Homeಮುಖಪುಟಇಂದು ಕರಾವಳಿಗೆ ಅಪ್ಪಳಿಸಲಿರುವ ಮೊಂಥಾ ಚಂಡಮಾರುತ : ಆಂಧ್ರ, ಒಡಿಶಾದಲ್ಲಿ ಹೈ ಅಲರ್ಟ್

ಇಂದು ಕರಾವಳಿಗೆ ಅಪ್ಪಳಿಸಲಿರುವ ಮೊಂಥಾ ಚಂಡಮಾರುತ : ಆಂಧ್ರ, ಒಡಿಶಾದಲ್ಲಿ ಹೈ ಅಲರ್ಟ್

- Advertisement -
- Advertisement -

ಬಂಗಾಳಕೊಲ್ಲಿಯಲ್ಲಿ ‘ಮೊಂಥಾ’ ಚಂಡಮಾರುತ ತೀವ್ರಗೊಳ್ಳುತ್ತಿದ್ದು, ಇಂದು (ಅ.28, ಮಂಗಳವಾರ) ಸಂಜೆ ಅಥವಾ ರಾತ್ರಿ ಆಂಧ್ರ ಪ್ರದೇಶದ ಕಾಕಿನಾಡ ಬಳಿ ಕರಾವಳಿಗೆ ಅಪ್ಪಳಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆ ಒಡಿಶಾ ಮತ್ತು ಆಂಧ್ರ ಪ್ರದೇಶ ಸರ್ಕಾರಗಳು ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿವೆ. ಅಪಾಯಕಾರಿ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸುತ್ತಿವೆ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ರಕ್ಷಣಾ ತಂಡಗಳನ್ನು ನಿಯೋಜಿಸಿವೆ.

ಒಡಿಶಾ ಸರ್ಕಾರ ಸೋಮವಾರ ದಕ್ಷಿಣದ ಎಂಟು ಜಿಲ್ಲೆಗಳಾದ ಮಲ್ಕನ್‌ಗಿರಿ, ಕೊರಾಪುಟ್, ನಬರಂಗ್‌ಪುರ, ರಾಯಗಡ, ಗಜಪತಿ, ಗಂಜಾಂ, ಕಲಹಂಡಿ ಮತ್ತು ಕಂಧಮಲ್‌ಗಳ ತಗ್ಗು ಮತ್ತು ಗುಡ್ಡಗಾಡು ಪ್ರದೇಶಗಳಿಂದ 1,496 ಗರ್ಭಿಣಿಯರು ಸೇರಿದಂತೆ ಸುಮಾರು 3,000 ಜನರನ್ನು ಸ್ಥಳಾಂತರಿಸಿದೆ, ಅಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

“ಒಟ್ಟು 32,528 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಗರ್ಭಿಣಿಯರು, ವೃದ್ಧರು ಮತ್ತು ಅಂಗವಿಕಲರ ಸ್ಥಳಾಂತರಕ್ಕೆ ಆದ್ಯತೆ ನೀಡಲಾಗಿದೆ. 1,445 ಚಂಡಮಾರುತ ಆಶ್ರಯ ಕೇಂದ್ರಗಳನ್ನು ಅಥವಾ ಗಂಜಿ ಕೇಂದ್ರಗಳನ್ನು ತೆರೆದಿದ್ದೇವೆ. ಸಾಕು ಪ್ರಾಣಿಗಳಿಗೆ ಆಹಾರ, ಔಷಧ, ಬೆಳಕು ಮತ್ತು ಆರೈಕೆಯ ವ್ಯವಸ್ಥೆ ಮಾಡಿದ್ದೇವೆ” ಎಂದು ಸೋಮವಾರ ಸಂಜೆ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಒಡಿಶಾದ ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಸುರೇಶ್ ಪೂಜಾರಿ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

“ಎನ್‌ಡಿಆರ್‌ಎಫ್‌, ಒಡಿಆರ್‌ಎಫ್‌ ಮತ್ತು ಅಗ್ನಿಶಾಮಕ ಸೇವೆಯಿಂದ ಒಟ್ಟು 140 ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ. ಚಂಡಮಾರುತ ಅಪ್ಪಳಿಸಿದ 24 ಗಂಟೆಗಳ ಒಳಗೆ ವಿದ್ಯುತ್ ಪುನಃಸ್ಥಾಪಿಸಲು ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಆಸ್ಪತ್ರೆಗಳು ಮತ್ತು ಕುಡಿಯುವ ನೀರಿನ ಘಟಕಗಳಲ್ಲಿ ವಿದ್ಯುತ್ ಬ್ಯಾಕಪ್ ಸಿದ್ಧವಾಗಿದೆ” ಎಂದು ಒಡಿಶಾದ ವಿಶೇಷ ಪರಿಹಾರ ಆಯುಕ್ತ (ಎಸ್‌ಆರ್‌ಸಿ) ಡಿ.ಕೆ ಸಿಂಗ್ ತಿಳಿಸಿದ್ದಾರೆ.

ಭುವನೇಶ್ವರ ಸೇರಿದಂತೆ ದಕ್ಷಿಣ ಮತ್ತು ಕರಾವಳಿ ಒಡಿಶಾದ ಕೆಲವು ಭಾಗಗಳಲ್ಲಿ ಈಗಾಗಲೇ ಮಳೆ ಆರಂಭವಾಗಿದ್ದು, ಅಕ್ಟೋಬರ್ 28 ಮತ್ತು 29 ರಂದು ಮಳೆ ತೀವ್ರಗೊಳ್ಳಲಿದೆ ಎಂದು ಸಚಿವ ಪೂಜಾರಿ ಮಾಹಿತಿ ನೀಡಿದ್ದಾರೆ.

ಗುಡ್ಡಗಾಡು ಗಜಪತಿ ಜಿಲ್ಲೆಯಲ್ಲಿ ಭೂಕುಸಿತ ಪ್ರಮುಖ ಆತಂಕವಾಗಿದೆ. ಅಲ್ಲಿ 139 ಅಪಾಯಕಾರಿ ಪ್ರದೇಶಗಳನ್ನು ಗುರುತಿಸಲಾಗಿದೆ. ಅಕ್ಟೋಬರ್ 30 ರವರೆಗೆ ಸರ್ಕಾರಿ ನೌಕರರ ರಜೆಯನ್ನು ರದ್ದುಗೊಳಿಸಲಾಗಿದೆ. ಅಲ್ಲದೆ, ಅಲ್ಲಿಯವರೆಗೆ ಒಂಬತ್ತು ಜಿಲ್ಲೆಗಳಲ್ಲಿನ ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ ಎಂದು ಪೂಜಾರಿ ಹೇಳಿದ್ದಾರೆ.

“ಒಡಿಶಾದ ಎಲ್ಲಾ ಬಂದರುಗಳಲ್ಲಿ ದೂರದ ಎಚ್ಚರಿಕೆ ಸಿಗ್ನಲ್ ನಂ-ಐ ಅನ್ನು ತೋರಿಸಲಾಗಿದೆ. ಮೀನುಗಾರರು ಅಕ್ಟೋಬರ್ 29 ರವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಹೆಚ್ಚಿನ ಮೀನುಗಾರರು ಈಗಾಗಲೇ ಮರಳಿದ್ದಾರೆ. ಗಂಜಾಂ ಜಿಲ್ಲೆಯಲ್ಲಿ 100ಕ್ಕೂ ಹೆಚ್ಚು ಆಂಧ್ರದ ಮೀನುಗಾರರಿಗೆ ಆಶ್ರಯ ನೀಡಲಾಗಿದೆ. ಅವರು ಹವಾಮಾನ ಸಾಮಾನ್ಯಗೊಂಡ ನಂತರ ಮನೆಗೆ ಮರಳಲಿದ್ದಾರೆ” ಎಂದು ಎಸ್‌ಆರ್‌ಸಿ ತಿಳಿಸಿದೆ.

ಸೋಮವಾರ ರಾತ್ರಿ 8.30ಕ್ಕೆ ಬಿಡುಗಡೆಯಾದ ಇತ್ತೀಚಿನ ಐಎಂಡಿ ಬುಲೆಟಿನ್ ಪ್ರಕಾರ, “ಥಾಯ್ ಭಾಷೆಯಲ್ಲಿ ‘ಪರಿಮಳಯುಕ್ತ ಹೂವು’ ಎಂಬ ಅರ್ಥವನ್ನು ನೀಡುವ ಚಂಡಮಾರುತ ಮೊಂಥಾ, ಸಂಜೆ 5.30ಕ್ಕೆ ಪಶ್ಚಿಮ-ಮಧ್ಯ ಮತ್ತು ಪಕ್ಕದ ನೈಋತ್ಯ ಬಂಗಾಳ ಕೊಲ್ಲಿಯ ಮೇಲೆ ಕೇಂದ್ರೀಕೃತವಾಗಿತ್ತು. ಕಾಕಿನಾಡದಿಂದ ಆಗ್ನೇಯಕ್ಕೆ ಸುಮಾರು 450 ಕಿ.ಮೀ, ವಿಶಾಖಪಟ್ಟಣದಿಂದ ದಕ್ಷಿಣಕ್ಕೆ 500 ಕಿ.ಮೀ ಮತ್ತು ಗೋಪಾಲಪುರದಿಂದ ದಕ್ಷಿಣಕ್ಕೆ 670 ಕಿ.ಮೀ ದೂರದಲ್ಲಿತ್ತು”.

“ಗಾಳಿಯು ಸುಮಾರು 15 ಕಿ.ಮೀ ವೇಗದಲ್ಲಿ ವಾಯುವ್ಯಕ್ಕೆ ಚಲಿಸುತ್ತಿದ್ದು, ಮಂಗಳವಾರ ಬೆಳಿಗ್ಗೆ ವೇಳೆಗೆ ತೀವ್ರ ಚಂಡಮಾರುತವಾಗಿ ರೂಪುಗೊಳ್ಳುವ ನಿರೀಕ್ಷೆಯಿದೆ. ಅಕ್ಟೋಬರ್ 28ರ ಸಂಜೆ ಅಥವಾ ರಾತ್ರಿ, ಕಾಕಿನಾಡ ಬಳಿಯ ಮಚಲಿಪಟ್ನಂ ಮತ್ತು ಕಳಿಂಗಪಟ್ನಂ ನಡುವೆ ಆಂಧ್ರ ಪ್ರದೇಶದ ಕರಾವಳಿಗೆ ಚಂಡಮಾರುತ ಅಪ್ಪಳಿಸುವ ನಿರೀಕ್ಷೆಯಿದೆ. ಈ ಸಂದರ್ಭದಲ್ಲಿ ಗಂಟೆಗೆ 90-100 ಕಿ.ಮೀ ಅಥವಾ ಗಂಟೆಗೆ 110 ಕಿ.ಮೀ. ಗರಿಷ್ಠ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ”.

ಮಂಗಳವಾರ ಸಂಜೆಯಿಂದ ಒಡಿಶಾದ ದಕ್ಷಿಣ ಕರಾವಳಿ ಪ್ರದೇಶಗಳಲ್ಲಿ ಗಾಳಿಯ ವೇಗ ಗಂಟೆಗೆ 60–70 ಕಿ.ಮೀ. ತಲುಪಿ, ಗಂಟೆಗೆ 80 ಕಿ.ಮೀ. ವೇಗದಲ್ಲಿ ಬೀಸಬಹುದು. ಅಕ್ಟೋಬರ್ 28 ಮತ್ತು 29 ರಂದು ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ನಂತರ ಈ ವಾತಾವರಣ ದುರ್ಬಲಗೊಂಡು ಚಂಡಮಾರುತವಾಗಿ ಛತ್ತೀಸ್‌ಗಢದ ಕಡೆಗೆ ಚಲಿಸುವ ನಿರೀಕ್ಷೆಯಿದೆ.

ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಕರೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಕೇಂದ್ರದರಿಂದ ಸಾಧ್ಯವಿರುವ ಎಲ್ಲಾ ಸಹಾಯ ಒದಗಿಸುವ ಭರವಸೆ ಕೊಟ್ಟಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ನಾಯ್ಡು ಅವರು ರಿಯಲ್ ಟೈಮ್ ಗವರ್ನೆನ್ಸ್ ಸಿಸ್ಟಮ್ (ಆರ್‌ಟಿಜಿಎಸ್) ಮೂಲಕ ಉನ್ನತ ಮಟ್ಟದ ಸಭೆ ನಡೆಸಿ, ಕಾಲುವೆ ದಂಡೆಗಳನ್ನು ಬಲಪಡಿಸಲು, ಪ್ರವಾಹಕ್ಕೆ ಸಿದ್ಧರಾಗಲು ಮತ್ತು ಪ್ರತಿ ಗಂಟೆಯೂ ಚಂಡಮಾರುತದ ಚಲನೆಯನ್ನು ಮೇಲ್ವಿಚಾರಣೆ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ವರದಿ ಹೇಳಿದೆ.

“ಎಲ್ಲಾ ಮೀನುಗಾರರನ್ನು ಮರಳಿ ದಡಕ್ಕೆ ಕರೆತರಲಾಗಿದೆ. ಚಂಡಮಾರುತದ ನಂತರದ ಪರಿಹಾರ ಕಾರ್ಯಾಚರಣೆಗಾಗಿ ವೈದ್ಯಕೀಯ ತಂಡಗಳು, ಎನ್‌ಡಿಆರ್‌ಎಫ್ ಘಟಕಗಳು ಮತ್ತು ಇಂಜಿನಿಯರಿಂಗ್ ವಿಭಾಗಗಳು ಸಿದ್ಧವಾಗಿವೆ” ಎಂದು ಅಧಿಕೃತ ಪ್ರಕಟಣೆಯನ್ನು ಉಲ್ಲೇಖಿಸಿ ಪಿಟಿಐ ತಿಳಿಸಿದೆ.

ಪರಿಹಾರ ಶಿಬಿರಗಳಲ್ಲಿರುವ ಪ್ರತಿ ಕುಟುಂಬಕ್ಕೆ 3,000 ರೂ. ನಗದು, 25 ಕೆಜಿ ಅಕ್ಕಿ ಮತ್ತು ಇತರ ಅಗತ್ಯ ವಸ್ತುಗಳನ್ನು ಘೋಷಿಸಲಾಗಿದೆ. ಕೃಷ್ಣ ಜಿಲ್ಲೆಯಲ್ಲಿ ತೀವ್ರ ಮಳೆಯಾಗುವ ಮುನ್ಸೂಚನೆ ಇದ್ದು, ಮುಂದಿನ ಎರಡು ದಿನಗಳಲ್ಲಿ ಗುಂಟೂರು, ಬಾಪಟ್ಲಾ, ಎನ್‌ಟಿಆರ್, ಪಲ್ನಾಡು ಮತ್ತು ಪಶ್ಚಿಮ ಗೋದಾವರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ವಾಲ್ಟೇರ್ ಪ್ರದೇಶ ಮತ್ತು ಪಕ್ಕದ ಮಾರ್ಗಗಳಲ್ಲಿ ಕಾರ್ಯನಿರ್ವಹಿಸುವ ಕೆಲವು ರೈಲುಗಳನ್ನು ರದ್ದುಪಡಿಸುವುದು, ತಿರುಗಿಸುವುದು ಮತ್ತು ಅಲ್ಪಾವಧಿಗೆ ಸ್ಥಗಿತಗೊಳಿಸುವುದಾಗಿ ಪೂರ್ವ ಕರಾವಳಿ ರೈಲ್ವೆ ಘೋಷಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಆಂಧ್ರಪ್ರದೇಶದ ಕರಾವಳಿಯಲ್ಲಿ ನೆಲ್ಲೂರಿನಿಂದ ಶ್ರೀಕಾಕುಳಂವರೆಗೆ 2 ರಿಂದ 4.7 ಮೀಟರ್ ಎತ್ತರದ ಅಲೆಗಳು ಏಳಲಿವೆ ಎಂದು ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ಸೇವೆಗಳ ಕೇಂದ್ರ (INCOIS) ಮತ್ತು ಭಾರತ ಹವಾಮಾನ ಇಲಾಖೆ (IMD)ಸೋಮವಾರ ಮುನ್ಸೂಚನೆ ನೀಡಿವೆ.

ಅಕ್ಟೋಬರ್ 27 ರಂದು ಸಂಜೆ 5.30ರಿಂದ ರಾತ್ರಿ 11.30 ರವರೆಗೆ ಆರು ಗಂಟೆಗಳ ಕಾಲ ಎತ್ತರದ ಅಲೆಗಳು ಅಪ್ಪಳಿಸುವ ನಿರೀಕ್ಷೆಯಿದೆ. ಸಾಮಾನ್ಯ ಉಬ್ಬರವಿಳಿತಕ್ಕಿಂತ ಸುಮಾರು ಒಂದು ಮೀಟರ್ ಎತ್ತರದ ಅಲೆಗಳು ಅಪ್ಪಳಿಸಿ ಆಂಧ್ರ ಪ್ರದೇಶ ಮತ್ತು ಯಾನಂನ ತಗ್ಗು ಪ್ರದೇಶಗಳನ್ನು ಮುಳುಗಿಸಬಹುದು ಎಂದು ಜಂಟಿ ಹೇಳಿಕೆಯಲ್ಲಿ ಎರಡೂ ಸಂಸ್ಥೆಗಳು ಎಚ್ಚರಿಸಿದ್ದವು.

ಪ್ರತ್ಯೇಕ ಬೆಳವಣಿಗೆಯಲ್ಲಿ, ಪೂರ್ವ-ಮಧ್ಯ ಅರೇಬಿಯನ್ ಸಮುದ್ರದ ಮೇಲೆ ವಾಯುಭಾರ ಕುಸಿತ ಉಂಟಾಗಿದ್ದು, ಅಕ್ಷಾಂಶ 16.7°N ಮತ್ತು ರೇಖಾಂಶ 67.3°E ಬಳಿ ಸ್ಥಿರವಾಗಿದೆ – ವೆರಾವಲ್ (ಗುಜರಾತ್) ನಿಂದ ನೈಋತ್ಯಕ್ಕೆ ಸುಮಾರು 570 ಕಿ.ಮೀ ಮತ್ತು ಮುಂಬೈನಿಂದ ಪಶ್ಚಿಮ-ನೈಋತ್ಯಕ್ಕೆ 650 ಕಿ.ಮೀ ದೂರದಲ್ಲಿದೆ. ಮೊಂಥಾ ಚಂಡಮಾರುತದಿಂದ ಭಿನ್ನವಾಗಿರುವ ಈ ಹವಾಮಾನ ಪರಿಸ್ಥಿತಿಯು ಮುಂದಿನ 48 ಗಂಟೆಗಳಲ್ಲಿ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದಾದ್ಯಂತ ಉತ್ತರ-ಈಶಾನ್ಯಕ್ಕೆ ಚಲಿಸುವ ಸಾಧ್ಯತೆಯಿದೆ.

ಮೊಂಥಾ ಚಂಡಮಾರುತವು ಪ್ರಬಲವಾಗುತ್ತಿದ್ದರೂ, ತಮಿಳುನಾಡಿನ ಹೆಚ್ಚಿನ ಭಾಗಗಳಲ್ಲಿ ಸೋಮವಾರ ಒಣ ಹವೆಯಿತ್ತು. ಆದಾಗ್ಯೂ, ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರ (ಆರ್‌ಎಂಸಿ) ಮಂಗಳವಾರ ತಿರುವಲ್ಲೂರು ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಿದೆ. ಚೆನ್ನೈ, ಚೆಂಗಲ್ಪಟ್ಟು, ಕಾಂಚಿಪುರಂ, ರಾಣಿಪೇಟೆ, ಥೇಣಿ, ತೆಂಕಾಸಿ ಮತ್ತು ಕನ್ಯಾಕುಮಾರಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ತಮಿಳುನಾಡು ಕರಾವಳಿಯಿಂದ ಚಂಡಮಾರುತ ದೂರ ಸರಿಯುವುದರಿಂದ, ಮಂಗಳವಾರ ಉತ್ತರ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ ಮತ್ತು ಬುಧವಾರ ಚಂಡಮಾರುತ ಅಪ್ಪಳಿಸಿದ ನಂತರ ಗಣನೀಯವಾಗಿ ಕಡಿಮೆಯಾಗಬಹುದು ಎನ್ನಲಾಗಿದೆ.

ಚೆನ್ನೈನ ಕೆಲವು ಪ್ರದೇಶಗಳಲ್ಲಿ ಸಾಮಾನ್ಯ ಮಳೆಯಾದ ವರದಿಯಾಗಿದ್ದರೆ, ಹೆಚ್ಚಿನ ಒಳನಾಡಿನ ಜಿಲ್ಲೆಗಳು ಒಣಹವೆಯಿಂದ ಕೂಡಿವೆ. ತಮಿಳುನಾಡು ಮತ್ತು ದಕ್ಷಿಣ ಆಂಧ್ರ ಕರಾವಳಿಯ ಮೀನುಗಾರರಿಗೆ ಬಲವಾದ ಗಾಳಿ ಮತ್ತು ಸಮುದ್ರದ ಪ್ರಕ್ಷುಬ್ಧತೆಯ ಬಗ್ಗೆ ಎಚ್ಚರಿಕೆ ನೀಡಲಾಗಿದೆ.

ಛತ್ ಪೂಜೆಗಾಗಿ ಪ್ರಧಾನಿಗೆ ಫಿಲ್ಟರ್ ನೀರಿನ ‘ನಕಲಿ’ ಯಮುನಾ ಘಾಟ್ ನಿರ್ಮಾಣ: ಎಎಪಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...