Homeಮುಖಪುಟಎಸ್‌ಬಿಐ ಬ್ಯಾಂಕ್‌ನಿಂದ ಗ್ರಾಹಕರಿಗೆ ಎಟಿಎಂ ವಿತ್‌ ಡ್ರಾ ಸೇರಿ ಹಲವು ಶುಲ್ಕಗಳು!

ಎಸ್‌ಬಿಐ ಬ್ಯಾಂಕ್‌ನಿಂದ ಗ್ರಾಹಕರಿಗೆ ಎಟಿಎಂ ವಿತ್‌ ಡ್ರಾ ಸೇರಿ ಹಲವು ಶುಲ್ಕಗಳು!

- Advertisement -
- Advertisement -

ಕೊರೊನಾ ಸಾಂಕ್ರಾಮಿಕ, ಲಾಕ್‌ಡೌನ್‌ನಿಂದ ಉಂಟಾಗಿರುವ ಸಂಕಷ್ಟದಲ್ಲಿ ಇರುವ ಜನರ ಜೀವನದ ಮೇಲೆ ಬರೆ ಮೇಲೆ ಬರೆ ಬೀಳುತ್ತಿದೆ. ಎಲ್‌ಪಿಜಿ ಸಿಲಿಂಡರ್, ಪೆಟ್ರೋಲ್, ಡೀಸೆಲ್, ದಿನಸಿ ಪದಾರ್ಥಗಳ ಬೆಲೆ ಏರಿಕೆ ಜೊತೆಗೆ ಈಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ತನ್ನ ಗ್ರಾಹಕರಿಂದ ಹಲವು ರೀತಿಯ ಶುಲ್ಕಗಳನ್ನು ವಿಧಿಸಲು ಮುಂದಾಗಿದೆ.

ಖಾತೆದಾರರಿಂದ ವಿವಿಧ ರೀತಿಯಲ್ಲಿ ಶುಲ್ಕ ವಸೂಲಿಗೆ ಮುಂದಾಗಿರುವ ಎಸ್‌ಬಿಐ, ಎಟಿಎಂ ಮಾತ್ರವಲ್ಲದೆ ಶಾಖೆಗಳಲ್ಲಿಯೂ ಹಣವನ್ನು ಹಿಂಪಡೆಯುವಿಕೆಗೂ (ವಿತ್‌ಡ್ರಾ) ಜುಲೈ 01 (ಇಂದಿನಿಂದ) ರಿಂದ ಶುಲ್ಕ ವಿಧಿಸುವುದಾಗಿ ಎಸ್‌ಬಿಐ ಮಾಹಿತಿ ನೀಡಿದೆ.

ಎಸ್‌ಬಿಐ ಬ್ಯಾಂಕುಗಳಲ್ಲಿ ಉಳಿತಾಯ ಖಾತೆ (ಬಿಎಸ್‌ಬಿಡಿ) ಯನ್ನು ಹೊಂದಿರುವ ಖಾತೆದಾರರಿಗೆ ಎಂಟಿಎಂ ಮತ್ತು ಬ್ಯಾಂಕ್‌ ಶಾಖೆಗಳಲ್ಲಿ ಹಣವನ್ನು ವಿತ್‌ಡ್ರಾ ಮಾಡಿದರೂ ಶುಲ್ಕ ವಿಧಿಸಲಾಗುವುದು. ತಿಂಗಳಲ್ಲಿ ಮೊದಲ ನಾಲ್ಕು ಬಾರಿ ಎಟಿಎಂನಿಂದ ಅಥವಾ ಬ್ಯಾಂಕ್‌ನಿಂದ ಹಣ ವಿತ್‌ಡ್ರಾ ಮಾಡಲು ಯಾವುದೇ ಶುಲ್ಕವಿಲ್ಲ.

ಆದರೆ, ನಾಲ್ಕು ಬಾರಿಗಿಂತ ಹೆಚ್ಚು ಬಾರಿ ಹಣ ಡ್ರಾ ಮಾಡಿದರೆ, 15 ರಿಂದ 75 ರೂಪಾಯಿಗಳ ವರೆಗೆ ಶುಲ್ಕ ಮತ್ತು ಜಿಎಸ್‌ಟಿ ವಿಧಿಸುವುದಾಗಿ ಎಸ್‌ಬಿಐ ತಿಳಿಸಿದೆ. ಆದರೆ, ಹಣಕಾಸು ವರ್ಗಾವಣೆ ವಹಿವಾಟಿಗೆ ಸಂಬಂಧಿಸಿದಂತೆ ಯಾವುದೇ ಶುಲ್ಕವಿಲ್ಲ ಎಂದು ತಿಳಿಸಿದೆ.

ಇದನ್ನೂ ಓದಿ: ಪಠ್ಯಕ್ರಮ ನಿರ್ಧರಿಸಲಿರುವ ಕೇಂದ್ರ: ಒಕ್ಕೂಟ ಕಲ್ಪನೆಗೇ ಅನ್ಯಾಯ ಎಂದ ಶಿಕ್ಷಣ ತಜ್ಞರು

ಉಳಿತಾಯ ಖಾತೆದಾರನಿಗೆ ಮೊದಲ ಬಾರಿಗೆ ನೀಡಲಾಗುವ 10 ಲೀಫ್ ಚೆಕ್‌ಬುಕ್‌ಅನ್ನು ಉಚಿತವಾಗಿ ನೀಡಲಾಗುವುದು. ನಂತರ ಪಡೆಯುವ ಚೆಕ್‌ಬುಕ್‌ಗೆ 40 ರೂ. ಶುಲ್ಕ ಮತ್ತು ಜಿಎಸ್‌ಟಿ ವಿಧಿಸಲಾಗುವುದು. ಅಲ್ಲದೆ, 25 ಲೀಫ್ ಚೆಕ್‌ಬುಕ್‌ಗೆ 75 ರೂ. ಶುಲ್ಕ ಮತ್ತು ಜಿಎಸ್‌ಟಿ ವಿಧಿಸಲಾಗುವುದು. ತುರ್ತಾಗಿ ಪಡೆಯುವ ಚೆಕ್‌ ಪುಸ್ತಕ (10 ಎಲೆ)ಕ್ಕೆ 50 ರೂ ಮತ್ತು ಜಿಎಸ್‌ಟಿ ವಿಧಿಸಲಾಗುವುದು ಎಂದು ತಿಳಿಸಿದೆ.

ಆದರೆ, ಹಿರಿಯ ನಾಗರಿಕರಿಗೆ ಈ ನಿಯಮಗಳು ಅನ್ವಯಿಸುವುದಿಲ್ಲ ಎಂದು ಎಸ್‌ಬಿಐ ಹೇಳಿದೆ. ಬಿಎಸ್‌ಬಿಡಿ ಖಾತೆಯು ಪ್ರಾಥಮಿಕವಾಗಿ ಕಾರ್ಮಿಕ ವರ್ಗಕ್ಕೆ ಮೀಸಲಾಗಿರುವುದರಿಂದ, ಈ ಹೊಸ ನಿಯಮವು ಅವರ ಬ್ಯಾಂಕಿಂಗ್ ಪ್ರವೇಶದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಗಿದೆ.

ಬ್ಯಾಂಕ್‌ಗಳಲ್ಲಿ ಖಾತೆ ತೆರೆಸುವಾಗ, ದುಡಿಯುವ ವರ್ಗವನ್ನು ಹೂಡಿಕೆ ಮಾಡಲು ಮತ್ತು ಅವರ ಹಣವನ್ನು ಉಳಿತಾಯ ಮಾಡುವುದಕ್ಕಾಗಿ ಉಳಿತಾಯ ಖಾತೆ ಅಥವಾ ಜಿರೋ ಬ್ಯಾಲೆನ್ಸ್ ಅಕೌಂಟ್‌ಗಳನ್ನು ತೆರೆಯಲು ಹೇಳಲಾಗುತ್ತಿತ್ತು. ಆದರೆ, ಇದೀಗ ಎಸ್‌ಬಿಐ ಸೇರಿದಂತ ಎಹಲವು ಬ್ಯಾಂಕ್‌ಗಳು ಈ ಪ್ರಮಾಣದಲ್ಲಿ ಶುಲ್ಕ ಮತ್ತು ಜಿಎಸ್‌ಟಿ ವಿಧಿಸುತ್ತಿರುವುದರಿಂದಾಗಿ ದುಡಿಯುವ ವರ್ಗವನ್ನು ಕಷ್ಟಕ್ಕೆ ದೂಡಿದಂತಾಗುತ್ತದೆ.


ಇದನ್ನೂ ಓದಿ: ಮಠಾಧೀಶರನ್ನು ಖರೀದಿಸಿ ಅಧಿಕಾರ ಹಿಡಿದವರು ಹೆಚ್ಚು ದಿನ ಇರಲ್ಲ: ಬಿಎಸ್‌ವೈ ವಿರುದ್ಧ ಯತ್ನಾಳ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...