Homeಮುಖಪುಟಇಂದು ಕರಾವಳಿಗೆ ಅಪ್ಪಳಿಸಲಿರುವ ಮೊಂಥಾ ಚಂಡಮಾರುತ : ಆಂಧ್ರ, ಒಡಿಶಾದಲ್ಲಿ ಹೈ ಅಲರ್ಟ್

ಇಂದು ಕರಾವಳಿಗೆ ಅಪ್ಪಳಿಸಲಿರುವ ಮೊಂಥಾ ಚಂಡಮಾರುತ : ಆಂಧ್ರ, ಒಡಿಶಾದಲ್ಲಿ ಹೈ ಅಲರ್ಟ್

- Advertisement -
- Advertisement -

ಬಂಗಾಳಕೊಲ್ಲಿಯಲ್ಲಿ ‘ಮೊಂಥಾ’ ಚಂಡಮಾರುತ ತೀವ್ರಗೊಳ್ಳುತ್ತಿದ್ದು, ಇಂದು (ಅ.28, ಮಂಗಳವಾರ) ಸಂಜೆ ಅಥವಾ ರಾತ್ರಿ ಆಂಧ್ರ ಪ್ರದೇಶದ ಕಾಕಿನಾಡ ಬಳಿ ಕರಾವಳಿಗೆ ಅಪ್ಪಳಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆ ಒಡಿಶಾ ಮತ್ತು ಆಂಧ್ರ ಪ್ರದೇಶ ಸರ್ಕಾರಗಳು ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿವೆ. ಅಪಾಯಕಾರಿ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸುತ್ತಿವೆ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ರಕ್ಷಣಾ ತಂಡಗಳನ್ನು ನಿಯೋಜಿಸಿವೆ.

ಒಡಿಶಾ ಸರ್ಕಾರ ಸೋಮವಾರ ದಕ್ಷಿಣದ ಎಂಟು ಜಿಲ್ಲೆಗಳಾದ ಮಲ್ಕನ್‌ಗಿರಿ, ಕೊರಾಪುಟ್, ನಬರಂಗ್‌ಪುರ, ರಾಯಗಡ, ಗಜಪತಿ, ಗಂಜಾಂ, ಕಲಹಂಡಿ ಮತ್ತು ಕಂಧಮಲ್‌ಗಳ ತಗ್ಗು ಮತ್ತು ಗುಡ್ಡಗಾಡು ಪ್ರದೇಶಗಳಿಂದ 1,496 ಗರ್ಭಿಣಿಯರು ಸೇರಿದಂತೆ ಸುಮಾರು 3,000 ಜನರನ್ನು ಸ್ಥಳಾಂತರಿಸಿದೆ, ಅಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

“ಒಟ್ಟು 32,528 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಗರ್ಭಿಣಿಯರು, ವೃದ್ಧರು ಮತ್ತು ಅಂಗವಿಕಲರ ಸ್ಥಳಾಂತರಕ್ಕೆ ಆದ್ಯತೆ ನೀಡಲಾಗಿದೆ. 1,445 ಚಂಡಮಾರುತ ಆಶ್ರಯ ಕೇಂದ್ರಗಳನ್ನು ಅಥವಾ ಗಂಜಿ ಕೇಂದ್ರಗಳನ್ನು ತೆರೆದಿದ್ದೇವೆ. ಸಾಕು ಪ್ರಾಣಿಗಳಿಗೆ ಆಹಾರ, ಔಷಧ, ಬೆಳಕು ಮತ್ತು ಆರೈಕೆಯ ವ್ಯವಸ್ಥೆ ಮಾಡಿದ್ದೇವೆ” ಎಂದು ಸೋಮವಾರ ಸಂಜೆ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಒಡಿಶಾದ ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಸುರೇಶ್ ಪೂಜಾರಿ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

“ಎನ್‌ಡಿಆರ್‌ಎಫ್‌, ಒಡಿಆರ್‌ಎಫ್‌ ಮತ್ತು ಅಗ್ನಿಶಾಮಕ ಸೇವೆಯಿಂದ ಒಟ್ಟು 140 ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ. ಚಂಡಮಾರುತ ಅಪ್ಪಳಿಸಿದ 24 ಗಂಟೆಗಳ ಒಳಗೆ ವಿದ್ಯುತ್ ಪುನಃಸ್ಥಾಪಿಸಲು ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಆಸ್ಪತ್ರೆಗಳು ಮತ್ತು ಕುಡಿಯುವ ನೀರಿನ ಘಟಕಗಳಲ್ಲಿ ವಿದ್ಯುತ್ ಬ್ಯಾಕಪ್ ಸಿದ್ಧವಾಗಿದೆ” ಎಂದು ಒಡಿಶಾದ ವಿಶೇಷ ಪರಿಹಾರ ಆಯುಕ್ತ (ಎಸ್‌ಆರ್‌ಸಿ) ಡಿ.ಕೆ ಸಿಂಗ್ ತಿಳಿಸಿದ್ದಾರೆ.

ಭುವನೇಶ್ವರ ಸೇರಿದಂತೆ ದಕ್ಷಿಣ ಮತ್ತು ಕರಾವಳಿ ಒಡಿಶಾದ ಕೆಲವು ಭಾಗಗಳಲ್ಲಿ ಈಗಾಗಲೇ ಮಳೆ ಆರಂಭವಾಗಿದ್ದು, ಅಕ್ಟೋಬರ್ 28 ಮತ್ತು 29 ರಂದು ಮಳೆ ತೀವ್ರಗೊಳ್ಳಲಿದೆ ಎಂದು ಸಚಿವ ಪೂಜಾರಿ ಮಾಹಿತಿ ನೀಡಿದ್ದಾರೆ.

ಗುಡ್ಡಗಾಡು ಗಜಪತಿ ಜಿಲ್ಲೆಯಲ್ಲಿ ಭೂಕುಸಿತ ಪ್ರಮುಖ ಆತಂಕವಾಗಿದೆ. ಅಲ್ಲಿ 139 ಅಪಾಯಕಾರಿ ಪ್ರದೇಶಗಳನ್ನು ಗುರುತಿಸಲಾಗಿದೆ. ಅಕ್ಟೋಬರ್ 30 ರವರೆಗೆ ಸರ್ಕಾರಿ ನೌಕರರ ರಜೆಯನ್ನು ರದ್ದುಗೊಳಿಸಲಾಗಿದೆ. ಅಲ್ಲದೆ, ಅಲ್ಲಿಯವರೆಗೆ ಒಂಬತ್ತು ಜಿಲ್ಲೆಗಳಲ್ಲಿನ ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ ಎಂದು ಪೂಜಾರಿ ಹೇಳಿದ್ದಾರೆ.

“ಒಡಿಶಾದ ಎಲ್ಲಾ ಬಂದರುಗಳಲ್ಲಿ ದೂರದ ಎಚ್ಚರಿಕೆ ಸಿಗ್ನಲ್ ನಂ-ಐ ಅನ್ನು ತೋರಿಸಲಾಗಿದೆ. ಮೀನುಗಾರರು ಅಕ್ಟೋಬರ್ 29 ರವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಹೆಚ್ಚಿನ ಮೀನುಗಾರರು ಈಗಾಗಲೇ ಮರಳಿದ್ದಾರೆ. ಗಂಜಾಂ ಜಿಲ್ಲೆಯಲ್ಲಿ 100ಕ್ಕೂ ಹೆಚ್ಚು ಆಂಧ್ರದ ಮೀನುಗಾರರಿಗೆ ಆಶ್ರಯ ನೀಡಲಾಗಿದೆ. ಅವರು ಹವಾಮಾನ ಸಾಮಾನ್ಯಗೊಂಡ ನಂತರ ಮನೆಗೆ ಮರಳಲಿದ್ದಾರೆ” ಎಂದು ಎಸ್‌ಆರ್‌ಸಿ ತಿಳಿಸಿದೆ.

ಸೋಮವಾರ ರಾತ್ರಿ 8.30ಕ್ಕೆ ಬಿಡುಗಡೆಯಾದ ಇತ್ತೀಚಿನ ಐಎಂಡಿ ಬುಲೆಟಿನ್ ಪ್ರಕಾರ, “ಥಾಯ್ ಭಾಷೆಯಲ್ಲಿ ‘ಪರಿಮಳಯುಕ್ತ ಹೂವು’ ಎಂಬ ಅರ್ಥವನ್ನು ನೀಡುವ ಚಂಡಮಾರುತ ಮೊಂಥಾ, ಸಂಜೆ 5.30ಕ್ಕೆ ಪಶ್ಚಿಮ-ಮಧ್ಯ ಮತ್ತು ಪಕ್ಕದ ನೈಋತ್ಯ ಬಂಗಾಳ ಕೊಲ್ಲಿಯ ಮೇಲೆ ಕೇಂದ್ರೀಕೃತವಾಗಿತ್ತು. ಕಾಕಿನಾಡದಿಂದ ಆಗ್ನೇಯಕ್ಕೆ ಸುಮಾರು 450 ಕಿ.ಮೀ, ವಿಶಾಖಪಟ್ಟಣದಿಂದ ದಕ್ಷಿಣಕ್ಕೆ 500 ಕಿ.ಮೀ ಮತ್ತು ಗೋಪಾಲಪುರದಿಂದ ದಕ್ಷಿಣಕ್ಕೆ 670 ಕಿ.ಮೀ ದೂರದಲ್ಲಿತ್ತು”.

“ಗಾಳಿಯು ಸುಮಾರು 15 ಕಿ.ಮೀ ವೇಗದಲ್ಲಿ ವಾಯುವ್ಯಕ್ಕೆ ಚಲಿಸುತ್ತಿದ್ದು, ಮಂಗಳವಾರ ಬೆಳಿಗ್ಗೆ ವೇಳೆಗೆ ತೀವ್ರ ಚಂಡಮಾರುತವಾಗಿ ರೂಪುಗೊಳ್ಳುವ ನಿರೀಕ್ಷೆಯಿದೆ. ಅಕ್ಟೋಬರ್ 28ರ ಸಂಜೆ ಅಥವಾ ರಾತ್ರಿ, ಕಾಕಿನಾಡ ಬಳಿಯ ಮಚಲಿಪಟ್ನಂ ಮತ್ತು ಕಳಿಂಗಪಟ್ನಂ ನಡುವೆ ಆಂಧ್ರ ಪ್ರದೇಶದ ಕರಾವಳಿಗೆ ಚಂಡಮಾರುತ ಅಪ್ಪಳಿಸುವ ನಿರೀಕ್ಷೆಯಿದೆ. ಈ ಸಂದರ್ಭದಲ್ಲಿ ಗಂಟೆಗೆ 90-100 ಕಿ.ಮೀ ಅಥವಾ ಗಂಟೆಗೆ 110 ಕಿ.ಮೀ. ಗರಿಷ್ಠ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ”.

ಮಂಗಳವಾರ ಸಂಜೆಯಿಂದ ಒಡಿಶಾದ ದಕ್ಷಿಣ ಕರಾವಳಿ ಪ್ರದೇಶಗಳಲ್ಲಿ ಗಾಳಿಯ ವೇಗ ಗಂಟೆಗೆ 60–70 ಕಿ.ಮೀ. ತಲುಪಿ, ಗಂಟೆಗೆ 80 ಕಿ.ಮೀ. ವೇಗದಲ್ಲಿ ಬೀಸಬಹುದು. ಅಕ್ಟೋಬರ್ 28 ಮತ್ತು 29 ರಂದು ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ನಂತರ ಈ ವಾತಾವರಣ ದುರ್ಬಲಗೊಂಡು ಚಂಡಮಾರುತವಾಗಿ ಛತ್ತೀಸ್‌ಗಢದ ಕಡೆಗೆ ಚಲಿಸುವ ನಿರೀಕ್ಷೆಯಿದೆ.

ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಕರೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಕೇಂದ್ರದರಿಂದ ಸಾಧ್ಯವಿರುವ ಎಲ್ಲಾ ಸಹಾಯ ಒದಗಿಸುವ ಭರವಸೆ ಕೊಟ್ಟಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ನಾಯ್ಡು ಅವರು ರಿಯಲ್ ಟೈಮ್ ಗವರ್ನೆನ್ಸ್ ಸಿಸ್ಟಮ್ (ಆರ್‌ಟಿಜಿಎಸ್) ಮೂಲಕ ಉನ್ನತ ಮಟ್ಟದ ಸಭೆ ನಡೆಸಿ, ಕಾಲುವೆ ದಂಡೆಗಳನ್ನು ಬಲಪಡಿಸಲು, ಪ್ರವಾಹಕ್ಕೆ ಸಿದ್ಧರಾಗಲು ಮತ್ತು ಪ್ರತಿ ಗಂಟೆಯೂ ಚಂಡಮಾರುತದ ಚಲನೆಯನ್ನು ಮೇಲ್ವಿಚಾರಣೆ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ವರದಿ ಹೇಳಿದೆ.

“ಎಲ್ಲಾ ಮೀನುಗಾರರನ್ನು ಮರಳಿ ದಡಕ್ಕೆ ಕರೆತರಲಾಗಿದೆ. ಚಂಡಮಾರುತದ ನಂತರದ ಪರಿಹಾರ ಕಾರ್ಯಾಚರಣೆಗಾಗಿ ವೈದ್ಯಕೀಯ ತಂಡಗಳು, ಎನ್‌ಡಿಆರ್‌ಎಫ್ ಘಟಕಗಳು ಮತ್ತು ಇಂಜಿನಿಯರಿಂಗ್ ವಿಭಾಗಗಳು ಸಿದ್ಧವಾಗಿವೆ” ಎಂದು ಅಧಿಕೃತ ಪ್ರಕಟಣೆಯನ್ನು ಉಲ್ಲೇಖಿಸಿ ಪಿಟಿಐ ತಿಳಿಸಿದೆ.

ಪರಿಹಾರ ಶಿಬಿರಗಳಲ್ಲಿರುವ ಪ್ರತಿ ಕುಟುಂಬಕ್ಕೆ 3,000 ರೂ. ನಗದು, 25 ಕೆಜಿ ಅಕ್ಕಿ ಮತ್ತು ಇತರ ಅಗತ್ಯ ವಸ್ತುಗಳನ್ನು ಘೋಷಿಸಲಾಗಿದೆ. ಕೃಷ್ಣ ಜಿಲ್ಲೆಯಲ್ಲಿ ತೀವ್ರ ಮಳೆಯಾಗುವ ಮುನ್ಸೂಚನೆ ಇದ್ದು, ಮುಂದಿನ ಎರಡು ದಿನಗಳಲ್ಲಿ ಗುಂಟೂರು, ಬಾಪಟ್ಲಾ, ಎನ್‌ಟಿಆರ್, ಪಲ್ನಾಡು ಮತ್ತು ಪಶ್ಚಿಮ ಗೋದಾವರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ವಾಲ್ಟೇರ್ ಪ್ರದೇಶ ಮತ್ತು ಪಕ್ಕದ ಮಾರ್ಗಗಳಲ್ಲಿ ಕಾರ್ಯನಿರ್ವಹಿಸುವ ಕೆಲವು ರೈಲುಗಳನ್ನು ರದ್ದುಪಡಿಸುವುದು, ತಿರುಗಿಸುವುದು ಮತ್ತು ಅಲ್ಪಾವಧಿಗೆ ಸ್ಥಗಿತಗೊಳಿಸುವುದಾಗಿ ಪೂರ್ವ ಕರಾವಳಿ ರೈಲ್ವೆ ಘೋಷಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಆಂಧ್ರಪ್ರದೇಶದ ಕರಾವಳಿಯಲ್ಲಿ ನೆಲ್ಲೂರಿನಿಂದ ಶ್ರೀಕಾಕುಳಂವರೆಗೆ 2 ರಿಂದ 4.7 ಮೀಟರ್ ಎತ್ತರದ ಅಲೆಗಳು ಏಳಲಿವೆ ಎಂದು ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ಸೇವೆಗಳ ಕೇಂದ್ರ (INCOIS) ಮತ್ತು ಭಾರತ ಹವಾಮಾನ ಇಲಾಖೆ (IMD)ಸೋಮವಾರ ಮುನ್ಸೂಚನೆ ನೀಡಿವೆ.

ಅಕ್ಟೋಬರ್ 27 ರಂದು ಸಂಜೆ 5.30ರಿಂದ ರಾತ್ರಿ 11.30 ರವರೆಗೆ ಆರು ಗಂಟೆಗಳ ಕಾಲ ಎತ್ತರದ ಅಲೆಗಳು ಅಪ್ಪಳಿಸುವ ನಿರೀಕ್ಷೆಯಿದೆ. ಸಾಮಾನ್ಯ ಉಬ್ಬರವಿಳಿತಕ್ಕಿಂತ ಸುಮಾರು ಒಂದು ಮೀಟರ್ ಎತ್ತರದ ಅಲೆಗಳು ಅಪ್ಪಳಿಸಿ ಆಂಧ್ರ ಪ್ರದೇಶ ಮತ್ತು ಯಾನಂನ ತಗ್ಗು ಪ್ರದೇಶಗಳನ್ನು ಮುಳುಗಿಸಬಹುದು ಎಂದು ಜಂಟಿ ಹೇಳಿಕೆಯಲ್ಲಿ ಎರಡೂ ಸಂಸ್ಥೆಗಳು ಎಚ್ಚರಿಸಿದ್ದವು.

ಪ್ರತ್ಯೇಕ ಬೆಳವಣಿಗೆಯಲ್ಲಿ, ಪೂರ್ವ-ಮಧ್ಯ ಅರೇಬಿಯನ್ ಸಮುದ್ರದ ಮೇಲೆ ವಾಯುಭಾರ ಕುಸಿತ ಉಂಟಾಗಿದ್ದು, ಅಕ್ಷಾಂಶ 16.7°N ಮತ್ತು ರೇಖಾಂಶ 67.3°E ಬಳಿ ಸ್ಥಿರವಾಗಿದೆ – ವೆರಾವಲ್ (ಗುಜರಾತ್) ನಿಂದ ನೈಋತ್ಯಕ್ಕೆ ಸುಮಾರು 570 ಕಿ.ಮೀ ಮತ್ತು ಮುಂಬೈನಿಂದ ಪಶ್ಚಿಮ-ನೈಋತ್ಯಕ್ಕೆ 650 ಕಿ.ಮೀ ದೂರದಲ್ಲಿದೆ. ಮೊಂಥಾ ಚಂಡಮಾರುತದಿಂದ ಭಿನ್ನವಾಗಿರುವ ಈ ಹವಾಮಾನ ಪರಿಸ್ಥಿತಿಯು ಮುಂದಿನ 48 ಗಂಟೆಗಳಲ್ಲಿ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದಾದ್ಯಂತ ಉತ್ತರ-ಈಶಾನ್ಯಕ್ಕೆ ಚಲಿಸುವ ಸಾಧ್ಯತೆಯಿದೆ.

ಮೊಂಥಾ ಚಂಡಮಾರುತವು ಪ್ರಬಲವಾಗುತ್ತಿದ್ದರೂ, ತಮಿಳುನಾಡಿನ ಹೆಚ್ಚಿನ ಭಾಗಗಳಲ್ಲಿ ಸೋಮವಾರ ಒಣ ಹವೆಯಿತ್ತು. ಆದಾಗ್ಯೂ, ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರ (ಆರ್‌ಎಂಸಿ) ಮಂಗಳವಾರ ತಿರುವಲ್ಲೂರು ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಿದೆ. ಚೆನ್ನೈ, ಚೆಂಗಲ್ಪಟ್ಟು, ಕಾಂಚಿಪುರಂ, ರಾಣಿಪೇಟೆ, ಥೇಣಿ, ತೆಂಕಾಸಿ ಮತ್ತು ಕನ್ಯಾಕುಮಾರಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ತಮಿಳುನಾಡು ಕರಾವಳಿಯಿಂದ ಚಂಡಮಾರುತ ದೂರ ಸರಿಯುವುದರಿಂದ, ಮಂಗಳವಾರ ಉತ್ತರ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ ಮತ್ತು ಬುಧವಾರ ಚಂಡಮಾರುತ ಅಪ್ಪಳಿಸಿದ ನಂತರ ಗಣನೀಯವಾಗಿ ಕಡಿಮೆಯಾಗಬಹುದು ಎನ್ನಲಾಗಿದೆ.

ಚೆನ್ನೈನ ಕೆಲವು ಪ್ರದೇಶಗಳಲ್ಲಿ ಸಾಮಾನ್ಯ ಮಳೆಯಾದ ವರದಿಯಾಗಿದ್ದರೆ, ಹೆಚ್ಚಿನ ಒಳನಾಡಿನ ಜಿಲ್ಲೆಗಳು ಒಣಹವೆಯಿಂದ ಕೂಡಿವೆ. ತಮಿಳುನಾಡು ಮತ್ತು ದಕ್ಷಿಣ ಆಂಧ್ರ ಕರಾವಳಿಯ ಮೀನುಗಾರರಿಗೆ ಬಲವಾದ ಗಾಳಿ ಮತ್ತು ಸಮುದ್ರದ ಪ್ರಕ್ಷುಬ್ಧತೆಯ ಬಗ್ಗೆ ಎಚ್ಚರಿಕೆ ನೀಡಲಾಗಿದೆ.

ಛತ್ ಪೂಜೆಗಾಗಿ ಪ್ರಧಾನಿಗೆ ಫಿಲ್ಟರ್ ನೀರಿನ ‘ನಕಲಿ’ ಯಮುನಾ ಘಾಟ್ ನಿರ್ಮಾಣ: ಎಎಪಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...