Homeಮುಖಪುಟಗುಜರಾತ್‌ನಲ್ಲಿ ಬಿಪೊರ್‌ಜಾಯ್ ಚಂಡಮಾರುತದಿಂದ ಭೂಕುಸಿತ ಸಾಧ್ಯತೆ: 74,000ಕ್ಕೂ ಹೆಚ್ಚು ಜನರ ಸ್ಥಳಾಂತರ

ಗುಜರಾತ್‌ನಲ್ಲಿ ಬಿಪೊರ್‌ಜಾಯ್ ಚಂಡಮಾರುತದಿಂದ ಭೂಕುಸಿತ ಸಾಧ್ಯತೆ: 74,000ಕ್ಕೂ ಹೆಚ್ಚು ಜನರ ಸ್ಥಳಾಂತರ

- Advertisement -
- Advertisement -

ಬಿಪೊರ್‌ಜಾಯ್ ಚಂಡಮಾರುತವು ಗುರುವಾರ ಸಂಜೆ ಭೂಕುಸಿತವನ್ನು ಉಂಟುಮಾಡುವ ಸಾಧ್ಯತೆ ಹಾಗಾಗಿ 74,000ಕ್ಕೂ ಹೆಚ್ಚು ಜನರನ್ನು ಗುಜರಾತ್‌ನ ಅಧಿಕಾರಿಗಳು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಚಂಡಮಾರುತವು ಗುಜರಾತ್ ಕರಾವಳಿಯಲ್ಲಿ ಸಂಜೆ 4 ರಿಂದ ರಾತ್ರಿ 8 ರ ನಡುವೆ ಭೂಕುಸಿತವನ್ನು ಉಂಟುಮಾಡುವ ನಿರೀಕ್ಷೆಯಿದೆ. ಇದು ಅತ್ಯಂತ ತೀವ್ರವಾದ ಚಂಡಮಾರುತವಾಗಿ ಕರಾವಳಿಯನ್ನು ಅಪ್ಪಳಿಸಲಿದ್ದು, ಗಾಳಿಯ ವೇಗ ಗಂಟೆಗೆ 125 ರಿಂದ 135 ಕಿಲೋಮೀಟರ್ ತಲುಪಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮುಂಜಾನೆ 5.30 ಗಂಟೆಗೆ ಬಿಪೊರ್‌ಜಾಯ್ ಚಂಡಮಾರುತವು ಗುಜರಾತ್‌ನ ಜಖೌ ಬಂದರಿನಿಂದ 180 ಕಿಲೋಮೀಟರ್ ಮತ್ತು ಪಾಕಿಸ್ತಾನದ ಕರಾಚಿಯಿಂದ 270 ಕಿಲೋಮೀಟರ್ ದೂರದಲ್ಲಿದೆ.

ಚಂಡಮಾರುತದಿಂದಾಗಿ ಕಚ್, ದ್ವಾರಕಾ ಮತ್ತು ಜಾಮ್‌ನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿರುವುದಾಗಿ ಪಿಟಿಐ ಹೇಳಿದೆ.

ಈ ಬಗ್ಗೆ ರಾಜ್ಯ ಆರೋಗ್ಯ ಸಚಿವ ರುಶಿಕೇಶ್ ಪಟೇಲ್ ಮಾತನಾಡಿ, ”72 ಗ್ರಾಮಗಳು ಕಚ್‌ನ ಕರಾವಳಿಯಿಂದ 5 ಕಿಲೋಮೀಟರ್‌ಗಳ ಒಳಗೆ ಮತ್ತು ಇನ್ನೂ 48 ಹಳ್ಳಿಗಳು ಸಮುದ್ರ ತೀರದಿಂದ 5 ಕಿಲೋಮೀಟರ್ ಮತ್ತು 10 ಕಿಲೋಮೀಟರ್ ನಡುವೆ ಇವೆ. ನಾವು ಈ ಕರಾವಳಿ ಗ್ರಾಮಗಳಿಂದ ಸುಮಾರು 40,000 ಜನರನ್ನು ಸ್ಥಳಾಂತರಿಸಿದ್ದೇವೆ” ಎಂದು ಅವರು ಹೇಳಿದರು.

ಅಧಿಕೃತ ಹೇಳಿಕೆಯ ಪ್ರಕಾರ, ”74,345 ಜನರನ್ನು ಕರಾವಳಿ ಜಿಲ್ಲೆಗಳಾದ ಕಚ್, ಜಾಮ್‌ನಗರ, ಮೊರ್ಬಿ, ರಾಜ್‌ಕೋಟ್, ದ್ವಾರಕಾ, ಜುನಾಗಢ್, ಪೋರಬಂದರ್ ಮತ್ತು ಗಿರ್ ಸೋಮನಾಥ ಜಿಲ್ಲೆಗಳಲ್ಲಿ ತಾತ್ಕಾಲಿಕ ಆಶ್ರಯಕ್ಕೆ ಸ್ಥಳಾಂತರಿಸಲಾಗಿದೆ” ಎಂದು ತಿಳಿದುಬಂದಿದೆ.

ಕರಾವಳಿ ಜಿಲ್ಲೆಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ 15 ತಂಡಗಳು, ರಾಜ್ಯ ವಿಪತ್ತು ನಿರ್ವಹಣಾ ಪಡೆಯ 12 ತಂಡಗಳು, ರಸ್ತೆ ಮತ್ತು ಕಟ್ಟಡ ಇಲಾಖೆಯ 115 ತಂಡಗಳು ಮತ್ತು ವಿದ್ಯುತ್ ಇಲಾಖೆಯ 397 ತಂಡಗಳನ್ನು ನಿಯೋಜಿಸಲಾಗಿದೆ.

ದಿ ಹಿಂದೂ ಪ್ರಕಾರ, 50ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಲಾಗಿದೆ. ಕೆಲವು ಜಿಲ್ಲೆಗಳಲ್ಲಿ ಗುಜರಾತ್ ರಾಜ್ಯ ರಸ್ತೆ ಸಾರಿಗೆ ಸೇವೆಗೆ ಸೇರಿದ ಬಸ್‌ಗಳನ್ನು ಸಹ ರದ್ದುಗೊಳಿಸಲಾಗಿದೆ.

ದ್ವಾರಕಾದಲ್ಲಿರುವ ದ್ವಾರಕಾಧೀಶ ದೇವಾಲಯ ಮತ್ತು ಗಿರ್ ಸೋಮನಾಥ ಜಿಲ್ಲೆಯ ಸೋಮನಾಥ ದೇವಾಲಯವನ್ನು ಗುರುವಾರ ಮುಚ್ಚಲಾಗುವುದು.

ಬಿಪೊರ್‌ಜಾಯ್, ಬಂಗಾಳಿ ಭಾಷೆಯಲ್ಲಿ ವಿಪತ್ತು ಎಂದರ್ಥ, 25 ವರ್ಷಗಳ ನಂತರ ಜೂನ್‌ನಲ್ಲಿ ಗುಜರಾತ್‌ಗೆ ಅಪ್ಪಳಿಸುವ ಮೊದಲ ಚಂಡಮಾರುತ ಎಂದು ಹೇಳಲಾಗುತ್ತಿದೆ. ಜೂನ್ 1998ರಲ್ಲಿ, ಅತ್ಯಂತ ತೀವ್ರವಾದ ಚಂಡಮಾರುತವು ಕಚ್ ಮತ್ತು ಸೌರಾಷ್ಟ್ರದ ಕರಾವಳಿ ಪ್ರದೇಶಗಳಿಗೆ ಅಪ್ಪಳಿಸಿತು, ಸುಮಾರು 3,000 ಜನರು ಸಾವಿಗೀಡಾಗಿದ್ದರು.

ಪಾಕಿಸ್ತಾನದಲ್ಲಿ 62,000 ಜನರನ್ನು ಸ್ಥಳಾಂತರ

ಚಂಡಮಾರುತದ ದೃಷ್ಟಿಯಿಂದ ಪಾಕಿಸ್ತಾನದ ಅಧಿಕಾರಿಗಳು 64,107 ಜನರನ್ನು ಹೆಚ್ಚಿನ ಅಪಾಯದ ಪ್ರದೇಶಗಳಿಂದ ಸ್ಥಳಾಂತರಿಸಿದ್ದಾರೆ. ಅವರನ್ನು 75 ಪರಿಹಾರ ಶಿಬಿರಗಳಲ್ಲಿರಲು ವ್ಯವಸ್ಥೆ ಮಾಡಲಾಗಿದೆ ಎಂದು ಸಿಂಧ್ ಮಾಹಿತಿ ಸಚಿವ ಶಾರ್ಜೀಲ್ ಮೆಮನ್ ಹೇಳಿದ್ದಾರೆ. ಈ ಬಗ್ಗೆ  ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

ಸ್ಥಳಾಂತರಗೊಂಡವರನ್ನು ಸರ್ಕಾರಿ ಶಾಲೆಗಳು ಮತ್ತು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಥಟ್ಟಾ, ಕೇತಿ ಬಂದರ್, ಸುಜಾವಲ್, ಬಾದಿನ್, ಉಮರ್ಕೋಟ್, ಥಾರ್ಪಾರ್ಕರ್, ಶಹೀದ್ ಬೆನಜಿರಾಬಾದ್, ತಂಡೋ ಮುಹಮ್ಮದ್ ಖಾನ್, ತಂಡೋ ಅಲ್ಲ್ಯಾರ್ ಮತ್ತು ಸಂಘರ್ ಜಿಲ್ಲೆಗಳಲ್ಲಿ ತೆರವು ಮಾಡಲಾಗಿದೆ ಎಂದು ಸಚಿವರು ಹೇಳಿದರು.

ಶೆರ್ರಿ ರೆಹಮಾನ್, ಪಾಕಿಸ್ತಾನದ ಫೆಡರಲ್ ಮಂತ್ರಿ ಹವಾಮಾನ ಬದಲಾವಣೆ ಬಗ್ಗೆ ಮಾತನಾಡಿ, ”ಕರಾಚಿಯು ಸಧ್ಯಕ್ಕೆ ಅಪಾಯದಲ್ಲಿಲ್ಲ. ಆದರೆ ಮಳೆ ಮತ್ತು ಬಲವಾದ ಗಾಳಿಯನ್ನು ಎದುರಿಸಲು ತುರ್ತು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ” ಎಂದು ಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...