Homeಮುಖಪುಟಜಾತಿ ಆಧಾರಿತ ಹಿಂಸಾಚಾರ ಹೆಚ್ಚಾಗುತ್ತಿದೆ ಎಂದ ಪತ್ರಕರ್ತನ ಮೇಲೆ ಸೈಬರ್‌ ಭಯೋತ್ಪಾದನೆ FIR: ವಿಪಕ್ಷಗಳ ಖಂಡನೆ

ಜಾತಿ ಆಧಾರಿತ ಹಿಂಸಾಚಾರ ಹೆಚ್ಚಾಗುತ್ತಿದೆ ಎಂದ ಪತ್ರಕರ್ತನ ಮೇಲೆ ಸೈಬರ್‌ ಭಯೋತ್ಪಾದನೆ FIR: ವಿಪಕ್ಷಗಳ ಖಂಡನೆ

- Advertisement -
- Advertisement -

ʼಹರಿಯಾಣದ ಹಿಸಾರ್‌ನಲ್ಲಿ ಜಾತಿ ಆಧಾರಿತ ಹಿಂಸಾಚಾರ ಹೆಚ್ಚಾಗುತ್ತಿದೆʼ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದ ಪತ್ರಕರ್ತನ ಮೇಲೆ ಸೈಬರ್‌ ಭಯೋತ್ಪಾದನೆ ಮತ್ತು ಸಮುದಾಯಗಳ ನಡುವೆ ದ್ವೇಷ ಬಿತ್ತುವ ಪ್ರಚೋದನೆ ಆರೋಪದಲ್ಲಿ ದೂರು ದಾಖಲಾಗಿದೆ.

ಹರಿಯಾಣದಲ್ಲಿ ಸ್ಥಳೀಯ ವೆಬ್‌ಸೈಟ್‌ ನಡೆಸುತ್ತಿರುವ ರಾಜೇಶ್‌ ಕುಂದು ಎಂಬ ಪತ್ರಕರ್ತನ ಮೇಲೆ ಸಾಮಾಜಿಕ ಜಾಲತಾಣದ ಪೋಸ್ಟ್‌ ಆಧಾರದಲ್ಲಿ ಐಪಿಸಿ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಹಿಸಾರ್‌ ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ ಎಂದು ದಿವೈರ್‌ ವರದಿ ಮಾಡಿದೆ.

“ಈ ಒಂದು ವಾರದಲ್ಲಿ ಹಿಸಾರ್‌ ಜಾತಿ ಆಧಾರಿತ ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ. ಇದೇ ಮಾದರಿಯಲ್ಲಿ ಇಡೀ ರಾಜ್ಯದಲ್ಲಿ ಮತ್ತು ದೇಶದಲ್ಲಿ ಹಿಂಸಾಚಾರ ನಡೆಸಲು ಇದು ಬ್ಲೂ ಪ್ರಿಂಟ್‌ ಆಗಿದೆ” ಎಂದು ರಾಜೇಶ್‌ ಕುಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದರು ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

ಸಾರ್ವಜನಿಕರನ್ನು ಪ್ರಚೋದಿಸುವಂತಹ ಸಂದೇಶಗಳನ್ನು ವಾಟ್ಸಾಪ್ ಗುಂಪುಗಳಿಗೆ ಮತ್ತು ಫೇಸ್‌ಬುಕ್ ಮೂಲಕ ರಾಜೇಶ್ ಕುಂದು ಅವರ ಮೊಬೈಲ್ ಫೋನ್ ಸಂಖ್ಯೆಯಿಂದ ಕಳುಹಿಸಲಾಗಿದೆ ಮತ್ತು ಇದು ಶಾಂತಿಯನ್ನು ಕಾಪಾಡುವಲ್ಲಿ ಪರಿಣಾಮ ಬೀರುತ್ತದೆ, ಆದ್ದರಿಂದ ಆತನ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಜಿಲ್ಲಾ ಪೊಲೀಸ್ ವಕ್ತಾರ ವಿಕಾಸ್ ತಿಳಿಸಿದ್ದಾರೆ.

ದೂರಿನ ಆಧಾರದ ಮೇಲೆ, ಏಪ್ರಿಲ್‌ 09 ರಂದು ಐಪಿಸಿಯ 153 ಎ (ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), ಐಪಿಸಿಯ 153 ಬಿ (ಪ್ರಚೋದನೆಗಳು, ರಾಷ್ಟ್ರೀಯ ಏಕೀಕರಣಕ್ಕೆ ಧಕ್ಕೆ) ಮತ್ತು ಐಟಿ ಕಾಯ್ದೆಯ 66 ಎಫ್ (ಸೈಬರ್-ಭಯೋತ್ಪಾದನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜೇಶ್ ಕುಂದು ವಿರುದ್ಧ ಎಫ್‌ಐಆರ್‌ ದಾಖಲಿಸಿರುವುದನ್ನು ಕಾಂಗ್ರೆಸ್‌ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ, ಕುಮಾರಿ ಸೆಲ್ಜಾ, ಕಾಂಗ್ರೆಸ್ ನ ದೀಪಂದರ್ ಸಿಂಗ್ ಹೂಡಾ ಮತ್ತು ಐಎನ್ಎಲ್‌ಡಿಯ ಅಭಯ್ ಸಿಂಗ್ ಚೌತಲಾ ಸೇರಿದಂತೆ ಪ್ರತಿಪಕ್ಷ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಪ್ರಕರಣವನ್ನು ಕೂಡಲೇ ಹಿಂಪಡೆಯಬೇಕೆಂದು ಅವರು ಒತ್ತಾಯಿಸಿದ್ದಾರೆ.

ಕೇಂದ್ರದ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಆಂದೋಲನವನ್ನು ರಾಜೇಶ್‌ ಕುಂದು ಬೆಂಬಲಿಸಿದ್ದರು. ನಿರಂತರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ರೈತ ಹೋರಾಟದ ಬಗ್ಗೆ ಬರೆಯುತ್ತಿದ್ದರು ಮತ್ತು ತಮ್ಮ ವೆಬ್‌ಸೈಟ್‌ನಲ್ಲಿ ಈ ಕುರಿತು ಸರಣಿ ಲೇಖನಗಳನ್ನು ಪ್ರಕಟಿಸುತ್ತಿದ್ದರು. ಹಾಗಾಗಿ ಅವರನ್ನು ಗುರಿಯಾಗಿಸಿ ಈ ಸುಳ್ಳು ದೂರು ದಾಖಲಿಸಲಾಗಿದೆ ಎಂದು  ಹರಿಯಾಣದ ಪ್ರತಿಪಕ್ಷಗಳು ಆರೋಪಿಸಿವೆ.

“ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತ ಆಂದೋಲನವನ್ನು ಸರ್ಕಾರ ಮುರಿಯಲು ಸಾಧ್ಯವಾಗದಿದ್ದಾಗ, ಅದು ಪತ್ರಕರ್ತ ರಾಜೇಶ್ ಕುಂದು ವಿರುದ್ಧ ಎಫ್ಐಆರ್ ದಾಖಲಿಸಿದೆ. ಅವರು ರೈತರ ಧ್ವನಿಯಾಗಿದ್ದಾರೆ. ಈ ಧ್ವನಿಯನ್ನು ನಿಗ್ರಹಿಸಲು ಅಥವಾ ರೈತರ ಆಂದೋಲನವನ್ನು ದಮನಿಸಲು ಕೇಂದ್ರದಿಂದ ಸಾಧ್ಯವಿಲ್ಲ” ಎಂದು ರಣದೀಪ್‌ ಸಿಂಗ್ ಸುರ್ಜೇವಲಾ ಟ್ವೀಟ್‌ ಮಾಡಿದ್ದಾರೆ.

ಹಿಸಾರ್‌ನಲ್ಲಿನ ಪತ್ರಕರ್ತರು ತುರ್ತು ಸಭೆ ನಡೆಸಿದ್ದು, ರಾಜೇಶ್‌ ಕುಂದು ಪರ ಐಕ್ಯಮತ್ಯ ವ್ಯಕ್ತಪಡಿಸಿದ್ದಾರೆ. ಸರ್ಕಾರ ಕೂಡಲೇ ಎಫ್‌ಐಆರ್‌ ರದ್ದುಗೊಳಿಸಬೇಕೆಂದು ಒತ್ತಾಯಿಸಿದ್ದಾರೆ. ಪತ್ರಕರ್ತನ ಮೇಲಿನ ದೂರನ್ನು ಚಂಡೀಗಢ ಪ್ರೆಸ್ ಕ್ಲಬ್ ಖಂಡಿಸಿದೆ.

“ರಾಜೇಶ್ ಕುಂದು ಅವರು ಜವಾಬ್ದಾರಿಯುತ ಪ್ರಜೆಯಾಗಿ ಮತ್ತು ಪತ್ರಕರ್ತರಾಗಿ ತಮ್ಮ ವಿಶ್ವಾಸಾರ್ಹ ಮೂಲಗಳ ಮೂಲಕ ಪಡೆದ ಮಾಹಿತಿಯ ಆಧಾರದ ಮೇಲೆ ಹಿಂಸಾಚಾರದ ಭೀತಿಯ ಬಗ್ಗೆ ಪೋಸ್ಟ್ ಮಾಡುವ ಮೂಲಕ ಅವರ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಪೋಸ್ಟ್‌ ಮೂಲಕ ಜನರಲ್ಲಿ ಅರಿವು ಮೂಡಿಸಲು ಮತ್ತು ಮುಂದೊದಗಬಹುದಾದ ಅಹಿತಕರ ಪರಿಸ್ಥಿತಿಯನ್ನು ತಪ್ಪಿಸಬಹುದು ಎಂಬುದು ಅವರ ಉದ್ದೇಶವಾಗಿದೆ. ಇಂತಹ ವ್ಯಕ್ತಿಯ ಮೇಲೆ ಎಫ್‌ಐಆರ್‌ ದಾಖಲಿಸುವುದು ಸರಿಯಲ್ಲ” ಎಂದು ಪತ್ರಕರ್ತರು ಕಿಡಿಕಾರಿದ್ದಾರೆ.

“ಪತ್ರಕರ್ತನ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದು ಅತ್ಯಂತ ಖಂಡನೀಯ. ಅಲ್ಲದೆ ಸ್ವತಂತ್ರ ಪತ್ರಕರ್ತರನ್ನು ಭಯಗೊಳಿಸಲು ಪೊಲೀಸರು ಹಿಸಾರ್‌ನ ಹಲವಾರು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸುತ್ತೇವೆ” ಎಂದು ಚಂಡೀಗಢ ಪ್ರೆಸ್ ಕ್ಲಬ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.


ಇದನ್ನೂ ಓದಿ: ರೈತ ಹೋರಾಟ: ಕೇಂದ್ರದೊಂದಿಗೆ ಮಾತುಕತೆಗೆ ಸಿದ್ದವಿದ್ದೇವೆ, ಹಕ್ಕೊತ್ತಾಯಗಳು ಅವೆ ಇರಲಿವೆ- ರಾಕೇಶ್‌ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...