Homeಮುಖಪುಟಕೇರಳದಲ್ಲಿ ಕಸ್ಟಮ್ಸ್ ಇಲಾಖೆ ಬಿಜೆಪಿ ಚುನಾವಣಾ ಪ್ರಚಾರಕ್ಕೆ ಇಳಿದಿದೆ: ಸಿಎಂ ಪಿಣರಾಯಿ ಆಕ್ರೋಶ

ಕೇರಳದಲ್ಲಿ ಕಸ್ಟಮ್ಸ್ ಇಲಾಖೆ ಬಿಜೆಪಿ ಚುನಾವಣಾ ಪ್ರಚಾರಕ್ಕೆ ಇಳಿದಿದೆ: ಸಿಎಂ ಪಿಣರಾಯಿ ಆಕ್ರೋಶ

'ತನಿಖಾ ಸಂಸ್ಥೆಯ ಉದ್ದೇಶಗಳು ಮತ್ತು ಕಾಂಗ್ರೆಸ್ ಮತ್ತು ಬಿಜೆಪಿಯ ಮೈತ್ರಿ ಇಲ್ಲಿ ಕೆಲಸ ಮಾಡುವುದಿಲ್ಲ. ರಾಜ್ಯದ ಜನರು ನಮ್ಮನ್ನು ದೂಷಿಸುವುದಿಲ್ಲ. ಯಾಕೆಂದರೆ, ನಮ್ಮ ಜೀವನವು ಅವರ ಮುಂದೆ ತೆರೆದ ಪುಸ್ತಕದಂತೆ ಇದೆ'

- Advertisement -
- Advertisement -

ವಿದೇಶಿ ಕರೆನ್ಸಿ ಕಳ್ಳಸಾಗಣೆ ಪ್ರಕರಣದಲ್ಲಿ ಮುಖ್ಯಮಂತ್ರಿ, ಅವರ ಕ್ಯಾಬಿನೆಟ್ ಸಹೋದ್ಯೋಗಿ ಮತ್ತು ವಿಧಾನಸಭೆ ಸ್ಪೀಕರ್ ಅವರ ಹೆಸರನ್ನು ಉಲ್ಲೇಖಿಸಿ ಅಫಿಡವಿಟ್ ಸಲ್ಲಿಸಿರುವ ಕೇಂದ್ರ ಕಸ್ಟಮ್ಸ್ ಇಲಾಖೆಯ ಕ್ರಮಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿರುಗೇಟು ನೀಡಿದ್ದಾರೆ.

ಕೇಂದ್ರ ಏಜೆನ್ಸಿ ಕೇರಳದಲ್ಲಿ ಬಿಜೆಪಿ ಪರ ಚುನಾವಣೆ ಪ್ರಚಾರ ಕೈಗೆತ್ತಿಕೊಂಡಿದೆ ಎಂದು ವ್ಯಂಗ್ಯ ಮಾಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ  ಉಲ್ಲೇಖಿಸಿದೆ.

ಸೆಕ್ಷನ್ 164 ಸಿಆರ್‌ಪಿಸಿ ಅಡಿಯಲ್ಲಿ ಚಿನ್ನದ ಕಳ್ಳಸಾಗಣೆ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ್ ಅವರು ನ್ಯಾಯಾಲಯದಲ್ಲಿ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಕಸ್ಟಮ್ಸ್ ಇಲಾಖೆ, ಗುರುವಾರ ವಿಜಯನ್ ಮತ್ತು ವಿಧಾನಸಭಾ ಸ್ಪೀಕರ್ ಪಿ.ಶ್ರೀರಾಮಕೃಷ್ಣನ್ ಅವರ ಅನುಮತಿಯಂತೆ ವಿದೇಶಿ ಕರೆನ್ಸಿಯನ್ನು ಕಳ್ಳಸಾಗಣೆ ಮಾಡಲಾಗಿದೆ ಎಂದು ಅಫಿಡವಿಟ್ ಸಲ್ಲಿಸಿದೆ.

ಇದನ್ನೂ ಓದಿ: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಪಿಣರಾಯಿ ವಿಜಯನ್ ಕೈವಾಡದ ಬಗ್ಗೆ ಪುರಾವೆ ಇಲ್ಲ: NIA

ಸ್ವಪ್ನಾಗೆ ವಿಶೇಷ ರಕ್ಷಣೆ ನೀಡುವಂತೆ ಕೆಳ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಇಲಾಖೆ ಅಫಿಡವಿಟ್ ಸಲ್ಲಿಸಿದೆ. ಹೈಕೋರ್ಟಿನಲ್ಲಿ ಕಸ್ಟಮ್ಸ್ ಅಫಿಡವಿಟ್ ಪ್ರತಿಭಟಿಸಿ ಎಲ್‌ಡಿಎಫ್ ಕಾರ್ಯಕರ್ತರು ಶನಿವಾರ ತಿರುವನಂತಪುರಂ, ಕೊಚ್ಚಿ ಮತ್ತು ಕೋ ಕೊಝಿಕೋಡ್‌ನಲ್ಲಿರುವ ಕಸ್ಟಮ್ಸ್ ಕಚೇರಿಗಳಿಗೆ ಮೆರವಣಿಗೆ ನಡೆಸಿದರು.

ಚುನಾವಣೆಯ ಸಮಯದಲ್ಲಿ ಕಸ್ಟಮ್ಸ್ ಇಲಾಖೆ ರಾಜಕೀಯ ಕಾರ್ಯಗಳನ್ನು ಪ್ರಾರಂಭಿಸಿದೆ ಎಂದು ವಿಜಯನ್ ಹೇಳಿದ್ದಾರೆ. “ತನಿಖಾ ಸಂಸ್ಥೆಯ ಉದ್ದೇಶಗಳು ಮತ್ತು ಕಾಂಗ್ರೆಸ್ ಮತ್ತು ಬಿಜೆಪಿಯ ಮೈತ್ರಿ ಇಲ್ಲಿ ಕೆಲಸ ಮಾಡುವುದಿಲ್ಲ. ನಾವು ಅದನ್ನು ಎದುರಿಸುತ್ತೇವೆ. ರಾಜ್ಯದ ಜನರು ನಮ್ಮನ್ನು ದೂಷಿಸುವುದಿಲ್ಲ. ಯಾಕೆಂದರೆ, ನಮ್ಮ ಜೀವನವು ಅವರ ಮುಂದೆ ತೆರೆದ ಪುಸ್ತಕದಂತೆ ಇದೆ” ಎಂದಿದ್ದಾರೆ.

’ಬಿಜೆಪಿ ಮತ್ತು ಅವರ ರಾಗಗಳಿಗೆ ನೃತ್ಯ ಮಾಡುವ ಏಜೆನ್ಸಿಗಳಿಗೆ ನಾನು ಹೇಳುತ್ತೇನೆ, ನೀವು ವ್ಯವಹರಿಸಲು ಒಗ್ಗಿಕೊಂಡಿರುವ ಜನರಲ್ಲ ನಾವು. ನಾವೇ ಬೇರೆ. ನೀವು ಏನು ಮಾಡಿದರೂ, ಈ ನೆಲ ನಮ್ಮನ್ನು ದೂಷಿಸುವುದಿಲ್ಲ. ನಮ್ಮ ಜೀವನವು ತೆರೆದ ಪುಸ್ತಕಗಳು, ಮತ್ತು ನೀವು ಅದನ್ನು ಶೀಘ್ರದಲ್ಲೇ ಅರಿತುಕೊಳ್ಳುವಿರಿ’ ಎಂದಿದ್ದಾರೆ.

ಇದನ್ನೂ  ಓದಿ: ’ರೈತರು ದೇಶದ ಜೀವನಾಡಿ, ರೈತರೊಂದಿಗೆ ಇಡೀ ದೇಶ ನಿಲ್ಲಬೇಕು’- ಪಿಣರಾಯಿ ವಿಜಯನ್

ಅಫಿಡವಿಟ್ ಅನ್ನು ಉಲ್ಲೇಖಿಸಿರುವ ವಿಜಯನ್, ’ಕಸ್ಟಮ್ಸ್ ಆಯುಕ್ತರು ನವೆಂಬರ್‌ನಲ್ಲಿ ಆರೋಪಿ (ಸ್ವಪ್ನಾ ಸುರೇಶ್) ನ್ಯಾಯಾಲಯದಲ್ಲಿ ನೀಡಿದ ಹೇಳಿಕೆಯಲ್ಲಿನ ಕೆಲವು ಹೆಸರುಗಳನ್ನು ಉಲ್ಲೇಖಿಸಿದ್ದಾರೆ. ಅವರು ಕ್ರಿಮಿನಲ್ ಇತರೆ ಅರ್ಜಿಯಲ್ಲಿ ಹೇಳಿಕೆ ನೀಡಿದ್ದು, ಇದರಲ್ಲಿ ಸ್ವಪ್ನಾ ಮತ್ತು ಕಸ್ಟಮ್ಸ್ ತಡೆಗಟ್ಟುವ ಅಧೀಕ್ಷಕರು ಪ್ರತಿಕ್ರಿಯಿಸಿದ್ದಾರೆ. ಅರ್ಜಿಯಲ್ಲಿ ಪ್ರತಿವಾದಿಯಲ್ಲದ ಆಯುಕ್ತರು ನ್ಯಾಯಾಲಯದ ಮುಂದೆ ಹೇಳಿಕೆ ನೀಡುತ್ತಿರುವುದು ಅಭೂತಪೂರ್ವವಾಗಿದೆ’ ಎಂದು ಪ್ರಶ್ನೆ ಮಾಡಿದ್ದಾರೆ.

2020 ರ ಜುಲೈನಿಂದ ಸ್ವಪ್ನಾ ವಿವಿಧ ಕೇಂದ್ರದ ತನಿಖಾ ಸಂಸ್ಥೆಗಳ ವಶದಲ್ಲಿದ್ದರು ಎಂದು ಹೇಳಿರುವ ವಿಜಯನ್ , ” ಹೀಗಿದ್ದರೂ ಆಕೆ ಕೇವಲ ಕಸ್ಟಮ್ಸ್ ಮುಂದೆ ಇಂತಹ ಮಹಾನ್ ಹೇಳಿಕೆಯನ್ನು ನೀಡಿದ್ದಾರೆ, ಕಸ್ಟಮ್ಸ್ ಮತ್ತು ಆಕೆಯ ಹೇಳಿಕೆಯ ಹಿಂದೆ ಕೆಲಸ ಮಾಡಿದವರು ಉತ್ತರಗಳನ್ನು ನೀಡಬೇಕು. ಸಿಆರ್‌ಪಿಸಿ 164 ರ ಹೇಳಿಕೆಯನ್ನು ಬಹಿರಂಗಪಡಿಸಬಾರದು ಎಂದು ಹೈಕೋರ್ಟ್ ಆದೇಶಿಸಿದೆ. ಕಸ್ಟಮ್ಸ್ ಆಯುಕ್ತರು ಸ್ಪೀಕರ್ ಮತ್ತು ಕ್ಯಾಬಿನೆಟ್ ಸದಸ್ಯರನ್ನು ಕೆಣಕಲು ಸಾಹಸ ಮಾಡಿದ್ದಾರೆ. ಇದು ಕೇಂದ್ರದಲ್ಲಿನ ಪಕ್ಷದ ಸಂಕುಚಿತ ಹಿತಾಸಕ್ತಿಯನ್ನು ರಕ್ಷಿಸುವ ಪ್ರಯತ್ನವಾಗಿದೆ’ ಎಂದು ವಿಜಯನ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಟಿಎಂಸಿ ಅಭ್ಯರ್ಥಿಗಳ ಪಟ್ಟಿ: ಮಹಿಳೆಯರಿಗೆ ಆದ್ಯತೆ, 114 ಹೊಸಮುಖಗಳು, ಎಸ್‌ಸಿ-ಎಸ್‌ಟಿಗೆ ಒತ್ತು

ತನಿಖಾ ಸಂಸ್ಥೆಗಳು ತಮ್ಮ ದೊರೆಗಳನ್ನು ಮೆಚ್ಚಿಸಲು ಕಾನೂನುಬಾಹಿರ ಮಾರ್ಗಗಳನ್ನು ಬಳಸುತ್ತಿವೆ ಎಂದು ಅವರು ಹೇಳಿದ್ದಾರೆ. ಎನ್‌ಐಎ ತನಿಖೆಯಲ್ಲಿ ಅಂತಹ ಯಾವುದೇ ಆರೋಪಗಳು ಬಂದಿಲ್ಲ ಎಂದು ಕೇರಳ ಸಿಎಂ ಹೇಳಿದ್ದಾರೆ.

“ರಾಜಕೀಯ ಉದ್ದೇಶಗಳಿಗಾಗಿ ತನಿಖಾ ಸಂಸ್ಥೆಗಳನ್ನು ಹೇಗೆ ಬಳಸಬೇಕೆಂದು ನೋಡುತ್ತಿದ್ದಾರೆ. ತನಿಖಾ ಸಂಸ್ಥೆಗಳ ಅಸಹಾಯಕತೆಯನ್ನು ನಾವು ಅರ್ಥಮಾಡಿಕೊಳ್ಳಬಹುದು. ಯಾವುದೇ ತನಿಖಾ ಸಂಸ್ಥೆ ಮುಂದೆ ಈ ರೀತಿ ವರ್ತಿಸಬಾರದು. ಈ ಸಂದರ್ಭದಲ್ಲಿ, ಏಜೆನ್ಸಿ ಸರಿಯಾದ ದಿಕ್ಕಿನಲ್ಲಿ ಕಾರ್ಯನಿರ್ವಹಿಸುವುದನ್ನು ತಡೆಯಲಾಗಿದೆ. ತಮ್ಮ ಯಜಮಾನರ ನಿರ್ದೇಶನದಂತೆ ಕೆಲಸ ಮಾಡಲು ಅವರನ್ನು ಒತ್ತಾಯಿಸಲಾಗುತ್ತಿದೆ’ ಎಂದಿದ್ದಾರೆ.

ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಈ ಬಗ್ಗೆ ಒಟ್ಟಾಗಿ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದ ವಿಜಯನ್, ಅವರು ಎಲ್‌ಡಿಎಫ್ ಅನ್ನು ನಾಶಮಾಡಲು ಬಯಸಿದ್ದಾರೆ. ಆದರೆ ನೀವು ನಾಶಪಡಿಸುವಂತಹ ಯಾವುದನ್ನೂ ನಾವು ಮಾಡಿಲ್ಲ. ಕಳೆದ ಐದು ವರ್ಷಗಳಲ್ಲಿ, ಸರ್ಕಾರವು ಮಾಡಬೇಕಾದ ಕೆಲಸಗಳನ್ನು ಮಾತ್ರ ನಾವು ಮಾಡಿದ್ದೇವೆ. ಎಲ್‌ಡಿಎಫ್ ಅದರ ಅಭಿವೃದ್ಧಿ ಚಟುವಟಿಕೆಗಳೊಂದಿಗೆ ಮುಂದುವರಿಯುತ್ತದೆ. ಈ ರಾಜ್ಯದ ಜನರನ್ನು ಬೆದರಿಸುತ್ತಿವೆ ಎಂಬುದನ್ನು ಬಿಜೆಪಿ ಮತ್ತು ಕಾಂಗ್ರೆಸ್ ಅರಿತುಕೊಳ್ಳಬೇಕು’ ಎಂದು ಕಿಡಿ ಕಾರಿದ್ದಾರೆ.


ಇದನ್ನೂ ಓದಿ: ಆದಿತ್ಯನಾಥ್ ಮತ್ತು ರಾಹುಲ್ ಗಾಂಧಿ ಇಬ್ಬರದೂ ಒಂದೇ ಭಾವನೆ: ಪಿಣರಾಯಿ ವಿಜಯನ್ ವಾಗ್ದಾಳಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...