Homeಮುಖಪುಟಗುಜರಾತ್‌ನಲ್ಲಿ ಬಿಪೊರ್‌ಜಾಯ್ ಚಂಡಮಾರುತದಿಂದ ಭೂಕುಸಿತ ಸಾಧ್ಯತೆ: 74,000ಕ್ಕೂ ಹೆಚ್ಚು ಜನರ ಸ್ಥಳಾಂತರ

ಗುಜರಾತ್‌ನಲ್ಲಿ ಬಿಪೊರ್‌ಜಾಯ್ ಚಂಡಮಾರುತದಿಂದ ಭೂಕುಸಿತ ಸಾಧ್ಯತೆ: 74,000ಕ್ಕೂ ಹೆಚ್ಚು ಜನರ ಸ್ಥಳಾಂತರ

- Advertisement -
- Advertisement -

ಬಿಪೊರ್‌ಜಾಯ್ ಚಂಡಮಾರುತವು ಗುರುವಾರ ಸಂಜೆ ಭೂಕುಸಿತವನ್ನು ಉಂಟುಮಾಡುವ ಸಾಧ್ಯತೆ ಹಾಗಾಗಿ 74,000ಕ್ಕೂ ಹೆಚ್ಚು ಜನರನ್ನು ಗುಜರಾತ್‌ನ ಅಧಿಕಾರಿಗಳು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಚಂಡಮಾರುತವು ಗುಜರಾತ್ ಕರಾವಳಿಯಲ್ಲಿ ಸಂಜೆ 4 ರಿಂದ ರಾತ್ರಿ 8 ರ ನಡುವೆ ಭೂಕುಸಿತವನ್ನು ಉಂಟುಮಾಡುವ ನಿರೀಕ್ಷೆಯಿದೆ. ಇದು ಅತ್ಯಂತ ತೀವ್ರವಾದ ಚಂಡಮಾರುತವಾಗಿ ಕರಾವಳಿಯನ್ನು ಅಪ್ಪಳಿಸಲಿದ್ದು, ಗಾಳಿಯ ವೇಗ ಗಂಟೆಗೆ 125 ರಿಂದ 135 ಕಿಲೋಮೀಟರ್ ತಲುಪಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮುಂಜಾನೆ 5.30 ಗಂಟೆಗೆ ಬಿಪೊರ್‌ಜಾಯ್ ಚಂಡಮಾರುತವು ಗುಜರಾತ್‌ನ ಜಖೌ ಬಂದರಿನಿಂದ 180 ಕಿಲೋಮೀಟರ್ ಮತ್ತು ಪಾಕಿಸ್ತಾನದ ಕರಾಚಿಯಿಂದ 270 ಕಿಲೋಮೀಟರ್ ದೂರದಲ್ಲಿದೆ.

ಚಂಡಮಾರುತದಿಂದಾಗಿ ಕಚ್, ದ್ವಾರಕಾ ಮತ್ತು ಜಾಮ್‌ನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿರುವುದಾಗಿ ಪಿಟಿಐ ಹೇಳಿದೆ.

ಈ ಬಗ್ಗೆ ರಾಜ್ಯ ಆರೋಗ್ಯ ಸಚಿವ ರುಶಿಕೇಶ್ ಪಟೇಲ್ ಮಾತನಾಡಿ, ”72 ಗ್ರಾಮಗಳು ಕಚ್‌ನ ಕರಾವಳಿಯಿಂದ 5 ಕಿಲೋಮೀಟರ್‌ಗಳ ಒಳಗೆ ಮತ್ತು ಇನ್ನೂ 48 ಹಳ್ಳಿಗಳು ಸಮುದ್ರ ತೀರದಿಂದ 5 ಕಿಲೋಮೀಟರ್ ಮತ್ತು 10 ಕಿಲೋಮೀಟರ್ ನಡುವೆ ಇವೆ. ನಾವು ಈ ಕರಾವಳಿ ಗ್ರಾಮಗಳಿಂದ ಸುಮಾರು 40,000 ಜನರನ್ನು ಸ್ಥಳಾಂತರಿಸಿದ್ದೇವೆ” ಎಂದು ಅವರು ಹೇಳಿದರು.

ಅಧಿಕೃತ ಹೇಳಿಕೆಯ ಪ್ರಕಾರ, ”74,345 ಜನರನ್ನು ಕರಾವಳಿ ಜಿಲ್ಲೆಗಳಾದ ಕಚ್, ಜಾಮ್‌ನಗರ, ಮೊರ್ಬಿ, ರಾಜ್‌ಕೋಟ್, ದ್ವಾರಕಾ, ಜುನಾಗಢ್, ಪೋರಬಂದರ್ ಮತ್ತು ಗಿರ್ ಸೋಮನಾಥ ಜಿಲ್ಲೆಗಳಲ್ಲಿ ತಾತ್ಕಾಲಿಕ ಆಶ್ರಯಕ್ಕೆ ಸ್ಥಳಾಂತರಿಸಲಾಗಿದೆ” ಎಂದು ತಿಳಿದುಬಂದಿದೆ.

ಕರಾವಳಿ ಜಿಲ್ಲೆಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ 15 ತಂಡಗಳು, ರಾಜ್ಯ ವಿಪತ್ತು ನಿರ್ವಹಣಾ ಪಡೆಯ 12 ತಂಡಗಳು, ರಸ್ತೆ ಮತ್ತು ಕಟ್ಟಡ ಇಲಾಖೆಯ 115 ತಂಡಗಳು ಮತ್ತು ವಿದ್ಯುತ್ ಇಲಾಖೆಯ 397 ತಂಡಗಳನ್ನು ನಿಯೋಜಿಸಲಾಗಿದೆ.

ದಿ ಹಿಂದೂ ಪ್ರಕಾರ, 50ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಲಾಗಿದೆ. ಕೆಲವು ಜಿಲ್ಲೆಗಳಲ್ಲಿ ಗುಜರಾತ್ ರಾಜ್ಯ ರಸ್ತೆ ಸಾರಿಗೆ ಸೇವೆಗೆ ಸೇರಿದ ಬಸ್‌ಗಳನ್ನು ಸಹ ರದ್ದುಗೊಳಿಸಲಾಗಿದೆ.

ದ್ವಾರಕಾದಲ್ಲಿರುವ ದ್ವಾರಕಾಧೀಶ ದೇವಾಲಯ ಮತ್ತು ಗಿರ್ ಸೋಮನಾಥ ಜಿಲ್ಲೆಯ ಸೋಮನಾಥ ದೇವಾಲಯವನ್ನು ಗುರುವಾರ ಮುಚ್ಚಲಾಗುವುದು.

ಬಿಪೊರ್‌ಜಾಯ್, ಬಂಗಾಳಿ ಭಾಷೆಯಲ್ಲಿ ವಿಪತ್ತು ಎಂದರ್ಥ, 25 ವರ್ಷಗಳ ನಂತರ ಜೂನ್‌ನಲ್ಲಿ ಗುಜರಾತ್‌ಗೆ ಅಪ್ಪಳಿಸುವ ಮೊದಲ ಚಂಡಮಾರುತ ಎಂದು ಹೇಳಲಾಗುತ್ತಿದೆ. ಜೂನ್ 1998ರಲ್ಲಿ, ಅತ್ಯಂತ ತೀವ್ರವಾದ ಚಂಡಮಾರುತವು ಕಚ್ ಮತ್ತು ಸೌರಾಷ್ಟ್ರದ ಕರಾವಳಿ ಪ್ರದೇಶಗಳಿಗೆ ಅಪ್ಪಳಿಸಿತು, ಸುಮಾರು 3,000 ಜನರು ಸಾವಿಗೀಡಾಗಿದ್ದರು.

ಪಾಕಿಸ್ತಾನದಲ್ಲಿ 62,000 ಜನರನ್ನು ಸ್ಥಳಾಂತರ

ಚಂಡಮಾರುತದ ದೃಷ್ಟಿಯಿಂದ ಪಾಕಿಸ್ತಾನದ ಅಧಿಕಾರಿಗಳು 64,107 ಜನರನ್ನು ಹೆಚ್ಚಿನ ಅಪಾಯದ ಪ್ರದೇಶಗಳಿಂದ ಸ್ಥಳಾಂತರಿಸಿದ್ದಾರೆ. ಅವರನ್ನು 75 ಪರಿಹಾರ ಶಿಬಿರಗಳಲ್ಲಿರಲು ವ್ಯವಸ್ಥೆ ಮಾಡಲಾಗಿದೆ ಎಂದು ಸಿಂಧ್ ಮಾಹಿತಿ ಸಚಿವ ಶಾರ್ಜೀಲ್ ಮೆಮನ್ ಹೇಳಿದ್ದಾರೆ. ಈ ಬಗ್ಗೆ  ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

ಸ್ಥಳಾಂತರಗೊಂಡವರನ್ನು ಸರ್ಕಾರಿ ಶಾಲೆಗಳು ಮತ್ತು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಥಟ್ಟಾ, ಕೇತಿ ಬಂದರ್, ಸುಜಾವಲ್, ಬಾದಿನ್, ಉಮರ್ಕೋಟ್, ಥಾರ್ಪಾರ್ಕರ್, ಶಹೀದ್ ಬೆನಜಿರಾಬಾದ್, ತಂಡೋ ಮುಹಮ್ಮದ್ ಖಾನ್, ತಂಡೋ ಅಲ್ಲ್ಯಾರ್ ಮತ್ತು ಸಂಘರ್ ಜಿಲ್ಲೆಗಳಲ್ಲಿ ತೆರವು ಮಾಡಲಾಗಿದೆ ಎಂದು ಸಚಿವರು ಹೇಳಿದರು.

ಶೆರ್ರಿ ರೆಹಮಾನ್, ಪಾಕಿಸ್ತಾನದ ಫೆಡರಲ್ ಮಂತ್ರಿ ಹವಾಮಾನ ಬದಲಾವಣೆ ಬಗ್ಗೆ ಮಾತನಾಡಿ, ”ಕರಾಚಿಯು ಸಧ್ಯಕ್ಕೆ ಅಪಾಯದಲ್ಲಿಲ್ಲ. ಆದರೆ ಮಳೆ ಮತ್ತು ಬಲವಾದ ಗಾಳಿಯನ್ನು ಎದುರಿಸಲು ತುರ್ತು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ” ಎಂದು ಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...