Homeಮುಖಪುಟಕೊರೋನಾ ವೈರಸ್ ಬಗ್ಗೆ ಹರಡುತ್ತಿರುವ ನಕಲಿ ಸುದ್ದಿಗಳ ವಿರುದ್ಧ ಸೈಬರ್ ವಾರಿಯರ್ಸ್ ಅಸ್ತಿತ್ವಕ್ಕೆ

ಕೊರೋನಾ ವೈರಸ್ ಬಗ್ಗೆ ಹರಡುತ್ತಿರುವ ನಕಲಿ ಸುದ್ದಿಗಳ ವಿರುದ್ಧ ಸೈಬರ್ ವಾರಿಯರ್ಸ್ ಅಸ್ತಿತ್ವಕ್ಕೆ

- Advertisement -
- Advertisement -

ಸಾಮಾಜಿಕ ಜಾಲತಾಣದಲ್ಲಿ ಕೊರೊನಾ ವಿರುದ್ದ ಹರಡುತ್ತಿರುವ ಸುಳ್ಳು ಸುದ್ದಿಗಳ ವಿರುದ್ದ ಹೋರಾಡಲು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸೈಬರ್ ಯೋಧರನ್ನು ನೇಮಿಸಿದೆ.

ಕೊರೊನಾ ಸಾಂಕ್ರಾಮಿಕದ ಬಗ್ಗೆ ವಾಟ್ಸಾಪ್, ಫೇಸ್‌ಬುಕ್‌ಗಳಲ್ಲಿ ಹರಡುತ್ತಿರುವ ಬಹಳಷ್ಟು ಸುಳ್ಳುಗಳ ವಿರುದ್ದ ಈ ಸೈಬರ್ ವಿಂಗ್ ಹೋರಾಡುತ್ತಿದೆ. ವೈದ್ಯರು, ದಾದಿಯರು ಹಾಗೂ ಇತರ ಮುಂಚೂಣಿಯಲ್ಲಿರುವ ಆರೋಗ್ಯ ಕಾರ್ಯಕರ್ತರಿಗಿಂತ ಭಿನ್ನವಾಗಿ ಕೊರೊನಾ ವೈರಸ್ ವಿರುದ್ದ ಈ ‘ಸೈಬರ್’ ಯೋಧರು ಆನ್‌ಲೈನ್‌ನಲ್ಲಿ ಹರಡುತ್ತಿರುವ ನಕಲಿ ಮಾಹಿತಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಇವರು ದೃಢೀಕೃತ ಮಾಹಿತಿಯನ್ನು ನೀಡುತ್ತಿದ್ದಾರೆ.

ಕರ್ನಾಟಕದ ಎಂಟು ”ಕರೋನಾ ವಾರಿಯರ್ ಮಾಸ್ಟರ್” ಸ್ವಯಂಸೇವಕರಲ್ಲಿ ಒಬ್ಬರಾದ ಸುಳ್ಯದ ಸಹನಾ ಎ. ತನ್ನ ಸ್ವಂತ ಜಿಲ್ಲೆಯಾದ ದಕ್ಷಿಣ ಕನ್ನಡ ಮತ್ತು ಪಕ್ಕದ ಉಡುಪಿಯಲ್ಲಿ ಕೊರೊನಾ ಹೆಸರಲ್ಲಿ ಹರಡುವ ಸೈಬರ್ ವಿಷವನ್ನು ಎದುರಿಸುವ ಉಸ್ತುವಾರಿ ವಹಿಸಿದ್ದಾರೆ. ”ಮಾಸ್ಟರ್” ಸ್ವಯಂಸೇವಕಳಾಗಿ ಅವರ ಜವಾಬ್ದಾರಿಗಳು ರಾಜ್ಯದಾದ್ಯಂತ ನಾಡಿಮಿಡಿತವನ್ನು ಪಡೆಯಲು ಸಹಾಯ ಮಾಡುತ್ತದೆ ಎನ್ನುತ್ತಾರೆ. ಇದು ಬಹುಮುಖಿ ಕಾರ್ಯಾಚರಣೆಯಾಗಿದ್ದು, DIPR ಕಾರ್ಯದರ್ಶಿ ಪಿ ಮಣಿವಣ್ಣನ್ ಅವರು ಪ್ರಾರಂಭಿಸಿದ ಪರಿಕಲ್ಪನೆಯಾಗಿದೆ.

ಇತ್ತೀಚಿನ ದಿನಗಳಲ್ಲಿ ಕರೋನಾ ವಾರಿಯರ್ಸ್‌ ಎದುರಿಸಿದ ದೊಡ್ಡ ಸವಾಲು ಎಂದರೆ ತಬ್ಲಿಘಿ ಜಮಾಅತ್ ಪ್ರತಿನಿಧಿಗಳ ಬಗ್ಗೆ ತಪ್ಪು ಮಾಹಿತಿಗಳನ್ನು ಹರಡುವುದಾಗಿದೆ. ಸಹನಾ “ಪ್ರತಿ ಜಿಲ್ಲೆ ಮತ್ತು ವಿಭಾಗೀಯ ಗುಂಪುಗಳಲ್ಲಿ ಎಲ್ಲಾ ಧರ್ಮಗಳ ಕರೋನಾ ವಾರಿಯರ್ಸ್ ಅನ್ನು ಹೊಂದಿದ್ದು, ಇದು ಸುಳ್ಳುಗಳನ್ನು ಬಿಚ್ಚಿಡಲು ಹಾಗೂ ವಾಸ್ತವಿಕ ಮಾಹಿತಿಯನ್ನು ಸಾರ್ವಜನಿಕ ವಲಯದಲ್ಲಿ ಹರಡಲು ಒಂದು ಅತ್ಯುತ್ತಮ ಕಾರ್ಯವಾಗಿದೆ” ಎಂದು ಹೇಳುತ್ತಾರೆ.

ಈಗಾಗಲೇ ಎಲ್ಲಾ ರಾಜ್ಯಗಳಲ್ಲಿಯೂ ಅಲ್ಲಿನ ಪೊಲೀಸರೇ ಈ ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚುವ ಕೆಲಸದಲ್ಲಿ ನಿರತರಾಗಿದ್ದಾರೆ. ಉತ್ತರಪ್ರದೇಶದಲ್ಲಿ ಮುಖ್ಯವಾಹಿನಿ ಮಾಧ್ಯಮಗಳಿಂದಲೇ ಅತಿ ಹೆಚ್ಚಿನ ಸುದ್ದಿಗಳ ಪ್ರಸಾರವಾದ ಅಲ್ಲಿನ ಪೊಲೀಸರು ನಿಜ ತಿಳಿಸಿದ್ದಾರೆ. ಕೆಲ ಉದಾಹರಣೆಗಳು ಇಲ್ಲಿವೆ ನೋಡಿ.

ದಕ್ಷಿಣ ಕನ್ನಡದ ತಂಡದ ಪ್ರಮುಖ ಸದಸ್ಯ ನರೇನ್ ಕೊಡುವಾಟ್ಟಟ್ ಯಾವಾಗಲೂ ಆನ್‌ಲೈನ್‌ನಲ್ಲಿ ವಾಟ್ಸಾಪ್‌ನ್ನು ನೋಡುತ್ತಾರೆ. ಅಧೀಕೃತವಲ್ಲದ ನಕಲಿ ಸುದ್ದಿಗಳನ್ನು ಕರೋನಾ ವಾರಿಯರ್ಸ್ ಬಸ್ಟ್ ಮಾಡಿದ್ದಾರೆ ಎಂದು ಪೋಸ್ಟ್ ಮಾಡುವಲ್ಲಿ ಅವರು ನಿರತರಾಗಿರುತ್ತಾರೆ. “ಈ ಸಮಯದಲ್ಲಿ ಜನರು ಅಧಿಕೃತ ಮಾಹಿತಿಯನ್ನು ಪಡೆಯುವುದು ಬಹಳ ಮುಖ್ಯ, ಅವುಗಳಲ್ಲಿ ಕೆಲವು ಸಂಪೂರ್ಣವಾಗಿ ಕೋಮುವಾದಮಯವಾಗಿದೆ” ಎಂದು ಅವರು ಹೇಳುತ್ತಾರೆ. ಲಾಕ್ ಡೌನ್ ಮಧ್ಯೆ ಜನರ ಮನಸ್ಸಿನಲ್ಲಿನ ಗೊಂದಲಗಳನ್ನು ನಿವಾರಿಸಲು ಸರ್ಕಾರದ ವಿವಿಧ ಬುಲೆಟಿನ್‌ಗಳನ್ನು, ಆದೇಶಗಳನ್ನು ಪ್ರಸಾರ ಮಾಡಲಾಗುತ್ತದೆ ಎಂದು ಅವರು ಹೇಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...