Homeಮುಖಪುಟಪಡಿತರ ಕಡಿತಗೊಳಿಸಿ ಹಣ ಉಳಿತಾಯ - ನೀತಿ ಆಯೋಗದ ಹೊಸ ಶಿಫಾರಸ್ಸು!

ಪಡಿತರ ಕಡಿತಗೊಳಿಸಿ ಹಣ ಉಳಿತಾಯ – ನೀತಿ ಆಯೋಗದ ಹೊಸ ಶಿಫಾರಸ್ಸು!

ಮೂಲಗಳ ಪ್ರಕಾರ, ನೀತಿ ಆಯೋಗದ ಶಿಫಾರಸುಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳಿಸಲಾಗಿದೆ. ಪ್ರಸ್ತುತ ಜನಗಣತಿ 2011 ರ ಆಧಾರದ ಮೇಲೆ ಜನಸಂಖ್ಯಾ ಮಟ್ಟವನ್ನು ನವೀಕರಿಸಲು ನೀತಿ ಆಯೋಗ ಸೂಚಿಸಿದೆ.

- Advertisement -
- Advertisement -

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ)-2013 ರ ಅಡಿಯಲ್ಲಿ ಗ್ರಾಮೀಣ ಮತ್ತು ನಗರ ವ್ಯಾಪ್ತಿಯನ್ನು ಕ್ರಮವಾಗಿ ಶೇ.60 ಮತ್ತು 40 ಕ್ಕೆ ಇಳಿಸಲು ಸರ್ಕಾರದ ಥಿಂಕ್ ಟ್ಯಾಂಕ್ ನೀತಿ ಆಯೋಗ ಶಿಫಾರಸು ಮಾಡಿದೆ. ಇದರಿಂದ ಅಂದಾಜು ಪ್ರಕಾರ, ವಾರ್ಷಿಕ 47,229 ಕೋಟಿ.ರೂ.ಗಳ ಉಳಿತಾಯವಾಗಬಹುದು ಎಂದು ಆಯೋಗ ಹೇಳಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪ್ರಸ್ತುತ, ಎನ್‌ಎಫ್‌ಎಸ್‌ಎ ಗ್ರಾಮೀಣ ವ್ಯಾಪ್ತಿಯು ಜನಸಂಖ್ಯೆಯ ಶೇಕಡಾ 75 ಕ್ಕೆ ಸಮಾನವಾಗಿದೆ ಮತ್ತು ನಗರ ವ್ಯಾಪ್ತಿಯು ನಗರ ಜನಸಂಖ್ಯೆಯ ಶೇಕಡಾ 50 ರಷ್ಟಿದೆ. ಒಟ್ಟಾರೆಯಾಗಿ, ಎನ್‌ಎಫ್‌ಎಸ್‌ಎ ಒಟ್ಟು ಜನಸಂಖ್ಯೆಯ ಶೇಕಡಾ 67 ರಷ್ಟಿದೆ.

ಮೂಲಗಳ ಪ್ರಕಾರ, ನೀತಿ ಆಯೋಗದ ಶಿಫಾರಸುಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳಿಸಲಾಗಿದೆ. ಪ್ರಸ್ತುತ ಜನಗಣತಿ 2011 ರ ಆಧಾರದ ಮೇಲೆ ಜನಸಂಖ್ಯಾ ಮಟ್ಟವನ್ನು ನವೀಕರಿಸಲು ನೀತಿ ಆಯೋಗ ಸೂಚಿಸಿದೆ.

ಇದನ್ನೂ ಓದಿ: ದುಡಿಯೋದು ಯಾರೋ? ಸ್ವಾರ್ಥಕ್ಕೆ ಮಾಡಿಕೊಳ್ಳೋದು ಇನ್ಯಾರೋ?- BSY ವಿರುದ್ಧ ಶ್ರೀನಿವಾಸ್ ಪ್ರಸಾದ್ ಆಕ್ರೋಶ

ಎನ್‌ಎಫ್‌ಎಸ್‌ಎ ಅಡಿಯಲ್ಲಿ, ಪ್ರತಿ ಅಂತ್ಯೋದಯ ಅನ್ನ ಯೋಜನೆ ಕುಟುಂಬಗಳು (ಅಂದಾಜು 2.37 ಕೋಟಿ ಕುಟುಂಬಗಳು ಅಥವಾ 9.01 ಕೋಟಿ ವ್ಯಕ್ತಿಗಳು, ಫೆಬ್ರವರಿ 1, 2021 ರಂತೆ) ತಿಂಗಳಿಗೆ 35 ಕೆಜಿ ಆಹಾರ ಧಾನ್ಯಗಳಿಗೆ ಅರ್ಹರಾಗಿದ್ದರೆ, ಆದ್ಯತೆಯ ಕುಟುಂಬಗಳ (ಅಂದಾಜು 70.35 ಕೋಟಿ ವ್ಯಕ್ತಿಗಳು) ಪ್ರತಿ ವ್ಯಕ್ತಿಗೆ ತಿಂಗಳಿಗೆ 5 ಕೆ.ಜಿ. ಆಹಾರಧಾನ್ಯ ನೀಡಲಾಗುತ್ತದೆ.

ಗ್ರಾಮೀಣ ಮತ್ತು ನಗರ ವ್ಯಾಪ್ತಿಯ ಅನುಪಾತದ ಆಧಾರದ ಮೇಲೆ, ಹಿಂದಿನ ಯೋಜನಾ ಆಯೋಗವು 2011-12ರ ಮನೆಯ ಬಳಕೆ ವೆಚ್ಚದ ವ್ಯಾಪ್ತಿಯನ್ನು ಬಳಸಿಕೊಂಡು ರಾಜ್ಯವಾರು ವ್ಯಾಪ್ತಿ ಅನುಪಾತವನ್ನು ನಿರ್ಧರಿಸಿದೆ. ಜುಲೈ 5, 2013 ರಿಂದ ಕಾನೂನು ಜಾರಿಗೆ ಬಂದಾಗಿನಿಂದ ವ್ಯಾಪ್ತಿ ಅನುಪಾತವನ್ನು ಪರಿಷ್ಕರಿಸಲಾಗಿಲ್ಲ.

“ಆದ್ದರಿಂದ, ಕಳೆದ ದಶಕದ ಬೆಳವಣಿಗೆ ಮತ್ತು ಅಭಿವೃದ್ಧಿ ಗಮನಿಸಿ, ಸಬ್ಸಿಡಿಯನ್ನು ಕಡಿತ ಮಾಡಿ, ಉಳಿತಾಯದ ಪ್ರಮಾಣವನ್ನು ಆರೋಗ್ಯ ಮತ್ತು ಶಿಕ್ಷಣದಂತಹ ಇತರ ಪ್ರಮುಖ ಕ್ಷೇತ್ರಗಳಲ್ಲಿ ಬಳಸಿಕೊಳ್ಳಬಹುದು. ವಿಶೇಷವಾಗಿ ಪ್ರಸ್ತುತ ಸಾಂಕ್ರಾಮಿಕ ಸಮಯದಲ್ಲಿ, ಜನಸಂಖ್ಯಾ ಮಟ್ಟವನ್ನು ಪ್ರಸ್ತುತ ಮಟ್ಟಕ್ಕೆ ನವೀಕರಿಸುವಾಗ (ಜನಸಂಖ್ಯಾ ಅಂದಾಜಿನ ಆಧಾರದ ಮೇಲೆ) ಎನ್‌ಎಫ್‌ಎಸ್‌ಎ ಅಡಿಯಲ್ಲಿ ರಾಷ್ಟ್ರೀಯ ಗ್ರಾಮೀಣ-ನಗರ ವ್ಯಾಪ್ತಿ ಅನುಪಾತವನ್ನು 75-50 ರಿಂದ 60-40ಕ್ಕೆ ಇಳಿಸಲು ಶಿಫಾರಸು ಮಾಡಲಾಗಿದೆ’ ಎಂದು ಆಯೋಗದ ಪ್ರಕಟಣೆ ವಿವರಿಸಿದೆ.

ಇದನ್ನೂ ಓದಿ: ಮೋದಿ ಹೆದರಿದ್ದಾರೆ ಎಂದು ಚೀನಾಕ್ಕೆ ಗೊತ್ತಾಗಿದೆ: ಅತಿಕ್ರಮಣದ ವಿರುದ್ಧ ರಾಹುಲ್ ವಾಗ್ದಾಳಿ

ರಾಷ್ಟ್ರೀಯ ಗ್ರಾಮೀಣ-ನಗರ ವ್ಯಾಪ್ತಿ ಅನುಪಾತವು ಒಂದೇ ಆಗಿದ್ದರೆ (75-50), ಜನಸಂಖ್ಯೆಯ ಮಟ್ಟವನ್ನು 2011 ರ ಜನಗಣತಿಯಿಂದ ಪ್ರಸ್ತುತ ಮಟ್ಟಕ್ಕೆ ನವೀಕರಿಸುವುದು (2020 ರಲ್ಲಿ ಯೋಜಿತ ಜನಸಂಖ್ಯೆ) ಎನ್‌ಎಫ್‌ಎಸ್‌ಎ ವ್ಯಾಪ್ತಿಗೆ ಬರುವ ಒಟ್ಟು ಜನರ ಸಂಖ್ಯೆಯನ್ನು ವಿಸ್ತರಿಸುತ್ತದೆ ಎಂದು ಆಯೋಗ ಅಂದಾಜಿಸಿದೆ. ಅಸ್ತಿತ್ವದಲ್ಲಿರುವ 81.35 ಕೋಟಿಯಿಂದ 89.52 ಕೋಟಿಗೆ 8.17 ಕೋಟಿ ಹೆಚ್ಚಳ.

ಆದರೆ, ಇದನ್ನು 60-40ಕ್ಕೆ ಇಳಿಸಿದರೆ, ಎನ್‌ಎಫ್‌ಎಸ್‌ಎ ಅಡಿಯಲ್ಲಿ ಫಲಾನುಭವಿಗಳ ಸಂಖ್ಯೆ 71.62 ಕೋಟಿಗೆ ಇಳಿಯುತ್ತದೆ.
ನೀತಿ ಆಯೋಗ ಸದಸ್ಯ ರಮೇಶ್ ಚಂದ್ ಅವರ ಅಧ್ಯಕ್ಷತೆಯಲ್ಲಿ ಹಲವು ಸುತ್ತಿನ ಸಭೆಗಳ ನಂತರ ಶಿಫಾರಸುಗಳನ್ನು ಸಿದ್ಧಪಡಿಸಲಾಗಿದೆ. ಈ ಸಭೆಗಳಲ್ಲಿ ಮುಖ್ಯ ಆರ್ಥಿಕ ಸಲಹೆಗಾರ, ಆಹಾರ ಕಾರ್ಯದರ್ಶಿ, ಕಾರ್ಯದರ್ಶಿ, ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ನೀತಿ ಆಯೋಗ ಉಲ್ಲೇಖಿಸಿರುವ ಶಿಫಾರಸುಗಳ ಬಗ್ಗೆ ಕೇಳಿದಾಗ, ಆಹಾರ ಸಚಿವಾಲಯದ ಅಧಿಕಾರಿಯೊಬ್ಬರು, “ಇನ್ನೂ ಯಾವುದೇ ಔಪಚಾರಿಕ ಪ್ರಸ್ತಾಪವಿಲ್ಲ. ಆಹಾರ ಭದ್ರತಾ ಕಾನೂನನ್ನು ಬದಲಾಯಿಸುವ ಅಧಿಕಾರ ಇಲಾಖೆಗೆ ಇಲ್ಲ. ಸಂಸತ್ತು ಮಾತ್ರ ಕಾನೂನನ್ನು ತಿದ್ದುಪಡಿ ಮಾಡಬಹುದು” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಟಿವಿ ಆಂಕರ್ ವಿರುದ್ಧ ಅತ್ಯಾಚಾರ ಆರೋಪ: ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...