Homeಮುಖಪುಟಗುಜರಾತ್‌ನಲ್ಲಿ ಬಿಪೊರ್‌ಜಾಯ್ ಚಂಡಮಾರುತದಿಂದ ಭೂಕುಸಿತ ಸಾಧ್ಯತೆ: 74,000ಕ್ಕೂ ಹೆಚ್ಚು ಜನರ ಸ್ಥಳಾಂತರ

ಗುಜರಾತ್‌ನಲ್ಲಿ ಬಿಪೊರ್‌ಜಾಯ್ ಚಂಡಮಾರುತದಿಂದ ಭೂಕುಸಿತ ಸಾಧ್ಯತೆ: 74,000ಕ್ಕೂ ಹೆಚ್ಚು ಜನರ ಸ್ಥಳಾಂತರ

- Advertisement -
- Advertisement -

ಬಿಪೊರ್‌ಜಾಯ್ ಚಂಡಮಾರುತವು ಗುರುವಾರ ಸಂಜೆ ಭೂಕುಸಿತವನ್ನು ಉಂಟುಮಾಡುವ ಸಾಧ್ಯತೆ ಹಾಗಾಗಿ 74,000ಕ್ಕೂ ಹೆಚ್ಚು ಜನರನ್ನು ಗುಜರಾತ್‌ನ ಅಧಿಕಾರಿಗಳು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಚಂಡಮಾರುತವು ಗುಜರಾತ್ ಕರಾವಳಿಯಲ್ಲಿ ಸಂಜೆ 4 ರಿಂದ ರಾತ್ರಿ 8 ರ ನಡುವೆ ಭೂಕುಸಿತವನ್ನು ಉಂಟುಮಾಡುವ ನಿರೀಕ್ಷೆಯಿದೆ. ಇದು ಅತ್ಯಂತ ತೀವ್ರವಾದ ಚಂಡಮಾರುತವಾಗಿ ಕರಾವಳಿಯನ್ನು ಅಪ್ಪಳಿಸಲಿದ್ದು, ಗಾಳಿಯ ವೇಗ ಗಂಟೆಗೆ 125 ರಿಂದ 135 ಕಿಲೋಮೀಟರ್ ತಲುಪಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮುಂಜಾನೆ 5.30 ಗಂಟೆಗೆ ಬಿಪೊರ್‌ಜಾಯ್ ಚಂಡಮಾರುತವು ಗುಜರಾತ್‌ನ ಜಖೌ ಬಂದರಿನಿಂದ 180 ಕಿಲೋಮೀಟರ್ ಮತ್ತು ಪಾಕಿಸ್ತಾನದ ಕರಾಚಿಯಿಂದ 270 ಕಿಲೋಮೀಟರ್ ದೂರದಲ್ಲಿದೆ.

ಚಂಡಮಾರುತದಿಂದಾಗಿ ಕಚ್, ದ್ವಾರಕಾ ಮತ್ತು ಜಾಮ್‌ನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿರುವುದಾಗಿ ಪಿಟಿಐ ಹೇಳಿದೆ.

ಈ ಬಗ್ಗೆ ರಾಜ್ಯ ಆರೋಗ್ಯ ಸಚಿವ ರುಶಿಕೇಶ್ ಪಟೇಲ್ ಮಾತನಾಡಿ, ”72 ಗ್ರಾಮಗಳು ಕಚ್‌ನ ಕರಾವಳಿಯಿಂದ 5 ಕಿಲೋಮೀಟರ್‌ಗಳ ಒಳಗೆ ಮತ್ತು ಇನ್ನೂ 48 ಹಳ್ಳಿಗಳು ಸಮುದ್ರ ತೀರದಿಂದ 5 ಕಿಲೋಮೀಟರ್ ಮತ್ತು 10 ಕಿಲೋಮೀಟರ್ ನಡುವೆ ಇವೆ. ನಾವು ಈ ಕರಾವಳಿ ಗ್ರಾಮಗಳಿಂದ ಸುಮಾರು 40,000 ಜನರನ್ನು ಸ್ಥಳಾಂತರಿಸಿದ್ದೇವೆ” ಎಂದು ಅವರು ಹೇಳಿದರು.

ಅಧಿಕೃತ ಹೇಳಿಕೆಯ ಪ್ರಕಾರ, ”74,345 ಜನರನ್ನು ಕರಾವಳಿ ಜಿಲ್ಲೆಗಳಾದ ಕಚ್, ಜಾಮ್‌ನಗರ, ಮೊರ್ಬಿ, ರಾಜ್‌ಕೋಟ್, ದ್ವಾರಕಾ, ಜುನಾಗಢ್, ಪೋರಬಂದರ್ ಮತ್ತು ಗಿರ್ ಸೋಮನಾಥ ಜಿಲ್ಲೆಗಳಲ್ಲಿ ತಾತ್ಕಾಲಿಕ ಆಶ್ರಯಕ್ಕೆ ಸ್ಥಳಾಂತರಿಸಲಾಗಿದೆ” ಎಂದು ತಿಳಿದುಬಂದಿದೆ.

ಕರಾವಳಿ ಜಿಲ್ಲೆಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ 15 ತಂಡಗಳು, ರಾಜ್ಯ ವಿಪತ್ತು ನಿರ್ವಹಣಾ ಪಡೆಯ 12 ತಂಡಗಳು, ರಸ್ತೆ ಮತ್ತು ಕಟ್ಟಡ ಇಲಾಖೆಯ 115 ತಂಡಗಳು ಮತ್ತು ವಿದ್ಯುತ್ ಇಲಾಖೆಯ 397 ತಂಡಗಳನ್ನು ನಿಯೋಜಿಸಲಾಗಿದೆ.

ದಿ ಹಿಂದೂ ಪ್ರಕಾರ, 50ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಲಾಗಿದೆ. ಕೆಲವು ಜಿಲ್ಲೆಗಳಲ್ಲಿ ಗುಜರಾತ್ ರಾಜ್ಯ ರಸ್ತೆ ಸಾರಿಗೆ ಸೇವೆಗೆ ಸೇರಿದ ಬಸ್‌ಗಳನ್ನು ಸಹ ರದ್ದುಗೊಳಿಸಲಾಗಿದೆ.

ದ್ವಾರಕಾದಲ್ಲಿರುವ ದ್ವಾರಕಾಧೀಶ ದೇವಾಲಯ ಮತ್ತು ಗಿರ್ ಸೋಮನಾಥ ಜಿಲ್ಲೆಯ ಸೋಮನಾಥ ದೇವಾಲಯವನ್ನು ಗುರುವಾರ ಮುಚ್ಚಲಾಗುವುದು.

ಬಿಪೊರ್‌ಜಾಯ್, ಬಂಗಾಳಿ ಭಾಷೆಯಲ್ಲಿ ವಿಪತ್ತು ಎಂದರ್ಥ, 25 ವರ್ಷಗಳ ನಂತರ ಜೂನ್‌ನಲ್ಲಿ ಗುಜರಾತ್‌ಗೆ ಅಪ್ಪಳಿಸುವ ಮೊದಲ ಚಂಡಮಾರುತ ಎಂದು ಹೇಳಲಾಗುತ್ತಿದೆ. ಜೂನ್ 1998ರಲ್ಲಿ, ಅತ್ಯಂತ ತೀವ್ರವಾದ ಚಂಡಮಾರುತವು ಕಚ್ ಮತ್ತು ಸೌರಾಷ್ಟ್ರದ ಕರಾವಳಿ ಪ್ರದೇಶಗಳಿಗೆ ಅಪ್ಪಳಿಸಿತು, ಸುಮಾರು 3,000 ಜನರು ಸಾವಿಗೀಡಾಗಿದ್ದರು.

ಪಾಕಿಸ್ತಾನದಲ್ಲಿ 62,000 ಜನರನ್ನು ಸ್ಥಳಾಂತರ

ಚಂಡಮಾರುತದ ದೃಷ್ಟಿಯಿಂದ ಪಾಕಿಸ್ತಾನದ ಅಧಿಕಾರಿಗಳು 64,107 ಜನರನ್ನು ಹೆಚ್ಚಿನ ಅಪಾಯದ ಪ್ರದೇಶಗಳಿಂದ ಸ್ಥಳಾಂತರಿಸಿದ್ದಾರೆ. ಅವರನ್ನು 75 ಪರಿಹಾರ ಶಿಬಿರಗಳಲ್ಲಿರಲು ವ್ಯವಸ್ಥೆ ಮಾಡಲಾಗಿದೆ ಎಂದು ಸಿಂಧ್ ಮಾಹಿತಿ ಸಚಿವ ಶಾರ್ಜೀಲ್ ಮೆಮನ್ ಹೇಳಿದ್ದಾರೆ. ಈ ಬಗ್ಗೆ  ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

ಸ್ಥಳಾಂತರಗೊಂಡವರನ್ನು ಸರ್ಕಾರಿ ಶಾಲೆಗಳು ಮತ್ತು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಥಟ್ಟಾ, ಕೇತಿ ಬಂದರ್, ಸುಜಾವಲ್, ಬಾದಿನ್, ಉಮರ್ಕೋಟ್, ಥಾರ್ಪಾರ್ಕರ್, ಶಹೀದ್ ಬೆನಜಿರಾಬಾದ್, ತಂಡೋ ಮುಹಮ್ಮದ್ ಖಾನ್, ತಂಡೋ ಅಲ್ಲ್ಯಾರ್ ಮತ್ತು ಸಂಘರ್ ಜಿಲ್ಲೆಗಳಲ್ಲಿ ತೆರವು ಮಾಡಲಾಗಿದೆ ಎಂದು ಸಚಿವರು ಹೇಳಿದರು.

ಶೆರ್ರಿ ರೆಹಮಾನ್, ಪಾಕಿಸ್ತಾನದ ಫೆಡರಲ್ ಮಂತ್ರಿ ಹವಾಮಾನ ಬದಲಾವಣೆ ಬಗ್ಗೆ ಮಾತನಾಡಿ, ”ಕರಾಚಿಯು ಸಧ್ಯಕ್ಕೆ ಅಪಾಯದಲ್ಲಿಲ್ಲ. ಆದರೆ ಮಳೆ ಮತ್ತು ಬಲವಾದ ಗಾಳಿಯನ್ನು ಎದುರಿಸಲು ತುರ್ತು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ” ಎಂದು ಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...