Homeಕರ್ನಾಟಕಬೆಂಗಳೂರಿನ ಮುಸ್ಲಿಂ ಯುವಕನಿಗೆ ಥಳಿತ, ಮೂತ್ರ ಕುಡಿಸಲು ಒತ್ತಾಯ ಆರೋಪ: ಸಬ್ ಇನ್ಸ್‌ಪೆಕ್ಟರ್ ಅಮಾನತು

ಬೆಂಗಳೂರಿನ ಮುಸ್ಲಿಂ ಯುವಕನಿಗೆ ಥಳಿತ, ಮೂತ್ರ ಕುಡಿಸಲು ಒತ್ತಾಯ ಆರೋಪ: ಸಬ್ ಇನ್ಸ್‌ಪೆಕ್ಟರ್ ಅಮಾನತು

ಈ ವರ್ಷದಲ್ಲಿ ಇದು ಮೂರನೆ ಕಸ್ಟಡಿ ಹಿಂಸೆ ಪ್ರಕರಣವಾಗಿದೆ. ಈ ಹಿಂದೆಯೂ ಹಲವು ಪೊಲೀಸರು ಕಾನೂನುಬಾಹಿರ ಕೃತ್ಯಗಳಿಗಾಗಿ ಸಸ್ಪೆಂಡ್ ಆಗಿದ್ದಾರೆ.

- Advertisement -
- Advertisement -

ಬೆಂಗಳೂರಿನಲ್ಲಿ ಕಸ್ಟಡಿ ಚಿತ್ರಹಿಂಸೆ ಪ್ರಕರಣಗಳು ಹೆಚ್ಚುತ್ತಿದ್ದು 23 ವರ್ಷದ ತೌಸೀಫ್ ಎಂಬ ಮುಸ್ಲಿಂ ಯುವಕನಿಗೆ ಬ್ಯಾಟರಾಯನಪುರ ಠಾಣೆ ಪೊಲೀಸರು ಗಂಭೀರವಾಗಿ ಥಳಿಸಿ, ಮೂತ್ರ ಕುಡಿಸಲು ಒತ್ತಾಯಿಸಿದ ಪ್ರಕರಣದಲ್ಲಿ ಸಬ್ ಇನ್ಸ್ ಪೆಕ್ಟರ್ ಹರೀಶ್ ಎಂಬುವವರನ್ನು ಅಮಾನತು ಮಾಡಲಾಗಿದೆ.

ಈ ಪ್ರಕರಣದ ಕುರಿತು ಸೋಮವಾರ ಮಧ್ಯಂತರ ವರದಿಯನ್ನು ಸಲ್ಲಿಸಲಾಗಿದೆ. ಅದರ ಆಧಾರದ ಮೇಲೆ ಕರ್ತವ್ಯಲೋಪ, ಪೊಲೀಸ್ ಠಾಣೆಗೆ ವರದಿ ಮಾಡದ ಮತ್ತು ಪ್ರಕರಣವನ್ನು ದಾಖಲಿಸದ ಕಾರಣ ಸಬ್‌ ಇನ್ಸ್‌ಪೆಕ್ಟರ್ ಹರೀಶ್ ಅವರನ್ನು ಅಮಾನತುಗೊಳಿಸಲಾಗಿದೆ. ಸಂತ್ರಸ್ತನ ಕುಟುಂಬದವರು ಮಾಡಿರುವ ಆರೋಪಗಳ ಬಗ್ಗೆ ಇಲಾಖಾ ತನಿಖೆಗೂ ಆದೇಶಿಸಲಾಗಿದೆ ಎಂದು ಪೊಲೀಸ್ ಉಪ ಆಯುಕ್ತ (ಪಶ್ಚಿಮ) ಸಂಜೀವ್ ಎಂ ಪಾಟೀಲ್ ಹೇಳಿಕೆ ಆಧರಿಸಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಘಟನೆಯ ವಿವರ

ಯುವಕನೋರ್ವ ಗುದ್ದದಹಳ್ಳಿಯ ತಮ್ಮ ಮನೆ ಬಳಿ ಕುಳಿತುಕೊಂಡಿದ್ದನ್ನು ತೌಸೀಫ್ ಆಕ್ಷೇಪಿಸಿದ್ದ. ಆ ನಂತರ ಊರ ಮಂದಿಯ ಮಧ್ಯಸ್ಥಿಕೆಯೊಂದಿಗೆ ಆ ಯುವಕನಿಗೆ ಗುದ್ದದಹಳ್ಳಿಗೆ ಬರದಂತೆ ಎಚ್ಚರಿಕೆ ನೀಡಲಾಗಿತ್ತು. ಆದರೆ 8 ತಿಂಗಳ ನಂತರ, ಮೂರು ದಿನಗಳ ಹಿಂದೆ ಆ ಯುವಕ ಮತ್ತೇ ಗುದ್ದದಹಳ್ಳಿಗೆ ಬಂದಿದ್ದ. ಆ ವೇಳೆ ತೌಸೀಫ್ ಆ ಯುವಕನನ್ನು ದೂರ ಕರೆದುಕೊಂಡು ಹೋಗಿ ಪ್ರಶ್ನಿಸಿದ್ದಾನೆ. ಇದು ಪೊಲೀಸರಿಗೆ ತಿಳಿದು ಪೊಲೀಸರು ಇಬ್ಬರನ್ನೂ ವಿಚಾರಿಸಿದ ಬಳಿಕ ತೌಸೀಫ್ ನನ್ನು ಬ್ಯಾಟರಾಯನಪುರ ಠಾಣೆಗೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ ಎಂದು ತೌಸಿಫ್ ತಂದೆ ಅಸ್ಲಮ್ ಪಾಶ ಆರೋಪಿಸಿದ್ದಾರೆ.

‘ಠಾಣೆಯಲ್ಲಿ ಸರ್ಕಲ್ ಪೊಲೀಸ್ ಶಂಕರ್ ನಾಯಕ್, ಸಬ್ ಇನ್ಸ್ ಪೆಕ್ಟರ್ ಹರೀಶ್ ಉಪಸ್ಥಿತಿಯಲ್ಲಿ ಇತರ ಸಿಬ್ಬಂದಿ ತನ್ನ ಗಡ್ಡ ಕತ್ತರಿಸಿದ್ದಾರೆ. ಮುಂಜಾನೆ 2 ಗಂಟೆಯಿಂದ ಸುಮಾರು 5 ಗಂಟೆಯವರಗೆ ನಿರಂತರ 3 ಗಂಟೆಗಳ ಕಾಲ ಬ್ಯಾಟ್‌ನಿಂದ ಥಳಿಸಿದ್ದಾರೆ. ಬಾಯಾರಿಕೆ ತಣಿಸಲು ನೀರು ಕೇಳಿದಾಗ ಮೂತ್ರ ನೀಡಿ ಕುಡಿಸಲು ಒತ್ತಾಯಿಸಿದ್ದಾರೆ. ಕಾಲು, ಬೂಟುಗಳಿಂದ ತಲೆ, ಮುಖ, ಭುಜ, ಗುಪ್ತಾಂಗಕ್ಕೆ ಒದೆಯಲಾಗಿದೆ. ತೀವ್ರ ತೆರನಾದ ಥಳಿತದಿಂದ ಯುವಕನ ಕಾಲು ಬಾತುಕೊಂಡಿದೆ. ನಡೆದಾಡಲೂ ಸಾಧ್ಯವಾಗದೇ ಕೊನೆಗೆ ಮೂರ್ಛೆ ತಪ್ಪಿದ್ದೆ. ನಂತರ ಪೊಲೀಸ್ ಠಾಣೆ ಸ್ವಚ್ಛಗೊಳಿಸುವಂತೆ ಒತ್ತಾಯಿಸಿದರು. ಯಾವುದೇ ಪ್ರಕರಣ ದಾಖಲಿಸದ ಪೊಲೀಸರು, ಬಿಡುಗಡೆಗಾಗಿ 1 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದರು. ಶಾಸಕರಾದ ಜಮೀರ್ ಅಹ್ಮದ್ ಖಾನ್‌ರವರು ಮಧ್ಯಪ್ರವೇಶಿಸಿದ ಬಳಿಕ ಬಿಡುಗಡೆಗೊಳಿಸಿದ್ದಾರೆ’ ಎಂದು ತೌಸಿಫ್ ಆರೋಪಿಸಿದ್ದರು.

ತೀವ್ರ ಹಲ್ಲೆಗೆ ಒಳಗಾಗಿದ್ದ ತೌಸಿಫ್‌ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೋಮವಾರ ಡಿಸ್ಚಾರ್ಜ್ ಮಾಡಲಾಗಿದೆ. ಅವರು ಈಗಲೂ ನೋವಿನಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ.

ಕರ್ನಾಟಕದಲ್ಲಿ ಕಸ್ಟಡಿ ಹಿಂಸಚಾರಗಳು ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ. ಮೇ ತಿಂಗಳಿನಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ದಲಿತ ಯುವಕನಿಗೆ ಮೂತ್ರ ಕುಡಿಸಿ ಅಮಾನವೀಯವಾಗಿ ನಡೆಸಿಕೊಂಡಿದ್ದ ಪ್ರಕರಣದಲ್ಲಿ ಗೋಣಿಬೀಡು PSI ಅರ್ಜುನ್ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. ಸದ್ಯ ಅಮಾನತ್ತು ಶಿಕ್ಷೆ ಅನುಭವಿಸುತ್ತಿದ್ದಾರೆ.

ಇನ್ನೊಂದೆಡೆ ಅಕ್ಟೋಬರ್ 27 ರಂದು 22 ವರ್ಷದ ಯುವಕರೊಬ್ಬನನ್ನು ಬಂಧನದಲ್ಲಿಟ್ಟು ಸತತ ಚಿತ್ರಹಿಂಸೆ ನೀಡಿ ಆತ ತನ್ನ ಬಲಗೈ ಕಳೆದುಕೊಳ್ಳುವಂತೆ ಮಾಡಿದ ಆರೋಪದಲ್ಲಿ ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆಯ ಮೂವರು ಪೊಲೀಸರನ್ನು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಅಮಾನತುಗೊಳಿಸಿದ್ದಾರೆ. ಸಲ್ಮಾನ್ ಮೇಲೆ ಹಲ್ಲೆ ನಡೆಸಿರುವುದು ಹಿರಿಯ ಅಧಿಕಾರಿಯ ವಿಚಾರಣೆಯ ನಂತರ ಬೆಳಕಿಗೆ ಬಂದಿದ್ದು, ಹೆಡ್ ಕಾನ್‌ಸ್ಟೆಬಲ್‌ಗಳಾದ ನಾಗಭೂಷಣ ಗೌಡ, ನಾಗರಾಜ್ ಬಿ.ಎನ್ ಮತ್ತು ಶಿವಕುಮಾರ್ ಹೆಚ್ ಎಂಬುವವರನ್ನು ಅಮಾನತುಗೊಳಿಸಲಾಗಿದೆ. 

ಈ ರೀತಿಯ ಕಾನೂನು ಬಾಹಿರ ಹಿಂಸೆಗಳ ವಿರುದ್ಧ ಪಿಎಫ್‌ಐ ಸಂಘಟನೆ ದನಿ ಎತ್ತಿದೆ. “ಠಾಣೆಯಲ್ಲಿ ಪ್ರಕರಣ ಇತ್ಯರ್ಥಪಡಿಸಲು ಪೊಲೀಸರು ಇಂತಿಷ್ಟು ಮೊತ್ತಕ್ಕೆ ಬೇಡಿಕೆ ಇಡುವ ವಿಚಾರ ಗುಪ್ತವಾಗಿರುವುದೇನಲ್ಲ. ಬ್ಯಾಟರಾಯನ ಠಾಣೆಯಲ್ಲಿ ಕೇಳಿ ಬಂದಿರುವ ಪೊಲೀಸರು ಹಣಕ್ಕಾಗಿ ಬೇಡಿಕೆ ಇಟ್ಟಿರುವ ವಿಚಾರವೇ ವಾರದ ಹಿಂದೆ ವರ್ತೂರು ಠಾಣೆಯಲ್ಲೂ ಕೇಳಿ ಬಂದಿತ್ತು. ತಮ್ಮ ಹಣದಾಹಕ್ಕಾಗಿ ಯುವಕರಿಗೆ ಚಿತ್ರಹಿಂಸೆ ನೀಡುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಂಡು, ಜನಸಾಮಾನ್ಯರಿಗೆ ಕಿರುಕುಳ ನೀಡುವ ಇಂತಹ ಅನಿಷ್ಟ ಪದ್ಧತಿಗೆ ಅಂತ್ಯ ಕಾಣಿಸಬೇಕು” ಎಂದು ಪಿಎಫ್‌ಐ ಒತ್ತಾಯಿಸಿದೆ.


ಇದನ್ನೂ ಓದಿ: ಬೆಂಗಳೂರು: ಯುವಕನ ಬಲಗೈ ಕಟ್ ಆಗುವಂತೆ ಚಿತ್ರಹಿಂಸೆ ನೀಡಿದ್ದ ಮೂವರು ಪೊಲೀಸರ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...