Homeಕರ್ನಾಟಕಅತ್ಯಾಚಾರ ನಿಲ್ಲಬೇಕು, ಅತ್ಯಾಚಾರಿಗಳಿಗೆ ಶಿಕ್ಷೆಯಾಗಬೇಕು: ಸೈಕ್ಲಿಂಗ್ ಜಾಗೃತಿ ಮೂಡಿಸುತ್ತಿರುವ ಕಿರಣ್

ಅತ್ಯಾಚಾರ ನಿಲ್ಲಬೇಕು, ಅತ್ಯಾಚಾರಿಗಳಿಗೆ ಶಿಕ್ಷೆಯಾಗಬೇಕು: ಸೈಕ್ಲಿಂಗ್ ಜಾಗೃತಿ ಮೂಡಿಸುತ್ತಿರುವ ಕಿರಣ್

ರಾಜ್ಯದ 31 ಜಿಲ್ಲೆಗಳಲ್ಲಿಯೂ ಸೈಕಲ್ ಜಾಥಾ ನಡೆಸಲು ನಿರ್ಧರಿಸಿರುವ ಕಿರಣ್, ಈವರೆಗೆ 13 ಜಿಲ್ಲೆಗಳಿಗೆ ತೆರಳಿ ಮನವಿ ಪತ್ರ ಸಲ್ಲಿಸಿದ್ದಾರೆ.

- Advertisement -
- Advertisement -

“ದೇಶದಲ್ಲಿ ದಿನೇ ದಿನೇ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಹೆಣ್ಣು ಮಕ್ಕಳ ಮೇಲೆ ಶೋಷಣೆ ನಿರಂತರವಾಗಿ ನಡೆಯುತ್ತಿದೆ. ಕಳೆದ ವರ್ಷ 38 ರಿಂದ 36 ಸಾವಿರ ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ಆದರೆ, ಶಿಕ್ಷೆಯಾಗುವುದು ಮಾತ್ರ ಅದರಲ್ಲಿ ನಾಲ್ಕನೇ ಒಂದು ಭಾಗ..” ಹೀಗೆ ಮಾತನಾಡುತ್ತಾ ಸಾಗಿದ್ದು, ಅತ್ಯಾಚಾರ ನಿರ್ಮೂಲನೆ ಮತ್ತು ಅತ್ಯಾಚಾರಿಗಳಿಗೆ ಶಿಕ್ಷೆಯಾಗಬೇಕು ಎಂದು ಅಖಂಡ ಕರ್ನಾಟಕ ಸೈಕ್ಲಿಂಗ್ ಜಾಥಾ ನಡೆಸುತ್ತಿರುವ ವಿದ್ಯಾರ್ಥಿ ಕಿರಣ್ ವಿ.

ಬೆಂಗಳೂರಿನ ಬನ್ನೇರುಘಟ್ಟದ ನಿವಾಸಿ ಕಿರಣ್, ರಾಜ್ಯದ 31 ಜಿಲ್ಲೆಗಳಲ್ಲಿಯೂ ಸೈಕಲ್ ಜಾಥಾ ನಡೆಸಿ, ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆಯಾಗಬೇಕು. ಅತ್ಯಾಚಾರ ನಿರ್ಮೂಲನೆಯಾಗಬೇಕು ಎಂದು ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಅವರ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಪತ್ರ ಸಲ್ಲಿಸುತ್ತಿದ್ದಾರೆ.

ಕೆ.ಆರ್.ಸರ್ಕಲ್‌ನ ಸರ್ಕಾರಿ ಆಟ್ಸ್ ಕಾಲೇಜಿನಲ್ಲಿ ಪ್ರಥಮ ಬಿ.ಎ ವಿದ್ಯಾರ್ಥಿಯಾಗಿರುವ ಕಿರಣ್, ಕಳೆದ ಆಗಸ್ಟ್ 28ರ ಭಾನುವಾರ ಈ ಜಾಥಾ ಶುರು ಮಾಡಿದ್ದು, ಇಂದಿಗೆ  28 ದಿನಗಳು ಕಳೆದಿವೆ. ಈವರೆಗೆ 13 ಜಿಲ್ಲೆಗಳಿಗೆ ತೆರಳಿ ಮನವಿ ಪತ್ರ ಸಲ್ಲಿಸಿದ್ದಾರೆ.

ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್, ಬಿಜಾಪುರ, ಬಾಗಲಕೋಟೆ ಮತ್ತು ಕೊಪ್ಪಳ ಜಿಲ್ಲೆಗಳು ಮುಗಿದಿವೆ. ಇನ್ನು 18 ಜಿಲ್ಲೆಗಳು ಬಾಕಿ ಇವೆ. 3,800 ಕಿಲೋಮೀಟರ್ ಜಾಥಾ ನಡೆಸಲು ನಿರ್ಧರಿಸಿರುವ ಕಿರಣ್, ಇಲ್ಲಿಯವರೆಗೆ 1,600 ಕಿ.ಮೀ ದೂರ ಕ್ರಮಿಸಿದ್ದಾರೆ.

ಇದನ್ನೂ ಓದಿ: ಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೆ 1 ವರ್ಷ – ಸಂಪೂರ್ಣ ವಿವರ

ತಮ್ಮ ಜಾಥಾ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿರುವ ಕಿರಣ್, “ಹೆಣ್ಣು ಮಕ್ಕಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಲೇ ಇದೆ. ಅತ್ಯಾಚಾರ ನಡೆದರೂ ಶಿಕ್ಷೆ ಮಾತ್ರ ಪ್ರಕಟವಾಗುತ್ತಿಲ್ಲ. ಈ ಬಗ್ಗೆ ಮಾಧ್ಯಮಗಳು ಕಣ್ಣು ಮುಚ್ಚಿದರೂ, ಸಾಮಾಜಿಕ ಮಾಧ್ಯಮಗಳು, ಅಂತರ್ಜಾಲ, ವೆಬ್‌ಸೈಟ್‌ಗಳು ಮಾಹಿತಿ ನೀಡುತ್ತವೆ. ಹೀಗಾಗಿ ಒಂದೆರಡು ತಿಂಗಳು ಈ ಬಗ್ಗೆ ರಿಸರ್ಚ್ ಮಾಡಿದೆ. ಕಳೆದ 2019-2020ರಲ್ಲಿ 38 ರಿಂದ 36 ಸಾವಿರ ಅತ್ಯಾಚಾರ ಪ್ರಕರಣಗಳು ನಡೆದಿವೆ. ಆದರೆ, ಆರೋಪಿಗಳಿಗೆ ಶಿಕ್ಷೆಯಾಗಿರುವುದು ಅತೀ ಕಡಿಮೆ. ನಾಲ್ಕನೇ ಒಂದು ಭಾಗ ಮಾತ್ರ. ಹೀಗಾಗಿ ಮನನೊಂದು ಈ ಬಗ್ಗೆ ಜಾಗೃತಿ ಮೂಡಿಸಲು ಈ ಜಾಥಾ ನಡೆಸುತ್ತಿದ್ದೇನೆ” ಎಂದಿದ್ದಾರೆ.

“ನಾನು ಈ ಜಾಥಾ ಶುರು ಮಾಡಿ ಮೂರು ದಿನಕ್ಕೆ ಮೈಸೂರಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಯಿತು. ದಿನ ಒಂದಲ್ಲ ಒಂದು ಘಟನೆ ವರದಿಯಾಗುತ್ತಲೆ ಇದೆ. ಅತ್ಯಾಚಾರ ನಿರ್ಮೂಲನೆಯಾಗಬೇಕು. ಅತ್ಯಾಚಾರದ ಆರೋಪಿಗಳಿಗೆ ಗಲ್ಲುಶಿಕ್ಷೆಯಾಗಬೇಕು. ಈ ಬಗ್ಗೆ ಜಾಗೃತಿ ಮೂಡಿಸಬೇಕು. ಹೀಗಾಗಿ ಒಂದೆರಡು ಕಾಲೇಜುಗಳಿಗೂ ಭೇಟಿ ನೀಡಿ ಯುವಜನರ ಬಳಿ ಮಾತನಾಡಿದ್ದೇನೆ. ಈ ಜಾಥಾ ಮುಂದುವರೆಯಲಿದೆ” ಎಂದಿದ್ದಾರೆ ಕಿರಣ್.

ಕಿರಣ್ ತಂದೆ ಕಾರು ಚಾಲಕರಾಗಿದ್ದು, ತಾಯಿ ಮನೆ ಕೆಲಸಕ್ಕೆ ಹೋಗುತ್ತಾರೆ. ಕಿರಣ್‌ಗೆ ಒಬ್ಬ ಅಕ್ಕ ಇದ್ದಾರೆ. ಕೊರೊನಾ ಸಂಕಷ್ಟದಿಂದ ಈ ಬಾರಿ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಸಾಧ್ಯವಾಗಿಲ್ಲ. ಆದರೆ, ಈ ಒಂದು ಸೈಕ್ಲಿಂಗ್ ಜಾಥಾಕ್ಕೆ ಕೈ ಹಾಕಿದ್ದೇನೆ. ಇದನ್ನು ಮುಂದುವರೆಸುತ್ತೇನೆ. ಜೊತೆಗೆ ಮುಂದಿನ ಬಾರಿ ಪರೀಕ್ಷೆ ಬರೆಯುತ್ತೇನೆ ಎನ್ನುತ್ತಾರೆ ವಿದ್ಯಾರ್ಥಿ ಕಿರಣ್.

ಅತ್ಯಾಚಾರ ನಿರ್ಮೂಲನೆ ಬಗ್ಗೆ ಯುವಜನತೆ ಹೆಚ್ಚು ಹೆಚ್ಚು ಜಾಗೃತರಾಗಲಿ, ಹೆಣ್ಣು ಮಕ್ಕಳ ಮಲೆ ನಡೆಯುವ ದೌರ್ಜನ್ಯಗಳ ಬಗ್ಗೆ ದನಿ ಎತ್ತುವಂತಾಗಲಿ. ಕಿರಣ್ ಅಂತಹ ಯುವ ಜನರ ಸಂಖ್ಯೆ ಹೆಚ್ಚಾಗಲಿ ಅನ್ನುವುದು ನಮ್ಮ ಆಶಯ.


ಇದನ್ನೂ ಓದಿ: ಹೈದರಾಬಾದ್ – ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಆರೋಪಿ ರೈಲ್ವೇ ಹಳಿಯಲ್ಲಿ ಶವವಾಗಿ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...