Homeಮುಖಪುಟಹಣದುಬ್ಬರ ಹತೋಟಿಗೆ ಪೆಟ್ರೋಲ್, ಡೀಸೆಲ್ ತೆರಿಗೆ ಕಡಿತಗೊಳಿಸಿ: ಆರ್‌ಬಿಐ ಸಲಹೆ

ಹಣದುಬ್ಬರ ಹತೋಟಿಗೆ ಪೆಟ್ರೋಲ್, ಡೀಸೆಲ್ ತೆರಿಗೆ ಕಡಿತಗೊಳಿಸಿ: ಆರ್‌ಬಿಐ ಸಲಹೆ

- Advertisement -
- Advertisement -

ಹಣದುಬ್ಬರದ ಹತೋಟಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪೆಟ್ರೋಲ್ ಮತ್ತು ಡೀಸೆಲ್‌ ಮೇಲೆ ವಿಧಿಸಿರುವ ತೆರಿಗೆ ಮತ್ತು ಸುಂಕವನ್ನು ಕಡಿತಗೊಳಿಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಹಣಕಾಸು ನೀತಿ ಸಮಿತಿ (ಎಂಪಿಸಿ) ಶುಕ್ರವಾರ ಕರೆ ನೀಡಿದೆ.

ಅಂತರರಾಷ್ಟ್ರೀಯ ಕಚ್ಚಾ ತೈಲ ಬೆಲೆಗಳ ಏರಿಕೆ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಧಿಸಿರುವ ಹೆಚ್ಚಿನ ತೆರಿಗೆಯಿಂದಾಗಿ ಕೆಲವು ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100 ರೂ.ಗಳನ್ನು ದಾಟಿರುವ ಸಮಯದಲ್ಲಿ ಈ ಹೇಳಿಕೆ ಬಂದಿದೆ. ತೆರಿಗೆಗಳು ಪ್ರಸ್ತುತ ಪೆಟ್ರೋಲ್‌ನ ಚಿಲ್ಲರೆ ಮಾರಾಟದ ಬೆಲೆಯಲ್ಲಿ ಶೇ. 58 ಮತ್ತು ಡಿಸೇಲ್‌ನ ಚಿಲ್ಲರೆ ಮಾರಾಟದ ಬೆಲೆಯ ಶೇ. 52 ರಷ್ಟಿವೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಿಂದ ಹೊರಹೊಮ್ಮುವ ಇನ್ಪುಟ್ ವೆಚ್ಚದ ಒತ್ತಡಗಳನ್ನು ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯಗಳು ವಿಧಿಸಿರುವ ಅಬಕಾರಿ ಸುಂಕ, ಸೆಸ್ ಮತ್ತು ತೆರಿಗೆಗಳನ್ನು ಸಂಘಟಿತ ರೀತಿಯಲ್ಲಿ ಹೊಂದಿಸಬೇಕಾಗಿದೆ ಎಂದು ಎಂಪಿಸಿ ಹೇಳಿದೆ.

ಮೋದಿ ಸರ್ಕಾರವು ಅಬಕಾರಿ ಸುಂಕ ಮತ್ತು ಇಂಧನದ ಮೇಲೆ ಸೆಸ್ ವಿಧಿಸಿದರೆ, ರಾಜ್ಯಗಳು ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ವಿಧಿಸುತ್ತವೆ. ಈ ತೆರಿಗೆಗಳು ಆದಾಯದ ಪ್ರಮುಖ ಮೂಲವಾಗಿರುವುದರಿಂದ ಹೆಚ್ಚುತ್ತಿರುವ ಅಂತರರಾಷ್ಟ್ರೀಯ ಬೆಲೆಗಳ ನಡುವೆಯೂ ದರಗಳನ್ನು ಕಡಿತಗೊಳಿಸಲು ಎರಡೂ ಕಡೆಯವರು ಹಿಂದೇಟು ಹಾಕುತ್ತಿದ್ದಾರೆ.

ಪ್ರಮುಖ ನೀತಿ ದರಗಳನ್ನು ಬದಲಾಗದೆ ಇಟ್ಟುಕೊಂಡರೆ, ಪೂರ್ಣ ವರ್ಷದ ಹಣದುಬ್ಬರವು ಶೇಕಡಾ 5.1 ರಷ್ಟಾಗುತ್ತದೆ ಎಂದು ಎಂಪಿಸಿ ಮುನ್ಸೂಚನೆ ನೀಡಿದೆ.

ಇಂಧನ ಬೆಲೆಗಳು ಮತ್ತು ಅವುಗಳ ಹಣದುಬ್ಬರ ಪರಿಣಾಮದ ಕುರಿತ ಪ್ರಶ್ನೆಗೆ ಉತ್ತರಿಸಿದ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್, ಸಂಘಟಿತ ಕ್ರಮ ಕೈಗೊಳ್ಳುವ ಅವಶ್ಯಕತೆಯಿದೆ ಎಂದು ಹೇಳಿದರು. “ಕೇಂದ್ರ ಮತ್ತು ರಾಜ್ಯಗಳು ನಿರ್ಧಾರ ತೆಗೆದುಕೊಳ್ಳಬೇಕು. ತಮ್ಮ ಹಣಕಾಸಿನ ಕೊರತೆಯ ವಿಷಯದಲ್ಲಿ ಅವರು ತಮ್ಮದೇ ಆದ ನಿರ್ಬಂಧಗಳನ್ನು ಹೊಂದಿದ್ದಾರೆ. ಹಣದುಬ್ಬರ ಸನ್ನಿವೇಶದ ಬಗ್ಗೆ ಸರ್ಕಾರವು ನಿಗಾ ವಹಿಸುತ್ತಿದೆ ಮತ್ತು ಗಮನಿಸುತ್ತಿದೆ ಎಂದು ನನಗೆ ಖಾತ್ರಿಯಿದೆ” ಎಂದು ಅವರು ಹೇಳಿದರು.

ಗ್ರಾಮೀಣ ಕೋವಿಡ್ ಪ್ರಕರಣಗಳಲ್ಲಿನ ಏರಿಕೆ ಅಪಾಯಗಳನ್ನು ಹೆಚ್ಚಿಸುತ್ತದೆ, ಬೆಳವಣಿಗೆಯ ಮುನ್ಸೂಚನೆಯನ್ನು 9.5% ಕ್ಕೆ ಇಳಿಸಲಾಗಿದೆ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ವೇಗವಾಗಿ ಹರಡುವುದು ಬೆಳವಣಿಗೆಗೆ ಅಪಾಯವ ಉಂಟು ಮಾಡುತ್ತದೆ ಎಂದು ದಾಸ್ ವೀಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಳೆದ ಎರಡು ತಿಂಗಳುಗಳಲ್ಲಿ ನಗರ ಮತ್ತು ಗ್ರಾಮೀಣ ಬೇಡಿಕೆ ಕಡಿಮೆಯಾಗಿದ್ದರೂ, ಇದರ ಪರಿಣಾಮ ಸೀಮಿತವಾಗಿದೆ ಎಂದು ಅವರು ಹೇಳಿದರು.

ಆದರೂ, ಎಂಪಿಸಿ 2021-22ರ ಭಾರತದ ಬೆಳವಣಿಗೆಯ ಮುನ್ಸೂಚನೆಯನ್ನು ಒಂದು ಶೇಕಡಾವಾರು ಬಿಂದುವಿನಿಂದ ಶೇಕಡಾ 10.5 ರಿಂದ 9.5 ಕ್ಕೆ ಇಳಿಸಿತು.

ವಿಮಾನಯಾನ, ಪ್ರವಾಸೋದ್ಯಮ ಮತ್ತು ಇತರ ಕ್ಷೇತ್ರಗಳಿಗೆ ಹೊಸ ಸಾಲ ನೀಡುವ ಬೆಂಬಲವನ್ನು ಪ್ರಕಟಿಸಿದೆ.


ಇದನ್ನೂ ಓದಿ; 4 ದಶಕಗಳಲ್ಲಿ ಕರಾಳ ಆರ್ಥಿಕ ವರ್ಷ: ಜಿಡಿಪಿ ಕುಸಿತಕ್ಕೆ ಚಿದಂಬರಂ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...