Homeಕರ್ನಾಟಕಬ್ಯಾಟರಾಯನಪುರ ಠಾಣೆಯಲ್ಲಿ ಯುವಕನಿಗೆ ಕಸ್ಟಡಿ ಹಿಂಸೆ: ಪಾಪ್ಯುಲರ್ ಫ್ರಂಟ್ ಆಕ್ರೋಶ

ಬ್ಯಾಟರಾಯನಪುರ ಠಾಣೆಯಲ್ಲಿ ಯುವಕನಿಗೆ ಕಸ್ಟಡಿ ಹಿಂಸೆ: ಪಾಪ್ಯುಲರ್ ಫ್ರಂಟ್ ಆಕ್ರೋಶ

ಮತ್ತೊಬ್ಬ ಮುಸ್ಲಿಮ್ ಯುವಕನನ್ನು ಬಂಧನದಲ್ಲಿಟ್ಟು ಸತತ ಚಿತ್ರಹಿಂಸೆ ನೀಡಿ ಆತನ ಬಲಗೈ ಕಳೆದುಕೊಳ್ಳುವಂತೆ ಮಾಡಿದ ಆರೋಪದಲ್ಲಿ ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆಯ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

- Advertisement -
- Advertisement -

ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆಯಲ್ಲಿ ಚಿತ್ರಹಿಂಸೆಗೊಳಗಾಗಿ ಯುವಕಬ್ಬ ತನ್ನ ಬಲಗೈ ಕಳೆದುಕೊಂಡ ಘಟನೆ ಬೆನ್ನಲ್ಲೆ ತೌಸೀಫ್ ಎಂಬ ಮುಸ್ಲಿಮ್ ಯುವಕನಿಗೆ ಬ್ಯಾಟರಾಯನಪುರ ಠಾಣೆ ಪೊಲೀಸರು ಗಂಭೀರವಾಗಿ ಥಳಿಸಿರುವ ಮತ್ತೊಂದು ಪ್ರಕರಣ ವರದಿಯಾಗಿದೆ.

ಇತ್ತೀಚೆಗೆ ಮುಸ್ಲಿಮ್ ಯುವಕರ ಮೇಲೆ ಪೂರ್ವಗ್ರಹಪೀಡಿತ ಪೊಲೀಸರು ಕಸ್ಟಡಿ ಚಿತ್ರಹಿಂಸೆ ನೀಡುವ ಘಟನೆಗಳು ವರದಿಯಾಗುತ್ತಿವೆ. ಈ ಕಾನೂನುಬಾಹಿರ ಪೊಲೀಸ್ ಗೂಂಡಾಗಿರಿ ನಿಲ್ಲಬೇಕೇಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಬೆಂಗಳೂರು ಜಿಲ್ಲಾಧ್ಯಕ್ಷ ಸೈಯ್ಯದ್ ಜಾವೇದ್ ತೀವ್ರ ಆಗ್ರಹಿಸಿದ್ದಾರೆ.

ಘಟನೆಯ ವಿವರ

ಯುವಕನೋರ್ವ ಗುದ್ದದಹಳ್ಳಿಯ ತಮ್ಮ ಮನೆ ಬಳಿ ಕುಳಿತುಕೊಂಡಿದ್ದನ್ನು ತೌಸೀಫ್ ಆಕ್ಷೇಪಿಸಿದ್ದ. ಆ ನಂತರ ಊರ ಮಂದಿಯ ಮಧ್ಯಸ್ಥಿಕೆಯೊಂದಿಗೆ ಆ ಯುವಕನಿಗೆ ಗುದ್ದದಹಳ್ಳಿಗೆ ಬರದಂತೆ ಎಚ್ಚರಿಕೆ ನೀಡಲಾಗಿತ್ತು. ಆದರೆ 8 ತಿಂಗಳ ನಂತರ, ಮೂರು ದಿನಗಳ ಹಿಂದೆ ಆ ಯುವಕ ಮತ್ತೇ ಗುದ್ದದಹಳ್ಳಿಗೆ ಬಂದಿದ್ದ. ಆ ವೇಳೆ ತೌಸೀಫ್ ಆ ಯುವಕನನ್ನು ದೂರ ಕರೆದುಕೊಂಡು ಹೋಗಿ ಪ್ರಶ್ನಿಸಿದ್ದಾನೆ. ಇದು ಪೊಲೀಸರಿಗೆ ತಿಳಿದು ಪೊಲೀಸರು ಇಬ್ಬರನ್ನೂ ವಿಚಾರಿಸಿದ ಬಳಿಕ ತೌಸೀಫ್ ನನ್ನು ಬ್ಯಾಟರಾಯನಪುರ ಠಾಣೆಗೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ ಎಂದು ತೌಸಿಫ್ ಆರೋಪಿಸಿದ್ದಾರೆ.

ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತೌಸೀಫ್ ಹೇಳುವಂತೆ, ‘ಠಾಣೆಯಲ್ಲಿ ಸರ್ಕಲ್ ಪೊಲೀಸ್ ಶಂಕರ್ ನಾಯಕ್, ಸಬ್ ಇನ್ಸ್ ಪೆಕ್ಟರ್ ಹರೀಶ್ ಉಪಸ್ಥಿತಿಯಲ್ಲಿ ಇತರ ಸಿಬ್ಬಂದಿ ತನ್ನ ಗಡ್ಡ ಕತ್ತರಿಸಿದ್ದಾರೆ. ಮುಂಜಾನೆ 2 ಗಂಟೆಯಿಂದ ಸುಮಾರು 5 ಗಂಟೆಯವರಗೆ ನಿರಂತರ 3 ಗಂಟೆಗಳ ಕಾಲ ಥಳಿಸಿದ್ದಾರೆ. ಬಾಯಾರಿಕೆ ತಣಿಸಲು ನೀರು ಕೇಳಿದಾಗ ಮೂತ್ರ ನೀಡಲಾಗಿದೆ. ಕಾಲು, ಬೂಟುಗಳಿಂದ ತಲೆ, ಮುಖ, ಭುಜ, ಗುಪ್ತಾಂಗಕ್ಕೆ ಒದೆಯಲಾಗಿದೆ. ತೀವ್ರ ತೆರನಾದ ಥಳಿತದಿಂದ ಯುವಕನ ಕಾಲು ಬಾತುಕೊಂಡಿದೆ. ನಡೆದಾಡಲೂ ಸಾಧ್ಯವಾಗದೇ ಕೊನೆಗೆ ಮೂರ್ಛೆ ತಪ್ಪಿದ್ದೆ. ಯಾವುದೇ ಪ್ರಕರಣ ದಾಖಲಿಸದ ಪೊಲೀಸರು, ಆತನ ಬಿಡುಗಡೆಗಾಗಿ 1 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದು, 30 ಸಾವಿರ ರೂಪಾಯಿ ನೀಡಿದ ಬಳಿಕ ಆತನನ್ನು ಬಿಡುಗಡೆಗೊಳಿಸಿದ್ದಾರೆ’ ಎಂದು ಆರೋಪಿಸಲಾಗಿದೆ.

ಠಾಣೆಯಲ್ಲಿ ಪ್ರಕರಣ ಇತ್ಯರ್ಥಪಡಿಸಲು ಪೊಲೀಸರು ಇಂತಿಷ್ಟು ಮೊತ್ತಕ್ಕೆ ಬೇಡಿಕೆ ಇಡುವ ವಿಚಾರ ಗುಪ್ತವಾಗಿರುವುದೇನಲ್ಲ. ಬ್ಯಾಟರಾಯನ ಠಾಣೆಯಲ್ಲಿ ಕೇಳಿ ಬಂದಿರುವ ಪೊಲೀಸರು ಹಣಕ್ಕಾಗಿ ಬೇಡಿಕೆ ಇಟ್ಟಿರುವ ವಿಚಾರವೇ ವಾರದ ಹಿಂದೆ ವರ್ತೂರು ಠಾಣೆಯಲ್ಲೂ ಕೇಳಿ ಬಂದಿತ್ತು. ತಮ್ಮ ಹಣದಾಹಕ್ಕಾಗಿ ಯುವಕರಿಗೆ ಚಿತ್ರಹಿಂಸೆ ನೀಡುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಂಡು, ಜನಸಾಮಾನ್ಯರಿಗೆ ಕಿರುಕುಳ ನೀಡುವ ಇಂತಹ ಅನಿಷ್ಟ ಪದ್ಧತಿಗೆ ಅಂತ್ಯ ಕಾಣಿಸಬೇಕು ಎಂದು ಪಿಎಫ್‌ಐ ಒತ್ತಾಯಿಸಿದೆ.

ತೌಸೀಫ್‌ಗೆ ಗಂಭೀರವಾಗಿ ಥಳಿಸಿರುವ ಪೊಲೀಸರನ್ನು ಕೂಡಲೇ ಅಮಾನತುಗೊಳಿಸಿ ಅವರ ವಿರುದ್ಧ ಇಲಾಖಾ ವಿಚಾರಣೆ ನಡೆಸಬೇಕು. ಮಾನವ ಹಕ್ಕುಗಳ ಆಯೋಗವು ಕೂಡ ಇಂತಹ  ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಸಂತ್ರಸ್ತ ಯುವಕನ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಬೇಕು ಮತ್ತು 10 ಲಕ್ಷ ರೂಪಾಯಿ ಪರಿಹಾರ ಘೋಷಿಸಬೇಕೆಂದು ಸೈಯ್ಯದ್ ಜಾವೇದ್ ಆಗ್ರಹಿಸಿದ್ದಾರೆ.

ಇನ್ನೊಂದೆಡೆ 22 ವರ್ಷದ ಯುವಕರೊಬ್ಬನನ್ನು ಬಂಧನದಲ್ಲಿಟ್ಟು ಸತತ ಚಿತ್ರಹಿಂಸೆ ನೀಡಿ ಆತ ತನ್ನ ಬಲಗೈ ಕಳೆದುಕೊಳ್ಳುವಂತೆ ಮಾಡಿದ ಆರೋಪದಲ್ಲಿ ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆಯ ಮೂವರು ಪೊಲೀಸರನ್ನು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಅಮಾನತುಗೊಳಿಸಿದ್ದಾರೆ. ಸಲ್ಮಾನ್ ಮೇಲೆ ಹಲ್ಲೆ ನಡೆಸಿರುವುದು ಹಿರಿಯ ಅಧಿಕಾರಿಯ ವಿಚಾರಣೆಯ ನಂತರ ಬೆಳಕಿಗೆ ಬಂದಿದ್ದು, ಹೆಡ್ ಕಾನ್‌ಸ್ಟೆಬಲ್‌ಗಳಾದ ನಾಗಭೂಷಣ ಗೌಡ, ನಾಗರಾಜ್ ಬಿ.ಎನ್ ಮತ್ತು ಶಿವಕುಮಾರ್ ಹೆಚ್ ಎಂಬುವವರನ್ನು ಅಮಾನತುಗೊಳಿಸಲಾಗಿದೆ. ಈ ಪ್ರಕರಣವನ್ನು ಪಿಎಫ್‌ಐ ಬೆಳಕಿಗೆ ತಂದು ನ್ಯಾಯಕ್ಕಾಗಿ ಆಗ್ರಹಿಸಿತ್ತು.


ಇದನ್ನೂ ಓದಿ: ಬೆಂಗಳೂರು: ಯುವಕನ ಬಲಗೈ ಕಟ್ ಆಗುವಂತೆ ಚಿತ್ರಹಿಂಸೆ ನೀಡಿದ್ದ ಮೂವರು ಪೊಲೀಸರ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...