Homeಮುಖಪುಟಕೊರೋನಾ ವೈರಸ್ ಬಗ್ಗೆ ಹರಡುತ್ತಿರುವ ನಕಲಿ ಸುದ್ದಿಗಳ ವಿರುದ್ಧ ಸೈಬರ್ ವಾರಿಯರ್ಸ್ ಅಸ್ತಿತ್ವಕ್ಕೆ

ಕೊರೋನಾ ವೈರಸ್ ಬಗ್ಗೆ ಹರಡುತ್ತಿರುವ ನಕಲಿ ಸುದ್ದಿಗಳ ವಿರುದ್ಧ ಸೈಬರ್ ವಾರಿಯರ್ಸ್ ಅಸ್ತಿತ್ವಕ್ಕೆ

- Advertisement -
- Advertisement -

ಸಾಮಾಜಿಕ ಜಾಲತಾಣದಲ್ಲಿ ಕೊರೊನಾ ವಿರುದ್ದ ಹರಡುತ್ತಿರುವ ಸುಳ್ಳು ಸುದ್ದಿಗಳ ವಿರುದ್ದ ಹೋರಾಡಲು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸೈಬರ್ ಯೋಧರನ್ನು ನೇಮಿಸಿದೆ.

ಕೊರೊನಾ ಸಾಂಕ್ರಾಮಿಕದ ಬಗ್ಗೆ ವಾಟ್ಸಾಪ್, ಫೇಸ್‌ಬುಕ್‌ಗಳಲ್ಲಿ ಹರಡುತ್ತಿರುವ ಬಹಳಷ್ಟು ಸುಳ್ಳುಗಳ ವಿರುದ್ದ ಈ ಸೈಬರ್ ವಿಂಗ್ ಹೋರಾಡುತ್ತಿದೆ. ವೈದ್ಯರು, ದಾದಿಯರು ಹಾಗೂ ಇತರ ಮುಂಚೂಣಿಯಲ್ಲಿರುವ ಆರೋಗ್ಯ ಕಾರ್ಯಕರ್ತರಿಗಿಂತ ಭಿನ್ನವಾಗಿ ಕೊರೊನಾ ವೈರಸ್ ವಿರುದ್ದ ಈ ‘ಸೈಬರ್’ ಯೋಧರು ಆನ್‌ಲೈನ್‌ನಲ್ಲಿ ಹರಡುತ್ತಿರುವ ನಕಲಿ ಮಾಹಿತಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಇವರು ದೃಢೀಕೃತ ಮಾಹಿತಿಯನ್ನು ನೀಡುತ್ತಿದ್ದಾರೆ.

ಕರ್ನಾಟಕದ ಎಂಟು ”ಕರೋನಾ ವಾರಿಯರ್ ಮಾಸ್ಟರ್” ಸ್ವಯಂಸೇವಕರಲ್ಲಿ ಒಬ್ಬರಾದ ಸುಳ್ಯದ ಸಹನಾ ಎ. ತನ್ನ ಸ್ವಂತ ಜಿಲ್ಲೆಯಾದ ದಕ್ಷಿಣ ಕನ್ನಡ ಮತ್ತು ಪಕ್ಕದ ಉಡುಪಿಯಲ್ಲಿ ಕೊರೊನಾ ಹೆಸರಲ್ಲಿ ಹರಡುವ ಸೈಬರ್ ವಿಷವನ್ನು ಎದುರಿಸುವ ಉಸ್ತುವಾರಿ ವಹಿಸಿದ್ದಾರೆ. ”ಮಾಸ್ಟರ್” ಸ್ವಯಂಸೇವಕಳಾಗಿ ಅವರ ಜವಾಬ್ದಾರಿಗಳು ರಾಜ್ಯದಾದ್ಯಂತ ನಾಡಿಮಿಡಿತವನ್ನು ಪಡೆಯಲು ಸಹಾಯ ಮಾಡುತ್ತದೆ ಎನ್ನುತ್ತಾರೆ. ಇದು ಬಹುಮುಖಿ ಕಾರ್ಯಾಚರಣೆಯಾಗಿದ್ದು, DIPR ಕಾರ್ಯದರ್ಶಿ ಪಿ ಮಣಿವಣ್ಣನ್ ಅವರು ಪ್ರಾರಂಭಿಸಿದ ಪರಿಕಲ್ಪನೆಯಾಗಿದೆ.

ಇತ್ತೀಚಿನ ದಿನಗಳಲ್ಲಿ ಕರೋನಾ ವಾರಿಯರ್ಸ್‌ ಎದುರಿಸಿದ ದೊಡ್ಡ ಸವಾಲು ಎಂದರೆ ತಬ್ಲಿಘಿ ಜಮಾಅತ್ ಪ್ರತಿನಿಧಿಗಳ ಬಗ್ಗೆ ತಪ್ಪು ಮಾಹಿತಿಗಳನ್ನು ಹರಡುವುದಾಗಿದೆ. ಸಹನಾ “ಪ್ರತಿ ಜಿಲ್ಲೆ ಮತ್ತು ವಿಭಾಗೀಯ ಗುಂಪುಗಳಲ್ಲಿ ಎಲ್ಲಾ ಧರ್ಮಗಳ ಕರೋನಾ ವಾರಿಯರ್ಸ್ ಅನ್ನು ಹೊಂದಿದ್ದು, ಇದು ಸುಳ್ಳುಗಳನ್ನು ಬಿಚ್ಚಿಡಲು ಹಾಗೂ ವಾಸ್ತವಿಕ ಮಾಹಿತಿಯನ್ನು ಸಾರ್ವಜನಿಕ ವಲಯದಲ್ಲಿ ಹರಡಲು ಒಂದು ಅತ್ಯುತ್ತಮ ಕಾರ್ಯವಾಗಿದೆ” ಎಂದು ಹೇಳುತ್ತಾರೆ.

ಈಗಾಗಲೇ ಎಲ್ಲಾ ರಾಜ್ಯಗಳಲ್ಲಿಯೂ ಅಲ್ಲಿನ ಪೊಲೀಸರೇ ಈ ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚುವ ಕೆಲಸದಲ್ಲಿ ನಿರತರಾಗಿದ್ದಾರೆ. ಉತ್ತರಪ್ರದೇಶದಲ್ಲಿ ಮುಖ್ಯವಾಹಿನಿ ಮಾಧ್ಯಮಗಳಿಂದಲೇ ಅತಿ ಹೆಚ್ಚಿನ ಸುದ್ದಿಗಳ ಪ್ರಸಾರವಾದ ಅಲ್ಲಿನ ಪೊಲೀಸರು ನಿಜ ತಿಳಿಸಿದ್ದಾರೆ. ಕೆಲ ಉದಾಹರಣೆಗಳು ಇಲ್ಲಿವೆ ನೋಡಿ.

ದಕ್ಷಿಣ ಕನ್ನಡದ ತಂಡದ ಪ್ರಮುಖ ಸದಸ್ಯ ನರೇನ್ ಕೊಡುವಾಟ್ಟಟ್ ಯಾವಾಗಲೂ ಆನ್‌ಲೈನ್‌ನಲ್ಲಿ ವಾಟ್ಸಾಪ್‌ನ್ನು ನೋಡುತ್ತಾರೆ. ಅಧೀಕೃತವಲ್ಲದ ನಕಲಿ ಸುದ್ದಿಗಳನ್ನು ಕರೋನಾ ವಾರಿಯರ್ಸ್ ಬಸ್ಟ್ ಮಾಡಿದ್ದಾರೆ ಎಂದು ಪೋಸ್ಟ್ ಮಾಡುವಲ್ಲಿ ಅವರು ನಿರತರಾಗಿರುತ್ತಾರೆ. “ಈ ಸಮಯದಲ್ಲಿ ಜನರು ಅಧಿಕೃತ ಮಾಹಿತಿಯನ್ನು ಪಡೆಯುವುದು ಬಹಳ ಮುಖ್ಯ, ಅವುಗಳಲ್ಲಿ ಕೆಲವು ಸಂಪೂರ್ಣವಾಗಿ ಕೋಮುವಾದಮಯವಾಗಿದೆ” ಎಂದು ಅವರು ಹೇಳುತ್ತಾರೆ. ಲಾಕ್ ಡೌನ್ ಮಧ್ಯೆ ಜನರ ಮನಸ್ಸಿನಲ್ಲಿನ ಗೊಂದಲಗಳನ್ನು ನಿವಾರಿಸಲು ಸರ್ಕಾರದ ವಿವಿಧ ಬುಲೆಟಿನ್‌ಗಳನ್ನು, ಆದೇಶಗಳನ್ನು ಪ್ರಸಾರ ಮಾಡಲಾಗುತ್ತದೆ ಎಂದು ಅವರು ಹೇಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...