Homeಕರ್ನಾಟಕಬೆಂಗಳೂರಿನ ಮುಸ್ಲಿಂ ಯುವಕನಿಗೆ ಥಳಿತ, ಮೂತ್ರ ಕುಡಿಸಲು ಒತ್ತಾಯ ಆರೋಪ: ಸಬ್ ಇನ್ಸ್‌ಪೆಕ್ಟರ್ ಅಮಾನತು

ಬೆಂಗಳೂರಿನ ಮುಸ್ಲಿಂ ಯುವಕನಿಗೆ ಥಳಿತ, ಮೂತ್ರ ಕುಡಿಸಲು ಒತ್ತಾಯ ಆರೋಪ: ಸಬ್ ಇನ್ಸ್‌ಪೆಕ್ಟರ್ ಅಮಾನತು

ಈ ವರ್ಷದಲ್ಲಿ ಇದು ಮೂರನೆ ಕಸ್ಟಡಿ ಹಿಂಸೆ ಪ್ರಕರಣವಾಗಿದೆ. ಈ ಹಿಂದೆಯೂ ಹಲವು ಪೊಲೀಸರು ಕಾನೂನುಬಾಹಿರ ಕೃತ್ಯಗಳಿಗಾಗಿ ಸಸ್ಪೆಂಡ್ ಆಗಿದ್ದಾರೆ.

- Advertisement -
- Advertisement -

ಬೆಂಗಳೂರಿನಲ್ಲಿ ಕಸ್ಟಡಿ ಚಿತ್ರಹಿಂಸೆ ಪ್ರಕರಣಗಳು ಹೆಚ್ಚುತ್ತಿದ್ದು 23 ವರ್ಷದ ತೌಸೀಫ್ ಎಂಬ ಮುಸ್ಲಿಂ ಯುವಕನಿಗೆ ಬ್ಯಾಟರಾಯನಪುರ ಠಾಣೆ ಪೊಲೀಸರು ಗಂಭೀರವಾಗಿ ಥಳಿಸಿ, ಮೂತ್ರ ಕುಡಿಸಲು ಒತ್ತಾಯಿಸಿದ ಪ್ರಕರಣದಲ್ಲಿ ಸಬ್ ಇನ್ಸ್ ಪೆಕ್ಟರ್ ಹರೀಶ್ ಎಂಬುವವರನ್ನು ಅಮಾನತು ಮಾಡಲಾಗಿದೆ.

ಈ ಪ್ರಕರಣದ ಕುರಿತು ಸೋಮವಾರ ಮಧ್ಯಂತರ ವರದಿಯನ್ನು ಸಲ್ಲಿಸಲಾಗಿದೆ. ಅದರ ಆಧಾರದ ಮೇಲೆ ಕರ್ತವ್ಯಲೋಪ, ಪೊಲೀಸ್ ಠಾಣೆಗೆ ವರದಿ ಮಾಡದ ಮತ್ತು ಪ್ರಕರಣವನ್ನು ದಾಖಲಿಸದ ಕಾರಣ ಸಬ್‌ ಇನ್ಸ್‌ಪೆಕ್ಟರ್ ಹರೀಶ್ ಅವರನ್ನು ಅಮಾನತುಗೊಳಿಸಲಾಗಿದೆ. ಸಂತ್ರಸ್ತನ ಕುಟುಂಬದವರು ಮಾಡಿರುವ ಆರೋಪಗಳ ಬಗ್ಗೆ ಇಲಾಖಾ ತನಿಖೆಗೂ ಆದೇಶಿಸಲಾಗಿದೆ ಎಂದು ಪೊಲೀಸ್ ಉಪ ಆಯುಕ್ತ (ಪಶ್ಚಿಮ) ಸಂಜೀವ್ ಎಂ ಪಾಟೀಲ್ ಹೇಳಿಕೆ ಆಧರಿಸಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಘಟನೆಯ ವಿವರ

ಯುವಕನೋರ್ವ ಗುದ್ದದಹಳ್ಳಿಯ ತಮ್ಮ ಮನೆ ಬಳಿ ಕುಳಿತುಕೊಂಡಿದ್ದನ್ನು ತೌಸೀಫ್ ಆಕ್ಷೇಪಿಸಿದ್ದ. ಆ ನಂತರ ಊರ ಮಂದಿಯ ಮಧ್ಯಸ್ಥಿಕೆಯೊಂದಿಗೆ ಆ ಯುವಕನಿಗೆ ಗುದ್ದದಹಳ್ಳಿಗೆ ಬರದಂತೆ ಎಚ್ಚರಿಕೆ ನೀಡಲಾಗಿತ್ತು. ಆದರೆ 8 ತಿಂಗಳ ನಂತರ, ಮೂರು ದಿನಗಳ ಹಿಂದೆ ಆ ಯುವಕ ಮತ್ತೇ ಗುದ್ದದಹಳ್ಳಿಗೆ ಬಂದಿದ್ದ. ಆ ವೇಳೆ ತೌಸೀಫ್ ಆ ಯುವಕನನ್ನು ದೂರ ಕರೆದುಕೊಂಡು ಹೋಗಿ ಪ್ರಶ್ನಿಸಿದ್ದಾನೆ. ಇದು ಪೊಲೀಸರಿಗೆ ತಿಳಿದು ಪೊಲೀಸರು ಇಬ್ಬರನ್ನೂ ವಿಚಾರಿಸಿದ ಬಳಿಕ ತೌಸೀಫ್ ನನ್ನು ಬ್ಯಾಟರಾಯನಪುರ ಠಾಣೆಗೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ ಎಂದು ತೌಸಿಫ್ ತಂದೆ ಅಸ್ಲಮ್ ಪಾಶ ಆರೋಪಿಸಿದ್ದಾರೆ.

‘ಠಾಣೆಯಲ್ಲಿ ಸರ್ಕಲ್ ಪೊಲೀಸ್ ಶಂಕರ್ ನಾಯಕ್, ಸಬ್ ಇನ್ಸ್ ಪೆಕ್ಟರ್ ಹರೀಶ್ ಉಪಸ್ಥಿತಿಯಲ್ಲಿ ಇತರ ಸಿಬ್ಬಂದಿ ತನ್ನ ಗಡ್ಡ ಕತ್ತರಿಸಿದ್ದಾರೆ. ಮುಂಜಾನೆ 2 ಗಂಟೆಯಿಂದ ಸುಮಾರು 5 ಗಂಟೆಯವರಗೆ ನಿರಂತರ 3 ಗಂಟೆಗಳ ಕಾಲ ಬ್ಯಾಟ್‌ನಿಂದ ಥಳಿಸಿದ್ದಾರೆ. ಬಾಯಾರಿಕೆ ತಣಿಸಲು ನೀರು ಕೇಳಿದಾಗ ಮೂತ್ರ ನೀಡಿ ಕುಡಿಸಲು ಒತ್ತಾಯಿಸಿದ್ದಾರೆ. ಕಾಲು, ಬೂಟುಗಳಿಂದ ತಲೆ, ಮುಖ, ಭುಜ, ಗುಪ್ತಾಂಗಕ್ಕೆ ಒದೆಯಲಾಗಿದೆ. ತೀವ್ರ ತೆರನಾದ ಥಳಿತದಿಂದ ಯುವಕನ ಕಾಲು ಬಾತುಕೊಂಡಿದೆ. ನಡೆದಾಡಲೂ ಸಾಧ್ಯವಾಗದೇ ಕೊನೆಗೆ ಮೂರ್ಛೆ ತಪ್ಪಿದ್ದೆ. ನಂತರ ಪೊಲೀಸ್ ಠಾಣೆ ಸ್ವಚ್ಛಗೊಳಿಸುವಂತೆ ಒತ್ತಾಯಿಸಿದರು. ಯಾವುದೇ ಪ್ರಕರಣ ದಾಖಲಿಸದ ಪೊಲೀಸರು, ಬಿಡುಗಡೆಗಾಗಿ 1 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದರು. ಶಾಸಕರಾದ ಜಮೀರ್ ಅಹ್ಮದ್ ಖಾನ್‌ರವರು ಮಧ್ಯಪ್ರವೇಶಿಸಿದ ಬಳಿಕ ಬಿಡುಗಡೆಗೊಳಿಸಿದ್ದಾರೆ’ ಎಂದು ತೌಸಿಫ್ ಆರೋಪಿಸಿದ್ದರು.

ತೀವ್ರ ಹಲ್ಲೆಗೆ ಒಳಗಾಗಿದ್ದ ತೌಸಿಫ್‌ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೋಮವಾರ ಡಿಸ್ಚಾರ್ಜ್ ಮಾಡಲಾಗಿದೆ. ಅವರು ಈಗಲೂ ನೋವಿನಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ.

ಕರ್ನಾಟಕದಲ್ಲಿ ಕಸ್ಟಡಿ ಹಿಂಸಚಾರಗಳು ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ. ಮೇ ತಿಂಗಳಿನಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ದಲಿತ ಯುವಕನಿಗೆ ಮೂತ್ರ ಕುಡಿಸಿ ಅಮಾನವೀಯವಾಗಿ ನಡೆಸಿಕೊಂಡಿದ್ದ ಪ್ರಕರಣದಲ್ಲಿ ಗೋಣಿಬೀಡು PSI ಅರ್ಜುನ್ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. ಸದ್ಯ ಅಮಾನತ್ತು ಶಿಕ್ಷೆ ಅನುಭವಿಸುತ್ತಿದ್ದಾರೆ.

ಇನ್ನೊಂದೆಡೆ ಅಕ್ಟೋಬರ್ 27 ರಂದು 22 ವರ್ಷದ ಯುವಕರೊಬ್ಬನನ್ನು ಬಂಧನದಲ್ಲಿಟ್ಟು ಸತತ ಚಿತ್ರಹಿಂಸೆ ನೀಡಿ ಆತ ತನ್ನ ಬಲಗೈ ಕಳೆದುಕೊಳ್ಳುವಂತೆ ಮಾಡಿದ ಆರೋಪದಲ್ಲಿ ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆಯ ಮೂವರು ಪೊಲೀಸರನ್ನು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಅಮಾನತುಗೊಳಿಸಿದ್ದಾರೆ. ಸಲ್ಮಾನ್ ಮೇಲೆ ಹಲ್ಲೆ ನಡೆಸಿರುವುದು ಹಿರಿಯ ಅಧಿಕಾರಿಯ ವಿಚಾರಣೆಯ ನಂತರ ಬೆಳಕಿಗೆ ಬಂದಿದ್ದು, ಹೆಡ್ ಕಾನ್‌ಸ್ಟೆಬಲ್‌ಗಳಾದ ನಾಗಭೂಷಣ ಗೌಡ, ನಾಗರಾಜ್ ಬಿ.ಎನ್ ಮತ್ತು ಶಿವಕುಮಾರ್ ಹೆಚ್ ಎಂಬುವವರನ್ನು ಅಮಾನತುಗೊಳಿಸಲಾಗಿದೆ. 

ಈ ರೀತಿಯ ಕಾನೂನು ಬಾಹಿರ ಹಿಂಸೆಗಳ ವಿರುದ್ಧ ಪಿಎಫ್‌ಐ ಸಂಘಟನೆ ದನಿ ಎತ್ತಿದೆ. “ಠಾಣೆಯಲ್ಲಿ ಪ್ರಕರಣ ಇತ್ಯರ್ಥಪಡಿಸಲು ಪೊಲೀಸರು ಇಂತಿಷ್ಟು ಮೊತ್ತಕ್ಕೆ ಬೇಡಿಕೆ ಇಡುವ ವಿಚಾರ ಗುಪ್ತವಾಗಿರುವುದೇನಲ್ಲ. ಬ್ಯಾಟರಾಯನ ಠಾಣೆಯಲ್ಲಿ ಕೇಳಿ ಬಂದಿರುವ ಪೊಲೀಸರು ಹಣಕ್ಕಾಗಿ ಬೇಡಿಕೆ ಇಟ್ಟಿರುವ ವಿಚಾರವೇ ವಾರದ ಹಿಂದೆ ವರ್ತೂರು ಠಾಣೆಯಲ್ಲೂ ಕೇಳಿ ಬಂದಿತ್ತು. ತಮ್ಮ ಹಣದಾಹಕ್ಕಾಗಿ ಯುವಕರಿಗೆ ಚಿತ್ರಹಿಂಸೆ ನೀಡುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಂಡು, ಜನಸಾಮಾನ್ಯರಿಗೆ ಕಿರುಕುಳ ನೀಡುವ ಇಂತಹ ಅನಿಷ್ಟ ಪದ್ಧತಿಗೆ ಅಂತ್ಯ ಕಾಣಿಸಬೇಕು” ಎಂದು ಪಿಎಫ್‌ಐ ಒತ್ತಾಯಿಸಿದೆ.


ಇದನ್ನೂ ಓದಿ: ಬೆಂಗಳೂರು: ಯುವಕನ ಬಲಗೈ ಕಟ್ ಆಗುವಂತೆ ಚಿತ್ರಹಿಂಸೆ ನೀಡಿದ್ದ ಮೂವರು ಪೊಲೀಸರ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...