Homeಮುಖಪುಟಎಸ್‌ಬಿಐ ಬ್ಯಾಂಕ್‌ನಿಂದ ಗ್ರಾಹಕರಿಗೆ ಎಟಿಎಂ ವಿತ್‌ ಡ್ರಾ ಸೇರಿ ಹಲವು ಶುಲ್ಕಗಳು!

ಎಸ್‌ಬಿಐ ಬ್ಯಾಂಕ್‌ನಿಂದ ಗ್ರಾಹಕರಿಗೆ ಎಟಿಎಂ ವಿತ್‌ ಡ್ರಾ ಸೇರಿ ಹಲವು ಶುಲ್ಕಗಳು!

- Advertisement -
- Advertisement -

ಕೊರೊನಾ ಸಾಂಕ್ರಾಮಿಕ, ಲಾಕ್‌ಡೌನ್‌ನಿಂದ ಉಂಟಾಗಿರುವ ಸಂಕಷ್ಟದಲ್ಲಿ ಇರುವ ಜನರ ಜೀವನದ ಮೇಲೆ ಬರೆ ಮೇಲೆ ಬರೆ ಬೀಳುತ್ತಿದೆ. ಎಲ್‌ಪಿಜಿ ಸಿಲಿಂಡರ್, ಪೆಟ್ರೋಲ್, ಡೀಸೆಲ್, ದಿನಸಿ ಪದಾರ್ಥಗಳ ಬೆಲೆ ಏರಿಕೆ ಜೊತೆಗೆ ಈಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ತನ್ನ ಗ್ರಾಹಕರಿಂದ ಹಲವು ರೀತಿಯ ಶುಲ್ಕಗಳನ್ನು ವಿಧಿಸಲು ಮುಂದಾಗಿದೆ.

ಖಾತೆದಾರರಿಂದ ವಿವಿಧ ರೀತಿಯಲ್ಲಿ ಶುಲ್ಕ ವಸೂಲಿಗೆ ಮುಂದಾಗಿರುವ ಎಸ್‌ಬಿಐ, ಎಟಿಎಂ ಮಾತ್ರವಲ್ಲದೆ ಶಾಖೆಗಳಲ್ಲಿಯೂ ಹಣವನ್ನು ಹಿಂಪಡೆಯುವಿಕೆಗೂ (ವಿತ್‌ಡ್ರಾ) ಜುಲೈ 01 (ಇಂದಿನಿಂದ) ರಿಂದ ಶುಲ್ಕ ವಿಧಿಸುವುದಾಗಿ ಎಸ್‌ಬಿಐ ಮಾಹಿತಿ ನೀಡಿದೆ.

ಎಸ್‌ಬಿಐ ಬ್ಯಾಂಕುಗಳಲ್ಲಿ ಉಳಿತಾಯ ಖಾತೆ (ಬಿಎಸ್‌ಬಿಡಿ) ಯನ್ನು ಹೊಂದಿರುವ ಖಾತೆದಾರರಿಗೆ ಎಂಟಿಎಂ ಮತ್ತು ಬ್ಯಾಂಕ್‌ ಶಾಖೆಗಳಲ್ಲಿ ಹಣವನ್ನು ವಿತ್‌ಡ್ರಾ ಮಾಡಿದರೂ ಶುಲ್ಕ ವಿಧಿಸಲಾಗುವುದು. ತಿಂಗಳಲ್ಲಿ ಮೊದಲ ನಾಲ್ಕು ಬಾರಿ ಎಟಿಎಂನಿಂದ ಅಥವಾ ಬ್ಯಾಂಕ್‌ನಿಂದ ಹಣ ವಿತ್‌ಡ್ರಾ ಮಾಡಲು ಯಾವುದೇ ಶುಲ್ಕವಿಲ್ಲ.

ಆದರೆ, ನಾಲ್ಕು ಬಾರಿಗಿಂತ ಹೆಚ್ಚು ಬಾರಿ ಹಣ ಡ್ರಾ ಮಾಡಿದರೆ, 15 ರಿಂದ 75 ರೂಪಾಯಿಗಳ ವರೆಗೆ ಶುಲ್ಕ ಮತ್ತು ಜಿಎಸ್‌ಟಿ ವಿಧಿಸುವುದಾಗಿ ಎಸ್‌ಬಿಐ ತಿಳಿಸಿದೆ. ಆದರೆ, ಹಣಕಾಸು ವರ್ಗಾವಣೆ ವಹಿವಾಟಿಗೆ ಸಂಬಂಧಿಸಿದಂತೆ ಯಾವುದೇ ಶುಲ್ಕವಿಲ್ಲ ಎಂದು ತಿಳಿಸಿದೆ.

ಇದನ್ನೂ ಓದಿ: ಪಠ್ಯಕ್ರಮ ನಿರ್ಧರಿಸಲಿರುವ ಕೇಂದ್ರ: ಒಕ್ಕೂಟ ಕಲ್ಪನೆಗೇ ಅನ್ಯಾಯ ಎಂದ ಶಿಕ್ಷಣ ತಜ್ಞರು

ಉಳಿತಾಯ ಖಾತೆದಾರನಿಗೆ ಮೊದಲ ಬಾರಿಗೆ ನೀಡಲಾಗುವ 10 ಲೀಫ್ ಚೆಕ್‌ಬುಕ್‌ಅನ್ನು ಉಚಿತವಾಗಿ ನೀಡಲಾಗುವುದು. ನಂತರ ಪಡೆಯುವ ಚೆಕ್‌ಬುಕ್‌ಗೆ 40 ರೂ. ಶುಲ್ಕ ಮತ್ತು ಜಿಎಸ್‌ಟಿ ವಿಧಿಸಲಾಗುವುದು. ಅಲ್ಲದೆ, 25 ಲೀಫ್ ಚೆಕ್‌ಬುಕ್‌ಗೆ 75 ರೂ. ಶುಲ್ಕ ಮತ್ತು ಜಿಎಸ್‌ಟಿ ವಿಧಿಸಲಾಗುವುದು. ತುರ್ತಾಗಿ ಪಡೆಯುವ ಚೆಕ್‌ ಪುಸ್ತಕ (10 ಎಲೆ)ಕ್ಕೆ 50 ರೂ ಮತ್ತು ಜಿಎಸ್‌ಟಿ ವಿಧಿಸಲಾಗುವುದು ಎಂದು ತಿಳಿಸಿದೆ.

ಆದರೆ, ಹಿರಿಯ ನಾಗರಿಕರಿಗೆ ಈ ನಿಯಮಗಳು ಅನ್ವಯಿಸುವುದಿಲ್ಲ ಎಂದು ಎಸ್‌ಬಿಐ ಹೇಳಿದೆ. ಬಿಎಸ್‌ಬಿಡಿ ಖಾತೆಯು ಪ್ರಾಥಮಿಕವಾಗಿ ಕಾರ್ಮಿಕ ವರ್ಗಕ್ಕೆ ಮೀಸಲಾಗಿರುವುದರಿಂದ, ಈ ಹೊಸ ನಿಯಮವು ಅವರ ಬ್ಯಾಂಕಿಂಗ್ ಪ್ರವೇಶದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಗಿದೆ.

ಬ್ಯಾಂಕ್‌ಗಳಲ್ಲಿ ಖಾತೆ ತೆರೆಸುವಾಗ, ದುಡಿಯುವ ವರ್ಗವನ್ನು ಹೂಡಿಕೆ ಮಾಡಲು ಮತ್ತು ಅವರ ಹಣವನ್ನು ಉಳಿತಾಯ ಮಾಡುವುದಕ್ಕಾಗಿ ಉಳಿತಾಯ ಖಾತೆ ಅಥವಾ ಜಿರೋ ಬ್ಯಾಲೆನ್ಸ್ ಅಕೌಂಟ್‌ಗಳನ್ನು ತೆರೆಯಲು ಹೇಳಲಾಗುತ್ತಿತ್ತು. ಆದರೆ, ಇದೀಗ ಎಸ್‌ಬಿಐ ಸೇರಿದಂತ ಎಹಲವು ಬ್ಯಾಂಕ್‌ಗಳು ಈ ಪ್ರಮಾಣದಲ್ಲಿ ಶುಲ್ಕ ಮತ್ತು ಜಿಎಸ್‌ಟಿ ವಿಧಿಸುತ್ತಿರುವುದರಿಂದಾಗಿ ದುಡಿಯುವ ವರ್ಗವನ್ನು ಕಷ್ಟಕ್ಕೆ ದೂಡಿದಂತಾಗುತ್ತದೆ.


ಇದನ್ನೂ ಓದಿ: ಮಠಾಧೀಶರನ್ನು ಖರೀದಿಸಿ ಅಧಿಕಾರ ಹಿಡಿದವರು ಹೆಚ್ಚು ದಿನ ಇರಲ್ಲ: ಬಿಎಸ್‌ವೈ ವಿರುದ್ಧ ಯತ್ನಾಳ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...