Homeಮುಖಪುಟಹಣದುಬ್ಬರ ಹತೋಟಿಗೆ ಪೆಟ್ರೋಲ್, ಡೀಸೆಲ್ ತೆರಿಗೆ ಕಡಿತಗೊಳಿಸಿ: ಆರ್‌ಬಿಐ ಸಲಹೆ

ಹಣದುಬ್ಬರ ಹತೋಟಿಗೆ ಪೆಟ್ರೋಲ್, ಡೀಸೆಲ್ ತೆರಿಗೆ ಕಡಿತಗೊಳಿಸಿ: ಆರ್‌ಬಿಐ ಸಲಹೆ

- Advertisement -
- Advertisement -

ಹಣದುಬ್ಬರದ ಹತೋಟಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪೆಟ್ರೋಲ್ ಮತ್ತು ಡೀಸೆಲ್‌ ಮೇಲೆ ವಿಧಿಸಿರುವ ತೆರಿಗೆ ಮತ್ತು ಸುಂಕವನ್ನು ಕಡಿತಗೊಳಿಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಹಣಕಾಸು ನೀತಿ ಸಮಿತಿ (ಎಂಪಿಸಿ) ಶುಕ್ರವಾರ ಕರೆ ನೀಡಿದೆ.

ಅಂತರರಾಷ್ಟ್ರೀಯ ಕಚ್ಚಾ ತೈಲ ಬೆಲೆಗಳ ಏರಿಕೆ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಧಿಸಿರುವ ಹೆಚ್ಚಿನ ತೆರಿಗೆಯಿಂದಾಗಿ ಕೆಲವು ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100 ರೂ.ಗಳನ್ನು ದಾಟಿರುವ ಸಮಯದಲ್ಲಿ ಈ ಹೇಳಿಕೆ ಬಂದಿದೆ. ತೆರಿಗೆಗಳು ಪ್ರಸ್ತುತ ಪೆಟ್ರೋಲ್‌ನ ಚಿಲ್ಲರೆ ಮಾರಾಟದ ಬೆಲೆಯಲ್ಲಿ ಶೇ. 58 ಮತ್ತು ಡಿಸೇಲ್‌ನ ಚಿಲ್ಲರೆ ಮಾರಾಟದ ಬೆಲೆಯ ಶೇ. 52 ರಷ್ಟಿವೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಿಂದ ಹೊರಹೊಮ್ಮುವ ಇನ್ಪುಟ್ ವೆಚ್ಚದ ಒತ್ತಡಗಳನ್ನು ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯಗಳು ವಿಧಿಸಿರುವ ಅಬಕಾರಿ ಸುಂಕ, ಸೆಸ್ ಮತ್ತು ತೆರಿಗೆಗಳನ್ನು ಸಂಘಟಿತ ರೀತಿಯಲ್ಲಿ ಹೊಂದಿಸಬೇಕಾಗಿದೆ ಎಂದು ಎಂಪಿಸಿ ಹೇಳಿದೆ.

ಮೋದಿ ಸರ್ಕಾರವು ಅಬಕಾರಿ ಸುಂಕ ಮತ್ತು ಇಂಧನದ ಮೇಲೆ ಸೆಸ್ ವಿಧಿಸಿದರೆ, ರಾಜ್ಯಗಳು ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ವಿಧಿಸುತ್ತವೆ. ಈ ತೆರಿಗೆಗಳು ಆದಾಯದ ಪ್ರಮುಖ ಮೂಲವಾಗಿರುವುದರಿಂದ ಹೆಚ್ಚುತ್ತಿರುವ ಅಂತರರಾಷ್ಟ್ರೀಯ ಬೆಲೆಗಳ ನಡುವೆಯೂ ದರಗಳನ್ನು ಕಡಿತಗೊಳಿಸಲು ಎರಡೂ ಕಡೆಯವರು ಹಿಂದೇಟು ಹಾಕುತ್ತಿದ್ದಾರೆ.

ಪ್ರಮುಖ ನೀತಿ ದರಗಳನ್ನು ಬದಲಾಗದೆ ಇಟ್ಟುಕೊಂಡರೆ, ಪೂರ್ಣ ವರ್ಷದ ಹಣದುಬ್ಬರವು ಶೇಕಡಾ 5.1 ರಷ್ಟಾಗುತ್ತದೆ ಎಂದು ಎಂಪಿಸಿ ಮುನ್ಸೂಚನೆ ನೀಡಿದೆ.

ಇಂಧನ ಬೆಲೆಗಳು ಮತ್ತು ಅವುಗಳ ಹಣದುಬ್ಬರ ಪರಿಣಾಮದ ಕುರಿತ ಪ್ರಶ್ನೆಗೆ ಉತ್ತರಿಸಿದ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್, ಸಂಘಟಿತ ಕ್ರಮ ಕೈಗೊಳ್ಳುವ ಅವಶ್ಯಕತೆಯಿದೆ ಎಂದು ಹೇಳಿದರು. “ಕೇಂದ್ರ ಮತ್ತು ರಾಜ್ಯಗಳು ನಿರ್ಧಾರ ತೆಗೆದುಕೊಳ್ಳಬೇಕು. ತಮ್ಮ ಹಣಕಾಸಿನ ಕೊರತೆಯ ವಿಷಯದಲ್ಲಿ ಅವರು ತಮ್ಮದೇ ಆದ ನಿರ್ಬಂಧಗಳನ್ನು ಹೊಂದಿದ್ದಾರೆ. ಹಣದುಬ್ಬರ ಸನ್ನಿವೇಶದ ಬಗ್ಗೆ ಸರ್ಕಾರವು ನಿಗಾ ವಹಿಸುತ್ತಿದೆ ಮತ್ತು ಗಮನಿಸುತ್ತಿದೆ ಎಂದು ನನಗೆ ಖಾತ್ರಿಯಿದೆ” ಎಂದು ಅವರು ಹೇಳಿದರು.

ಗ್ರಾಮೀಣ ಕೋವಿಡ್ ಪ್ರಕರಣಗಳಲ್ಲಿನ ಏರಿಕೆ ಅಪಾಯಗಳನ್ನು ಹೆಚ್ಚಿಸುತ್ತದೆ, ಬೆಳವಣಿಗೆಯ ಮುನ್ಸೂಚನೆಯನ್ನು 9.5% ಕ್ಕೆ ಇಳಿಸಲಾಗಿದೆ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ವೇಗವಾಗಿ ಹರಡುವುದು ಬೆಳವಣಿಗೆಗೆ ಅಪಾಯವ ಉಂಟು ಮಾಡುತ್ತದೆ ಎಂದು ದಾಸ್ ವೀಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಳೆದ ಎರಡು ತಿಂಗಳುಗಳಲ್ಲಿ ನಗರ ಮತ್ತು ಗ್ರಾಮೀಣ ಬೇಡಿಕೆ ಕಡಿಮೆಯಾಗಿದ್ದರೂ, ಇದರ ಪರಿಣಾಮ ಸೀಮಿತವಾಗಿದೆ ಎಂದು ಅವರು ಹೇಳಿದರು.

ಆದರೂ, ಎಂಪಿಸಿ 2021-22ರ ಭಾರತದ ಬೆಳವಣಿಗೆಯ ಮುನ್ಸೂಚನೆಯನ್ನು ಒಂದು ಶೇಕಡಾವಾರು ಬಿಂದುವಿನಿಂದ ಶೇಕಡಾ 10.5 ರಿಂದ 9.5 ಕ್ಕೆ ಇಳಿಸಿತು.

ವಿಮಾನಯಾನ, ಪ್ರವಾಸೋದ್ಯಮ ಮತ್ತು ಇತರ ಕ್ಷೇತ್ರಗಳಿಗೆ ಹೊಸ ಸಾಲ ನೀಡುವ ಬೆಂಬಲವನ್ನು ಪ್ರಕಟಿಸಿದೆ.


ಇದನ್ನೂ ಓದಿ; 4 ದಶಕಗಳಲ್ಲಿ ಕರಾಳ ಆರ್ಥಿಕ ವರ್ಷ: ಜಿಡಿಪಿ ಕುಸಿತಕ್ಕೆ ಚಿದಂಬರಂ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...