Homeಮುಖಪುಟಕೊರೋನಾ ವೈರಸ್ ಬಗ್ಗೆ ಹರಡುತ್ತಿರುವ ನಕಲಿ ಸುದ್ದಿಗಳ ವಿರುದ್ಧ ಸೈಬರ್ ವಾರಿಯರ್ಸ್ ಅಸ್ತಿತ್ವಕ್ಕೆ

ಕೊರೋನಾ ವೈರಸ್ ಬಗ್ಗೆ ಹರಡುತ್ತಿರುವ ನಕಲಿ ಸುದ್ದಿಗಳ ವಿರುದ್ಧ ಸೈಬರ್ ವಾರಿಯರ್ಸ್ ಅಸ್ತಿತ್ವಕ್ಕೆ

- Advertisement -
- Advertisement -

ಸಾಮಾಜಿಕ ಜಾಲತಾಣದಲ್ಲಿ ಕೊರೊನಾ ವಿರುದ್ದ ಹರಡುತ್ತಿರುವ ಸುಳ್ಳು ಸುದ್ದಿಗಳ ವಿರುದ್ದ ಹೋರಾಡಲು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸೈಬರ್ ಯೋಧರನ್ನು ನೇಮಿಸಿದೆ.

ಕೊರೊನಾ ಸಾಂಕ್ರಾಮಿಕದ ಬಗ್ಗೆ ವಾಟ್ಸಾಪ್, ಫೇಸ್‌ಬುಕ್‌ಗಳಲ್ಲಿ ಹರಡುತ್ತಿರುವ ಬಹಳಷ್ಟು ಸುಳ್ಳುಗಳ ವಿರುದ್ದ ಈ ಸೈಬರ್ ವಿಂಗ್ ಹೋರಾಡುತ್ತಿದೆ. ವೈದ್ಯರು, ದಾದಿಯರು ಹಾಗೂ ಇತರ ಮುಂಚೂಣಿಯಲ್ಲಿರುವ ಆರೋಗ್ಯ ಕಾರ್ಯಕರ್ತರಿಗಿಂತ ಭಿನ್ನವಾಗಿ ಕೊರೊನಾ ವೈರಸ್ ವಿರುದ್ದ ಈ ‘ಸೈಬರ್’ ಯೋಧರು ಆನ್‌ಲೈನ್‌ನಲ್ಲಿ ಹರಡುತ್ತಿರುವ ನಕಲಿ ಮಾಹಿತಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಇವರು ದೃಢೀಕೃತ ಮಾಹಿತಿಯನ್ನು ನೀಡುತ್ತಿದ್ದಾರೆ.

ಕರ್ನಾಟಕದ ಎಂಟು ”ಕರೋನಾ ವಾರಿಯರ್ ಮಾಸ್ಟರ್” ಸ್ವಯಂಸೇವಕರಲ್ಲಿ ಒಬ್ಬರಾದ ಸುಳ್ಯದ ಸಹನಾ ಎ. ತನ್ನ ಸ್ವಂತ ಜಿಲ್ಲೆಯಾದ ದಕ್ಷಿಣ ಕನ್ನಡ ಮತ್ತು ಪಕ್ಕದ ಉಡುಪಿಯಲ್ಲಿ ಕೊರೊನಾ ಹೆಸರಲ್ಲಿ ಹರಡುವ ಸೈಬರ್ ವಿಷವನ್ನು ಎದುರಿಸುವ ಉಸ್ತುವಾರಿ ವಹಿಸಿದ್ದಾರೆ. ”ಮಾಸ್ಟರ್” ಸ್ವಯಂಸೇವಕಳಾಗಿ ಅವರ ಜವಾಬ್ದಾರಿಗಳು ರಾಜ್ಯದಾದ್ಯಂತ ನಾಡಿಮಿಡಿತವನ್ನು ಪಡೆಯಲು ಸಹಾಯ ಮಾಡುತ್ತದೆ ಎನ್ನುತ್ತಾರೆ. ಇದು ಬಹುಮುಖಿ ಕಾರ್ಯಾಚರಣೆಯಾಗಿದ್ದು, DIPR ಕಾರ್ಯದರ್ಶಿ ಪಿ ಮಣಿವಣ್ಣನ್ ಅವರು ಪ್ರಾರಂಭಿಸಿದ ಪರಿಕಲ್ಪನೆಯಾಗಿದೆ.

ಇತ್ತೀಚಿನ ದಿನಗಳಲ್ಲಿ ಕರೋನಾ ವಾರಿಯರ್ಸ್‌ ಎದುರಿಸಿದ ದೊಡ್ಡ ಸವಾಲು ಎಂದರೆ ತಬ್ಲಿಘಿ ಜಮಾಅತ್ ಪ್ರತಿನಿಧಿಗಳ ಬಗ್ಗೆ ತಪ್ಪು ಮಾಹಿತಿಗಳನ್ನು ಹರಡುವುದಾಗಿದೆ. ಸಹನಾ “ಪ್ರತಿ ಜಿಲ್ಲೆ ಮತ್ತು ವಿಭಾಗೀಯ ಗುಂಪುಗಳಲ್ಲಿ ಎಲ್ಲಾ ಧರ್ಮಗಳ ಕರೋನಾ ವಾರಿಯರ್ಸ್ ಅನ್ನು ಹೊಂದಿದ್ದು, ಇದು ಸುಳ್ಳುಗಳನ್ನು ಬಿಚ್ಚಿಡಲು ಹಾಗೂ ವಾಸ್ತವಿಕ ಮಾಹಿತಿಯನ್ನು ಸಾರ್ವಜನಿಕ ವಲಯದಲ್ಲಿ ಹರಡಲು ಒಂದು ಅತ್ಯುತ್ತಮ ಕಾರ್ಯವಾಗಿದೆ” ಎಂದು ಹೇಳುತ್ತಾರೆ.

ಈಗಾಗಲೇ ಎಲ್ಲಾ ರಾಜ್ಯಗಳಲ್ಲಿಯೂ ಅಲ್ಲಿನ ಪೊಲೀಸರೇ ಈ ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚುವ ಕೆಲಸದಲ್ಲಿ ನಿರತರಾಗಿದ್ದಾರೆ. ಉತ್ತರಪ್ರದೇಶದಲ್ಲಿ ಮುಖ್ಯವಾಹಿನಿ ಮಾಧ್ಯಮಗಳಿಂದಲೇ ಅತಿ ಹೆಚ್ಚಿನ ಸುದ್ದಿಗಳ ಪ್ರಸಾರವಾದ ಅಲ್ಲಿನ ಪೊಲೀಸರು ನಿಜ ತಿಳಿಸಿದ್ದಾರೆ. ಕೆಲ ಉದಾಹರಣೆಗಳು ಇಲ್ಲಿವೆ ನೋಡಿ.

ದಕ್ಷಿಣ ಕನ್ನಡದ ತಂಡದ ಪ್ರಮುಖ ಸದಸ್ಯ ನರೇನ್ ಕೊಡುವಾಟ್ಟಟ್ ಯಾವಾಗಲೂ ಆನ್‌ಲೈನ್‌ನಲ್ಲಿ ವಾಟ್ಸಾಪ್‌ನ್ನು ನೋಡುತ್ತಾರೆ. ಅಧೀಕೃತವಲ್ಲದ ನಕಲಿ ಸುದ್ದಿಗಳನ್ನು ಕರೋನಾ ವಾರಿಯರ್ಸ್ ಬಸ್ಟ್ ಮಾಡಿದ್ದಾರೆ ಎಂದು ಪೋಸ್ಟ್ ಮಾಡುವಲ್ಲಿ ಅವರು ನಿರತರಾಗಿರುತ್ತಾರೆ. “ಈ ಸಮಯದಲ್ಲಿ ಜನರು ಅಧಿಕೃತ ಮಾಹಿತಿಯನ್ನು ಪಡೆಯುವುದು ಬಹಳ ಮುಖ್ಯ, ಅವುಗಳಲ್ಲಿ ಕೆಲವು ಸಂಪೂರ್ಣವಾಗಿ ಕೋಮುವಾದಮಯವಾಗಿದೆ” ಎಂದು ಅವರು ಹೇಳುತ್ತಾರೆ. ಲಾಕ್ ಡೌನ್ ಮಧ್ಯೆ ಜನರ ಮನಸ್ಸಿನಲ್ಲಿನ ಗೊಂದಲಗಳನ್ನು ನಿವಾರಿಸಲು ಸರ್ಕಾರದ ವಿವಿಧ ಬುಲೆಟಿನ್‌ಗಳನ್ನು, ಆದೇಶಗಳನ್ನು ಪ್ರಸಾರ ಮಾಡಲಾಗುತ್ತದೆ ಎಂದು ಅವರು ಹೇಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...