Homeಮುಖಪುಟಗುಜರಾತ್‌ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿ ರಾಜಸ್ಥಾನದತ್ತ ಮುಖ ಮಾಡಿದ ಬಿಪರ್‌ಜೋಯ್ ಚಂಡಮಾರುತ

ಗುಜರಾತ್‌ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿ ರಾಜಸ್ಥಾನದತ್ತ ಮುಖ ಮಾಡಿದ ಬಿಪರ್‌ಜೋಯ್ ಚಂಡಮಾರುತ

- Advertisement -
- Advertisement -

ಬಿಪೊರ್‌ಜಾಯ್ ಚಂಡಮಾರುತ ಗುರುವಾರ ಸಂಜೆ ಗುಜರಾತ್‌ಗೆ ಅಪ್ಪಳಿಸಿ, ಅಬ್ಬರಿಸುತ್ತಿದೆ. ಇದೀಗ ಬಿಪೊರ್‌ಜಾಯ್ ಚಂಡಮಾರುತ ರಾಜಸ್ಥಾನದ ಕಡೆ ಮುಖ ಮಾಡಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಬಾರ್ಮರ್, ಜಾಲೋ‌, ಜೈಸರ್, ಸಿರೋಹಿ, ಜೋದ್‌ಪುರ, ಪಾಲಿ ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ ಮಾಡಿದೆ.

ಪ್ರಬಲ ಚಂಡಮಾರುತವಾಗಿರುವ ಬಿಪೊರ್‌ಜಾಯ್ ಗುಜರಾತ್‌ಗೆ ಅಪ್ಪಳಿಸಿ ಸಾಕಷ್ಟು ಹಾನಿಯುಂಟು ಮಾಡಿದೆ. ಇದೀಗ ಬಿಪೊರ್‌ಜಾ‍ಯ್ ಕ್ರಮೇಣ ದುರ್ಬಲಗೊಂಡು ಸೌರಾಷ್ಟ್ರ ಮತ್ತು ಕಛ್ ಮೂಲಕ ಶುಕ್ರವಾರ ಸಂಜೆ ದಕ್ಷಿಣ ರಾಜಸ್ಥಾನ ಪ್ರವೇಶಿಸಲಿದೆ ಎಂದು ಭಾರತದ ಹವಾಮಾನ ಇಲಾಖೆ ತಿಳಿಸಿದೆ.

ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಜೋಧಪುರ ವಿಶ್ವವಿದ್ಯಾಲಯವು ಶುಕ್ರವಾರ ಮತ್ತು ಶನಿವಾರದಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಿದೆ. ಬಾರ್ಮೆರ್-ಜೋದ್‌ಪುರ ನಡುವೆ ಸಂಚರಿಸಬೇಕಿದ್ದ ಪ್ಯಾಸೆಂಜರ್ ರೈಲುಗಳನ್ನು ಎರಡು ದಿನ ರದ್ದು ಮಾಡಲಾಗಿದೆ.

ಬಾರ್ಮೆರ್ ಮತ್ತು ಜಾಲೋರ್‌ನಲ್ಲಿ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವವರಿಗೆ ಬೇರೆಡೆ ತೆರಳುವಂತೆ ಸೂಚನೆ ನೀಡಲಾಗಿದೆ. ಜೈಸರ್‌ನ ಡಬ್ಬಾ ಗ್ರಾಮದಿಂದ 450 ಜನರನ್ನು ಸ್ಥಳಾಂತರಿಸಲಾಗಿದೆ. ಚಂಡಮಾರುತ ಪೀಡಿತ ಪ್ರದೇಶಗಳಲ್ಲಿ, ನರೇಗಾ ಕಾಮಗಾರಿಗಳನ್ನು ನಿಲ್ಲಿಸಲಾಗಿದೆ.

ಬಾರ್ಮೆರ್, ಜಲೋರ್, ಜೈಸಲ್ಮರ್‌ನಲ್ಲಿ ಗುರುವಾರ ಮಧ್ಯಾಹ್ನ ಬಲವಾದ ಗಾಳಿ ಬೀಸುತ್ತಿದ್ದು, ಹಲವೆಡೆ ಸಾಧಾರಣ ಮಳೆಯಾಗಿದೆ. ಬಾರ್ಮ‌್ರನ ಗ್ರಾಮೀಣ ಪ್ರದೇಶಗಳಲ್ಲಿ ಗುರುವಾರ ಸಂಜೆಯವರೆಗೆ 20 ಮಿ.ಮೀ ಮಳೆ ದಾಖಲಾಗಿದೆ.

ಇದನ್ನೂ ಓದಿ: ಗುಜರಾತ್‌ನಲ್ಲಿ ಬಿಪೊರ್‌ಜಾಯ್ ಚಂಡಮಾರುತದಿಂದ ಭೂಕುಸಿತ ಸಾಧ್ಯತೆ: 74,000ಕ್ಕೂ ಹೆಚ್ಚು ಜನರ ಸ್ಥಳಾಂತರ

ಬಿಪರ್‌ಜೋಯ್ ಚಂಡಮಾರುತದಿಂದ ಹೈರಾಣಾದ ಗುಜರಾತ್

ಗುರುವಾರ ಸಂಜೆ ಗುಜರಾತ್‌ನಲ್ಲಿ ಬಿಪರ್‌ಜೋಯ್ ಚಂಡಮಾರುತ ಅಪ್ಪಳಿಸಿದ್ದರಿಂದ ಮರಗಳು ನೆಲಕ್ಕುರುಳಿದವು, ಮನೆಗಳ ಛಾವಣಿಗಳು ಹಾರಿಹೋಗಿವೆ ಮತ್ತು ವಿದ್ಯುತ್ ಕಂಬಗಳು ನೆಲಕ್ಕೆ ಬಿದ್ದವು. ಗುಜರಾತ್‌ನ ಕರಾವಳಿಯಲ್ಲಿ ಇಂದು ಮುಂಜಾನೆ ಭಾರೀ ಮಳೆ ಮುಂದುವರಿದಿದೆ.

ಚಂಡಮಾರುತದಿಂದ ಭೂಕುಸಿತ ಉಂಟಾಗಿ ಸಾಕಷ್ಟು ಹಾನಿಯುಂಟು ಮಾಡಿದೆ. ಗಂಟೆಗೆ 115 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

ಗುಜರಾತಿನ ಕಛ್ ಜಿಲ್ಲೆಯ ಮಾಂಡ್ವಿಯ ದೃಶ್ಯಗಳು ಭಾರೀ ಮಳೆ ಮತ್ತು ಬಲವಾದ ಗಾಳಿಯನ್ನು ತೋರಿಸುತ್ತವೆ, ಅನೇಕ ಮರಗಳು ನೆಲಕ್ಕುರುಳಿವೆ. ನಿನ್ನೆ ಮಧ್ಯಾಹ್ನ ಅರಬ್ಬಿ ಸಮುದ್ರದ ಹೆಚ್ಚುತ್ತಿರುವ ನೀರಿನಿಂದ ಮಾಂಡವಿ ಬೀಚ್ ಮುಳುಗಿದ್ದು, ಅಧಿಕಾರಿಗಳು ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಿಬ್ಬಂದಿಗೆ ಸಲಹೆಯನ್ನು ನೀಡುವಂತೆ ಸೂಚಿಸಿದರು.

ಚಂಡಮಾರುತವು ತೀವ್ರ ಹಾನಿಯನ್ನುಂಟುಮಾಡಿದೆ. ಈ ವೇಳೆ ಇಬ್ಬರು ಸಾವನ್ನಪ್ಪಿದರು ಮತ್ತು ಹಲವರು ಗಾಯಗೊಂಡರು. ಚಂಡಮಾರುತವು ಮರಗಳನ್ನು ಉರುಳಿಸಿತು, ಹಲವಾರು ವಾಹನಗಳು ಮತ್ತು ಮನೆಗಳನ್ನು ಹಾನಿಗೊಳಿಸಿತು ಮತ್ತು ಸಾವಿರಾರು ಜನರನ್ನು ಸ್ಥಳಾಂತರಿಸಲು ಒತ್ತಾಯಿಸಲಾಯಿತು. ಚಂಡಮಾರುತವು ಇಂದು ಸಂಜೆ ರಾಜಸ್ಥಾನದತ್ತ ಮುಖ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತದೆ.

ಚಂಡಮಾರುತದ ಭೂಕುಸಿತದ ನಂತರ ಕನಿಷ್ಠ 22 ಜನರು ಗಾಯಗೊಂಡಿದ್ದಾರೆ. ಬಿರುಗಾಳಿ ಸಹಿತ ಭಾರೀ ಮಳೆಗೆ 500 ಕ್ಕೂ ಹೆಚ್ಚು ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿದವು, ಗುಜರಾತ್‌ನ ಸುಮಾರು 940 ಹಳ್ಳಿಗಳು ಕತ್ತಲೆಯಲ್ಲಿ ಮುಳುಗಿವೆ.

ಜೂನ್ 16 ಮತ್ತು 17ರಂದು ರಾಜಸ್ಥಾನದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಚಂಡಮಾರುತವು ವಾಯುವ್ಯ ಕಡೆಗೆ ಚಲಿಸುವ ನಿರೀಕ್ಷೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...