Homeಮುಖಪುಟಕೊರೋನಾ ವೈರಸ್ ಬಗ್ಗೆ ಹರಡುತ್ತಿರುವ ನಕಲಿ ಸುದ್ದಿಗಳ ವಿರುದ್ಧ ಸೈಬರ್ ವಾರಿಯರ್ಸ್ ಅಸ್ತಿತ್ವಕ್ಕೆ

ಕೊರೋನಾ ವೈರಸ್ ಬಗ್ಗೆ ಹರಡುತ್ತಿರುವ ನಕಲಿ ಸುದ್ದಿಗಳ ವಿರುದ್ಧ ಸೈಬರ್ ವಾರಿಯರ್ಸ್ ಅಸ್ತಿತ್ವಕ್ಕೆ

- Advertisement -
- Advertisement -

ಸಾಮಾಜಿಕ ಜಾಲತಾಣದಲ್ಲಿ ಕೊರೊನಾ ವಿರುದ್ದ ಹರಡುತ್ತಿರುವ ಸುಳ್ಳು ಸುದ್ದಿಗಳ ವಿರುದ್ದ ಹೋರಾಡಲು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸೈಬರ್ ಯೋಧರನ್ನು ನೇಮಿಸಿದೆ.

ಕೊರೊನಾ ಸಾಂಕ್ರಾಮಿಕದ ಬಗ್ಗೆ ವಾಟ್ಸಾಪ್, ಫೇಸ್‌ಬುಕ್‌ಗಳಲ್ಲಿ ಹರಡುತ್ತಿರುವ ಬಹಳಷ್ಟು ಸುಳ್ಳುಗಳ ವಿರುದ್ದ ಈ ಸೈಬರ್ ವಿಂಗ್ ಹೋರಾಡುತ್ತಿದೆ. ವೈದ್ಯರು, ದಾದಿಯರು ಹಾಗೂ ಇತರ ಮುಂಚೂಣಿಯಲ್ಲಿರುವ ಆರೋಗ್ಯ ಕಾರ್ಯಕರ್ತರಿಗಿಂತ ಭಿನ್ನವಾಗಿ ಕೊರೊನಾ ವೈರಸ್ ವಿರುದ್ದ ಈ ‘ಸೈಬರ್’ ಯೋಧರು ಆನ್‌ಲೈನ್‌ನಲ್ಲಿ ಹರಡುತ್ತಿರುವ ನಕಲಿ ಮಾಹಿತಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಇವರು ದೃಢೀಕೃತ ಮಾಹಿತಿಯನ್ನು ನೀಡುತ್ತಿದ್ದಾರೆ.

ಕರ್ನಾಟಕದ ಎಂಟು ”ಕರೋನಾ ವಾರಿಯರ್ ಮಾಸ್ಟರ್” ಸ್ವಯಂಸೇವಕರಲ್ಲಿ ಒಬ್ಬರಾದ ಸುಳ್ಯದ ಸಹನಾ ಎ. ತನ್ನ ಸ್ವಂತ ಜಿಲ್ಲೆಯಾದ ದಕ್ಷಿಣ ಕನ್ನಡ ಮತ್ತು ಪಕ್ಕದ ಉಡುಪಿಯಲ್ಲಿ ಕೊರೊನಾ ಹೆಸರಲ್ಲಿ ಹರಡುವ ಸೈಬರ್ ವಿಷವನ್ನು ಎದುರಿಸುವ ಉಸ್ತುವಾರಿ ವಹಿಸಿದ್ದಾರೆ. ”ಮಾಸ್ಟರ್” ಸ್ವಯಂಸೇವಕಳಾಗಿ ಅವರ ಜವಾಬ್ದಾರಿಗಳು ರಾಜ್ಯದಾದ್ಯಂತ ನಾಡಿಮಿಡಿತವನ್ನು ಪಡೆಯಲು ಸಹಾಯ ಮಾಡುತ್ತದೆ ಎನ್ನುತ್ತಾರೆ. ಇದು ಬಹುಮುಖಿ ಕಾರ್ಯಾಚರಣೆಯಾಗಿದ್ದು, DIPR ಕಾರ್ಯದರ್ಶಿ ಪಿ ಮಣಿವಣ್ಣನ್ ಅವರು ಪ್ರಾರಂಭಿಸಿದ ಪರಿಕಲ್ಪನೆಯಾಗಿದೆ.

ಇತ್ತೀಚಿನ ದಿನಗಳಲ್ಲಿ ಕರೋನಾ ವಾರಿಯರ್ಸ್‌ ಎದುರಿಸಿದ ದೊಡ್ಡ ಸವಾಲು ಎಂದರೆ ತಬ್ಲಿಘಿ ಜಮಾಅತ್ ಪ್ರತಿನಿಧಿಗಳ ಬಗ್ಗೆ ತಪ್ಪು ಮಾಹಿತಿಗಳನ್ನು ಹರಡುವುದಾಗಿದೆ. ಸಹನಾ “ಪ್ರತಿ ಜಿಲ್ಲೆ ಮತ್ತು ವಿಭಾಗೀಯ ಗುಂಪುಗಳಲ್ಲಿ ಎಲ್ಲಾ ಧರ್ಮಗಳ ಕರೋನಾ ವಾರಿಯರ್ಸ್ ಅನ್ನು ಹೊಂದಿದ್ದು, ಇದು ಸುಳ್ಳುಗಳನ್ನು ಬಿಚ್ಚಿಡಲು ಹಾಗೂ ವಾಸ್ತವಿಕ ಮಾಹಿತಿಯನ್ನು ಸಾರ್ವಜನಿಕ ವಲಯದಲ್ಲಿ ಹರಡಲು ಒಂದು ಅತ್ಯುತ್ತಮ ಕಾರ್ಯವಾಗಿದೆ” ಎಂದು ಹೇಳುತ್ತಾರೆ.

ಈಗಾಗಲೇ ಎಲ್ಲಾ ರಾಜ್ಯಗಳಲ್ಲಿಯೂ ಅಲ್ಲಿನ ಪೊಲೀಸರೇ ಈ ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚುವ ಕೆಲಸದಲ್ಲಿ ನಿರತರಾಗಿದ್ದಾರೆ. ಉತ್ತರಪ್ರದೇಶದಲ್ಲಿ ಮುಖ್ಯವಾಹಿನಿ ಮಾಧ್ಯಮಗಳಿಂದಲೇ ಅತಿ ಹೆಚ್ಚಿನ ಸುದ್ದಿಗಳ ಪ್ರಸಾರವಾದ ಅಲ್ಲಿನ ಪೊಲೀಸರು ನಿಜ ತಿಳಿಸಿದ್ದಾರೆ. ಕೆಲ ಉದಾಹರಣೆಗಳು ಇಲ್ಲಿವೆ ನೋಡಿ.

ದಕ್ಷಿಣ ಕನ್ನಡದ ತಂಡದ ಪ್ರಮುಖ ಸದಸ್ಯ ನರೇನ್ ಕೊಡುವಾಟ್ಟಟ್ ಯಾವಾಗಲೂ ಆನ್‌ಲೈನ್‌ನಲ್ಲಿ ವಾಟ್ಸಾಪ್‌ನ್ನು ನೋಡುತ್ತಾರೆ. ಅಧೀಕೃತವಲ್ಲದ ನಕಲಿ ಸುದ್ದಿಗಳನ್ನು ಕರೋನಾ ವಾರಿಯರ್ಸ್ ಬಸ್ಟ್ ಮಾಡಿದ್ದಾರೆ ಎಂದು ಪೋಸ್ಟ್ ಮಾಡುವಲ್ಲಿ ಅವರು ನಿರತರಾಗಿರುತ್ತಾರೆ. “ಈ ಸಮಯದಲ್ಲಿ ಜನರು ಅಧಿಕೃತ ಮಾಹಿತಿಯನ್ನು ಪಡೆಯುವುದು ಬಹಳ ಮುಖ್ಯ, ಅವುಗಳಲ್ಲಿ ಕೆಲವು ಸಂಪೂರ್ಣವಾಗಿ ಕೋಮುವಾದಮಯವಾಗಿದೆ” ಎಂದು ಅವರು ಹೇಳುತ್ತಾರೆ. ಲಾಕ್ ಡೌನ್ ಮಧ್ಯೆ ಜನರ ಮನಸ್ಸಿನಲ್ಲಿನ ಗೊಂದಲಗಳನ್ನು ನಿವಾರಿಸಲು ಸರ್ಕಾರದ ವಿವಿಧ ಬುಲೆಟಿನ್‌ಗಳನ್ನು, ಆದೇಶಗಳನ್ನು ಪ್ರಸಾರ ಮಾಡಲಾಗುತ್ತದೆ ಎಂದು ಅವರು ಹೇಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಡಿಎ ಸೇರಿದರೆ ಪ್ರಧಾನಿ ಮೋದಿಯಿಂದ ಕೇರಳಕ್ಕೆ ದೊಡ್ಡ ಪ್ಯಾಕೇಜ್: ಪಿಣರಾಯಿ ವಿಜಯನ್‌ಗೆ ಆಫರ್ ಕೊಟ್ಟ ಅಠಾವಳೆ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಜೆಪಿ ನೇತೃತ್ವದ ಎನ್‌ಡಿಎ ಸೇರಬೇಕೆಂದು ಕೇಂದ್ರ ರಾಜ್ಯ ಸಚಿವ ರಾಮದಾಸ್ ಬಂಡು ಅಠಾವಳೆ ಬುಧವಾರ ಸಲಹೆ ನೀಡಿದ್ದಾರೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ...

ಸದನದಲ್ಲೇ ನೀಲಿ ಚಿತ್ರ ನೋಡಿ ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಬಿಜೆಪಿಗೆ ಹರಿಪ್ರಸಾದ್ ತಿರುಗೇಟು

ಸದನದ ಶಿಸ್ತು, ಘನತೆ, ಗೌರವದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಕಿಂಚಿತ್ತಾದರೂ ನೈತಿಕತೆ ಇದೆಯೇ? ಎಂದು ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ. ಗುರುವಾರ (ಜ.22) ವಿಶೇಷ ಅಧಿವೇಶನದ ವೇಳೆ...

ಆಂಧ್ರದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧ?

ಕಳೆದ ತಿಂಗಳು ಆಸ್ಟ್ರೇಲಿಯಾ ಜಾರಿಗೆ ತಂದಂತೆಯೇ, 16 ವರ್ಷದೊಳಗಿನ ಮಕ್ಕಳಿಗಾಗಿ ಸರ್ಕಾರವು ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ಯೋಜಿಸುತ್ತಿದೆ ಎಂದು ಆಂಧ್ರಪ್ರದೇಶ ಸಚಿವ ನಾರಾ ಲೋಕೇಶ್ ಬಹಿರಂಗಪಡಿಸಿದ್ದಾರೆ. ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ...

ಜಾರ್ಖಂಡ್| ಚೈಬಾಸಾ ಎನ್‌ಕೌಂಟರ್‌; ಕುಖ್ಯಾತ ಮಾವೋವಾದಿ ನಾಯಕ ‘ಅನಲ್ ದಾ’ ಸೇರಿ 8 ನಕ್ಸಲರ ಹತ್ಯೆ

ಜಾರ್ಖಂಡ್ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಿದೆ. ಚೈಬಾಸಾ ಜಿಲ್ಲೆಯಲ್ಲಿ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ, ಭದ್ರತಾ ಪಡೆಗಳು 8 ನಕ್ಸಲರನ್ನು ಕೊಂದಿವೆ....

‘ಕರ್ನಾಟಕವನ್ನು ಎಲ್ಲಾ ರೀತಿಯಲ್ಲಿ ಕಡೆಗಣಿಸುತ್ತಿದ್ದ ಬಿಜೆಪಿ ಈಗ ರಾಜ್ಯಪಾಲರ ಮೂಲಕವೇ ಕನ್ನಡಿಗರನ್ನು ಅವಮಾನಿಸಿದೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಿಜೆಪಿ ಕನ್ನಡಿಗರನ್ನು ಅವಮಾನಿಸುವ ಪ್ರಕ್ರಿಯೆ ಮುಂದುವರೆದಿದೆ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.  2026 ಜನವರಿ 22ರ, ಗುರುವಾರ ಸದನದಲ್ಲಿ ನಡೆದ ಬೆಳವಣಿಗೆಗಳ ಕುರಿತು ತಮ್ಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಖರ್ಗೆ, ‘ಸರ್ಕಾರದ ಭಾಷಣವನ್ನು...

ಭೋಜಶಾಲಾ-ಕಮಾಲ್ ಮೌಲಾ ಮಸೀದಿ ವಿವಾದ : ವಸಂತ ಪಂಚಮಿ ಪೂಜೆ, ಜುಮಾ ನಮಾಜ್ ಶಾಂತಿಯುತವಾಗಿ ನಡೆಸಲು ಸುಪ್ರೀಂ ಆದೇಶ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಭೋಜ ಶಾಲಾ-ಕಮಾಲ್ ಮೌಲಾ ಸಂಕೀರ್ಣದಲ್ಲಿ ವಸಂತ ಪಂಚಮಿ ಪೂಜೆ ಮತ್ತು ಶುಕ್ರವಾರದ ಜುಮಾ ನಮಾಝ್ ಎರಡನ್ನೂ ಶಾಂತಿಯುತವಾಗಿ ನಡೆಸುವಂತೆ ನೋಡಿಕೊಳ್ಳಲು ಸುಪ್ರೀಂ ಕೋರ್ಟ್ ಗುರುವಾರ (ಜ.22) ನಿರ್ದೇಶನಗಳನ್ನು ನೀಡಿದೆ. ಭೋಜ...

ಜಮ್ಮು-ಕಾಶ್ಮೀರ| 200 ಅಡಿ ಆಳದ ಕಂದಕಕ್ಕೆ ಉರುಳಿದ ವಾಹನ; 10 ಜನ ಸೇನಾ ಸಿಬ್ಬಂದಿ ಸಾವು

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾ ಪ್ರದೇಶದಲ್ಲಿ 200 ಅಡಿ ಆಳದ ಕಂದಕಕ್ಕೆ ವಾಹನ ಉರುಳಿ 10 ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಒಟ್ಟು 17 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸೇನಾ...

ಉತ್ತರ ಪ್ರದೇಶ ಮರ್ಯಾದೆಗೇಡು ಹತ್ಯೆ; ಅಂತರ್ಧರ್ಮೀಯ ಜೋಡಿಯನ್ನು ಕೊಂದ ಯುವತಿ ಸಹೋದರರು

ಉತ್ತರ ಪ್ರದೇಶದ ಮೊರಾದಾಬಾದ್‌ನ ಕಾಡಿನಲ್ಲಿ ಅಂತರ್ಧರ್ಮೀಯ ಜೋಡಿಯ ಶವ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಆಕೆಯ ಸಹೋದರರು ಮರ್ಯಾದೆಗೇಡು ಹತ್ಯೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿಯನ್ನು 19 ವರ್ಷದ ಕಾಜಲ್ ಎಂದು ಗುರುತಿಸಲಾಗಿದ್ದು, ಮೃತ...

ತೀವ್ರ ವಿರೋಧದ ನಂತರ ಇಸ್ಲಾಮೋಫೋಬಿಕ್ ಹೇಳಿಕೆ ಹಿಂಪಡೆದು, ಕ್ಷಮೆಯಾಚಿಸಿದ ಕೇರಳದ ಸಿಪಿಐ(ಎಂ) ಸಚಿವ ಸಾಜಿ ಚೆರಿಯನ್

ಇತ್ತೀಚಿನ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮುಸ್ಲಿಂ ವಿಜೇತರ ಬಗ್ಗೆ ತಮ್ಮ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ನೀಡಿದ್ದ ಸಿಪಿಐ(ಎಂ) ಹಿರಿಯ ನಾಯಕ ಮತ್ತು ಕೇರಳ ಸಚಿವ ಸಾಜಿ ಚೆರಿಯನ್ ಬುಧವಾರ ತಮ್ಮ ಹೇಳಿಕೆಯನ್ನು  ಹಿಂತೆಗೆದುಕೊಂಡಿದ್ದಾರೆ. ಪಕ್ಷ,...

ರಾಜ್ಯಪಾಲರಿಂದ ಸಂವಿಧಾನದ ವಿಧಿಗಳ ಉಲ್ಲಂಘನೆ; ಜನಪ್ರತಿನಿಧಿಗಳ ಸಭೆಯನ್ನು ಅವಮಾನಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

"ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ. ಇದನ್ನು ನಾವು ಖಂಡಿಸುತ್ತೇವೆ. ಈ...