Homeಕರ್ನಾಟಕಅತ್ಯಾಚಾರ ನಿಲ್ಲಬೇಕು, ಅತ್ಯಾಚಾರಿಗಳಿಗೆ ಶಿಕ್ಷೆಯಾಗಬೇಕು: ಸೈಕ್ಲಿಂಗ್ ಜಾಗೃತಿ ಮೂಡಿಸುತ್ತಿರುವ ಕಿರಣ್

ಅತ್ಯಾಚಾರ ನಿಲ್ಲಬೇಕು, ಅತ್ಯಾಚಾರಿಗಳಿಗೆ ಶಿಕ್ಷೆಯಾಗಬೇಕು: ಸೈಕ್ಲಿಂಗ್ ಜಾಗೃತಿ ಮೂಡಿಸುತ್ತಿರುವ ಕಿರಣ್

ರಾಜ್ಯದ 31 ಜಿಲ್ಲೆಗಳಲ್ಲಿಯೂ ಸೈಕಲ್ ಜಾಥಾ ನಡೆಸಲು ನಿರ್ಧರಿಸಿರುವ ಕಿರಣ್, ಈವರೆಗೆ 13 ಜಿಲ್ಲೆಗಳಿಗೆ ತೆರಳಿ ಮನವಿ ಪತ್ರ ಸಲ್ಲಿಸಿದ್ದಾರೆ.

- Advertisement -
- Advertisement -

“ದೇಶದಲ್ಲಿ ದಿನೇ ದಿನೇ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಹೆಣ್ಣು ಮಕ್ಕಳ ಮೇಲೆ ಶೋಷಣೆ ನಿರಂತರವಾಗಿ ನಡೆಯುತ್ತಿದೆ. ಕಳೆದ ವರ್ಷ 38 ರಿಂದ 36 ಸಾವಿರ ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ಆದರೆ, ಶಿಕ್ಷೆಯಾಗುವುದು ಮಾತ್ರ ಅದರಲ್ಲಿ ನಾಲ್ಕನೇ ಒಂದು ಭಾಗ..” ಹೀಗೆ ಮಾತನಾಡುತ್ತಾ ಸಾಗಿದ್ದು, ಅತ್ಯಾಚಾರ ನಿರ್ಮೂಲನೆ ಮತ್ತು ಅತ್ಯಾಚಾರಿಗಳಿಗೆ ಶಿಕ್ಷೆಯಾಗಬೇಕು ಎಂದು ಅಖಂಡ ಕರ್ನಾಟಕ ಸೈಕ್ಲಿಂಗ್ ಜಾಥಾ ನಡೆಸುತ್ತಿರುವ ವಿದ್ಯಾರ್ಥಿ ಕಿರಣ್ ವಿ.

ಬೆಂಗಳೂರಿನ ಬನ್ನೇರುಘಟ್ಟದ ನಿವಾಸಿ ಕಿರಣ್, ರಾಜ್ಯದ 31 ಜಿಲ್ಲೆಗಳಲ್ಲಿಯೂ ಸೈಕಲ್ ಜಾಥಾ ನಡೆಸಿ, ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆಯಾಗಬೇಕು. ಅತ್ಯಾಚಾರ ನಿರ್ಮೂಲನೆಯಾಗಬೇಕು ಎಂದು ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಅವರ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಪತ್ರ ಸಲ್ಲಿಸುತ್ತಿದ್ದಾರೆ.

ಕೆ.ಆರ್.ಸರ್ಕಲ್‌ನ ಸರ್ಕಾರಿ ಆಟ್ಸ್ ಕಾಲೇಜಿನಲ್ಲಿ ಪ್ರಥಮ ಬಿ.ಎ ವಿದ್ಯಾರ್ಥಿಯಾಗಿರುವ ಕಿರಣ್, ಕಳೆದ ಆಗಸ್ಟ್ 28ರ ಭಾನುವಾರ ಈ ಜಾಥಾ ಶುರು ಮಾಡಿದ್ದು, ಇಂದಿಗೆ  28 ದಿನಗಳು ಕಳೆದಿವೆ. ಈವರೆಗೆ 13 ಜಿಲ್ಲೆಗಳಿಗೆ ತೆರಳಿ ಮನವಿ ಪತ್ರ ಸಲ್ಲಿಸಿದ್ದಾರೆ.

ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್, ಬಿಜಾಪುರ, ಬಾಗಲಕೋಟೆ ಮತ್ತು ಕೊಪ್ಪಳ ಜಿಲ್ಲೆಗಳು ಮುಗಿದಿವೆ. ಇನ್ನು 18 ಜಿಲ್ಲೆಗಳು ಬಾಕಿ ಇವೆ. 3,800 ಕಿಲೋಮೀಟರ್ ಜಾಥಾ ನಡೆಸಲು ನಿರ್ಧರಿಸಿರುವ ಕಿರಣ್, ಇಲ್ಲಿಯವರೆಗೆ 1,600 ಕಿ.ಮೀ ದೂರ ಕ್ರಮಿಸಿದ್ದಾರೆ.

ಇದನ್ನೂ ಓದಿ: ಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೆ 1 ವರ್ಷ – ಸಂಪೂರ್ಣ ವಿವರ

ತಮ್ಮ ಜಾಥಾ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿರುವ ಕಿರಣ್, “ಹೆಣ್ಣು ಮಕ್ಕಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಲೇ ಇದೆ. ಅತ್ಯಾಚಾರ ನಡೆದರೂ ಶಿಕ್ಷೆ ಮಾತ್ರ ಪ್ರಕಟವಾಗುತ್ತಿಲ್ಲ. ಈ ಬಗ್ಗೆ ಮಾಧ್ಯಮಗಳು ಕಣ್ಣು ಮುಚ್ಚಿದರೂ, ಸಾಮಾಜಿಕ ಮಾಧ್ಯಮಗಳು, ಅಂತರ್ಜಾಲ, ವೆಬ್‌ಸೈಟ್‌ಗಳು ಮಾಹಿತಿ ನೀಡುತ್ತವೆ. ಹೀಗಾಗಿ ಒಂದೆರಡು ತಿಂಗಳು ಈ ಬಗ್ಗೆ ರಿಸರ್ಚ್ ಮಾಡಿದೆ. ಕಳೆದ 2019-2020ರಲ್ಲಿ 38 ರಿಂದ 36 ಸಾವಿರ ಅತ್ಯಾಚಾರ ಪ್ರಕರಣಗಳು ನಡೆದಿವೆ. ಆದರೆ, ಆರೋಪಿಗಳಿಗೆ ಶಿಕ್ಷೆಯಾಗಿರುವುದು ಅತೀ ಕಡಿಮೆ. ನಾಲ್ಕನೇ ಒಂದು ಭಾಗ ಮಾತ್ರ. ಹೀಗಾಗಿ ಮನನೊಂದು ಈ ಬಗ್ಗೆ ಜಾಗೃತಿ ಮೂಡಿಸಲು ಈ ಜಾಥಾ ನಡೆಸುತ್ತಿದ್ದೇನೆ” ಎಂದಿದ್ದಾರೆ.

“ನಾನು ಈ ಜಾಥಾ ಶುರು ಮಾಡಿ ಮೂರು ದಿನಕ್ಕೆ ಮೈಸೂರಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಯಿತು. ದಿನ ಒಂದಲ್ಲ ಒಂದು ಘಟನೆ ವರದಿಯಾಗುತ್ತಲೆ ಇದೆ. ಅತ್ಯಾಚಾರ ನಿರ್ಮೂಲನೆಯಾಗಬೇಕು. ಅತ್ಯಾಚಾರದ ಆರೋಪಿಗಳಿಗೆ ಗಲ್ಲುಶಿಕ್ಷೆಯಾಗಬೇಕು. ಈ ಬಗ್ಗೆ ಜಾಗೃತಿ ಮೂಡಿಸಬೇಕು. ಹೀಗಾಗಿ ಒಂದೆರಡು ಕಾಲೇಜುಗಳಿಗೂ ಭೇಟಿ ನೀಡಿ ಯುವಜನರ ಬಳಿ ಮಾತನಾಡಿದ್ದೇನೆ. ಈ ಜಾಥಾ ಮುಂದುವರೆಯಲಿದೆ” ಎಂದಿದ್ದಾರೆ ಕಿರಣ್.

ಕಿರಣ್ ತಂದೆ ಕಾರು ಚಾಲಕರಾಗಿದ್ದು, ತಾಯಿ ಮನೆ ಕೆಲಸಕ್ಕೆ ಹೋಗುತ್ತಾರೆ. ಕಿರಣ್‌ಗೆ ಒಬ್ಬ ಅಕ್ಕ ಇದ್ದಾರೆ. ಕೊರೊನಾ ಸಂಕಷ್ಟದಿಂದ ಈ ಬಾರಿ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಸಾಧ್ಯವಾಗಿಲ್ಲ. ಆದರೆ, ಈ ಒಂದು ಸೈಕ್ಲಿಂಗ್ ಜಾಥಾಕ್ಕೆ ಕೈ ಹಾಕಿದ್ದೇನೆ. ಇದನ್ನು ಮುಂದುವರೆಸುತ್ತೇನೆ. ಜೊತೆಗೆ ಮುಂದಿನ ಬಾರಿ ಪರೀಕ್ಷೆ ಬರೆಯುತ್ತೇನೆ ಎನ್ನುತ್ತಾರೆ ವಿದ್ಯಾರ್ಥಿ ಕಿರಣ್.

ಅತ್ಯಾಚಾರ ನಿರ್ಮೂಲನೆ ಬಗ್ಗೆ ಯುವಜನತೆ ಹೆಚ್ಚು ಹೆಚ್ಚು ಜಾಗೃತರಾಗಲಿ, ಹೆಣ್ಣು ಮಕ್ಕಳ ಮಲೆ ನಡೆಯುವ ದೌರ್ಜನ್ಯಗಳ ಬಗ್ಗೆ ದನಿ ಎತ್ತುವಂತಾಗಲಿ. ಕಿರಣ್ ಅಂತಹ ಯುವ ಜನರ ಸಂಖ್ಯೆ ಹೆಚ್ಚಾಗಲಿ ಅನ್ನುವುದು ನಮ್ಮ ಆಶಯ.


ಇದನ್ನೂ ಓದಿ: ಹೈದರಾಬಾದ್ – ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಆರೋಪಿ ರೈಲ್ವೇ ಹಳಿಯಲ್ಲಿ ಶವವಾಗಿ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...