Homeಮುಖಪುಟಗುಜರಾತ್‌ನಲ್ಲಿ ಬಿಪೊರ್‌ಜಾಯ್ ಚಂಡಮಾರುತದಿಂದ ಭೂಕುಸಿತ ಸಾಧ್ಯತೆ: 74,000ಕ್ಕೂ ಹೆಚ್ಚು ಜನರ ಸ್ಥಳಾಂತರ

ಗುಜರಾತ್‌ನಲ್ಲಿ ಬಿಪೊರ್‌ಜಾಯ್ ಚಂಡಮಾರುತದಿಂದ ಭೂಕುಸಿತ ಸಾಧ್ಯತೆ: 74,000ಕ್ಕೂ ಹೆಚ್ಚು ಜನರ ಸ್ಥಳಾಂತರ

- Advertisement -
- Advertisement -

ಬಿಪೊರ್‌ಜಾಯ್ ಚಂಡಮಾರುತವು ಗುರುವಾರ ಸಂಜೆ ಭೂಕುಸಿತವನ್ನು ಉಂಟುಮಾಡುವ ಸಾಧ್ಯತೆ ಹಾಗಾಗಿ 74,000ಕ್ಕೂ ಹೆಚ್ಚು ಜನರನ್ನು ಗುಜರಾತ್‌ನ ಅಧಿಕಾರಿಗಳು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಚಂಡಮಾರುತವು ಗುಜರಾತ್ ಕರಾವಳಿಯಲ್ಲಿ ಸಂಜೆ 4 ರಿಂದ ರಾತ್ರಿ 8 ರ ನಡುವೆ ಭೂಕುಸಿತವನ್ನು ಉಂಟುಮಾಡುವ ನಿರೀಕ್ಷೆಯಿದೆ. ಇದು ಅತ್ಯಂತ ತೀವ್ರವಾದ ಚಂಡಮಾರುತವಾಗಿ ಕರಾವಳಿಯನ್ನು ಅಪ್ಪಳಿಸಲಿದ್ದು, ಗಾಳಿಯ ವೇಗ ಗಂಟೆಗೆ 125 ರಿಂದ 135 ಕಿಲೋಮೀಟರ್ ತಲುಪಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮುಂಜಾನೆ 5.30 ಗಂಟೆಗೆ ಬಿಪೊರ್‌ಜಾಯ್ ಚಂಡಮಾರುತವು ಗುಜರಾತ್‌ನ ಜಖೌ ಬಂದರಿನಿಂದ 180 ಕಿಲೋಮೀಟರ್ ಮತ್ತು ಪಾಕಿಸ್ತಾನದ ಕರಾಚಿಯಿಂದ 270 ಕಿಲೋಮೀಟರ್ ದೂರದಲ್ಲಿದೆ.

ಚಂಡಮಾರುತದಿಂದಾಗಿ ಕಚ್, ದ್ವಾರಕಾ ಮತ್ತು ಜಾಮ್‌ನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿರುವುದಾಗಿ ಪಿಟಿಐ ಹೇಳಿದೆ.

ಈ ಬಗ್ಗೆ ರಾಜ್ಯ ಆರೋಗ್ಯ ಸಚಿವ ರುಶಿಕೇಶ್ ಪಟೇಲ್ ಮಾತನಾಡಿ, ”72 ಗ್ರಾಮಗಳು ಕಚ್‌ನ ಕರಾವಳಿಯಿಂದ 5 ಕಿಲೋಮೀಟರ್‌ಗಳ ಒಳಗೆ ಮತ್ತು ಇನ್ನೂ 48 ಹಳ್ಳಿಗಳು ಸಮುದ್ರ ತೀರದಿಂದ 5 ಕಿಲೋಮೀಟರ್ ಮತ್ತು 10 ಕಿಲೋಮೀಟರ್ ನಡುವೆ ಇವೆ. ನಾವು ಈ ಕರಾವಳಿ ಗ್ರಾಮಗಳಿಂದ ಸುಮಾರು 40,000 ಜನರನ್ನು ಸ್ಥಳಾಂತರಿಸಿದ್ದೇವೆ” ಎಂದು ಅವರು ಹೇಳಿದರು.

ಅಧಿಕೃತ ಹೇಳಿಕೆಯ ಪ್ರಕಾರ, ”74,345 ಜನರನ್ನು ಕರಾವಳಿ ಜಿಲ್ಲೆಗಳಾದ ಕಚ್, ಜಾಮ್‌ನಗರ, ಮೊರ್ಬಿ, ರಾಜ್‌ಕೋಟ್, ದ್ವಾರಕಾ, ಜುನಾಗಢ್, ಪೋರಬಂದರ್ ಮತ್ತು ಗಿರ್ ಸೋಮನಾಥ ಜಿಲ್ಲೆಗಳಲ್ಲಿ ತಾತ್ಕಾಲಿಕ ಆಶ್ರಯಕ್ಕೆ ಸ್ಥಳಾಂತರಿಸಲಾಗಿದೆ” ಎಂದು ತಿಳಿದುಬಂದಿದೆ.

ಕರಾವಳಿ ಜಿಲ್ಲೆಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ 15 ತಂಡಗಳು, ರಾಜ್ಯ ವಿಪತ್ತು ನಿರ್ವಹಣಾ ಪಡೆಯ 12 ತಂಡಗಳು, ರಸ್ತೆ ಮತ್ತು ಕಟ್ಟಡ ಇಲಾಖೆಯ 115 ತಂಡಗಳು ಮತ್ತು ವಿದ್ಯುತ್ ಇಲಾಖೆಯ 397 ತಂಡಗಳನ್ನು ನಿಯೋಜಿಸಲಾಗಿದೆ.

ದಿ ಹಿಂದೂ ಪ್ರಕಾರ, 50ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಲಾಗಿದೆ. ಕೆಲವು ಜಿಲ್ಲೆಗಳಲ್ಲಿ ಗುಜರಾತ್ ರಾಜ್ಯ ರಸ್ತೆ ಸಾರಿಗೆ ಸೇವೆಗೆ ಸೇರಿದ ಬಸ್‌ಗಳನ್ನು ಸಹ ರದ್ದುಗೊಳಿಸಲಾಗಿದೆ.

ದ್ವಾರಕಾದಲ್ಲಿರುವ ದ್ವಾರಕಾಧೀಶ ದೇವಾಲಯ ಮತ್ತು ಗಿರ್ ಸೋಮನಾಥ ಜಿಲ್ಲೆಯ ಸೋಮನಾಥ ದೇವಾಲಯವನ್ನು ಗುರುವಾರ ಮುಚ್ಚಲಾಗುವುದು.

ಬಿಪೊರ್‌ಜಾಯ್, ಬಂಗಾಳಿ ಭಾಷೆಯಲ್ಲಿ ವಿಪತ್ತು ಎಂದರ್ಥ, 25 ವರ್ಷಗಳ ನಂತರ ಜೂನ್‌ನಲ್ಲಿ ಗುಜರಾತ್‌ಗೆ ಅಪ್ಪಳಿಸುವ ಮೊದಲ ಚಂಡಮಾರುತ ಎಂದು ಹೇಳಲಾಗುತ್ತಿದೆ. ಜೂನ್ 1998ರಲ್ಲಿ, ಅತ್ಯಂತ ತೀವ್ರವಾದ ಚಂಡಮಾರುತವು ಕಚ್ ಮತ್ತು ಸೌರಾಷ್ಟ್ರದ ಕರಾವಳಿ ಪ್ರದೇಶಗಳಿಗೆ ಅಪ್ಪಳಿಸಿತು, ಸುಮಾರು 3,000 ಜನರು ಸಾವಿಗೀಡಾಗಿದ್ದರು.

ಪಾಕಿಸ್ತಾನದಲ್ಲಿ 62,000 ಜನರನ್ನು ಸ್ಥಳಾಂತರ

ಚಂಡಮಾರುತದ ದೃಷ್ಟಿಯಿಂದ ಪಾಕಿಸ್ತಾನದ ಅಧಿಕಾರಿಗಳು 64,107 ಜನರನ್ನು ಹೆಚ್ಚಿನ ಅಪಾಯದ ಪ್ರದೇಶಗಳಿಂದ ಸ್ಥಳಾಂತರಿಸಿದ್ದಾರೆ. ಅವರನ್ನು 75 ಪರಿಹಾರ ಶಿಬಿರಗಳಲ್ಲಿರಲು ವ್ಯವಸ್ಥೆ ಮಾಡಲಾಗಿದೆ ಎಂದು ಸಿಂಧ್ ಮಾಹಿತಿ ಸಚಿವ ಶಾರ್ಜೀಲ್ ಮೆಮನ್ ಹೇಳಿದ್ದಾರೆ. ಈ ಬಗ್ಗೆ  ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

ಸ್ಥಳಾಂತರಗೊಂಡವರನ್ನು ಸರ್ಕಾರಿ ಶಾಲೆಗಳು ಮತ್ತು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಥಟ್ಟಾ, ಕೇತಿ ಬಂದರ್, ಸುಜಾವಲ್, ಬಾದಿನ್, ಉಮರ್ಕೋಟ್, ಥಾರ್ಪಾರ್ಕರ್, ಶಹೀದ್ ಬೆನಜಿರಾಬಾದ್, ತಂಡೋ ಮುಹಮ್ಮದ್ ಖಾನ್, ತಂಡೋ ಅಲ್ಲ್ಯಾರ್ ಮತ್ತು ಸಂಘರ್ ಜಿಲ್ಲೆಗಳಲ್ಲಿ ತೆರವು ಮಾಡಲಾಗಿದೆ ಎಂದು ಸಚಿವರು ಹೇಳಿದರು.

ಶೆರ್ರಿ ರೆಹಮಾನ್, ಪಾಕಿಸ್ತಾನದ ಫೆಡರಲ್ ಮಂತ್ರಿ ಹವಾಮಾನ ಬದಲಾವಣೆ ಬಗ್ಗೆ ಮಾತನಾಡಿ, ”ಕರಾಚಿಯು ಸಧ್ಯಕ್ಕೆ ಅಪಾಯದಲ್ಲಿಲ್ಲ. ಆದರೆ ಮಳೆ ಮತ್ತು ಬಲವಾದ ಗಾಳಿಯನ್ನು ಎದುರಿಸಲು ತುರ್ತು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ” ಎಂದು ಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...