Homeಮುಖಪುಟಕೊರೋನಾ ವೈರಸ್ ಬಗ್ಗೆ ಹರಡುತ್ತಿರುವ ನಕಲಿ ಸುದ್ದಿಗಳ ವಿರುದ್ಧ ಸೈಬರ್ ವಾರಿಯರ್ಸ್ ಅಸ್ತಿತ್ವಕ್ಕೆ

ಕೊರೋನಾ ವೈರಸ್ ಬಗ್ಗೆ ಹರಡುತ್ತಿರುವ ನಕಲಿ ಸುದ್ದಿಗಳ ವಿರುದ್ಧ ಸೈಬರ್ ವಾರಿಯರ್ಸ್ ಅಸ್ತಿತ್ವಕ್ಕೆ

- Advertisement -
- Advertisement -

ಸಾಮಾಜಿಕ ಜಾಲತಾಣದಲ್ಲಿ ಕೊರೊನಾ ವಿರುದ್ದ ಹರಡುತ್ತಿರುವ ಸುಳ್ಳು ಸುದ್ದಿಗಳ ವಿರುದ್ದ ಹೋರಾಡಲು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸೈಬರ್ ಯೋಧರನ್ನು ನೇಮಿಸಿದೆ.

ಕೊರೊನಾ ಸಾಂಕ್ರಾಮಿಕದ ಬಗ್ಗೆ ವಾಟ್ಸಾಪ್, ಫೇಸ್‌ಬುಕ್‌ಗಳಲ್ಲಿ ಹರಡುತ್ತಿರುವ ಬಹಳಷ್ಟು ಸುಳ್ಳುಗಳ ವಿರುದ್ದ ಈ ಸೈಬರ್ ವಿಂಗ್ ಹೋರಾಡುತ್ತಿದೆ. ವೈದ್ಯರು, ದಾದಿಯರು ಹಾಗೂ ಇತರ ಮುಂಚೂಣಿಯಲ್ಲಿರುವ ಆರೋಗ್ಯ ಕಾರ್ಯಕರ್ತರಿಗಿಂತ ಭಿನ್ನವಾಗಿ ಕೊರೊನಾ ವೈರಸ್ ವಿರುದ್ದ ಈ ‘ಸೈಬರ್’ ಯೋಧರು ಆನ್‌ಲೈನ್‌ನಲ್ಲಿ ಹರಡುತ್ತಿರುವ ನಕಲಿ ಮಾಹಿತಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಇವರು ದೃಢೀಕೃತ ಮಾಹಿತಿಯನ್ನು ನೀಡುತ್ತಿದ್ದಾರೆ.

ಕರ್ನಾಟಕದ ಎಂಟು ”ಕರೋನಾ ವಾರಿಯರ್ ಮಾಸ್ಟರ್” ಸ್ವಯಂಸೇವಕರಲ್ಲಿ ಒಬ್ಬರಾದ ಸುಳ್ಯದ ಸಹನಾ ಎ. ತನ್ನ ಸ್ವಂತ ಜಿಲ್ಲೆಯಾದ ದಕ್ಷಿಣ ಕನ್ನಡ ಮತ್ತು ಪಕ್ಕದ ಉಡುಪಿಯಲ್ಲಿ ಕೊರೊನಾ ಹೆಸರಲ್ಲಿ ಹರಡುವ ಸೈಬರ್ ವಿಷವನ್ನು ಎದುರಿಸುವ ಉಸ್ತುವಾರಿ ವಹಿಸಿದ್ದಾರೆ. ”ಮಾಸ್ಟರ್” ಸ್ವಯಂಸೇವಕಳಾಗಿ ಅವರ ಜವಾಬ್ದಾರಿಗಳು ರಾಜ್ಯದಾದ್ಯಂತ ನಾಡಿಮಿಡಿತವನ್ನು ಪಡೆಯಲು ಸಹಾಯ ಮಾಡುತ್ತದೆ ಎನ್ನುತ್ತಾರೆ. ಇದು ಬಹುಮುಖಿ ಕಾರ್ಯಾಚರಣೆಯಾಗಿದ್ದು, DIPR ಕಾರ್ಯದರ್ಶಿ ಪಿ ಮಣಿವಣ್ಣನ್ ಅವರು ಪ್ರಾರಂಭಿಸಿದ ಪರಿಕಲ್ಪನೆಯಾಗಿದೆ.

ಇತ್ತೀಚಿನ ದಿನಗಳಲ್ಲಿ ಕರೋನಾ ವಾರಿಯರ್ಸ್‌ ಎದುರಿಸಿದ ದೊಡ್ಡ ಸವಾಲು ಎಂದರೆ ತಬ್ಲಿಘಿ ಜಮಾಅತ್ ಪ್ರತಿನಿಧಿಗಳ ಬಗ್ಗೆ ತಪ್ಪು ಮಾಹಿತಿಗಳನ್ನು ಹರಡುವುದಾಗಿದೆ. ಸಹನಾ “ಪ್ರತಿ ಜಿಲ್ಲೆ ಮತ್ತು ವಿಭಾಗೀಯ ಗುಂಪುಗಳಲ್ಲಿ ಎಲ್ಲಾ ಧರ್ಮಗಳ ಕರೋನಾ ವಾರಿಯರ್ಸ್ ಅನ್ನು ಹೊಂದಿದ್ದು, ಇದು ಸುಳ್ಳುಗಳನ್ನು ಬಿಚ್ಚಿಡಲು ಹಾಗೂ ವಾಸ್ತವಿಕ ಮಾಹಿತಿಯನ್ನು ಸಾರ್ವಜನಿಕ ವಲಯದಲ್ಲಿ ಹರಡಲು ಒಂದು ಅತ್ಯುತ್ತಮ ಕಾರ್ಯವಾಗಿದೆ” ಎಂದು ಹೇಳುತ್ತಾರೆ.

ಈಗಾಗಲೇ ಎಲ್ಲಾ ರಾಜ್ಯಗಳಲ್ಲಿಯೂ ಅಲ್ಲಿನ ಪೊಲೀಸರೇ ಈ ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚುವ ಕೆಲಸದಲ್ಲಿ ನಿರತರಾಗಿದ್ದಾರೆ. ಉತ್ತರಪ್ರದೇಶದಲ್ಲಿ ಮುಖ್ಯವಾಹಿನಿ ಮಾಧ್ಯಮಗಳಿಂದಲೇ ಅತಿ ಹೆಚ್ಚಿನ ಸುದ್ದಿಗಳ ಪ್ರಸಾರವಾದ ಅಲ್ಲಿನ ಪೊಲೀಸರು ನಿಜ ತಿಳಿಸಿದ್ದಾರೆ. ಕೆಲ ಉದಾಹರಣೆಗಳು ಇಲ್ಲಿವೆ ನೋಡಿ.

ದಕ್ಷಿಣ ಕನ್ನಡದ ತಂಡದ ಪ್ರಮುಖ ಸದಸ್ಯ ನರೇನ್ ಕೊಡುವಾಟ್ಟಟ್ ಯಾವಾಗಲೂ ಆನ್‌ಲೈನ್‌ನಲ್ಲಿ ವಾಟ್ಸಾಪ್‌ನ್ನು ನೋಡುತ್ತಾರೆ. ಅಧೀಕೃತವಲ್ಲದ ನಕಲಿ ಸುದ್ದಿಗಳನ್ನು ಕರೋನಾ ವಾರಿಯರ್ಸ್ ಬಸ್ಟ್ ಮಾಡಿದ್ದಾರೆ ಎಂದು ಪೋಸ್ಟ್ ಮಾಡುವಲ್ಲಿ ಅವರು ನಿರತರಾಗಿರುತ್ತಾರೆ. “ಈ ಸಮಯದಲ್ಲಿ ಜನರು ಅಧಿಕೃತ ಮಾಹಿತಿಯನ್ನು ಪಡೆಯುವುದು ಬಹಳ ಮುಖ್ಯ, ಅವುಗಳಲ್ಲಿ ಕೆಲವು ಸಂಪೂರ್ಣವಾಗಿ ಕೋಮುವಾದಮಯವಾಗಿದೆ” ಎಂದು ಅವರು ಹೇಳುತ್ತಾರೆ. ಲಾಕ್ ಡೌನ್ ಮಧ್ಯೆ ಜನರ ಮನಸ್ಸಿನಲ್ಲಿನ ಗೊಂದಲಗಳನ್ನು ನಿವಾರಿಸಲು ಸರ್ಕಾರದ ವಿವಿಧ ಬುಲೆಟಿನ್‌ಗಳನ್ನು, ಆದೇಶಗಳನ್ನು ಪ್ರಸಾರ ಮಾಡಲಾಗುತ್ತದೆ ಎಂದು ಅವರು ಹೇಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...