Homeಕರ್ನಾಟಕಈ ವರೆಗಿನ ಅತೀ ದೊಡ್ಡ ಸೈಬರ್ ವಂಚನೆ ಪ್ರಕರಣ ಬೇಧಿಸಿದ ರಾಜ್ಯ ಪೊಲೀಸ್; 9 ನೇ...

ಈ ವರೆಗಿನ ಅತೀ ದೊಡ್ಡ ಸೈಬರ್ ವಂಚನೆ ಪ್ರಕರಣ ಬೇಧಿಸಿದ ರಾಜ್ಯ ಪೊಲೀಸ್; 9 ನೇ ತರಗತಿ ಡ್ರಾಪೌಟ್‌ ಆಗಿದ್ದ ಆರೋಪಿ!

- Advertisement -
- Advertisement -

ನಕಲಿ ಇಮೇಲ್ ಐಡಿ ಮೂಲಕ ಸಂಸ್ಥೆಯೊಂದಕ್ಕೆ 2.11 ಕೋಟಿ ರೂಪಾಯಿ ವಂಚಿಸಿದ್ದ ಮಧ್ಯಪ್ರದೇಶದ 23 ವರ್ಷದ ಯುವಕನನ್ನು ಬಳ್ಳಾರಿ ಸೈಬರ್ ಕ್ರೈಮ್ ಪೊಲೀಸರು ಇತ್ತೀಚೆಗೆ ಬಂಧಿಸಿದ್ದಾರೆ. ಪೊಲೀಸರು 1.48 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿದ್ದು, ಇದು ಸೈಬರ್ ಕ್ರೈಮ್ ಪ್ರಕರಣಗಳಲ್ಲಿ ರಾಜ್ಯದ ಪೊಲೀಸರು ವಶಕ್ಕೆ ಪಡೆದ ಅತಿದೊಡ್ಡ ಪ್ರಕರಣಗಳಲ್ಲಿ ಒಂದಾಗಿದೆ ಎಂದು ವರದಿಗಳು ಉಲ್ಲೇಖಿಸಿವೆ.ಸೈಬರ್ ವಂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆರೋಪಿಯನ್ನು ಮಧ್ಯಪ್ರದೇಶದ ರೇವಾ ಜಿಲ್ಲೆಯ ನಿವಾಸಿ ಅಜಯ್ ಕುಮಾರ್ ಜೈಸ್ವಾಲ್ ಎಂದು ಗುರುತಿಸಲಾಗಿದ್ದು, ಆತನನ್ನು ಬಂಧಿಸಿರುವುದಾಗಿ ಬಳ್ಳಾರಿಯ ಪೊಲೀಸ್ ವರಿಷ್ಠಾಧಿಕಾರಿ ಶೋಭಾ ರಾಣಿ ಬುಧವಾರ ಪ್ರಕಟಿಸಿದ್ದಾರೆ. ಆರೋಪಿ ಜೈಸ್ವಾಲ್ ಆಗಸ್ಟ್ 21ರಿಂದ ಮತ್ತು ಸೆಪ್ಟೆಂಬರ್ 2 ರ ನಡುವೆ ಹಿಂದೂಸ್ತಾನ್ ಕ್ಯಾಲ್ಸಿನ್ಡ್ ಮೆಟಲ್ಸ್ ಪ್ರೈವೇಟ್ ಲಿಮಿಟೆಡ್ (HCMPL)ಗೆ ಮೋಸ ಮಾಡಲು ನಕಲಿ ಇಮೇಲ್ ಐಡಿಯನ್ನು ಸೃಷ್ಟಿದ್ದನು ಎಂದು ಆರೋಪಿಸಲಾಗಿದೆ.

ಇದನ್ನೂಓದಿ: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಆತ್ಮಹತ್ಯೆ ತಡೆಗೆ ಮಾರ್ಗಸೂಚಿ | ಸರ್ಕಾರ ನಿರ್ಧಾರ

ಎಚ್‌ಸಿಎಂಪಿಎಲ್ ಕಳೆದ ಏಳೆಂಟು ವರ್ಷಗಳಿಂದ ಬಳ್ಳಾರಿಯ ಅಗರ್ವಾಲ್ ಕೋಲ್ ಕಾರ್ಪೊರೇಷನ್ ಪ್ರೈವೇಟ್ ಲಿಮಿಟೆಡ್ (ಎಸಿಸಿಪಿಎಲ್) ನಿಂದ ಕಲ್ಲಿದ್ದಲು ಖರೀದಿಸುತ್ತಿದೆ. ಕಂಪೆನಿಯು ತನ್ನ ವಹಿವಾಟುಗಳನ್ನು ಆನ್‌ಲೈನ್‌ನಲ್ಲಿ ಮಾಡುತ್ತಿದೆ.

9 ನೇ ತರಗತಿಯ ನಂತರ ಶಾಲೆಯನ್ನು ತೊರೆದ ಜೈಸ್ವಾಲ್, ಡೇಟಾ ಎಂಟ್ರಿ ಆಪರೇಟರ್ ಆಗಿದ್ದು, ಕೆಲಸದ ನಿಮಿತ್ತ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ವಾಸಿಸುತ್ತಿದ್ದಾನೆ. ಆರೋಪಿ ಎಸಿಸಿಪಿಎಲ್‌ನ ಅಧಿಕೃತ ಇಮೇಲ್ ಐಡಿಯನ್ನು ಹೋಲುವ ಇಮೇಲ್ ಐಡಿಯನ್ನು ರಚಿಸಿ, ಕಂಪನಿಯ ಬ್ಯಾಂಕ್ ಖಾತೆ ಸಂಖ್ಯೆಯನ್ನು ಬದಲಾಯಿಸಲಾಗಿದೆ ಎಂದು ಇಮೇಲ್ ಕಳುಹಿಸಿ ಮತ್ತು ನಮೂದಿಸಿದ ಬ್ಯಾಂಕ್ ಖಾತೆ ಸಂಖ್ಯೆಗೆ ಬಾಕಿ ಪಾವತಿಸಲು ಎಚ್‌ಸಿಎಂಪಿಎಲ್ ಅನ್ನು ಕೇಳಿದ್ದಾನೆ. ಸೈಬರ್ ವಂಚನೆ

ಈ ವೇಳೆ ಕ್ರಾಸ್-ಚೆಕಿಂಗ್ ಮಾಡದೆ HCMPL ಕಂಪೆನಿಯವರು ಆರು ವಹಿವಾಟುಗಳ ಹಣವನ್ನು ವರ್ಗಾಯಿಸಿದೆ. ಮೊದಲ ವಹಿವಾಟು ಆಗಸ್ಟ್ 21 ರಂದು ನಡೆದಿದ್ದರೂ, ಸೆಪ್ಟೆಂಬರ್‌ 2ರಂದು ಎಸಿಸಿಪಿಎಲ್‌ನ ಪ್ರತಿನಿಧಿಯೊಬ್ಬರು HCMPL ಜೊತೆಗೆ ಬಾಕಿ ಹಣ ಕೇಳಿದಾಗ ಇದು ಬೆಳಕಿಗೆ ಬಂದಿತ್ತು.

ಇದನ್ನೂಓದಿ: ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಿಂದ ಆಕ್ಷೇಪಾರ್ಹ ಹೇಳಿಕೆ : ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್

ಇದರ ನಂತರ ಸೆಪ್ಟೆಂಬರ್ 3ರಂದು ಬಳ್ಳಾರಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು. ಹಾಗಾಗಿ ಡಿಎಸ್ಪಿ ಸಂತೋಷ್ ಚೌಹಾಣ್ ನೇತೃತ್ವದ ತಂಡ ಮಧ್ಯಪ್ರದೇಶಕ್ಕೆ ತೆರಳಿ ಆರೋಪಿ ಜೈಸ್ವಾಲ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಜೈಸ್ವಾಲ್ ಖಾತೆಗೆ ವರ್ಗಾಯಿಸಲಾದ ಹಣವನ್ನು ಆತ 18 ವಿವಿಧ ಖಾತೆಗಳಿಗೆ ವರ್ಗಾಯಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಜೈಸ್ವಾಲ್ 1.21 ಕೋಟಿ ರೂಪಾಯಿಗಳನ್ನು ಬ್ಯಾಂಕ್‌ನಿಂದ ಪಡೆದಿದ್ದು, 27.97 ಲಕ್ಷ ರೂಪಾಯಿಗಳನ್ನು ವಿವಿಧ ಖಾತೆಗಳಲ್ಲಿ ಇಡಲಾಗಿದೆ. ನಾವು ಈ ಹಣವನ್ನು ವಶಪಡಿಸಿಕೊಂಡಿದ್ದೇವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜೈಸ್ವಾಲ್ ದೆಹಲಿಯ ಕೆಲವು ಸೈಬರ್ ಕ್ರಿಮಿನಲ್‌ಗಳೊಂದಿಗೆ ಸಂಪರ್ಕದಲ್ಲಿದ್ದು, ಅವರು ಕಂಪನಿಗಳಿಂದ ಹಣವನ್ನು ವಂಚಿಸಲು ಆಕರ್ಷಕ ಕಮಿಷನ್‌ಗಳನ್ನು ನೀಡಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆರೋಪಿ 1.21 ಕೋಟಿ ಬ್ಯಾಂಕ್‌ನಿಂದ ವಿತ್‌ಡ್ರಾ ಮಾಡಿ ತಮ್ಮ ಮನೆಯಲ್ಲಿ ಇಟ್ಟುಕೊಂಡು ದೆಹಲಿ ತಂಡಕ್ಕೆ ಹಸ್ತಾಂತರಿಸಲು ಬಯಸಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. “ಇದು ಅವನ ಮೊದಲ ಸೈಬರ್ ಕ್ರೈಮ್ ಎಂದು ತೋರುತ್ತಿದೆ ಮತ್ತು ನಾವು ಆತನ ಹಿಂದಿನ ದಾಖಲೆಗಳನ್ನು ಪರಿಶೀಲಿಸುತ್ತಿದ್ದೇವೆ” ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ವಿಡಿಯೊ ನೋಡಿ: ಗೌರಿ ನೆನಪು ಕಾರ್ಯಕ್ರಮದಲ್ಲಿ ರಾಮಕುಮಾರ್ ಅವರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...