Homeಅಂತರಾಷ್ಟ್ರೀಯದಿತ್ವಾ ಚಂಡಮಾರುತ : ಶ್ರೀಲಂಕಾದಲ್ಲಿ 123 ಸಾವು, ತಮಿಳುನಾಡಿನಲ್ಲಿ ರೆಡ್ ಅಲರ್ಟ್ ಘೋಷಣೆ

ದಿತ್ವಾ ಚಂಡಮಾರುತ : ಶ್ರೀಲಂಕಾದಲ್ಲಿ 123 ಸಾವು, ತಮಿಳುನಾಡಿನಲ್ಲಿ ರೆಡ್ ಅಲರ್ಟ್ ಘೋಷಣೆ

- Advertisement -
- Advertisement -

ದಿತ್ವಾ ಚಂಡಮಾರುತದಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತಗಳಿಂದಾಗಿ ಶ್ರೀಲಂಕಾದಲ್ಲಿ ಕನಿಷ್ಠ 123 ಜನರು ಸಾವನ್ನಪ್ಪಿದ್ದಾರೆ ಮತ್ತು 130ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ ಎಂದು ದೇಶದ ವಿಪತ್ತು ನಿರ್ವಹಣಾ ಕೇಂದ್ರವನ್ನು ಉಲ್ಲೇಖಿಸಿ ಸುದ್ದಿ ಎಎಫ್‌ಪಿ ಶನಿವಾರ (ನ.29) ವರದಿ ಮಾಡಿದೆ.

ಶ್ರೀಲಂಕಾ ಸರ್ಕಾರ ಶನಿವಾರ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದೆ.

ಪ್ರಸ್ತುತ ಚಂಡಮಾರುತವು ಶ್ರೀಲಂಕಾ ತೊರೆದು ದಕ್ಷಿಣ ಭಾರತದ ಕರಾವಳಿಯ ಕಡೆಗೆ ಚಲಿಸುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಶನಿವಾರ ಮಧ್ಯಾಹ್ನ 2 ಗಂಟೆಗೆ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ, ದಿತ್ವಾ ಚಂಡಮಾರುತವು ಶ್ರೀಲಂಕಾದ ಉತ್ತರ ಭಾಗಗಳು ಮತ್ತು ನೈಋತ್ಯ ಬಂಗಾಳಕೊಲ್ಲಿಯ ಪಕ್ಕದ ಭಾಗಗಳ ಮೇಲೆ ಕೇಂದ್ರೀಕೃತವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿತ್ತು.

ನಂತರ ಸಂಜೆ 4.46ಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ನೈಋತ್ಯ ಬಂಗಾಳಕೊಲ್ಲಿಯಲ್ಲಿ ಬೀಸುತ್ತಿರುವ ಚಂಡಮಾರುತವು ಉತ್ತರ-ವಾಯುವ್ಯ ದಿಕ್ಕಿಗೆ ಚಲಿಸುತ್ತಿದ್ದು, ಭಾನುವಾರ ಮುಂಜಾನೆ ಉತ್ತರ ತಮಿಳುನಾಡು-ಪುದುಚೇರಿ-ದಕ್ಷಿಣ ಆಂಧ್ರಪ್ರದೇಶ ಕರಾವಳಿಯನ್ನು ತಲುಪುವ ನಿರೀಕ್ಷೆಯಿದೆ ಎಂದು ಹೇಳಿತ್ತು.

ಭಾನುವಾರದ (ನ.30) ವರದಿಗಳ ಪ್ರಕಾರ, ದಿತ್ವಾ ಚಂಡಮಾರುತ ಭಾರತದ ಕರಾವಳಿಗೆ ನೇರವಾಗಿ ತಲುಪಿಲ್ಲ. ಅದು ಇನ್ನೂ ಬಂಗಾಳ ಕೊಲ್ಲಿಯ ದಕ್ಷಿಣ ಪಶ್ಚಿಮ ಭಾಗದಲ್ಲಿ ಸುಮಾರು 90 ಕಿ.ಮೀ. ದೂರದಲ್ಲಿ ಕರಾವಳಿಯ ಸಮೀಪದಲ್ಲಿದ್ದು, ಉತ್ತರ ದಿಕ್ಕಿನಲ್ಲಿ 5 ಕಿ.ಮೀ./ಗಂಟೆ ವೇಗದಲ್ಲಿ ಸಾಗುತ್ತಿದೆ. ಆದರೆ, ಚಂಡಮಾರುತದ ಪರಿಣಾಮ ತಮಿಳುನಾಡು, ಆಂಧ್ರ ಕರಾವಳಿಯಲ್ಲಿ ಭಾರೀ ಮಳೆ ಮತ್ತು ಗಾಳಿ ಶುರುವಾಗಿದೆ.

ಚಂಡುಮಾರುತದ ಹಿನ್ನೆಲೆ ತಮಿಳುನಾಡಿನ ಕರಾವಳಿ ಪ್ರದೇಶದ ಜನರು ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸಲು ಮತ್ತು ಮನೆಯೊಳಗೆ ಇರಲು ಸೂಚಿಸಲಾಗಿದೆ.

ತಮಿಳುನಾಡಿನ ಚೆಂಗಲ್ಪಟ್ಟು, ವಿಲುಪ್ಪುರಂ, ಕಡಲೂರು, ಮೈಲಾಡುತುರೈ ಮತ್ತು ನಾಗಪಟ್ಟಣಂ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ಪುದುಚೇರಿ ಮತ್ತು ಕಾರೈಕಲ್‌ಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದಿದ್ದ ಐಎಂಡಿ, ಶನಿವಾರ ರೆಡ್ ಅಲರ್ಟ್ ಘೋಷಿಸಿತ್ತು.

ಮುಂದಿನ ಎರಡು ದಿನಗಳವರೆಗೆ ತಮಿಳುನಾಡು, ದಕ್ಷಿಣ ಆಂಧ್ರಪ್ರದೇಶ ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ದಿತ್ವಾ ಚಂಡಮಾರುತದ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಾದ್ಯಂತ ಸುಮಾರು 6,000 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ ಎಂದು ತಮಿಳುನಾಡು ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಕೆಕೆಎಸ್ಎಸ್ಆರ್ ರಾಮಚಂದ್ರನ್ ತಿಳಿಸಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ಎರಡರ 28 ತಂಡಗಳನ್ನು ನಿಯೋಜಿಸಲಾಗಿದೆ. ನಾವು ಹೆಚ್ಚುವರಿಯಾಗಿ 10 ತಂಡಗಳನ್ನು ಕೇಳಿದ್ದೇವೆ. ಅವರು ವಿಮಾನದ ಮೂಲಕ ಬರುತ್ತಿದ್ದಾರೆ. ಯಾವುದೇ ವಿಪತ್ತು ಸಂಭವಿಸಿದಲ್ಲಿ ನಾವು ಕೋಸ್ಟ್ ಗಾರ್ಡ್‌ನ ಸಹಾಯವನ್ನು ಕೂಡ ಕೇಳಿದ್ದೇವೆ ಎಂದು ರಾಮಚಂದ್ರನ್ ಹೇಳಿದ್ದಾರೆ.

ಪ್ರತಿಕೂಲ ಹವಾಮಾನದ ಹಿನ್ನೆಲೆ, ತಮಿಳುನಾಡಿನ ಹಲವಾರು ಜಿಲ್ಲೆಗಳಲ್ಲಿ 54 ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಚೆನ್ನೈ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ.

ಚೆನ್ನೈನಿಂದ ತೂತುಕುಡಿ, ಮಧುರೈ ಮತ್ತು ತಿರುಚ್ಚಿಗೆ ಹೋಗುವ ಹದಿನಾರು ವಿಮಾನಗಳ ಸಂಚಾರ ರದ್ದಾಗಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಅದೇ ರೀತಿ, ತೂತುಕುಡಿ, ತಿರುಚ್ಚಿ ಮತ್ತು ಮಧುರೈನಿಂದ ಚೆನ್ನೈಗೆ ಹೋಗುವ 16 ವಿಮಾನಗಳ ಸಂಚಾರವನ್ನು ಸಹ ಸ್ಥಗಿತಗೊಳಿಸಲಾಗಿದೆ.

ಮಧುರೈ, ತಿರುಚ್ಚಿ ಮತ್ತು ಪುದುಚೇರಿಯಿಂದ ಬೆಂಗಳೂರು ಮತ್ತು ಹೈದರಾಬಾದ್‌ಗೆ ಹೋಗುವ 22 ವಿಮಾನಗಳ ಸಂಚಾರ ಕೂಡ ಸ್ಥಗಿತಗೊಂಡಿದೆ.

ಭಾರತೀಯ ವಾಯುಪಡೆಯ ವಿಮಾನವು ನಾಲ್ಕು ಸ್ನಿಫರ್ ನಾಯಿಗಳು ಸೇರಿದಂತೆ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯ 80 ಸಿಬ್ಬಂದಿಯೊಂದಿಗೆ ಪರಿಹಾರ ಸಾಮಗ್ರಿಗಳು ಮತ್ತು ರಕ್ಷಣಾ ಸಾಧನಗಳೊಂದಿಗೆ ಶ್ರೀಲಂಕಾವನ್ನು ತಲುಪಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...