Homeಅಂತರಾಷ್ಟ್ರೀಯದಿತ್ವಾ ಚಂಡಮಾರುತ : ಶ್ರೀಲಂಕಾದಲ್ಲಿ 123 ಸಾವು, ತಮಿಳುನಾಡಿನಲ್ಲಿ ರೆಡ್ ಅಲರ್ಟ್ ಘೋಷಣೆ

ದಿತ್ವಾ ಚಂಡಮಾರುತ : ಶ್ರೀಲಂಕಾದಲ್ಲಿ 123 ಸಾವು, ತಮಿಳುನಾಡಿನಲ್ಲಿ ರೆಡ್ ಅಲರ್ಟ್ ಘೋಷಣೆ

- Advertisement -
- Advertisement -

ದಿತ್ವಾ ಚಂಡಮಾರುತದಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತಗಳಿಂದಾಗಿ ಶ್ರೀಲಂಕಾದಲ್ಲಿ ಕನಿಷ್ಠ 123 ಜನರು ಸಾವನ್ನಪ್ಪಿದ್ದಾರೆ ಮತ್ತು 130ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ ಎಂದು ದೇಶದ ವಿಪತ್ತು ನಿರ್ವಹಣಾ ಕೇಂದ್ರವನ್ನು ಉಲ್ಲೇಖಿಸಿ ಸುದ್ದಿ ಎಎಫ್‌ಪಿ ಶನಿವಾರ (ನ.29) ವರದಿ ಮಾಡಿದೆ.

ಶ್ರೀಲಂಕಾ ಸರ್ಕಾರ ಶನಿವಾರ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದೆ.

ಪ್ರಸ್ತುತ ಚಂಡಮಾರುತವು ಶ್ರೀಲಂಕಾ ತೊರೆದು ದಕ್ಷಿಣ ಭಾರತದ ಕರಾವಳಿಯ ಕಡೆಗೆ ಚಲಿಸುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಶನಿವಾರ ಮಧ್ಯಾಹ್ನ 2 ಗಂಟೆಗೆ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ, ದಿತ್ವಾ ಚಂಡಮಾರುತವು ಶ್ರೀಲಂಕಾದ ಉತ್ತರ ಭಾಗಗಳು ಮತ್ತು ನೈಋತ್ಯ ಬಂಗಾಳಕೊಲ್ಲಿಯ ಪಕ್ಕದ ಭಾಗಗಳ ಮೇಲೆ ಕೇಂದ್ರೀಕೃತವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿತ್ತು.

ನಂತರ ಸಂಜೆ 4.46ಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ನೈಋತ್ಯ ಬಂಗಾಳಕೊಲ್ಲಿಯಲ್ಲಿ ಬೀಸುತ್ತಿರುವ ಚಂಡಮಾರುತವು ಉತ್ತರ-ವಾಯುವ್ಯ ದಿಕ್ಕಿಗೆ ಚಲಿಸುತ್ತಿದ್ದು, ಭಾನುವಾರ ಮುಂಜಾನೆ ಉತ್ತರ ತಮಿಳುನಾಡು-ಪುದುಚೇರಿ-ದಕ್ಷಿಣ ಆಂಧ್ರಪ್ರದೇಶ ಕರಾವಳಿಯನ್ನು ತಲುಪುವ ನಿರೀಕ್ಷೆಯಿದೆ ಎಂದು ಹೇಳಿತ್ತು.

ಭಾನುವಾರದ (ನ.30) ವರದಿಗಳ ಪ್ರಕಾರ, ದಿತ್ವಾ ಚಂಡಮಾರುತ ಭಾರತದ ಕರಾವಳಿಗೆ ನೇರವಾಗಿ ತಲುಪಿಲ್ಲ. ಅದು ಇನ್ನೂ ಬಂಗಾಳ ಕೊಲ್ಲಿಯ ದಕ್ಷಿಣ ಪಶ್ಚಿಮ ಭಾಗದಲ್ಲಿ ಸುಮಾರು 90 ಕಿ.ಮೀ. ದೂರದಲ್ಲಿ ಕರಾವಳಿಯ ಸಮೀಪದಲ್ಲಿದ್ದು, ಉತ್ತರ ದಿಕ್ಕಿನಲ್ಲಿ 5 ಕಿ.ಮೀ./ಗಂಟೆ ವೇಗದಲ್ಲಿ ಸಾಗುತ್ತಿದೆ. ಆದರೆ, ಚಂಡಮಾರುತದ ಪರಿಣಾಮ ತಮಿಳುನಾಡು, ಆಂಧ್ರ ಕರಾವಳಿಯಲ್ಲಿ ಭಾರೀ ಮಳೆ ಮತ್ತು ಗಾಳಿ ಶುರುವಾಗಿದೆ.

ಚಂಡುಮಾರುತದ ಹಿನ್ನೆಲೆ ತಮಿಳುನಾಡಿನ ಕರಾವಳಿ ಪ್ರದೇಶದ ಜನರು ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸಲು ಮತ್ತು ಮನೆಯೊಳಗೆ ಇರಲು ಸೂಚಿಸಲಾಗಿದೆ.

ತಮಿಳುನಾಡಿನ ಚೆಂಗಲ್ಪಟ್ಟು, ವಿಲುಪ್ಪುರಂ, ಕಡಲೂರು, ಮೈಲಾಡುತುರೈ ಮತ್ತು ನಾಗಪಟ್ಟಣಂ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ಪುದುಚೇರಿ ಮತ್ತು ಕಾರೈಕಲ್‌ಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದಿದ್ದ ಐಎಂಡಿ, ಶನಿವಾರ ರೆಡ್ ಅಲರ್ಟ್ ಘೋಷಿಸಿತ್ತು.

ಮುಂದಿನ ಎರಡು ದಿನಗಳವರೆಗೆ ತಮಿಳುನಾಡು, ದಕ್ಷಿಣ ಆಂಧ್ರಪ್ರದೇಶ ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ದಿತ್ವಾ ಚಂಡಮಾರುತದ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಾದ್ಯಂತ ಸುಮಾರು 6,000 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ ಎಂದು ತಮಿಳುನಾಡು ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಕೆಕೆಎಸ್ಎಸ್ಆರ್ ರಾಮಚಂದ್ರನ್ ತಿಳಿಸಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ಎರಡರ 28 ತಂಡಗಳನ್ನು ನಿಯೋಜಿಸಲಾಗಿದೆ. ನಾವು ಹೆಚ್ಚುವರಿಯಾಗಿ 10 ತಂಡಗಳನ್ನು ಕೇಳಿದ್ದೇವೆ. ಅವರು ವಿಮಾನದ ಮೂಲಕ ಬರುತ್ತಿದ್ದಾರೆ. ಯಾವುದೇ ವಿಪತ್ತು ಸಂಭವಿಸಿದಲ್ಲಿ ನಾವು ಕೋಸ್ಟ್ ಗಾರ್ಡ್‌ನ ಸಹಾಯವನ್ನು ಕೂಡ ಕೇಳಿದ್ದೇವೆ ಎಂದು ರಾಮಚಂದ್ರನ್ ಹೇಳಿದ್ದಾರೆ.

ಪ್ರತಿಕೂಲ ಹವಾಮಾನದ ಹಿನ್ನೆಲೆ, ತಮಿಳುನಾಡಿನ ಹಲವಾರು ಜಿಲ್ಲೆಗಳಲ್ಲಿ 54 ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಚೆನ್ನೈ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ.

ಚೆನ್ನೈನಿಂದ ತೂತುಕುಡಿ, ಮಧುರೈ ಮತ್ತು ತಿರುಚ್ಚಿಗೆ ಹೋಗುವ ಹದಿನಾರು ವಿಮಾನಗಳ ಸಂಚಾರ ರದ್ದಾಗಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಅದೇ ರೀತಿ, ತೂತುಕುಡಿ, ತಿರುಚ್ಚಿ ಮತ್ತು ಮಧುರೈನಿಂದ ಚೆನ್ನೈಗೆ ಹೋಗುವ 16 ವಿಮಾನಗಳ ಸಂಚಾರವನ್ನು ಸಹ ಸ್ಥಗಿತಗೊಳಿಸಲಾಗಿದೆ.

ಮಧುರೈ, ತಿರುಚ್ಚಿ ಮತ್ತು ಪುದುಚೇರಿಯಿಂದ ಬೆಂಗಳೂರು ಮತ್ತು ಹೈದರಾಬಾದ್‌ಗೆ ಹೋಗುವ 22 ವಿಮಾನಗಳ ಸಂಚಾರ ಕೂಡ ಸ್ಥಗಿತಗೊಂಡಿದೆ.

ಭಾರತೀಯ ವಾಯುಪಡೆಯ ವಿಮಾನವು ನಾಲ್ಕು ಸ್ನಿಫರ್ ನಾಯಿಗಳು ಸೇರಿದಂತೆ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯ 80 ಸಿಬ್ಬಂದಿಯೊಂದಿಗೆ ಪರಿಹಾರ ಸಾಮಗ್ರಿಗಳು ಮತ್ತು ರಕ್ಷಣಾ ಸಾಧನಗಳೊಂದಿಗೆ ಶ್ರೀಲಂಕಾವನ್ನು ತಲುಪಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...