Homeಕರ್ನಾಟಕಬೆಂಗಳೂರಿನ ಮುಸ್ಲಿಂ ಯುವಕನಿಗೆ ಥಳಿತ, ಮೂತ್ರ ಕುಡಿಸಲು ಒತ್ತಾಯ ಆರೋಪ: ಸಬ್ ಇನ್ಸ್‌ಪೆಕ್ಟರ್ ಅಮಾನತು

ಬೆಂಗಳೂರಿನ ಮುಸ್ಲಿಂ ಯುವಕನಿಗೆ ಥಳಿತ, ಮೂತ್ರ ಕುಡಿಸಲು ಒತ್ತಾಯ ಆರೋಪ: ಸಬ್ ಇನ್ಸ್‌ಪೆಕ್ಟರ್ ಅಮಾನತು

ಈ ವರ್ಷದಲ್ಲಿ ಇದು ಮೂರನೆ ಕಸ್ಟಡಿ ಹಿಂಸೆ ಪ್ರಕರಣವಾಗಿದೆ. ಈ ಹಿಂದೆಯೂ ಹಲವು ಪೊಲೀಸರು ಕಾನೂನುಬಾಹಿರ ಕೃತ್ಯಗಳಿಗಾಗಿ ಸಸ್ಪೆಂಡ್ ಆಗಿದ್ದಾರೆ.

- Advertisement -
- Advertisement -

ಬೆಂಗಳೂರಿನಲ್ಲಿ ಕಸ್ಟಡಿ ಚಿತ್ರಹಿಂಸೆ ಪ್ರಕರಣಗಳು ಹೆಚ್ಚುತ್ತಿದ್ದು 23 ವರ್ಷದ ತೌಸೀಫ್ ಎಂಬ ಮುಸ್ಲಿಂ ಯುವಕನಿಗೆ ಬ್ಯಾಟರಾಯನಪುರ ಠಾಣೆ ಪೊಲೀಸರು ಗಂಭೀರವಾಗಿ ಥಳಿಸಿ, ಮೂತ್ರ ಕುಡಿಸಲು ಒತ್ತಾಯಿಸಿದ ಪ್ರಕರಣದಲ್ಲಿ ಸಬ್ ಇನ್ಸ್ ಪೆಕ್ಟರ್ ಹರೀಶ್ ಎಂಬುವವರನ್ನು ಅಮಾನತು ಮಾಡಲಾಗಿದೆ.

ಈ ಪ್ರಕರಣದ ಕುರಿತು ಸೋಮವಾರ ಮಧ್ಯಂತರ ವರದಿಯನ್ನು ಸಲ್ಲಿಸಲಾಗಿದೆ. ಅದರ ಆಧಾರದ ಮೇಲೆ ಕರ್ತವ್ಯಲೋಪ, ಪೊಲೀಸ್ ಠಾಣೆಗೆ ವರದಿ ಮಾಡದ ಮತ್ತು ಪ್ರಕರಣವನ್ನು ದಾಖಲಿಸದ ಕಾರಣ ಸಬ್‌ ಇನ್ಸ್‌ಪೆಕ್ಟರ್ ಹರೀಶ್ ಅವರನ್ನು ಅಮಾನತುಗೊಳಿಸಲಾಗಿದೆ. ಸಂತ್ರಸ್ತನ ಕುಟುಂಬದವರು ಮಾಡಿರುವ ಆರೋಪಗಳ ಬಗ್ಗೆ ಇಲಾಖಾ ತನಿಖೆಗೂ ಆದೇಶಿಸಲಾಗಿದೆ ಎಂದು ಪೊಲೀಸ್ ಉಪ ಆಯುಕ್ತ (ಪಶ್ಚಿಮ) ಸಂಜೀವ್ ಎಂ ಪಾಟೀಲ್ ಹೇಳಿಕೆ ಆಧರಿಸಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಘಟನೆಯ ವಿವರ

ಯುವಕನೋರ್ವ ಗುದ್ದದಹಳ್ಳಿಯ ತಮ್ಮ ಮನೆ ಬಳಿ ಕುಳಿತುಕೊಂಡಿದ್ದನ್ನು ತೌಸೀಫ್ ಆಕ್ಷೇಪಿಸಿದ್ದ. ಆ ನಂತರ ಊರ ಮಂದಿಯ ಮಧ್ಯಸ್ಥಿಕೆಯೊಂದಿಗೆ ಆ ಯುವಕನಿಗೆ ಗುದ್ದದಹಳ್ಳಿಗೆ ಬರದಂತೆ ಎಚ್ಚರಿಕೆ ನೀಡಲಾಗಿತ್ತು. ಆದರೆ 8 ತಿಂಗಳ ನಂತರ, ಮೂರು ದಿನಗಳ ಹಿಂದೆ ಆ ಯುವಕ ಮತ್ತೇ ಗುದ್ದದಹಳ್ಳಿಗೆ ಬಂದಿದ್ದ. ಆ ವೇಳೆ ತೌಸೀಫ್ ಆ ಯುವಕನನ್ನು ದೂರ ಕರೆದುಕೊಂಡು ಹೋಗಿ ಪ್ರಶ್ನಿಸಿದ್ದಾನೆ. ಇದು ಪೊಲೀಸರಿಗೆ ತಿಳಿದು ಪೊಲೀಸರು ಇಬ್ಬರನ್ನೂ ವಿಚಾರಿಸಿದ ಬಳಿಕ ತೌಸೀಫ್ ನನ್ನು ಬ್ಯಾಟರಾಯನಪುರ ಠಾಣೆಗೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ ಎಂದು ತೌಸಿಫ್ ತಂದೆ ಅಸ್ಲಮ್ ಪಾಶ ಆರೋಪಿಸಿದ್ದಾರೆ.

‘ಠಾಣೆಯಲ್ಲಿ ಸರ್ಕಲ್ ಪೊಲೀಸ್ ಶಂಕರ್ ನಾಯಕ್, ಸಬ್ ಇನ್ಸ್ ಪೆಕ್ಟರ್ ಹರೀಶ್ ಉಪಸ್ಥಿತಿಯಲ್ಲಿ ಇತರ ಸಿಬ್ಬಂದಿ ತನ್ನ ಗಡ್ಡ ಕತ್ತರಿಸಿದ್ದಾರೆ. ಮುಂಜಾನೆ 2 ಗಂಟೆಯಿಂದ ಸುಮಾರು 5 ಗಂಟೆಯವರಗೆ ನಿರಂತರ 3 ಗಂಟೆಗಳ ಕಾಲ ಬ್ಯಾಟ್‌ನಿಂದ ಥಳಿಸಿದ್ದಾರೆ. ಬಾಯಾರಿಕೆ ತಣಿಸಲು ನೀರು ಕೇಳಿದಾಗ ಮೂತ್ರ ನೀಡಿ ಕುಡಿಸಲು ಒತ್ತಾಯಿಸಿದ್ದಾರೆ. ಕಾಲು, ಬೂಟುಗಳಿಂದ ತಲೆ, ಮುಖ, ಭುಜ, ಗುಪ್ತಾಂಗಕ್ಕೆ ಒದೆಯಲಾಗಿದೆ. ತೀವ್ರ ತೆರನಾದ ಥಳಿತದಿಂದ ಯುವಕನ ಕಾಲು ಬಾತುಕೊಂಡಿದೆ. ನಡೆದಾಡಲೂ ಸಾಧ್ಯವಾಗದೇ ಕೊನೆಗೆ ಮೂರ್ಛೆ ತಪ್ಪಿದ್ದೆ. ನಂತರ ಪೊಲೀಸ್ ಠಾಣೆ ಸ್ವಚ್ಛಗೊಳಿಸುವಂತೆ ಒತ್ತಾಯಿಸಿದರು. ಯಾವುದೇ ಪ್ರಕರಣ ದಾಖಲಿಸದ ಪೊಲೀಸರು, ಬಿಡುಗಡೆಗಾಗಿ 1 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದರು. ಶಾಸಕರಾದ ಜಮೀರ್ ಅಹ್ಮದ್ ಖಾನ್‌ರವರು ಮಧ್ಯಪ್ರವೇಶಿಸಿದ ಬಳಿಕ ಬಿಡುಗಡೆಗೊಳಿಸಿದ್ದಾರೆ’ ಎಂದು ತೌಸಿಫ್ ಆರೋಪಿಸಿದ್ದರು.

ತೀವ್ರ ಹಲ್ಲೆಗೆ ಒಳಗಾಗಿದ್ದ ತೌಸಿಫ್‌ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೋಮವಾರ ಡಿಸ್ಚಾರ್ಜ್ ಮಾಡಲಾಗಿದೆ. ಅವರು ಈಗಲೂ ನೋವಿನಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ.

ಕರ್ನಾಟಕದಲ್ಲಿ ಕಸ್ಟಡಿ ಹಿಂಸಚಾರಗಳು ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ. ಮೇ ತಿಂಗಳಿನಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ದಲಿತ ಯುವಕನಿಗೆ ಮೂತ್ರ ಕುಡಿಸಿ ಅಮಾನವೀಯವಾಗಿ ನಡೆಸಿಕೊಂಡಿದ್ದ ಪ್ರಕರಣದಲ್ಲಿ ಗೋಣಿಬೀಡು PSI ಅರ್ಜುನ್ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. ಸದ್ಯ ಅಮಾನತ್ತು ಶಿಕ್ಷೆ ಅನುಭವಿಸುತ್ತಿದ್ದಾರೆ.

ಇನ್ನೊಂದೆಡೆ ಅಕ್ಟೋಬರ್ 27 ರಂದು 22 ವರ್ಷದ ಯುವಕರೊಬ್ಬನನ್ನು ಬಂಧನದಲ್ಲಿಟ್ಟು ಸತತ ಚಿತ್ರಹಿಂಸೆ ನೀಡಿ ಆತ ತನ್ನ ಬಲಗೈ ಕಳೆದುಕೊಳ್ಳುವಂತೆ ಮಾಡಿದ ಆರೋಪದಲ್ಲಿ ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆಯ ಮೂವರು ಪೊಲೀಸರನ್ನು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಅಮಾನತುಗೊಳಿಸಿದ್ದಾರೆ. ಸಲ್ಮಾನ್ ಮೇಲೆ ಹಲ್ಲೆ ನಡೆಸಿರುವುದು ಹಿರಿಯ ಅಧಿಕಾರಿಯ ವಿಚಾರಣೆಯ ನಂತರ ಬೆಳಕಿಗೆ ಬಂದಿದ್ದು, ಹೆಡ್ ಕಾನ್‌ಸ್ಟೆಬಲ್‌ಗಳಾದ ನಾಗಭೂಷಣ ಗೌಡ, ನಾಗರಾಜ್ ಬಿ.ಎನ್ ಮತ್ತು ಶಿವಕುಮಾರ್ ಹೆಚ್ ಎಂಬುವವರನ್ನು ಅಮಾನತುಗೊಳಿಸಲಾಗಿದೆ. 

ಈ ರೀತಿಯ ಕಾನೂನು ಬಾಹಿರ ಹಿಂಸೆಗಳ ವಿರುದ್ಧ ಪಿಎಫ್‌ಐ ಸಂಘಟನೆ ದನಿ ಎತ್ತಿದೆ. “ಠಾಣೆಯಲ್ಲಿ ಪ್ರಕರಣ ಇತ್ಯರ್ಥಪಡಿಸಲು ಪೊಲೀಸರು ಇಂತಿಷ್ಟು ಮೊತ್ತಕ್ಕೆ ಬೇಡಿಕೆ ಇಡುವ ವಿಚಾರ ಗುಪ್ತವಾಗಿರುವುದೇನಲ್ಲ. ಬ್ಯಾಟರಾಯನ ಠಾಣೆಯಲ್ಲಿ ಕೇಳಿ ಬಂದಿರುವ ಪೊಲೀಸರು ಹಣಕ್ಕಾಗಿ ಬೇಡಿಕೆ ಇಟ್ಟಿರುವ ವಿಚಾರವೇ ವಾರದ ಹಿಂದೆ ವರ್ತೂರು ಠಾಣೆಯಲ್ಲೂ ಕೇಳಿ ಬಂದಿತ್ತು. ತಮ್ಮ ಹಣದಾಹಕ್ಕಾಗಿ ಯುವಕರಿಗೆ ಚಿತ್ರಹಿಂಸೆ ನೀಡುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಂಡು, ಜನಸಾಮಾನ್ಯರಿಗೆ ಕಿರುಕುಳ ನೀಡುವ ಇಂತಹ ಅನಿಷ್ಟ ಪದ್ಧತಿಗೆ ಅಂತ್ಯ ಕಾಣಿಸಬೇಕು” ಎಂದು ಪಿಎಫ್‌ಐ ಒತ್ತಾಯಿಸಿದೆ.


ಇದನ್ನೂ ಓದಿ: ಬೆಂಗಳೂರು: ಯುವಕನ ಬಲಗೈ ಕಟ್ ಆಗುವಂತೆ ಚಿತ್ರಹಿಂಸೆ ನೀಡಿದ್ದ ಮೂವರು ಪೊಲೀಸರ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...