Homeಮುಖಪುಟಹಣದುಬ್ಬರ ಹತೋಟಿಗೆ ಪೆಟ್ರೋಲ್, ಡೀಸೆಲ್ ತೆರಿಗೆ ಕಡಿತಗೊಳಿಸಿ: ಆರ್‌ಬಿಐ ಸಲಹೆ

ಹಣದುಬ್ಬರ ಹತೋಟಿಗೆ ಪೆಟ್ರೋಲ್, ಡೀಸೆಲ್ ತೆರಿಗೆ ಕಡಿತಗೊಳಿಸಿ: ಆರ್‌ಬಿಐ ಸಲಹೆ

- Advertisement -
- Advertisement -

ಹಣದುಬ್ಬರದ ಹತೋಟಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪೆಟ್ರೋಲ್ ಮತ್ತು ಡೀಸೆಲ್‌ ಮೇಲೆ ವಿಧಿಸಿರುವ ತೆರಿಗೆ ಮತ್ತು ಸುಂಕವನ್ನು ಕಡಿತಗೊಳಿಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಹಣಕಾಸು ನೀತಿ ಸಮಿತಿ (ಎಂಪಿಸಿ) ಶುಕ್ರವಾರ ಕರೆ ನೀಡಿದೆ.

ಅಂತರರಾಷ್ಟ್ರೀಯ ಕಚ್ಚಾ ತೈಲ ಬೆಲೆಗಳ ಏರಿಕೆ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಧಿಸಿರುವ ಹೆಚ್ಚಿನ ತೆರಿಗೆಯಿಂದಾಗಿ ಕೆಲವು ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100 ರೂ.ಗಳನ್ನು ದಾಟಿರುವ ಸಮಯದಲ್ಲಿ ಈ ಹೇಳಿಕೆ ಬಂದಿದೆ. ತೆರಿಗೆಗಳು ಪ್ರಸ್ತುತ ಪೆಟ್ರೋಲ್‌ನ ಚಿಲ್ಲರೆ ಮಾರಾಟದ ಬೆಲೆಯಲ್ಲಿ ಶೇ. 58 ಮತ್ತು ಡಿಸೇಲ್‌ನ ಚಿಲ್ಲರೆ ಮಾರಾಟದ ಬೆಲೆಯ ಶೇ. 52 ರಷ್ಟಿವೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಿಂದ ಹೊರಹೊಮ್ಮುವ ಇನ್ಪುಟ್ ವೆಚ್ಚದ ಒತ್ತಡಗಳನ್ನು ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯಗಳು ವಿಧಿಸಿರುವ ಅಬಕಾರಿ ಸುಂಕ, ಸೆಸ್ ಮತ್ತು ತೆರಿಗೆಗಳನ್ನು ಸಂಘಟಿತ ರೀತಿಯಲ್ಲಿ ಹೊಂದಿಸಬೇಕಾಗಿದೆ ಎಂದು ಎಂಪಿಸಿ ಹೇಳಿದೆ.

ಮೋದಿ ಸರ್ಕಾರವು ಅಬಕಾರಿ ಸುಂಕ ಮತ್ತು ಇಂಧನದ ಮೇಲೆ ಸೆಸ್ ವಿಧಿಸಿದರೆ, ರಾಜ್ಯಗಳು ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ವಿಧಿಸುತ್ತವೆ. ಈ ತೆರಿಗೆಗಳು ಆದಾಯದ ಪ್ರಮುಖ ಮೂಲವಾಗಿರುವುದರಿಂದ ಹೆಚ್ಚುತ್ತಿರುವ ಅಂತರರಾಷ್ಟ್ರೀಯ ಬೆಲೆಗಳ ನಡುವೆಯೂ ದರಗಳನ್ನು ಕಡಿತಗೊಳಿಸಲು ಎರಡೂ ಕಡೆಯವರು ಹಿಂದೇಟು ಹಾಕುತ್ತಿದ್ದಾರೆ.

ಪ್ರಮುಖ ನೀತಿ ದರಗಳನ್ನು ಬದಲಾಗದೆ ಇಟ್ಟುಕೊಂಡರೆ, ಪೂರ್ಣ ವರ್ಷದ ಹಣದುಬ್ಬರವು ಶೇಕಡಾ 5.1 ರಷ್ಟಾಗುತ್ತದೆ ಎಂದು ಎಂಪಿಸಿ ಮುನ್ಸೂಚನೆ ನೀಡಿದೆ.

ಇಂಧನ ಬೆಲೆಗಳು ಮತ್ತು ಅವುಗಳ ಹಣದುಬ್ಬರ ಪರಿಣಾಮದ ಕುರಿತ ಪ್ರಶ್ನೆಗೆ ಉತ್ತರಿಸಿದ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್, ಸಂಘಟಿತ ಕ್ರಮ ಕೈಗೊಳ್ಳುವ ಅವಶ್ಯಕತೆಯಿದೆ ಎಂದು ಹೇಳಿದರು. “ಕೇಂದ್ರ ಮತ್ತು ರಾಜ್ಯಗಳು ನಿರ್ಧಾರ ತೆಗೆದುಕೊಳ್ಳಬೇಕು. ತಮ್ಮ ಹಣಕಾಸಿನ ಕೊರತೆಯ ವಿಷಯದಲ್ಲಿ ಅವರು ತಮ್ಮದೇ ಆದ ನಿರ್ಬಂಧಗಳನ್ನು ಹೊಂದಿದ್ದಾರೆ. ಹಣದುಬ್ಬರ ಸನ್ನಿವೇಶದ ಬಗ್ಗೆ ಸರ್ಕಾರವು ನಿಗಾ ವಹಿಸುತ್ತಿದೆ ಮತ್ತು ಗಮನಿಸುತ್ತಿದೆ ಎಂದು ನನಗೆ ಖಾತ್ರಿಯಿದೆ” ಎಂದು ಅವರು ಹೇಳಿದರು.

ಗ್ರಾಮೀಣ ಕೋವಿಡ್ ಪ್ರಕರಣಗಳಲ್ಲಿನ ಏರಿಕೆ ಅಪಾಯಗಳನ್ನು ಹೆಚ್ಚಿಸುತ್ತದೆ, ಬೆಳವಣಿಗೆಯ ಮುನ್ಸೂಚನೆಯನ್ನು 9.5% ಕ್ಕೆ ಇಳಿಸಲಾಗಿದೆ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ವೇಗವಾಗಿ ಹರಡುವುದು ಬೆಳವಣಿಗೆಗೆ ಅಪಾಯವ ಉಂಟು ಮಾಡುತ್ತದೆ ಎಂದು ದಾಸ್ ವೀಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಳೆದ ಎರಡು ತಿಂಗಳುಗಳಲ್ಲಿ ನಗರ ಮತ್ತು ಗ್ರಾಮೀಣ ಬೇಡಿಕೆ ಕಡಿಮೆಯಾಗಿದ್ದರೂ, ಇದರ ಪರಿಣಾಮ ಸೀಮಿತವಾಗಿದೆ ಎಂದು ಅವರು ಹೇಳಿದರು.

ಆದರೂ, ಎಂಪಿಸಿ 2021-22ರ ಭಾರತದ ಬೆಳವಣಿಗೆಯ ಮುನ್ಸೂಚನೆಯನ್ನು ಒಂದು ಶೇಕಡಾವಾರು ಬಿಂದುವಿನಿಂದ ಶೇಕಡಾ 10.5 ರಿಂದ 9.5 ಕ್ಕೆ ಇಳಿಸಿತು.

ವಿಮಾನಯಾನ, ಪ್ರವಾಸೋದ್ಯಮ ಮತ್ತು ಇತರ ಕ್ಷೇತ್ರಗಳಿಗೆ ಹೊಸ ಸಾಲ ನೀಡುವ ಬೆಂಬಲವನ್ನು ಪ್ರಕಟಿಸಿದೆ.


ಇದನ್ನೂ ಓದಿ; 4 ದಶಕಗಳಲ್ಲಿ ಕರಾಳ ಆರ್ಥಿಕ ವರ್ಷ: ಜಿಡಿಪಿ ಕುಸಿತಕ್ಕೆ ಚಿದಂಬರಂ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...