Homeಕರ್ನಾಟಕಅತ್ಯಾಚಾರ ನಿಲ್ಲಬೇಕು, ಅತ್ಯಾಚಾರಿಗಳಿಗೆ ಶಿಕ್ಷೆಯಾಗಬೇಕು: ಸೈಕ್ಲಿಂಗ್ ಜಾಗೃತಿ ಮೂಡಿಸುತ್ತಿರುವ ಕಿರಣ್

ಅತ್ಯಾಚಾರ ನಿಲ್ಲಬೇಕು, ಅತ್ಯಾಚಾರಿಗಳಿಗೆ ಶಿಕ್ಷೆಯಾಗಬೇಕು: ಸೈಕ್ಲಿಂಗ್ ಜಾಗೃತಿ ಮೂಡಿಸುತ್ತಿರುವ ಕಿರಣ್

ರಾಜ್ಯದ 31 ಜಿಲ್ಲೆಗಳಲ್ಲಿಯೂ ಸೈಕಲ್ ಜಾಥಾ ನಡೆಸಲು ನಿರ್ಧರಿಸಿರುವ ಕಿರಣ್, ಈವರೆಗೆ 13 ಜಿಲ್ಲೆಗಳಿಗೆ ತೆರಳಿ ಮನವಿ ಪತ್ರ ಸಲ್ಲಿಸಿದ್ದಾರೆ.

- Advertisement -
- Advertisement -

“ದೇಶದಲ್ಲಿ ದಿನೇ ದಿನೇ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಹೆಣ್ಣು ಮಕ್ಕಳ ಮೇಲೆ ಶೋಷಣೆ ನಿರಂತರವಾಗಿ ನಡೆಯುತ್ತಿದೆ. ಕಳೆದ ವರ್ಷ 38 ರಿಂದ 36 ಸಾವಿರ ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ಆದರೆ, ಶಿಕ್ಷೆಯಾಗುವುದು ಮಾತ್ರ ಅದರಲ್ಲಿ ನಾಲ್ಕನೇ ಒಂದು ಭಾಗ..” ಹೀಗೆ ಮಾತನಾಡುತ್ತಾ ಸಾಗಿದ್ದು, ಅತ್ಯಾಚಾರ ನಿರ್ಮೂಲನೆ ಮತ್ತು ಅತ್ಯಾಚಾರಿಗಳಿಗೆ ಶಿಕ್ಷೆಯಾಗಬೇಕು ಎಂದು ಅಖಂಡ ಕರ್ನಾಟಕ ಸೈಕ್ಲಿಂಗ್ ಜಾಥಾ ನಡೆಸುತ್ತಿರುವ ವಿದ್ಯಾರ್ಥಿ ಕಿರಣ್ ವಿ.

ಬೆಂಗಳೂರಿನ ಬನ್ನೇರುಘಟ್ಟದ ನಿವಾಸಿ ಕಿರಣ್, ರಾಜ್ಯದ 31 ಜಿಲ್ಲೆಗಳಲ್ಲಿಯೂ ಸೈಕಲ್ ಜಾಥಾ ನಡೆಸಿ, ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆಯಾಗಬೇಕು. ಅತ್ಯಾಚಾರ ನಿರ್ಮೂಲನೆಯಾಗಬೇಕು ಎಂದು ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಅವರ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಪತ್ರ ಸಲ್ಲಿಸುತ್ತಿದ್ದಾರೆ.

ಕೆ.ಆರ್.ಸರ್ಕಲ್‌ನ ಸರ್ಕಾರಿ ಆಟ್ಸ್ ಕಾಲೇಜಿನಲ್ಲಿ ಪ್ರಥಮ ಬಿ.ಎ ವಿದ್ಯಾರ್ಥಿಯಾಗಿರುವ ಕಿರಣ್, ಕಳೆದ ಆಗಸ್ಟ್ 28ರ ಭಾನುವಾರ ಈ ಜಾಥಾ ಶುರು ಮಾಡಿದ್ದು, ಇಂದಿಗೆ  28 ದಿನಗಳು ಕಳೆದಿವೆ. ಈವರೆಗೆ 13 ಜಿಲ್ಲೆಗಳಿಗೆ ತೆರಳಿ ಮನವಿ ಪತ್ರ ಸಲ್ಲಿಸಿದ್ದಾರೆ.

ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್, ಬಿಜಾಪುರ, ಬಾಗಲಕೋಟೆ ಮತ್ತು ಕೊಪ್ಪಳ ಜಿಲ್ಲೆಗಳು ಮುಗಿದಿವೆ. ಇನ್ನು 18 ಜಿಲ್ಲೆಗಳು ಬಾಕಿ ಇವೆ. 3,800 ಕಿಲೋಮೀಟರ್ ಜಾಥಾ ನಡೆಸಲು ನಿರ್ಧರಿಸಿರುವ ಕಿರಣ್, ಇಲ್ಲಿಯವರೆಗೆ 1,600 ಕಿ.ಮೀ ದೂರ ಕ್ರಮಿಸಿದ್ದಾರೆ.

ಇದನ್ನೂ ಓದಿ: ಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೆ 1 ವರ್ಷ – ಸಂಪೂರ್ಣ ವಿವರ

ತಮ್ಮ ಜಾಥಾ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿರುವ ಕಿರಣ್, “ಹೆಣ್ಣು ಮಕ್ಕಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಲೇ ಇದೆ. ಅತ್ಯಾಚಾರ ನಡೆದರೂ ಶಿಕ್ಷೆ ಮಾತ್ರ ಪ್ರಕಟವಾಗುತ್ತಿಲ್ಲ. ಈ ಬಗ್ಗೆ ಮಾಧ್ಯಮಗಳು ಕಣ್ಣು ಮುಚ್ಚಿದರೂ, ಸಾಮಾಜಿಕ ಮಾಧ್ಯಮಗಳು, ಅಂತರ್ಜಾಲ, ವೆಬ್‌ಸೈಟ್‌ಗಳು ಮಾಹಿತಿ ನೀಡುತ್ತವೆ. ಹೀಗಾಗಿ ಒಂದೆರಡು ತಿಂಗಳು ಈ ಬಗ್ಗೆ ರಿಸರ್ಚ್ ಮಾಡಿದೆ. ಕಳೆದ 2019-2020ರಲ್ಲಿ 38 ರಿಂದ 36 ಸಾವಿರ ಅತ್ಯಾಚಾರ ಪ್ರಕರಣಗಳು ನಡೆದಿವೆ. ಆದರೆ, ಆರೋಪಿಗಳಿಗೆ ಶಿಕ್ಷೆಯಾಗಿರುವುದು ಅತೀ ಕಡಿಮೆ. ನಾಲ್ಕನೇ ಒಂದು ಭಾಗ ಮಾತ್ರ. ಹೀಗಾಗಿ ಮನನೊಂದು ಈ ಬಗ್ಗೆ ಜಾಗೃತಿ ಮೂಡಿಸಲು ಈ ಜಾಥಾ ನಡೆಸುತ್ತಿದ್ದೇನೆ” ಎಂದಿದ್ದಾರೆ.

“ನಾನು ಈ ಜಾಥಾ ಶುರು ಮಾಡಿ ಮೂರು ದಿನಕ್ಕೆ ಮೈಸೂರಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಯಿತು. ದಿನ ಒಂದಲ್ಲ ಒಂದು ಘಟನೆ ವರದಿಯಾಗುತ್ತಲೆ ಇದೆ. ಅತ್ಯಾಚಾರ ನಿರ್ಮೂಲನೆಯಾಗಬೇಕು. ಅತ್ಯಾಚಾರದ ಆರೋಪಿಗಳಿಗೆ ಗಲ್ಲುಶಿಕ್ಷೆಯಾಗಬೇಕು. ಈ ಬಗ್ಗೆ ಜಾಗೃತಿ ಮೂಡಿಸಬೇಕು. ಹೀಗಾಗಿ ಒಂದೆರಡು ಕಾಲೇಜುಗಳಿಗೂ ಭೇಟಿ ನೀಡಿ ಯುವಜನರ ಬಳಿ ಮಾತನಾಡಿದ್ದೇನೆ. ಈ ಜಾಥಾ ಮುಂದುವರೆಯಲಿದೆ” ಎಂದಿದ್ದಾರೆ ಕಿರಣ್.

ಕಿರಣ್ ತಂದೆ ಕಾರು ಚಾಲಕರಾಗಿದ್ದು, ತಾಯಿ ಮನೆ ಕೆಲಸಕ್ಕೆ ಹೋಗುತ್ತಾರೆ. ಕಿರಣ್‌ಗೆ ಒಬ್ಬ ಅಕ್ಕ ಇದ್ದಾರೆ. ಕೊರೊನಾ ಸಂಕಷ್ಟದಿಂದ ಈ ಬಾರಿ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಸಾಧ್ಯವಾಗಿಲ್ಲ. ಆದರೆ, ಈ ಒಂದು ಸೈಕ್ಲಿಂಗ್ ಜಾಥಾಕ್ಕೆ ಕೈ ಹಾಕಿದ್ದೇನೆ. ಇದನ್ನು ಮುಂದುವರೆಸುತ್ತೇನೆ. ಜೊತೆಗೆ ಮುಂದಿನ ಬಾರಿ ಪರೀಕ್ಷೆ ಬರೆಯುತ್ತೇನೆ ಎನ್ನುತ್ತಾರೆ ವಿದ್ಯಾರ್ಥಿ ಕಿರಣ್.

ಅತ್ಯಾಚಾರ ನಿರ್ಮೂಲನೆ ಬಗ್ಗೆ ಯುವಜನತೆ ಹೆಚ್ಚು ಹೆಚ್ಚು ಜಾಗೃತರಾಗಲಿ, ಹೆಣ್ಣು ಮಕ್ಕಳ ಮಲೆ ನಡೆಯುವ ದೌರ್ಜನ್ಯಗಳ ಬಗ್ಗೆ ದನಿ ಎತ್ತುವಂತಾಗಲಿ. ಕಿರಣ್ ಅಂತಹ ಯುವ ಜನರ ಸಂಖ್ಯೆ ಹೆಚ್ಚಾಗಲಿ ಅನ್ನುವುದು ನಮ್ಮ ಆಶಯ.


ಇದನ್ನೂ ಓದಿ: ಹೈದರಾಬಾದ್ – ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಆರೋಪಿ ರೈಲ್ವೇ ಹಳಿಯಲ್ಲಿ ಶವವಾಗಿ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...