Homeಮುಖಪುಟಗುಜರಾತ್‌ನಲ್ಲಿ ಬಿಪೊರ್‌ಜಾಯ್ ಚಂಡಮಾರುತದಿಂದ ಭೂಕುಸಿತ ಸಾಧ್ಯತೆ: 74,000ಕ್ಕೂ ಹೆಚ್ಚು ಜನರ ಸ್ಥಳಾಂತರ

ಗುಜರಾತ್‌ನಲ್ಲಿ ಬಿಪೊರ್‌ಜಾಯ್ ಚಂಡಮಾರುತದಿಂದ ಭೂಕುಸಿತ ಸಾಧ್ಯತೆ: 74,000ಕ್ಕೂ ಹೆಚ್ಚು ಜನರ ಸ್ಥಳಾಂತರ

- Advertisement -
- Advertisement -

ಬಿಪೊರ್‌ಜಾಯ್ ಚಂಡಮಾರುತವು ಗುರುವಾರ ಸಂಜೆ ಭೂಕುಸಿತವನ್ನು ಉಂಟುಮಾಡುವ ಸಾಧ್ಯತೆ ಹಾಗಾಗಿ 74,000ಕ್ಕೂ ಹೆಚ್ಚು ಜನರನ್ನು ಗುಜರಾತ್‌ನ ಅಧಿಕಾರಿಗಳು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಚಂಡಮಾರುತವು ಗುಜರಾತ್ ಕರಾವಳಿಯಲ್ಲಿ ಸಂಜೆ 4 ರಿಂದ ರಾತ್ರಿ 8 ರ ನಡುವೆ ಭೂಕುಸಿತವನ್ನು ಉಂಟುಮಾಡುವ ನಿರೀಕ್ಷೆಯಿದೆ. ಇದು ಅತ್ಯಂತ ತೀವ್ರವಾದ ಚಂಡಮಾರುತವಾಗಿ ಕರಾವಳಿಯನ್ನು ಅಪ್ಪಳಿಸಲಿದ್ದು, ಗಾಳಿಯ ವೇಗ ಗಂಟೆಗೆ 125 ರಿಂದ 135 ಕಿಲೋಮೀಟರ್ ತಲುಪಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮುಂಜಾನೆ 5.30 ಗಂಟೆಗೆ ಬಿಪೊರ್‌ಜಾಯ್ ಚಂಡಮಾರುತವು ಗುಜರಾತ್‌ನ ಜಖೌ ಬಂದರಿನಿಂದ 180 ಕಿಲೋಮೀಟರ್ ಮತ್ತು ಪಾಕಿಸ್ತಾನದ ಕರಾಚಿಯಿಂದ 270 ಕಿಲೋಮೀಟರ್ ದೂರದಲ್ಲಿದೆ.

ಚಂಡಮಾರುತದಿಂದಾಗಿ ಕಚ್, ದ್ವಾರಕಾ ಮತ್ತು ಜಾಮ್‌ನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿರುವುದಾಗಿ ಪಿಟಿಐ ಹೇಳಿದೆ.

ಈ ಬಗ್ಗೆ ರಾಜ್ಯ ಆರೋಗ್ಯ ಸಚಿವ ರುಶಿಕೇಶ್ ಪಟೇಲ್ ಮಾತನಾಡಿ, ”72 ಗ್ರಾಮಗಳು ಕಚ್‌ನ ಕರಾವಳಿಯಿಂದ 5 ಕಿಲೋಮೀಟರ್‌ಗಳ ಒಳಗೆ ಮತ್ತು ಇನ್ನೂ 48 ಹಳ್ಳಿಗಳು ಸಮುದ್ರ ತೀರದಿಂದ 5 ಕಿಲೋಮೀಟರ್ ಮತ್ತು 10 ಕಿಲೋಮೀಟರ್ ನಡುವೆ ಇವೆ. ನಾವು ಈ ಕರಾವಳಿ ಗ್ರಾಮಗಳಿಂದ ಸುಮಾರು 40,000 ಜನರನ್ನು ಸ್ಥಳಾಂತರಿಸಿದ್ದೇವೆ” ಎಂದು ಅವರು ಹೇಳಿದರು.

ಅಧಿಕೃತ ಹೇಳಿಕೆಯ ಪ್ರಕಾರ, ”74,345 ಜನರನ್ನು ಕರಾವಳಿ ಜಿಲ್ಲೆಗಳಾದ ಕಚ್, ಜಾಮ್‌ನಗರ, ಮೊರ್ಬಿ, ರಾಜ್‌ಕೋಟ್, ದ್ವಾರಕಾ, ಜುನಾಗಢ್, ಪೋರಬಂದರ್ ಮತ್ತು ಗಿರ್ ಸೋಮನಾಥ ಜಿಲ್ಲೆಗಳಲ್ಲಿ ತಾತ್ಕಾಲಿಕ ಆಶ್ರಯಕ್ಕೆ ಸ್ಥಳಾಂತರಿಸಲಾಗಿದೆ” ಎಂದು ತಿಳಿದುಬಂದಿದೆ.

ಕರಾವಳಿ ಜಿಲ್ಲೆಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ 15 ತಂಡಗಳು, ರಾಜ್ಯ ವಿಪತ್ತು ನಿರ್ವಹಣಾ ಪಡೆಯ 12 ತಂಡಗಳು, ರಸ್ತೆ ಮತ್ತು ಕಟ್ಟಡ ಇಲಾಖೆಯ 115 ತಂಡಗಳು ಮತ್ತು ವಿದ್ಯುತ್ ಇಲಾಖೆಯ 397 ತಂಡಗಳನ್ನು ನಿಯೋಜಿಸಲಾಗಿದೆ.

ದಿ ಹಿಂದೂ ಪ್ರಕಾರ, 50ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಲಾಗಿದೆ. ಕೆಲವು ಜಿಲ್ಲೆಗಳಲ್ಲಿ ಗುಜರಾತ್ ರಾಜ್ಯ ರಸ್ತೆ ಸಾರಿಗೆ ಸೇವೆಗೆ ಸೇರಿದ ಬಸ್‌ಗಳನ್ನು ಸಹ ರದ್ದುಗೊಳಿಸಲಾಗಿದೆ.

ದ್ವಾರಕಾದಲ್ಲಿರುವ ದ್ವಾರಕಾಧೀಶ ದೇವಾಲಯ ಮತ್ತು ಗಿರ್ ಸೋಮನಾಥ ಜಿಲ್ಲೆಯ ಸೋಮನಾಥ ದೇವಾಲಯವನ್ನು ಗುರುವಾರ ಮುಚ್ಚಲಾಗುವುದು.

ಬಿಪೊರ್‌ಜಾಯ್, ಬಂಗಾಳಿ ಭಾಷೆಯಲ್ಲಿ ವಿಪತ್ತು ಎಂದರ್ಥ, 25 ವರ್ಷಗಳ ನಂತರ ಜೂನ್‌ನಲ್ಲಿ ಗುಜರಾತ್‌ಗೆ ಅಪ್ಪಳಿಸುವ ಮೊದಲ ಚಂಡಮಾರುತ ಎಂದು ಹೇಳಲಾಗುತ್ತಿದೆ. ಜೂನ್ 1998ರಲ್ಲಿ, ಅತ್ಯಂತ ತೀವ್ರವಾದ ಚಂಡಮಾರುತವು ಕಚ್ ಮತ್ತು ಸೌರಾಷ್ಟ್ರದ ಕರಾವಳಿ ಪ್ರದೇಶಗಳಿಗೆ ಅಪ್ಪಳಿಸಿತು, ಸುಮಾರು 3,000 ಜನರು ಸಾವಿಗೀಡಾಗಿದ್ದರು.

ಪಾಕಿಸ್ತಾನದಲ್ಲಿ 62,000 ಜನರನ್ನು ಸ್ಥಳಾಂತರ

ಚಂಡಮಾರುತದ ದೃಷ್ಟಿಯಿಂದ ಪಾಕಿಸ್ತಾನದ ಅಧಿಕಾರಿಗಳು 64,107 ಜನರನ್ನು ಹೆಚ್ಚಿನ ಅಪಾಯದ ಪ್ರದೇಶಗಳಿಂದ ಸ್ಥಳಾಂತರಿಸಿದ್ದಾರೆ. ಅವರನ್ನು 75 ಪರಿಹಾರ ಶಿಬಿರಗಳಲ್ಲಿರಲು ವ್ಯವಸ್ಥೆ ಮಾಡಲಾಗಿದೆ ಎಂದು ಸಿಂಧ್ ಮಾಹಿತಿ ಸಚಿವ ಶಾರ್ಜೀಲ್ ಮೆಮನ್ ಹೇಳಿದ್ದಾರೆ. ಈ ಬಗ್ಗೆ  ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

ಸ್ಥಳಾಂತರಗೊಂಡವರನ್ನು ಸರ್ಕಾರಿ ಶಾಲೆಗಳು ಮತ್ತು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಥಟ್ಟಾ, ಕೇತಿ ಬಂದರ್, ಸುಜಾವಲ್, ಬಾದಿನ್, ಉಮರ್ಕೋಟ್, ಥಾರ್ಪಾರ್ಕರ್, ಶಹೀದ್ ಬೆನಜಿರಾಬಾದ್, ತಂಡೋ ಮುಹಮ್ಮದ್ ಖಾನ್, ತಂಡೋ ಅಲ್ಲ್ಯಾರ್ ಮತ್ತು ಸಂಘರ್ ಜಿಲ್ಲೆಗಳಲ್ಲಿ ತೆರವು ಮಾಡಲಾಗಿದೆ ಎಂದು ಸಚಿವರು ಹೇಳಿದರು.

ಶೆರ್ರಿ ರೆಹಮಾನ್, ಪಾಕಿಸ್ತಾನದ ಫೆಡರಲ್ ಮಂತ್ರಿ ಹವಾಮಾನ ಬದಲಾವಣೆ ಬಗ್ಗೆ ಮಾತನಾಡಿ, ”ಕರಾಚಿಯು ಸಧ್ಯಕ್ಕೆ ಅಪಾಯದಲ್ಲಿಲ್ಲ. ಆದರೆ ಮಳೆ ಮತ್ತು ಬಲವಾದ ಗಾಳಿಯನ್ನು ಎದುರಿಸಲು ತುರ್ತು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ” ಎಂದು ಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...