Homeಕರ್ನಾಟಕಈ ವರೆಗಿನ ಅತೀ ದೊಡ್ಡ ಸೈಬರ್ ವಂಚನೆ ಪ್ರಕರಣ ಬೇಧಿಸಿದ ರಾಜ್ಯ ಪೊಲೀಸ್; 9 ನೇ...

ಈ ವರೆಗಿನ ಅತೀ ದೊಡ್ಡ ಸೈಬರ್ ವಂಚನೆ ಪ್ರಕರಣ ಬೇಧಿಸಿದ ರಾಜ್ಯ ಪೊಲೀಸ್; 9 ನೇ ತರಗತಿ ಡ್ರಾಪೌಟ್‌ ಆಗಿದ್ದ ಆರೋಪಿ!

- Advertisement -
- Advertisement -

ನಕಲಿ ಇಮೇಲ್ ಐಡಿ ಮೂಲಕ ಸಂಸ್ಥೆಯೊಂದಕ್ಕೆ 2.11 ಕೋಟಿ ರೂಪಾಯಿ ವಂಚಿಸಿದ್ದ ಮಧ್ಯಪ್ರದೇಶದ 23 ವರ್ಷದ ಯುವಕನನ್ನು ಬಳ್ಳಾರಿ ಸೈಬರ್ ಕ್ರೈಮ್ ಪೊಲೀಸರು ಇತ್ತೀಚೆಗೆ ಬಂಧಿಸಿದ್ದಾರೆ. ಪೊಲೀಸರು 1.48 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿದ್ದು, ಇದು ಸೈಬರ್ ಕ್ರೈಮ್ ಪ್ರಕರಣಗಳಲ್ಲಿ ರಾಜ್ಯದ ಪೊಲೀಸರು ವಶಕ್ಕೆ ಪಡೆದ ಅತಿದೊಡ್ಡ ಪ್ರಕರಣಗಳಲ್ಲಿ ಒಂದಾಗಿದೆ ಎಂದು ವರದಿಗಳು ಉಲ್ಲೇಖಿಸಿವೆ.ಸೈಬರ್ ವಂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆರೋಪಿಯನ್ನು ಮಧ್ಯಪ್ರದೇಶದ ರೇವಾ ಜಿಲ್ಲೆಯ ನಿವಾಸಿ ಅಜಯ್ ಕುಮಾರ್ ಜೈಸ್ವಾಲ್ ಎಂದು ಗುರುತಿಸಲಾಗಿದ್ದು, ಆತನನ್ನು ಬಂಧಿಸಿರುವುದಾಗಿ ಬಳ್ಳಾರಿಯ ಪೊಲೀಸ್ ವರಿಷ್ಠಾಧಿಕಾರಿ ಶೋಭಾ ರಾಣಿ ಬುಧವಾರ ಪ್ರಕಟಿಸಿದ್ದಾರೆ. ಆರೋಪಿ ಜೈಸ್ವಾಲ್ ಆಗಸ್ಟ್ 21ರಿಂದ ಮತ್ತು ಸೆಪ್ಟೆಂಬರ್ 2 ರ ನಡುವೆ ಹಿಂದೂಸ್ತಾನ್ ಕ್ಯಾಲ್ಸಿನ್ಡ್ ಮೆಟಲ್ಸ್ ಪ್ರೈವೇಟ್ ಲಿಮಿಟೆಡ್ (HCMPL)ಗೆ ಮೋಸ ಮಾಡಲು ನಕಲಿ ಇಮೇಲ್ ಐಡಿಯನ್ನು ಸೃಷ್ಟಿದ್ದನು ಎಂದು ಆರೋಪಿಸಲಾಗಿದೆ.

ಇದನ್ನೂಓದಿ: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಆತ್ಮಹತ್ಯೆ ತಡೆಗೆ ಮಾರ್ಗಸೂಚಿ | ಸರ್ಕಾರ ನಿರ್ಧಾರ

ಎಚ್‌ಸಿಎಂಪಿಎಲ್ ಕಳೆದ ಏಳೆಂಟು ವರ್ಷಗಳಿಂದ ಬಳ್ಳಾರಿಯ ಅಗರ್ವಾಲ್ ಕೋಲ್ ಕಾರ್ಪೊರೇಷನ್ ಪ್ರೈವೇಟ್ ಲಿಮಿಟೆಡ್ (ಎಸಿಸಿಪಿಎಲ್) ನಿಂದ ಕಲ್ಲಿದ್ದಲು ಖರೀದಿಸುತ್ತಿದೆ. ಕಂಪೆನಿಯು ತನ್ನ ವಹಿವಾಟುಗಳನ್ನು ಆನ್‌ಲೈನ್‌ನಲ್ಲಿ ಮಾಡುತ್ತಿದೆ.

9 ನೇ ತರಗತಿಯ ನಂತರ ಶಾಲೆಯನ್ನು ತೊರೆದ ಜೈಸ್ವಾಲ್, ಡೇಟಾ ಎಂಟ್ರಿ ಆಪರೇಟರ್ ಆಗಿದ್ದು, ಕೆಲಸದ ನಿಮಿತ್ತ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ವಾಸಿಸುತ್ತಿದ್ದಾನೆ. ಆರೋಪಿ ಎಸಿಸಿಪಿಎಲ್‌ನ ಅಧಿಕೃತ ಇಮೇಲ್ ಐಡಿಯನ್ನು ಹೋಲುವ ಇಮೇಲ್ ಐಡಿಯನ್ನು ರಚಿಸಿ, ಕಂಪನಿಯ ಬ್ಯಾಂಕ್ ಖಾತೆ ಸಂಖ್ಯೆಯನ್ನು ಬದಲಾಯಿಸಲಾಗಿದೆ ಎಂದು ಇಮೇಲ್ ಕಳುಹಿಸಿ ಮತ್ತು ನಮೂದಿಸಿದ ಬ್ಯಾಂಕ್ ಖಾತೆ ಸಂಖ್ಯೆಗೆ ಬಾಕಿ ಪಾವತಿಸಲು ಎಚ್‌ಸಿಎಂಪಿಎಲ್ ಅನ್ನು ಕೇಳಿದ್ದಾನೆ. ಸೈಬರ್ ವಂಚನೆ

ಈ ವೇಳೆ ಕ್ರಾಸ್-ಚೆಕಿಂಗ್ ಮಾಡದೆ HCMPL ಕಂಪೆನಿಯವರು ಆರು ವಹಿವಾಟುಗಳ ಹಣವನ್ನು ವರ್ಗಾಯಿಸಿದೆ. ಮೊದಲ ವಹಿವಾಟು ಆಗಸ್ಟ್ 21 ರಂದು ನಡೆದಿದ್ದರೂ, ಸೆಪ್ಟೆಂಬರ್‌ 2ರಂದು ಎಸಿಸಿಪಿಎಲ್‌ನ ಪ್ರತಿನಿಧಿಯೊಬ್ಬರು HCMPL ಜೊತೆಗೆ ಬಾಕಿ ಹಣ ಕೇಳಿದಾಗ ಇದು ಬೆಳಕಿಗೆ ಬಂದಿತ್ತು.

ಇದನ್ನೂಓದಿ: ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಿಂದ ಆಕ್ಷೇಪಾರ್ಹ ಹೇಳಿಕೆ : ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್

ಇದರ ನಂತರ ಸೆಪ್ಟೆಂಬರ್ 3ರಂದು ಬಳ್ಳಾರಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು. ಹಾಗಾಗಿ ಡಿಎಸ್ಪಿ ಸಂತೋಷ್ ಚೌಹಾಣ್ ನೇತೃತ್ವದ ತಂಡ ಮಧ್ಯಪ್ರದೇಶಕ್ಕೆ ತೆರಳಿ ಆರೋಪಿ ಜೈಸ್ವಾಲ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಜೈಸ್ವಾಲ್ ಖಾತೆಗೆ ವರ್ಗಾಯಿಸಲಾದ ಹಣವನ್ನು ಆತ 18 ವಿವಿಧ ಖಾತೆಗಳಿಗೆ ವರ್ಗಾಯಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಜೈಸ್ವಾಲ್ 1.21 ಕೋಟಿ ರೂಪಾಯಿಗಳನ್ನು ಬ್ಯಾಂಕ್‌ನಿಂದ ಪಡೆದಿದ್ದು, 27.97 ಲಕ್ಷ ರೂಪಾಯಿಗಳನ್ನು ವಿವಿಧ ಖಾತೆಗಳಲ್ಲಿ ಇಡಲಾಗಿದೆ. ನಾವು ಈ ಹಣವನ್ನು ವಶಪಡಿಸಿಕೊಂಡಿದ್ದೇವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜೈಸ್ವಾಲ್ ದೆಹಲಿಯ ಕೆಲವು ಸೈಬರ್ ಕ್ರಿಮಿನಲ್‌ಗಳೊಂದಿಗೆ ಸಂಪರ್ಕದಲ್ಲಿದ್ದು, ಅವರು ಕಂಪನಿಗಳಿಂದ ಹಣವನ್ನು ವಂಚಿಸಲು ಆಕರ್ಷಕ ಕಮಿಷನ್‌ಗಳನ್ನು ನೀಡಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆರೋಪಿ 1.21 ಕೋಟಿ ಬ್ಯಾಂಕ್‌ನಿಂದ ವಿತ್‌ಡ್ರಾ ಮಾಡಿ ತಮ್ಮ ಮನೆಯಲ್ಲಿ ಇಟ್ಟುಕೊಂಡು ದೆಹಲಿ ತಂಡಕ್ಕೆ ಹಸ್ತಾಂತರಿಸಲು ಬಯಸಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. “ಇದು ಅವನ ಮೊದಲ ಸೈಬರ್ ಕ್ರೈಮ್ ಎಂದು ತೋರುತ್ತಿದೆ ಮತ್ತು ನಾವು ಆತನ ಹಿಂದಿನ ದಾಖಲೆಗಳನ್ನು ಪರಿಶೀಲಿಸುತ್ತಿದ್ದೇವೆ” ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ವಿಡಿಯೊ ನೋಡಿ: ಗೌರಿ ನೆನಪು ಕಾರ್ಯಕ್ರಮದಲ್ಲಿ ರಾಮಕುಮಾರ್ ಅವರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...