Homeಕರ್ನಾಟಕಬೆಂಗಳೂರಿನ ಮುಸ್ಲಿಂ ಯುವಕನಿಗೆ ಥಳಿತ, ಮೂತ್ರ ಕುಡಿಸಲು ಒತ್ತಾಯ ಆರೋಪ: ಸಬ್ ಇನ್ಸ್‌ಪೆಕ್ಟರ್ ಅಮಾನತು

ಬೆಂಗಳೂರಿನ ಮುಸ್ಲಿಂ ಯುವಕನಿಗೆ ಥಳಿತ, ಮೂತ್ರ ಕುಡಿಸಲು ಒತ್ತಾಯ ಆರೋಪ: ಸಬ್ ಇನ್ಸ್‌ಪೆಕ್ಟರ್ ಅಮಾನತು

ಈ ವರ್ಷದಲ್ಲಿ ಇದು ಮೂರನೆ ಕಸ್ಟಡಿ ಹಿಂಸೆ ಪ್ರಕರಣವಾಗಿದೆ. ಈ ಹಿಂದೆಯೂ ಹಲವು ಪೊಲೀಸರು ಕಾನೂನುಬಾಹಿರ ಕೃತ್ಯಗಳಿಗಾಗಿ ಸಸ್ಪೆಂಡ್ ಆಗಿದ್ದಾರೆ.

- Advertisement -
- Advertisement -

ಬೆಂಗಳೂರಿನಲ್ಲಿ ಕಸ್ಟಡಿ ಚಿತ್ರಹಿಂಸೆ ಪ್ರಕರಣಗಳು ಹೆಚ್ಚುತ್ತಿದ್ದು 23 ವರ್ಷದ ತೌಸೀಫ್ ಎಂಬ ಮುಸ್ಲಿಂ ಯುವಕನಿಗೆ ಬ್ಯಾಟರಾಯನಪುರ ಠಾಣೆ ಪೊಲೀಸರು ಗಂಭೀರವಾಗಿ ಥಳಿಸಿ, ಮೂತ್ರ ಕುಡಿಸಲು ಒತ್ತಾಯಿಸಿದ ಪ್ರಕರಣದಲ್ಲಿ ಸಬ್ ಇನ್ಸ್ ಪೆಕ್ಟರ್ ಹರೀಶ್ ಎಂಬುವವರನ್ನು ಅಮಾನತು ಮಾಡಲಾಗಿದೆ.

ಈ ಪ್ರಕರಣದ ಕುರಿತು ಸೋಮವಾರ ಮಧ್ಯಂತರ ವರದಿಯನ್ನು ಸಲ್ಲಿಸಲಾಗಿದೆ. ಅದರ ಆಧಾರದ ಮೇಲೆ ಕರ್ತವ್ಯಲೋಪ, ಪೊಲೀಸ್ ಠಾಣೆಗೆ ವರದಿ ಮಾಡದ ಮತ್ತು ಪ್ರಕರಣವನ್ನು ದಾಖಲಿಸದ ಕಾರಣ ಸಬ್‌ ಇನ್ಸ್‌ಪೆಕ್ಟರ್ ಹರೀಶ್ ಅವರನ್ನು ಅಮಾನತುಗೊಳಿಸಲಾಗಿದೆ. ಸಂತ್ರಸ್ತನ ಕುಟುಂಬದವರು ಮಾಡಿರುವ ಆರೋಪಗಳ ಬಗ್ಗೆ ಇಲಾಖಾ ತನಿಖೆಗೂ ಆದೇಶಿಸಲಾಗಿದೆ ಎಂದು ಪೊಲೀಸ್ ಉಪ ಆಯುಕ್ತ (ಪಶ್ಚಿಮ) ಸಂಜೀವ್ ಎಂ ಪಾಟೀಲ್ ಹೇಳಿಕೆ ಆಧರಿಸಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಘಟನೆಯ ವಿವರ

ಯುವಕನೋರ್ವ ಗುದ್ದದಹಳ್ಳಿಯ ತಮ್ಮ ಮನೆ ಬಳಿ ಕುಳಿತುಕೊಂಡಿದ್ದನ್ನು ತೌಸೀಫ್ ಆಕ್ಷೇಪಿಸಿದ್ದ. ಆ ನಂತರ ಊರ ಮಂದಿಯ ಮಧ್ಯಸ್ಥಿಕೆಯೊಂದಿಗೆ ಆ ಯುವಕನಿಗೆ ಗುದ್ದದಹಳ್ಳಿಗೆ ಬರದಂತೆ ಎಚ್ಚರಿಕೆ ನೀಡಲಾಗಿತ್ತು. ಆದರೆ 8 ತಿಂಗಳ ನಂತರ, ಮೂರು ದಿನಗಳ ಹಿಂದೆ ಆ ಯುವಕ ಮತ್ತೇ ಗುದ್ದದಹಳ್ಳಿಗೆ ಬಂದಿದ್ದ. ಆ ವೇಳೆ ತೌಸೀಫ್ ಆ ಯುವಕನನ್ನು ದೂರ ಕರೆದುಕೊಂಡು ಹೋಗಿ ಪ್ರಶ್ನಿಸಿದ್ದಾನೆ. ಇದು ಪೊಲೀಸರಿಗೆ ತಿಳಿದು ಪೊಲೀಸರು ಇಬ್ಬರನ್ನೂ ವಿಚಾರಿಸಿದ ಬಳಿಕ ತೌಸೀಫ್ ನನ್ನು ಬ್ಯಾಟರಾಯನಪುರ ಠಾಣೆಗೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ ಎಂದು ತೌಸಿಫ್ ತಂದೆ ಅಸ್ಲಮ್ ಪಾಶ ಆರೋಪಿಸಿದ್ದಾರೆ.

‘ಠಾಣೆಯಲ್ಲಿ ಸರ್ಕಲ್ ಪೊಲೀಸ್ ಶಂಕರ್ ನಾಯಕ್, ಸಬ್ ಇನ್ಸ್ ಪೆಕ್ಟರ್ ಹರೀಶ್ ಉಪಸ್ಥಿತಿಯಲ್ಲಿ ಇತರ ಸಿಬ್ಬಂದಿ ತನ್ನ ಗಡ್ಡ ಕತ್ತರಿಸಿದ್ದಾರೆ. ಮುಂಜಾನೆ 2 ಗಂಟೆಯಿಂದ ಸುಮಾರು 5 ಗಂಟೆಯವರಗೆ ನಿರಂತರ 3 ಗಂಟೆಗಳ ಕಾಲ ಬ್ಯಾಟ್‌ನಿಂದ ಥಳಿಸಿದ್ದಾರೆ. ಬಾಯಾರಿಕೆ ತಣಿಸಲು ನೀರು ಕೇಳಿದಾಗ ಮೂತ್ರ ನೀಡಿ ಕುಡಿಸಲು ಒತ್ತಾಯಿಸಿದ್ದಾರೆ. ಕಾಲು, ಬೂಟುಗಳಿಂದ ತಲೆ, ಮುಖ, ಭುಜ, ಗುಪ್ತಾಂಗಕ್ಕೆ ಒದೆಯಲಾಗಿದೆ. ತೀವ್ರ ತೆರನಾದ ಥಳಿತದಿಂದ ಯುವಕನ ಕಾಲು ಬಾತುಕೊಂಡಿದೆ. ನಡೆದಾಡಲೂ ಸಾಧ್ಯವಾಗದೇ ಕೊನೆಗೆ ಮೂರ್ಛೆ ತಪ್ಪಿದ್ದೆ. ನಂತರ ಪೊಲೀಸ್ ಠಾಣೆ ಸ್ವಚ್ಛಗೊಳಿಸುವಂತೆ ಒತ್ತಾಯಿಸಿದರು. ಯಾವುದೇ ಪ್ರಕರಣ ದಾಖಲಿಸದ ಪೊಲೀಸರು, ಬಿಡುಗಡೆಗಾಗಿ 1 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದರು. ಶಾಸಕರಾದ ಜಮೀರ್ ಅಹ್ಮದ್ ಖಾನ್‌ರವರು ಮಧ್ಯಪ್ರವೇಶಿಸಿದ ಬಳಿಕ ಬಿಡುಗಡೆಗೊಳಿಸಿದ್ದಾರೆ’ ಎಂದು ತೌಸಿಫ್ ಆರೋಪಿಸಿದ್ದರು.

ತೀವ್ರ ಹಲ್ಲೆಗೆ ಒಳಗಾಗಿದ್ದ ತೌಸಿಫ್‌ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೋಮವಾರ ಡಿಸ್ಚಾರ್ಜ್ ಮಾಡಲಾಗಿದೆ. ಅವರು ಈಗಲೂ ನೋವಿನಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ.

ಕರ್ನಾಟಕದಲ್ಲಿ ಕಸ್ಟಡಿ ಹಿಂಸಚಾರಗಳು ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ. ಮೇ ತಿಂಗಳಿನಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ದಲಿತ ಯುವಕನಿಗೆ ಮೂತ್ರ ಕುಡಿಸಿ ಅಮಾನವೀಯವಾಗಿ ನಡೆಸಿಕೊಂಡಿದ್ದ ಪ್ರಕರಣದಲ್ಲಿ ಗೋಣಿಬೀಡು PSI ಅರ್ಜುನ್ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. ಸದ್ಯ ಅಮಾನತ್ತು ಶಿಕ್ಷೆ ಅನುಭವಿಸುತ್ತಿದ್ದಾರೆ.

ಇನ್ನೊಂದೆಡೆ ಅಕ್ಟೋಬರ್ 27 ರಂದು 22 ವರ್ಷದ ಯುವಕರೊಬ್ಬನನ್ನು ಬಂಧನದಲ್ಲಿಟ್ಟು ಸತತ ಚಿತ್ರಹಿಂಸೆ ನೀಡಿ ಆತ ತನ್ನ ಬಲಗೈ ಕಳೆದುಕೊಳ್ಳುವಂತೆ ಮಾಡಿದ ಆರೋಪದಲ್ಲಿ ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆಯ ಮೂವರು ಪೊಲೀಸರನ್ನು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಅಮಾನತುಗೊಳಿಸಿದ್ದಾರೆ. ಸಲ್ಮಾನ್ ಮೇಲೆ ಹಲ್ಲೆ ನಡೆಸಿರುವುದು ಹಿರಿಯ ಅಧಿಕಾರಿಯ ವಿಚಾರಣೆಯ ನಂತರ ಬೆಳಕಿಗೆ ಬಂದಿದ್ದು, ಹೆಡ್ ಕಾನ್‌ಸ್ಟೆಬಲ್‌ಗಳಾದ ನಾಗಭೂಷಣ ಗೌಡ, ನಾಗರಾಜ್ ಬಿ.ಎನ್ ಮತ್ತು ಶಿವಕುಮಾರ್ ಹೆಚ್ ಎಂಬುವವರನ್ನು ಅಮಾನತುಗೊಳಿಸಲಾಗಿದೆ. 

ಈ ರೀತಿಯ ಕಾನೂನು ಬಾಹಿರ ಹಿಂಸೆಗಳ ವಿರುದ್ಧ ಪಿಎಫ್‌ಐ ಸಂಘಟನೆ ದನಿ ಎತ್ತಿದೆ. “ಠಾಣೆಯಲ್ಲಿ ಪ್ರಕರಣ ಇತ್ಯರ್ಥಪಡಿಸಲು ಪೊಲೀಸರು ಇಂತಿಷ್ಟು ಮೊತ್ತಕ್ಕೆ ಬೇಡಿಕೆ ಇಡುವ ವಿಚಾರ ಗುಪ್ತವಾಗಿರುವುದೇನಲ್ಲ. ಬ್ಯಾಟರಾಯನ ಠಾಣೆಯಲ್ಲಿ ಕೇಳಿ ಬಂದಿರುವ ಪೊಲೀಸರು ಹಣಕ್ಕಾಗಿ ಬೇಡಿಕೆ ಇಟ್ಟಿರುವ ವಿಚಾರವೇ ವಾರದ ಹಿಂದೆ ವರ್ತೂರು ಠಾಣೆಯಲ್ಲೂ ಕೇಳಿ ಬಂದಿತ್ತು. ತಮ್ಮ ಹಣದಾಹಕ್ಕಾಗಿ ಯುವಕರಿಗೆ ಚಿತ್ರಹಿಂಸೆ ನೀಡುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಂಡು, ಜನಸಾಮಾನ್ಯರಿಗೆ ಕಿರುಕುಳ ನೀಡುವ ಇಂತಹ ಅನಿಷ್ಟ ಪದ್ಧತಿಗೆ ಅಂತ್ಯ ಕಾಣಿಸಬೇಕು” ಎಂದು ಪಿಎಫ್‌ಐ ಒತ್ತಾಯಿಸಿದೆ.


ಇದನ್ನೂ ಓದಿ: ಬೆಂಗಳೂರು: ಯುವಕನ ಬಲಗೈ ಕಟ್ ಆಗುವಂತೆ ಚಿತ್ರಹಿಂಸೆ ನೀಡಿದ್ದ ಮೂವರು ಪೊಲೀಸರ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....