Homeಮುಖಪುಟಜಾತಿ ಆಧಾರಿತ ಹಿಂಸಾಚಾರ ಹೆಚ್ಚಾಗುತ್ತಿದೆ ಎಂದ ಪತ್ರಕರ್ತನ ಮೇಲೆ ಸೈಬರ್‌ ಭಯೋತ್ಪಾದನೆ FIR: ವಿಪಕ್ಷಗಳ ಖಂಡನೆ

ಜಾತಿ ಆಧಾರಿತ ಹಿಂಸಾಚಾರ ಹೆಚ್ಚಾಗುತ್ತಿದೆ ಎಂದ ಪತ್ರಕರ್ತನ ಮೇಲೆ ಸೈಬರ್‌ ಭಯೋತ್ಪಾದನೆ FIR: ವಿಪಕ್ಷಗಳ ಖಂಡನೆ

- Advertisement -
- Advertisement -

ʼಹರಿಯಾಣದ ಹಿಸಾರ್‌ನಲ್ಲಿ ಜಾತಿ ಆಧಾರಿತ ಹಿಂಸಾಚಾರ ಹೆಚ್ಚಾಗುತ್ತಿದೆʼ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದ ಪತ್ರಕರ್ತನ ಮೇಲೆ ಸೈಬರ್‌ ಭಯೋತ್ಪಾದನೆ ಮತ್ತು ಸಮುದಾಯಗಳ ನಡುವೆ ದ್ವೇಷ ಬಿತ್ತುವ ಪ್ರಚೋದನೆ ಆರೋಪದಲ್ಲಿ ದೂರು ದಾಖಲಾಗಿದೆ.

ಹರಿಯಾಣದಲ್ಲಿ ಸ್ಥಳೀಯ ವೆಬ್‌ಸೈಟ್‌ ನಡೆಸುತ್ತಿರುವ ರಾಜೇಶ್‌ ಕುಂದು ಎಂಬ ಪತ್ರಕರ್ತನ ಮೇಲೆ ಸಾಮಾಜಿಕ ಜಾಲತಾಣದ ಪೋಸ್ಟ್‌ ಆಧಾರದಲ್ಲಿ ಐಪಿಸಿ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಹಿಸಾರ್‌ ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ ಎಂದು ದಿವೈರ್‌ ವರದಿ ಮಾಡಿದೆ.

“ಈ ಒಂದು ವಾರದಲ್ಲಿ ಹಿಸಾರ್‌ ಜಾತಿ ಆಧಾರಿತ ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ. ಇದೇ ಮಾದರಿಯಲ್ಲಿ ಇಡೀ ರಾಜ್ಯದಲ್ಲಿ ಮತ್ತು ದೇಶದಲ್ಲಿ ಹಿಂಸಾಚಾರ ನಡೆಸಲು ಇದು ಬ್ಲೂ ಪ್ರಿಂಟ್‌ ಆಗಿದೆ” ಎಂದು ರಾಜೇಶ್‌ ಕುಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದರು ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

ಸಾರ್ವಜನಿಕರನ್ನು ಪ್ರಚೋದಿಸುವಂತಹ ಸಂದೇಶಗಳನ್ನು ವಾಟ್ಸಾಪ್ ಗುಂಪುಗಳಿಗೆ ಮತ್ತು ಫೇಸ್‌ಬುಕ್ ಮೂಲಕ ರಾಜೇಶ್ ಕುಂದು ಅವರ ಮೊಬೈಲ್ ಫೋನ್ ಸಂಖ್ಯೆಯಿಂದ ಕಳುಹಿಸಲಾಗಿದೆ ಮತ್ತು ಇದು ಶಾಂತಿಯನ್ನು ಕಾಪಾಡುವಲ್ಲಿ ಪರಿಣಾಮ ಬೀರುತ್ತದೆ, ಆದ್ದರಿಂದ ಆತನ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಜಿಲ್ಲಾ ಪೊಲೀಸ್ ವಕ್ತಾರ ವಿಕಾಸ್ ತಿಳಿಸಿದ್ದಾರೆ.

ದೂರಿನ ಆಧಾರದ ಮೇಲೆ, ಏಪ್ರಿಲ್‌ 09 ರಂದು ಐಪಿಸಿಯ 153 ಎ (ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), ಐಪಿಸಿಯ 153 ಬಿ (ಪ್ರಚೋದನೆಗಳು, ರಾಷ್ಟ್ರೀಯ ಏಕೀಕರಣಕ್ಕೆ ಧಕ್ಕೆ) ಮತ್ತು ಐಟಿ ಕಾಯ್ದೆಯ 66 ಎಫ್ (ಸೈಬರ್-ಭಯೋತ್ಪಾದನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜೇಶ್ ಕುಂದು ವಿರುದ್ಧ ಎಫ್‌ಐಆರ್‌ ದಾಖಲಿಸಿರುವುದನ್ನು ಕಾಂಗ್ರೆಸ್‌ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ, ಕುಮಾರಿ ಸೆಲ್ಜಾ, ಕಾಂಗ್ರೆಸ್ ನ ದೀಪಂದರ್ ಸಿಂಗ್ ಹೂಡಾ ಮತ್ತು ಐಎನ್ಎಲ್‌ಡಿಯ ಅಭಯ್ ಸಿಂಗ್ ಚೌತಲಾ ಸೇರಿದಂತೆ ಪ್ರತಿಪಕ್ಷ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಪ್ರಕರಣವನ್ನು ಕೂಡಲೇ ಹಿಂಪಡೆಯಬೇಕೆಂದು ಅವರು ಒತ್ತಾಯಿಸಿದ್ದಾರೆ.

ಕೇಂದ್ರದ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಆಂದೋಲನವನ್ನು ರಾಜೇಶ್‌ ಕುಂದು ಬೆಂಬಲಿಸಿದ್ದರು. ನಿರಂತರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ರೈತ ಹೋರಾಟದ ಬಗ್ಗೆ ಬರೆಯುತ್ತಿದ್ದರು ಮತ್ತು ತಮ್ಮ ವೆಬ್‌ಸೈಟ್‌ನಲ್ಲಿ ಈ ಕುರಿತು ಸರಣಿ ಲೇಖನಗಳನ್ನು ಪ್ರಕಟಿಸುತ್ತಿದ್ದರು. ಹಾಗಾಗಿ ಅವರನ್ನು ಗುರಿಯಾಗಿಸಿ ಈ ಸುಳ್ಳು ದೂರು ದಾಖಲಿಸಲಾಗಿದೆ ಎಂದು  ಹರಿಯಾಣದ ಪ್ರತಿಪಕ್ಷಗಳು ಆರೋಪಿಸಿವೆ.

“ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತ ಆಂದೋಲನವನ್ನು ಸರ್ಕಾರ ಮುರಿಯಲು ಸಾಧ್ಯವಾಗದಿದ್ದಾಗ, ಅದು ಪತ್ರಕರ್ತ ರಾಜೇಶ್ ಕುಂದು ವಿರುದ್ಧ ಎಫ್ಐಆರ್ ದಾಖಲಿಸಿದೆ. ಅವರು ರೈತರ ಧ್ವನಿಯಾಗಿದ್ದಾರೆ. ಈ ಧ್ವನಿಯನ್ನು ನಿಗ್ರಹಿಸಲು ಅಥವಾ ರೈತರ ಆಂದೋಲನವನ್ನು ದಮನಿಸಲು ಕೇಂದ್ರದಿಂದ ಸಾಧ್ಯವಿಲ್ಲ” ಎಂದು ರಣದೀಪ್‌ ಸಿಂಗ್ ಸುರ್ಜೇವಲಾ ಟ್ವೀಟ್‌ ಮಾಡಿದ್ದಾರೆ.

ಹಿಸಾರ್‌ನಲ್ಲಿನ ಪತ್ರಕರ್ತರು ತುರ್ತು ಸಭೆ ನಡೆಸಿದ್ದು, ರಾಜೇಶ್‌ ಕುಂದು ಪರ ಐಕ್ಯಮತ್ಯ ವ್ಯಕ್ತಪಡಿಸಿದ್ದಾರೆ. ಸರ್ಕಾರ ಕೂಡಲೇ ಎಫ್‌ಐಆರ್‌ ರದ್ದುಗೊಳಿಸಬೇಕೆಂದು ಒತ್ತಾಯಿಸಿದ್ದಾರೆ. ಪತ್ರಕರ್ತನ ಮೇಲಿನ ದೂರನ್ನು ಚಂಡೀಗಢ ಪ್ರೆಸ್ ಕ್ಲಬ್ ಖಂಡಿಸಿದೆ.

“ರಾಜೇಶ್ ಕುಂದು ಅವರು ಜವಾಬ್ದಾರಿಯುತ ಪ್ರಜೆಯಾಗಿ ಮತ್ತು ಪತ್ರಕರ್ತರಾಗಿ ತಮ್ಮ ವಿಶ್ವಾಸಾರ್ಹ ಮೂಲಗಳ ಮೂಲಕ ಪಡೆದ ಮಾಹಿತಿಯ ಆಧಾರದ ಮೇಲೆ ಹಿಂಸಾಚಾರದ ಭೀತಿಯ ಬಗ್ಗೆ ಪೋಸ್ಟ್ ಮಾಡುವ ಮೂಲಕ ಅವರ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಪೋಸ್ಟ್‌ ಮೂಲಕ ಜನರಲ್ಲಿ ಅರಿವು ಮೂಡಿಸಲು ಮತ್ತು ಮುಂದೊದಗಬಹುದಾದ ಅಹಿತಕರ ಪರಿಸ್ಥಿತಿಯನ್ನು ತಪ್ಪಿಸಬಹುದು ಎಂಬುದು ಅವರ ಉದ್ದೇಶವಾಗಿದೆ. ಇಂತಹ ವ್ಯಕ್ತಿಯ ಮೇಲೆ ಎಫ್‌ಐಆರ್‌ ದಾಖಲಿಸುವುದು ಸರಿಯಲ್ಲ” ಎಂದು ಪತ್ರಕರ್ತರು ಕಿಡಿಕಾರಿದ್ದಾರೆ.

“ಪತ್ರಕರ್ತನ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದು ಅತ್ಯಂತ ಖಂಡನೀಯ. ಅಲ್ಲದೆ ಸ್ವತಂತ್ರ ಪತ್ರಕರ್ತರನ್ನು ಭಯಗೊಳಿಸಲು ಪೊಲೀಸರು ಹಿಸಾರ್‌ನ ಹಲವಾರು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸುತ್ತೇವೆ” ಎಂದು ಚಂಡೀಗಢ ಪ್ರೆಸ್ ಕ್ಲಬ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.


ಇದನ್ನೂ ಓದಿ: ರೈತ ಹೋರಾಟ: ಕೇಂದ್ರದೊಂದಿಗೆ ಮಾತುಕತೆಗೆ ಸಿದ್ದವಿದ್ದೇವೆ, ಹಕ್ಕೊತ್ತಾಯಗಳು ಅವೆ ಇರಲಿವೆ- ರಾಕೇಶ್‌ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...