Homeಮುಖಪುಟಕೊರೋನಾ ವೈರಸ್ ಬಗ್ಗೆ ಹರಡುತ್ತಿರುವ ನಕಲಿ ಸುದ್ದಿಗಳ ವಿರುದ್ಧ ಸೈಬರ್ ವಾರಿಯರ್ಸ್ ಅಸ್ತಿತ್ವಕ್ಕೆ

ಕೊರೋನಾ ವೈರಸ್ ಬಗ್ಗೆ ಹರಡುತ್ತಿರುವ ನಕಲಿ ಸುದ್ದಿಗಳ ವಿರುದ್ಧ ಸೈಬರ್ ವಾರಿಯರ್ಸ್ ಅಸ್ತಿತ್ವಕ್ಕೆ

- Advertisement -
- Advertisement -

ಸಾಮಾಜಿಕ ಜಾಲತಾಣದಲ್ಲಿ ಕೊರೊನಾ ವಿರುದ್ದ ಹರಡುತ್ತಿರುವ ಸುಳ್ಳು ಸುದ್ದಿಗಳ ವಿರುದ್ದ ಹೋರಾಡಲು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸೈಬರ್ ಯೋಧರನ್ನು ನೇಮಿಸಿದೆ.

ಕೊರೊನಾ ಸಾಂಕ್ರಾಮಿಕದ ಬಗ್ಗೆ ವಾಟ್ಸಾಪ್, ಫೇಸ್‌ಬುಕ್‌ಗಳಲ್ಲಿ ಹರಡುತ್ತಿರುವ ಬಹಳಷ್ಟು ಸುಳ್ಳುಗಳ ವಿರುದ್ದ ಈ ಸೈಬರ್ ವಿಂಗ್ ಹೋರಾಡುತ್ತಿದೆ. ವೈದ್ಯರು, ದಾದಿಯರು ಹಾಗೂ ಇತರ ಮುಂಚೂಣಿಯಲ್ಲಿರುವ ಆರೋಗ್ಯ ಕಾರ್ಯಕರ್ತರಿಗಿಂತ ಭಿನ್ನವಾಗಿ ಕೊರೊನಾ ವೈರಸ್ ವಿರುದ್ದ ಈ ‘ಸೈಬರ್’ ಯೋಧರು ಆನ್‌ಲೈನ್‌ನಲ್ಲಿ ಹರಡುತ್ತಿರುವ ನಕಲಿ ಮಾಹಿತಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಇವರು ದೃಢೀಕೃತ ಮಾಹಿತಿಯನ್ನು ನೀಡುತ್ತಿದ್ದಾರೆ.

ಕರ್ನಾಟಕದ ಎಂಟು ”ಕರೋನಾ ವಾರಿಯರ್ ಮಾಸ್ಟರ್” ಸ್ವಯಂಸೇವಕರಲ್ಲಿ ಒಬ್ಬರಾದ ಸುಳ್ಯದ ಸಹನಾ ಎ. ತನ್ನ ಸ್ವಂತ ಜಿಲ್ಲೆಯಾದ ದಕ್ಷಿಣ ಕನ್ನಡ ಮತ್ತು ಪಕ್ಕದ ಉಡುಪಿಯಲ್ಲಿ ಕೊರೊನಾ ಹೆಸರಲ್ಲಿ ಹರಡುವ ಸೈಬರ್ ವಿಷವನ್ನು ಎದುರಿಸುವ ಉಸ್ತುವಾರಿ ವಹಿಸಿದ್ದಾರೆ. ”ಮಾಸ್ಟರ್” ಸ್ವಯಂಸೇವಕಳಾಗಿ ಅವರ ಜವಾಬ್ದಾರಿಗಳು ರಾಜ್ಯದಾದ್ಯಂತ ನಾಡಿಮಿಡಿತವನ್ನು ಪಡೆಯಲು ಸಹಾಯ ಮಾಡುತ್ತದೆ ಎನ್ನುತ್ತಾರೆ. ಇದು ಬಹುಮುಖಿ ಕಾರ್ಯಾಚರಣೆಯಾಗಿದ್ದು, DIPR ಕಾರ್ಯದರ್ಶಿ ಪಿ ಮಣಿವಣ್ಣನ್ ಅವರು ಪ್ರಾರಂಭಿಸಿದ ಪರಿಕಲ್ಪನೆಯಾಗಿದೆ.

ಇತ್ತೀಚಿನ ದಿನಗಳಲ್ಲಿ ಕರೋನಾ ವಾರಿಯರ್ಸ್‌ ಎದುರಿಸಿದ ದೊಡ್ಡ ಸವಾಲು ಎಂದರೆ ತಬ್ಲಿಘಿ ಜಮಾಅತ್ ಪ್ರತಿನಿಧಿಗಳ ಬಗ್ಗೆ ತಪ್ಪು ಮಾಹಿತಿಗಳನ್ನು ಹರಡುವುದಾಗಿದೆ. ಸಹನಾ “ಪ್ರತಿ ಜಿಲ್ಲೆ ಮತ್ತು ವಿಭಾಗೀಯ ಗುಂಪುಗಳಲ್ಲಿ ಎಲ್ಲಾ ಧರ್ಮಗಳ ಕರೋನಾ ವಾರಿಯರ್ಸ್ ಅನ್ನು ಹೊಂದಿದ್ದು, ಇದು ಸುಳ್ಳುಗಳನ್ನು ಬಿಚ್ಚಿಡಲು ಹಾಗೂ ವಾಸ್ತವಿಕ ಮಾಹಿತಿಯನ್ನು ಸಾರ್ವಜನಿಕ ವಲಯದಲ್ಲಿ ಹರಡಲು ಒಂದು ಅತ್ಯುತ್ತಮ ಕಾರ್ಯವಾಗಿದೆ” ಎಂದು ಹೇಳುತ್ತಾರೆ.

ಈಗಾಗಲೇ ಎಲ್ಲಾ ರಾಜ್ಯಗಳಲ್ಲಿಯೂ ಅಲ್ಲಿನ ಪೊಲೀಸರೇ ಈ ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚುವ ಕೆಲಸದಲ್ಲಿ ನಿರತರಾಗಿದ್ದಾರೆ. ಉತ್ತರಪ್ರದೇಶದಲ್ಲಿ ಮುಖ್ಯವಾಹಿನಿ ಮಾಧ್ಯಮಗಳಿಂದಲೇ ಅತಿ ಹೆಚ್ಚಿನ ಸುದ್ದಿಗಳ ಪ್ರಸಾರವಾದ ಅಲ್ಲಿನ ಪೊಲೀಸರು ನಿಜ ತಿಳಿಸಿದ್ದಾರೆ. ಕೆಲ ಉದಾಹರಣೆಗಳು ಇಲ್ಲಿವೆ ನೋಡಿ.

ದಕ್ಷಿಣ ಕನ್ನಡದ ತಂಡದ ಪ್ರಮುಖ ಸದಸ್ಯ ನರೇನ್ ಕೊಡುವಾಟ್ಟಟ್ ಯಾವಾಗಲೂ ಆನ್‌ಲೈನ್‌ನಲ್ಲಿ ವಾಟ್ಸಾಪ್‌ನ್ನು ನೋಡುತ್ತಾರೆ. ಅಧೀಕೃತವಲ್ಲದ ನಕಲಿ ಸುದ್ದಿಗಳನ್ನು ಕರೋನಾ ವಾರಿಯರ್ಸ್ ಬಸ್ಟ್ ಮಾಡಿದ್ದಾರೆ ಎಂದು ಪೋಸ್ಟ್ ಮಾಡುವಲ್ಲಿ ಅವರು ನಿರತರಾಗಿರುತ್ತಾರೆ. “ಈ ಸಮಯದಲ್ಲಿ ಜನರು ಅಧಿಕೃತ ಮಾಹಿತಿಯನ್ನು ಪಡೆಯುವುದು ಬಹಳ ಮುಖ್ಯ, ಅವುಗಳಲ್ಲಿ ಕೆಲವು ಸಂಪೂರ್ಣವಾಗಿ ಕೋಮುವಾದಮಯವಾಗಿದೆ” ಎಂದು ಅವರು ಹೇಳುತ್ತಾರೆ. ಲಾಕ್ ಡೌನ್ ಮಧ್ಯೆ ಜನರ ಮನಸ್ಸಿನಲ್ಲಿನ ಗೊಂದಲಗಳನ್ನು ನಿವಾರಿಸಲು ಸರ್ಕಾರದ ವಿವಿಧ ಬುಲೆಟಿನ್‌ಗಳನ್ನು, ಆದೇಶಗಳನ್ನು ಪ್ರಸಾರ ಮಾಡಲಾಗುತ್ತದೆ ಎಂದು ಅವರು ಹೇಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...