಲೀಸರ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...