Homeಮುಖಪುಟಕೇರಳದಲ್ಲಿ ಕಸ್ಟಮ್ಸ್ ಇಲಾಖೆ ಬಿಜೆಪಿ ಚುನಾವಣಾ ಪ್ರಚಾರಕ್ಕೆ ಇಳಿದಿದೆ: ಸಿಎಂ ಪಿಣರಾಯಿ ಆಕ್ರೋಶ

ಕೇರಳದಲ್ಲಿ ಕಸ್ಟಮ್ಸ್ ಇಲಾಖೆ ಬಿಜೆಪಿ ಚುನಾವಣಾ ಪ್ರಚಾರಕ್ಕೆ ಇಳಿದಿದೆ: ಸಿಎಂ ಪಿಣರಾಯಿ ಆಕ್ರೋಶ

'ತನಿಖಾ ಸಂಸ್ಥೆಯ ಉದ್ದೇಶಗಳು ಮತ್ತು ಕಾಂಗ್ರೆಸ್ ಮತ್ತು ಬಿಜೆಪಿಯ ಮೈತ್ರಿ ಇಲ್ಲಿ ಕೆಲಸ ಮಾಡುವುದಿಲ್ಲ. ರಾಜ್ಯದ ಜನರು ನಮ್ಮನ್ನು ದೂಷಿಸುವುದಿಲ್ಲ. ಯಾಕೆಂದರೆ, ನಮ್ಮ ಜೀವನವು ಅವರ ಮುಂದೆ ತೆರೆದ ಪುಸ್ತಕದಂತೆ ಇದೆ'

- Advertisement -
- Advertisement -

ವಿದೇಶಿ ಕರೆನ್ಸಿ ಕಳ್ಳಸಾಗಣೆ ಪ್ರಕರಣದಲ್ಲಿ ಮುಖ್ಯಮಂತ್ರಿ, ಅವರ ಕ್ಯಾಬಿನೆಟ್ ಸಹೋದ್ಯೋಗಿ ಮತ್ತು ವಿಧಾನಸಭೆ ಸ್ಪೀಕರ್ ಅವರ ಹೆಸರನ್ನು ಉಲ್ಲೇಖಿಸಿ ಅಫಿಡವಿಟ್ ಸಲ್ಲಿಸಿರುವ ಕೇಂದ್ರ ಕಸ್ಟಮ್ಸ್ ಇಲಾಖೆಯ ಕ್ರಮಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿರುಗೇಟು ನೀಡಿದ್ದಾರೆ.

ಕೇಂದ್ರ ಏಜೆನ್ಸಿ ಕೇರಳದಲ್ಲಿ ಬಿಜೆಪಿ ಪರ ಚುನಾವಣೆ ಪ್ರಚಾರ ಕೈಗೆತ್ತಿಕೊಂಡಿದೆ ಎಂದು ವ್ಯಂಗ್ಯ ಮಾಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ  ಉಲ್ಲೇಖಿಸಿದೆ.

ಸೆಕ್ಷನ್ 164 ಸಿಆರ್‌ಪಿಸಿ ಅಡಿಯಲ್ಲಿ ಚಿನ್ನದ ಕಳ್ಳಸಾಗಣೆ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ್ ಅವರು ನ್ಯಾಯಾಲಯದಲ್ಲಿ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಕಸ್ಟಮ್ಸ್ ಇಲಾಖೆ, ಗುರುವಾರ ವಿಜಯನ್ ಮತ್ತು ವಿಧಾನಸಭಾ ಸ್ಪೀಕರ್ ಪಿ.ಶ್ರೀರಾಮಕೃಷ್ಣನ್ ಅವರ ಅನುಮತಿಯಂತೆ ವಿದೇಶಿ ಕರೆನ್ಸಿಯನ್ನು ಕಳ್ಳಸಾಗಣೆ ಮಾಡಲಾಗಿದೆ ಎಂದು ಅಫಿಡವಿಟ್ ಸಲ್ಲಿಸಿದೆ.

ಇದನ್ನೂ ಓದಿ: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಪಿಣರಾಯಿ ವಿಜಯನ್ ಕೈವಾಡದ ಬಗ್ಗೆ ಪುರಾವೆ ಇಲ್ಲ: NIA

ಸ್ವಪ್ನಾಗೆ ವಿಶೇಷ ರಕ್ಷಣೆ ನೀಡುವಂತೆ ಕೆಳ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಇಲಾಖೆ ಅಫಿಡವಿಟ್ ಸಲ್ಲಿಸಿದೆ. ಹೈಕೋರ್ಟಿನಲ್ಲಿ ಕಸ್ಟಮ್ಸ್ ಅಫಿಡವಿಟ್ ಪ್ರತಿಭಟಿಸಿ ಎಲ್‌ಡಿಎಫ್ ಕಾರ್ಯಕರ್ತರು ಶನಿವಾರ ತಿರುವನಂತಪುರಂ, ಕೊಚ್ಚಿ ಮತ್ತು ಕೋ ಕೊಝಿಕೋಡ್‌ನಲ್ಲಿರುವ ಕಸ್ಟಮ್ಸ್ ಕಚೇರಿಗಳಿಗೆ ಮೆರವಣಿಗೆ ನಡೆಸಿದರು.

ಚುನಾವಣೆಯ ಸಮಯದಲ್ಲಿ ಕಸ್ಟಮ್ಸ್ ಇಲಾಖೆ ರಾಜಕೀಯ ಕಾರ್ಯಗಳನ್ನು ಪ್ರಾರಂಭಿಸಿದೆ ಎಂದು ವಿಜಯನ್ ಹೇಳಿದ್ದಾರೆ. “ತನಿಖಾ ಸಂಸ್ಥೆಯ ಉದ್ದೇಶಗಳು ಮತ್ತು ಕಾಂಗ್ರೆಸ್ ಮತ್ತು ಬಿಜೆಪಿಯ ಮೈತ್ರಿ ಇಲ್ಲಿ ಕೆಲಸ ಮಾಡುವುದಿಲ್ಲ. ನಾವು ಅದನ್ನು ಎದುರಿಸುತ್ತೇವೆ. ರಾಜ್ಯದ ಜನರು ನಮ್ಮನ್ನು ದೂಷಿಸುವುದಿಲ್ಲ. ಯಾಕೆಂದರೆ, ನಮ್ಮ ಜೀವನವು ಅವರ ಮುಂದೆ ತೆರೆದ ಪುಸ್ತಕದಂತೆ ಇದೆ” ಎಂದಿದ್ದಾರೆ.

’ಬಿಜೆಪಿ ಮತ್ತು ಅವರ ರಾಗಗಳಿಗೆ ನೃತ್ಯ ಮಾಡುವ ಏಜೆನ್ಸಿಗಳಿಗೆ ನಾನು ಹೇಳುತ್ತೇನೆ, ನೀವು ವ್ಯವಹರಿಸಲು ಒಗ್ಗಿಕೊಂಡಿರುವ ಜನರಲ್ಲ ನಾವು. ನಾವೇ ಬೇರೆ. ನೀವು ಏನು ಮಾಡಿದರೂ, ಈ ನೆಲ ನಮ್ಮನ್ನು ದೂಷಿಸುವುದಿಲ್ಲ. ನಮ್ಮ ಜೀವನವು ತೆರೆದ ಪುಸ್ತಕಗಳು, ಮತ್ತು ನೀವು ಅದನ್ನು ಶೀಘ್ರದಲ್ಲೇ ಅರಿತುಕೊಳ್ಳುವಿರಿ’ ಎಂದಿದ್ದಾರೆ.

ಇದನ್ನೂ  ಓದಿ: ’ರೈತರು ದೇಶದ ಜೀವನಾಡಿ, ರೈತರೊಂದಿಗೆ ಇಡೀ ದೇಶ ನಿಲ್ಲಬೇಕು’- ಪಿಣರಾಯಿ ವಿಜಯನ್

ಅಫಿಡವಿಟ್ ಅನ್ನು ಉಲ್ಲೇಖಿಸಿರುವ ವಿಜಯನ್, ’ಕಸ್ಟಮ್ಸ್ ಆಯುಕ್ತರು ನವೆಂಬರ್‌ನಲ್ಲಿ ಆರೋಪಿ (ಸ್ವಪ್ನಾ ಸುರೇಶ್) ನ್ಯಾಯಾಲಯದಲ್ಲಿ ನೀಡಿದ ಹೇಳಿಕೆಯಲ್ಲಿನ ಕೆಲವು ಹೆಸರುಗಳನ್ನು ಉಲ್ಲೇಖಿಸಿದ್ದಾರೆ. ಅವರು ಕ್ರಿಮಿನಲ್ ಇತರೆ ಅರ್ಜಿಯಲ್ಲಿ ಹೇಳಿಕೆ ನೀಡಿದ್ದು, ಇದರಲ್ಲಿ ಸ್ವಪ್ನಾ ಮತ್ತು ಕಸ್ಟಮ್ಸ್ ತಡೆಗಟ್ಟುವ ಅಧೀಕ್ಷಕರು ಪ್ರತಿಕ್ರಿಯಿಸಿದ್ದಾರೆ. ಅರ್ಜಿಯಲ್ಲಿ ಪ್ರತಿವಾದಿಯಲ್ಲದ ಆಯುಕ್ತರು ನ್ಯಾಯಾಲಯದ ಮುಂದೆ ಹೇಳಿಕೆ ನೀಡುತ್ತಿರುವುದು ಅಭೂತಪೂರ್ವವಾಗಿದೆ’ ಎಂದು ಪ್ರಶ್ನೆ ಮಾಡಿದ್ದಾರೆ.

2020 ರ ಜುಲೈನಿಂದ ಸ್ವಪ್ನಾ ವಿವಿಧ ಕೇಂದ್ರದ ತನಿಖಾ ಸಂಸ್ಥೆಗಳ ವಶದಲ್ಲಿದ್ದರು ಎಂದು ಹೇಳಿರುವ ವಿಜಯನ್ , ” ಹೀಗಿದ್ದರೂ ಆಕೆ ಕೇವಲ ಕಸ್ಟಮ್ಸ್ ಮುಂದೆ ಇಂತಹ ಮಹಾನ್ ಹೇಳಿಕೆಯನ್ನು ನೀಡಿದ್ದಾರೆ, ಕಸ್ಟಮ್ಸ್ ಮತ್ತು ಆಕೆಯ ಹೇಳಿಕೆಯ ಹಿಂದೆ ಕೆಲಸ ಮಾಡಿದವರು ಉತ್ತರಗಳನ್ನು ನೀಡಬೇಕು. ಸಿಆರ್‌ಪಿಸಿ 164 ರ ಹೇಳಿಕೆಯನ್ನು ಬಹಿರಂಗಪಡಿಸಬಾರದು ಎಂದು ಹೈಕೋರ್ಟ್ ಆದೇಶಿಸಿದೆ. ಕಸ್ಟಮ್ಸ್ ಆಯುಕ್ತರು ಸ್ಪೀಕರ್ ಮತ್ತು ಕ್ಯಾಬಿನೆಟ್ ಸದಸ್ಯರನ್ನು ಕೆಣಕಲು ಸಾಹಸ ಮಾಡಿದ್ದಾರೆ. ಇದು ಕೇಂದ್ರದಲ್ಲಿನ ಪಕ್ಷದ ಸಂಕುಚಿತ ಹಿತಾಸಕ್ತಿಯನ್ನು ರಕ್ಷಿಸುವ ಪ್ರಯತ್ನವಾಗಿದೆ’ ಎಂದು ವಿಜಯನ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಟಿಎಂಸಿ ಅಭ್ಯರ್ಥಿಗಳ ಪಟ್ಟಿ: ಮಹಿಳೆಯರಿಗೆ ಆದ್ಯತೆ, 114 ಹೊಸಮುಖಗಳು, ಎಸ್‌ಸಿ-ಎಸ್‌ಟಿಗೆ ಒತ್ತು

ತನಿಖಾ ಸಂಸ್ಥೆಗಳು ತಮ್ಮ ದೊರೆಗಳನ್ನು ಮೆಚ್ಚಿಸಲು ಕಾನೂನುಬಾಹಿರ ಮಾರ್ಗಗಳನ್ನು ಬಳಸುತ್ತಿವೆ ಎಂದು ಅವರು ಹೇಳಿದ್ದಾರೆ. ಎನ್‌ಐಎ ತನಿಖೆಯಲ್ಲಿ ಅಂತಹ ಯಾವುದೇ ಆರೋಪಗಳು ಬಂದಿಲ್ಲ ಎಂದು ಕೇರಳ ಸಿಎಂ ಹೇಳಿದ್ದಾರೆ.

“ರಾಜಕೀಯ ಉದ್ದೇಶಗಳಿಗಾಗಿ ತನಿಖಾ ಸಂಸ್ಥೆಗಳನ್ನು ಹೇಗೆ ಬಳಸಬೇಕೆಂದು ನೋಡುತ್ತಿದ್ದಾರೆ. ತನಿಖಾ ಸಂಸ್ಥೆಗಳ ಅಸಹಾಯಕತೆಯನ್ನು ನಾವು ಅರ್ಥಮಾಡಿಕೊಳ್ಳಬಹುದು. ಯಾವುದೇ ತನಿಖಾ ಸಂಸ್ಥೆ ಮುಂದೆ ಈ ರೀತಿ ವರ್ತಿಸಬಾರದು. ಈ ಸಂದರ್ಭದಲ್ಲಿ, ಏಜೆನ್ಸಿ ಸರಿಯಾದ ದಿಕ್ಕಿನಲ್ಲಿ ಕಾರ್ಯನಿರ್ವಹಿಸುವುದನ್ನು ತಡೆಯಲಾಗಿದೆ. ತಮ್ಮ ಯಜಮಾನರ ನಿರ್ದೇಶನದಂತೆ ಕೆಲಸ ಮಾಡಲು ಅವರನ್ನು ಒತ್ತಾಯಿಸಲಾಗುತ್ತಿದೆ’ ಎಂದಿದ್ದಾರೆ.

ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಈ ಬಗ್ಗೆ ಒಟ್ಟಾಗಿ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದ ವಿಜಯನ್, ಅವರು ಎಲ್‌ಡಿಎಫ್ ಅನ್ನು ನಾಶಮಾಡಲು ಬಯಸಿದ್ದಾರೆ. ಆದರೆ ನೀವು ನಾಶಪಡಿಸುವಂತಹ ಯಾವುದನ್ನೂ ನಾವು ಮಾಡಿಲ್ಲ. ಕಳೆದ ಐದು ವರ್ಷಗಳಲ್ಲಿ, ಸರ್ಕಾರವು ಮಾಡಬೇಕಾದ ಕೆಲಸಗಳನ್ನು ಮಾತ್ರ ನಾವು ಮಾಡಿದ್ದೇವೆ. ಎಲ್‌ಡಿಎಫ್ ಅದರ ಅಭಿವೃದ್ಧಿ ಚಟುವಟಿಕೆಗಳೊಂದಿಗೆ ಮುಂದುವರಿಯುತ್ತದೆ. ಈ ರಾಜ್ಯದ ಜನರನ್ನು ಬೆದರಿಸುತ್ತಿವೆ ಎಂಬುದನ್ನು ಬಿಜೆಪಿ ಮತ್ತು ಕಾಂಗ್ರೆಸ್ ಅರಿತುಕೊಳ್ಳಬೇಕು’ ಎಂದು ಕಿಡಿ ಕಾರಿದ್ದಾರೆ.


ಇದನ್ನೂ ಓದಿ: ಆದಿತ್ಯನಾಥ್ ಮತ್ತು ರಾಹುಲ್ ಗಾಂಧಿ ಇಬ್ಬರದೂ ಒಂದೇ ಭಾವನೆ: ಪಿಣರಾಯಿ ವಿಜಯನ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...