Homeಮುಖಪುಟಎಸ್‌ಬಿಐ ಬ್ಯಾಂಕ್‌ನಿಂದ ಗ್ರಾಹಕರಿಗೆ ಎಟಿಎಂ ವಿತ್‌ ಡ್ರಾ ಸೇರಿ ಹಲವು ಶುಲ್ಕಗಳು!

ಎಸ್‌ಬಿಐ ಬ್ಯಾಂಕ್‌ನಿಂದ ಗ್ರಾಹಕರಿಗೆ ಎಟಿಎಂ ವಿತ್‌ ಡ್ರಾ ಸೇರಿ ಹಲವು ಶುಲ್ಕಗಳು!

- Advertisement -
- Advertisement -

ಕೊರೊನಾ ಸಾಂಕ್ರಾಮಿಕ, ಲಾಕ್‌ಡೌನ್‌ನಿಂದ ಉಂಟಾಗಿರುವ ಸಂಕಷ್ಟದಲ್ಲಿ ಇರುವ ಜನರ ಜೀವನದ ಮೇಲೆ ಬರೆ ಮೇಲೆ ಬರೆ ಬೀಳುತ್ತಿದೆ. ಎಲ್‌ಪಿಜಿ ಸಿಲಿಂಡರ್, ಪೆಟ್ರೋಲ್, ಡೀಸೆಲ್, ದಿನಸಿ ಪದಾರ್ಥಗಳ ಬೆಲೆ ಏರಿಕೆ ಜೊತೆಗೆ ಈಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ತನ್ನ ಗ್ರಾಹಕರಿಂದ ಹಲವು ರೀತಿಯ ಶುಲ್ಕಗಳನ್ನು ವಿಧಿಸಲು ಮುಂದಾಗಿದೆ.

ಖಾತೆದಾರರಿಂದ ವಿವಿಧ ರೀತಿಯಲ್ಲಿ ಶುಲ್ಕ ವಸೂಲಿಗೆ ಮುಂದಾಗಿರುವ ಎಸ್‌ಬಿಐ, ಎಟಿಎಂ ಮಾತ್ರವಲ್ಲದೆ ಶಾಖೆಗಳಲ್ಲಿಯೂ ಹಣವನ್ನು ಹಿಂಪಡೆಯುವಿಕೆಗೂ (ವಿತ್‌ಡ್ರಾ) ಜುಲೈ 01 (ಇಂದಿನಿಂದ) ರಿಂದ ಶುಲ್ಕ ವಿಧಿಸುವುದಾಗಿ ಎಸ್‌ಬಿಐ ಮಾಹಿತಿ ನೀಡಿದೆ.

ಎಸ್‌ಬಿಐ ಬ್ಯಾಂಕುಗಳಲ್ಲಿ ಉಳಿತಾಯ ಖಾತೆ (ಬಿಎಸ್‌ಬಿಡಿ) ಯನ್ನು ಹೊಂದಿರುವ ಖಾತೆದಾರರಿಗೆ ಎಂಟಿಎಂ ಮತ್ತು ಬ್ಯಾಂಕ್‌ ಶಾಖೆಗಳಲ್ಲಿ ಹಣವನ್ನು ವಿತ್‌ಡ್ರಾ ಮಾಡಿದರೂ ಶುಲ್ಕ ವಿಧಿಸಲಾಗುವುದು. ತಿಂಗಳಲ್ಲಿ ಮೊದಲ ನಾಲ್ಕು ಬಾರಿ ಎಟಿಎಂನಿಂದ ಅಥವಾ ಬ್ಯಾಂಕ್‌ನಿಂದ ಹಣ ವಿತ್‌ಡ್ರಾ ಮಾಡಲು ಯಾವುದೇ ಶುಲ್ಕವಿಲ್ಲ.

ಆದರೆ, ನಾಲ್ಕು ಬಾರಿಗಿಂತ ಹೆಚ್ಚು ಬಾರಿ ಹಣ ಡ್ರಾ ಮಾಡಿದರೆ, 15 ರಿಂದ 75 ರೂಪಾಯಿಗಳ ವರೆಗೆ ಶುಲ್ಕ ಮತ್ತು ಜಿಎಸ್‌ಟಿ ವಿಧಿಸುವುದಾಗಿ ಎಸ್‌ಬಿಐ ತಿಳಿಸಿದೆ. ಆದರೆ, ಹಣಕಾಸು ವರ್ಗಾವಣೆ ವಹಿವಾಟಿಗೆ ಸಂಬಂಧಿಸಿದಂತೆ ಯಾವುದೇ ಶುಲ್ಕವಿಲ್ಲ ಎಂದು ತಿಳಿಸಿದೆ.

ಇದನ್ನೂ ಓದಿ: ಪಠ್ಯಕ್ರಮ ನಿರ್ಧರಿಸಲಿರುವ ಕೇಂದ್ರ: ಒಕ್ಕೂಟ ಕಲ್ಪನೆಗೇ ಅನ್ಯಾಯ ಎಂದ ಶಿಕ್ಷಣ ತಜ್ಞರು

ಉಳಿತಾಯ ಖಾತೆದಾರನಿಗೆ ಮೊದಲ ಬಾರಿಗೆ ನೀಡಲಾಗುವ 10 ಲೀಫ್ ಚೆಕ್‌ಬುಕ್‌ಅನ್ನು ಉಚಿತವಾಗಿ ನೀಡಲಾಗುವುದು. ನಂತರ ಪಡೆಯುವ ಚೆಕ್‌ಬುಕ್‌ಗೆ 40 ರೂ. ಶುಲ್ಕ ಮತ್ತು ಜಿಎಸ್‌ಟಿ ವಿಧಿಸಲಾಗುವುದು. ಅಲ್ಲದೆ, 25 ಲೀಫ್ ಚೆಕ್‌ಬುಕ್‌ಗೆ 75 ರೂ. ಶುಲ್ಕ ಮತ್ತು ಜಿಎಸ್‌ಟಿ ವಿಧಿಸಲಾಗುವುದು. ತುರ್ತಾಗಿ ಪಡೆಯುವ ಚೆಕ್‌ ಪುಸ್ತಕ (10 ಎಲೆ)ಕ್ಕೆ 50 ರೂ ಮತ್ತು ಜಿಎಸ್‌ಟಿ ವಿಧಿಸಲಾಗುವುದು ಎಂದು ತಿಳಿಸಿದೆ.

ಆದರೆ, ಹಿರಿಯ ನಾಗರಿಕರಿಗೆ ಈ ನಿಯಮಗಳು ಅನ್ವಯಿಸುವುದಿಲ್ಲ ಎಂದು ಎಸ್‌ಬಿಐ ಹೇಳಿದೆ. ಬಿಎಸ್‌ಬಿಡಿ ಖಾತೆಯು ಪ್ರಾಥಮಿಕವಾಗಿ ಕಾರ್ಮಿಕ ವರ್ಗಕ್ಕೆ ಮೀಸಲಾಗಿರುವುದರಿಂದ, ಈ ಹೊಸ ನಿಯಮವು ಅವರ ಬ್ಯಾಂಕಿಂಗ್ ಪ್ರವೇಶದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಗಿದೆ.

ಬ್ಯಾಂಕ್‌ಗಳಲ್ಲಿ ಖಾತೆ ತೆರೆಸುವಾಗ, ದುಡಿಯುವ ವರ್ಗವನ್ನು ಹೂಡಿಕೆ ಮಾಡಲು ಮತ್ತು ಅವರ ಹಣವನ್ನು ಉಳಿತಾಯ ಮಾಡುವುದಕ್ಕಾಗಿ ಉಳಿತಾಯ ಖಾತೆ ಅಥವಾ ಜಿರೋ ಬ್ಯಾಲೆನ್ಸ್ ಅಕೌಂಟ್‌ಗಳನ್ನು ತೆರೆಯಲು ಹೇಳಲಾಗುತ್ತಿತ್ತು. ಆದರೆ, ಇದೀಗ ಎಸ್‌ಬಿಐ ಸೇರಿದಂತ ಎಹಲವು ಬ್ಯಾಂಕ್‌ಗಳು ಈ ಪ್ರಮಾಣದಲ್ಲಿ ಶುಲ್ಕ ಮತ್ತು ಜಿಎಸ್‌ಟಿ ವಿಧಿಸುತ್ತಿರುವುದರಿಂದಾಗಿ ದುಡಿಯುವ ವರ್ಗವನ್ನು ಕಷ್ಟಕ್ಕೆ ದೂಡಿದಂತಾಗುತ್ತದೆ.


ಇದನ್ನೂ ಓದಿ: ಮಠಾಧೀಶರನ್ನು ಖರೀದಿಸಿ ಅಧಿಕಾರ ಹಿಡಿದವರು ಹೆಚ್ಚು ದಿನ ಇರಲ್ಲ: ಬಿಎಸ್‌ವೈ ವಿರುದ್ಧ ಯತ್ನಾಳ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...