Homeಅಂತರಾಷ್ಟ್ರೀಯದಿತ್ವಾ ಚಂಡಮಾರುತ : ಶ್ರೀಲಂಕಾದಲ್ಲಿ 123 ಸಾವು, ತಮಿಳುನಾಡಿನಲ್ಲಿ ರೆಡ್ ಅಲರ್ಟ್ ಘೋಷಣೆ

ದಿತ್ವಾ ಚಂಡಮಾರುತ : ಶ್ರೀಲಂಕಾದಲ್ಲಿ 123 ಸಾವು, ತಮಿಳುನಾಡಿನಲ್ಲಿ ರೆಡ್ ಅಲರ್ಟ್ ಘೋಷಣೆ

- Advertisement -
- Advertisement -

ದಿತ್ವಾ ಚಂಡಮಾರುತದಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತಗಳಿಂದಾಗಿ ಶ್ರೀಲಂಕಾದಲ್ಲಿ ಕನಿಷ್ಠ 123 ಜನರು ಸಾವನ್ನಪ್ಪಿದ್ದಾರೆ ಮತ್ತು 130ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ ಎಂದು ದೇಶದ ವಿಪತ್ತು ನಿರ್ವಹಣಾ ಕೇಂದ್ರವನ್ನು ಉಲ್ಲೇಖಿಸಿ ಸುದ್ದಿ ಎಎಫ್‌ಪಿ ಶನಿವಾರ (ನ.29) ವರದಿ ಮಾಡಿದೆ.

ಶ್ರೀಲಂಕಾ ಸರ್ಕಾರ ಶನಿವಾರ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದೆ.

ಪ್ರಸ್ತುತ ಚಂಡಮಾರುತವು ಶ್ರೀಲಂಕಾ ತೊರೆದು ದಕ್ಷಿಣ ಭಾರತದ ಕರಾವಳಿಯ ಕಡೆಗೆ ಚಲಿಸುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಶನಿವಾರ ಮಧ್ಯಾಹ್ನ 2 ಗಂಟೆಗೆ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ, ದಿತ್ವಾ ಚಂಡಮಾರುತವು ಶ್ರೀಲಂಕಾದ ಉತ್ತರ ಭಾಗಗಳು ಮತ್ತು ನೈಋತ್ಯ ಬಂಗಾಳಕೊಲ್ಲಿಯ ಪಕ್ಕದ ಭಾಗಗಳ ಮೇಲೆ ಕೇಂದ್ರೀಕೃತವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿತ್ತು.

ನಂತರ ಸಂಜೆ 4.46ಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ನೈಋತ್ಯ ಬಂಗಾಳಕೊಲ್ಲಿಯಲ್ಲಿ ಬೀಸುತ್ತಿರುವ ಚಂಡಮಾರುತವು ಉತ್ತರ-ವಾಯುವ್ಯ ದಿಕ್ಕಿಗೆ ಚಲಿಸುತ್ತಿದ್ದು, ಭಾನುವಾರ ಮುಂಜಾನೆ ಉತ್ತರ ತಮಿಳುನಾಡು-ಪುದುಚೇರಿ-ದಕ್ಷಿಣ ಆಂಧ್ರಪ್ರದೇಶ ಕರಾವಳಿಯನ್ನು ತಲುಪುವ ನಿರೀಕ್ಷೆಯಿದೆ ಎಂದು ಹೇಳಿತ್ತು.

ಭಾನುವಾರದ (ನ.30) ವರದಿಗಳ ಪ್ರಕಾರ, ದಿತ್ವಾ ಚಂಡಮಾರುತ ಭಾರತದ ಕರಾವಳಿಗೆ ನೇರವಾಗಿ ತಲುಪಿಲ್ಲ. ಅದು ಇನ್ನೂ ಬಂಗಾಳ ಕೊಲ್ಲಿಯ ದಕ್ಷಿಣ ಪಶ್ಚಿಮ ಭಾಗದಲ್ಲಿ ಸುಮಾರು 90 ಕಿ.ಮೀ. ದೂರದಲ್ಲಿ ಕರಾವಳಿಯ ಸಮೀಪದಲ್ಲಿದ್ದು, ಉತ್ತರ ದಿಕ್ಕಿನಲ್ಲಿ 5 ಕಿ.ಮೀ./ಗಂಟೆ ವೇಗದಲ್ಲಿ ಸಾಗುತ್ತಿದೆ. ಆದರೆ, ಚಂಡಮಾರುತದ ಪರಿಣಾಮ ತಮಿಳುನಾಡು, ಆಂಧ್ರ ಕರಾವಳಿಯಲ್ಲಿ ಭಾರೀ ಮಳೆ ಮತ್ತು ಗಾಳಿ ಶುರುವಾಗಿದೆ.

ಚಂಡುಮಾರುತದ ಹಿನ್ನೆಲೆ ತಮಿಳುನಾಡಿನ ಕರಾವಳಿ ಪ್ರದೇಶದ ಜನರು ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸಲು ಮತ್ತು ಮನೆಯೊಳಗೆ ಇರಲು ಸೂಚಿಸಲಾಗಿದೆ.

ತಮಿಳುನಾಡಿನ ಚೆಂಗಲ್ಪಟ್ಟು, ವಿಲುಪ್ಪುರಂ, ಕಡಲೂರು, ಮೈಲಾಡುತುರೈ ಮತ್ತು ನಾಗಪಟ್ಟಣಂ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ಪುದುಚೇರಿ ಮತ್ತು ಕಾರೈಕಲ್‌ಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದಿದ್ದ ಐಎಂಡಿ, ಶನಿವಾರ ರೆಡ್ ಅಲರ್ಟ್ ಘೋಷಿಸಿತ್ತು.

ಮುಂದಿನ ಎರಡು ದಿನಗಳವರೆಗೆ ತಮಿಳುನಾಡು, ದಕ್ಷಿಣ ಆಂಧ್ರಪ್ರದೇಶ ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ದಿತ್ವಾ ಚಂಡಮಾರುತದ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಾದ್ಯಂತ ಸುಮಾರು 6,000 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ ಎಂದು ತಮಿಳುನಾಡು ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಕೆಕೆಎಸ್ಎಸ್ಆರ್ ರಾಮಚಂದ್ರನ್ ತಿಳಿಸಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ಎರಡರ 28 ತಂಡಗಳನ್ನು ನಿಯೋಜಿಸಲಾಗಿದೆ. ನಾವು ಹೆಚ್ಚುವರಿಯಾಗಿ 10 ತಂಡಗಳನ್ನು ಕೇಳಿದ್ದೇವೆ. ಅವರು ವಿಮಾನದ ಮೂಲಕ ಬರುತ್ತಿದ್ದಾರೆ. ಯಾವುದೇ ವಿಪತ್ತು ಸಂಭವಿಸಿದಲ್ಲಿ ನಾವು ಕೋಸ್ಟ್ ಗಾರ್ಡ್‌ನ ಸಹಾಯವನ್ನು ಕೂಡ ಕೇಳಿದ್ದೇವೆ ಎಂದು ರಾಮಚಂದ್ರನ್ ಹೇಳಿದ್ದಾರೆ.

ಪ್ರತಿಕೂಲ ಹವಾಮಾನದ ಹಿನ್ನೆಲೆ, ತಮಿಳುನಾಡಿನ ಹಲವಾರು ಜಿಲ್ಲೆಗಳಲ್ಲಿ 54 ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಚೆನ್ನೈ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ.

ಚೆನ್ನೈನಿಂದ ತೂತುಕುಡಿ, ಮಧುರೈ ಮತ್ತು ತಿರುಚ್ಚಿಗೆ ಹೋಗುವ ಹದಿನಾರು ವಿಮಾನಗಳ ಸಂಚಾರ ರದ್ದಾಗಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಅದೇ ರೀತಿ, ತೂತುಕುಡಿ, ತಿರುಚ್ಚಿ ಮತ್ತು ಮಧುರೈನಿಂದ ಚೆನ್ನೈಗೆ ಹೋಗುವ 16 ವಿಮಾನಗಳ ಸಂಚಾರವನ್ನು ಸಹ ಸ್ಥಗಿತಗೊಳಿಸಲಾಗಿದೆ.

ಮಧುರೈ, ತಿರುಚ್ಚಿ ಮತ್ತು ಪುದುಚೇರಿಯಿಂದ ಬೆಂಗಳೂರು ಮತ್ತು ಹೈದರಾಬಾದ್‌ಗೆ ಹೋಗುವ 22 ವಿಮಾನಗಳ ಸಂಚಾರ ಕೂಡ ಸ್ಥಗಿತಗೊಂಡಿದೆ.

ಭಾರತೀಯ ವಾಯುಪಡೆಯ ವಿಮಾನವು ನಾಲ್ಕು ಸ್ನಿಫರ್ ನಾಯಿಗಳು ಸೇರಿದಂತೆ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯ 80 ಸಿಬ್ಬಂದಿಯೊಂದಿಗೆ ಪರಿಹಾರ ಸಾಮಗ್ರಿಗಳು ಮತ್ತು ರಕ್ಷಣಾ ಸಾಧನಗಳೊಂದಿಗೆ ಶ್ರೀಲಂಕಾವನ್ನು ತಲುಪಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...