HomeUncategorizedತೌತೆ ಚಂಡಮಾರುತ - ಹಾನಿ ಪರಿಶೀಲನೆಗೆ ಗುಜರಾತ್‌ ತಲುಪಿದ ಪ್ರಧಾನಿ!

ತೌತೆ ಚಂಡಮಾರುತ – ಹಾನಿ ಪರಿಶೀಲನೆಗೆ ಗುಜರಾತ್‌ ತಲುಪಿದ ಪ್ರಧಾನಿ!

- Advertisement -
- Advertisement -

ತೌತೆ ಚಂಡಮಾರುತದಿಂದ ಉಂಟಾದ ಪರಿಸ್ಥಿತಿ ಮತ್ತು ಹಾನಿಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಬುಧವಾರ ಗುಜರಾತ್‌ನ ಭಾವನಗರ ತಲುಪಿದ್ದಾರೆ. ಪ್ರಧಾನಿಯನ್ನು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ್ದಾರೆ.

ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳ ಬಗ್ಗೆ ಪ್ರಧಾನಿಯು ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ರೂಪಾನಿ ಹೇಳಿದ್ದಾರೆ.

ತೌತೆ ಚಂಡಮಾರುತದಿಂದ ಹಾನಿಗೊಳಗಾದ ಅಮ್ರೆಲಿ, ಗಿರ್ ಸೋಮನಾಥ್ ಮತ್ತು ಭಾವನಗರ ಜಿಲ್ಲೆಗಳಲ್ಲಿ ಅವರು ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ ಎಂದು ರೂಪಾನಿ ಟ್ವೀಟ್ ಮಾಡಿದ್ದಾರೆ.

ಚಂಡಮಾರುತದಿಂದ ಉಂಟಾದ ಹಾನಿಯನ್ನು ಪರಿಶೀಲಿಸಲು ಕೇಂದ್ರಾಡಳಿತ ಪ್ರದೇಶವಾದ ‘ದಿಯು’ ಗೆ ಕೂಡಾ ಪ್ರಧಾನಿ ಇಂದು ಭೇಟಿ ನೀಡಲಿದ್ದಾರೆ.

ಇದನ್ನೂ ಓದಿ: ಕೋವಿಡ್‌ನಿಂದ ಯುಪಿ ಸಚಿವ ನಿಧನ: 2ನೆ ಅಲೆಗೆ ಯುಪಿ ಬಿಜೆಪಿಯ 5 ಶಾಸಕರು ಬಲಿ

ವೈಮಾನಿಕ ಸಮೀಕ್ಷೆಯ ನಂತರ ಪ್ರಧಾನಿ ಅಹಮದಾಬಾದ್‌ನಲ್ಲಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ರೂಪಾನಿ ಮಂಗಳವಾರ ಮಾಹಿತಿ ನೀಡಿದ್ದರು.

“ತೌತೆ ಚಂಡಮಾರುತದಿಂದ ಹಾನಿಗೊಳಗಾದ ಅಮ್ರೆಲಿ, ಗಿರ್ ಸೋಮನಾಥ್ ಮತ್ತು ಭಾವನಗರ ಜಿಲ್ಲೆಗಳ ವೈಮಾನಿಕ ಸಮೀಕ್ಷೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಬುಧವಾರ ಗುಜರಾತ್ ಭೇಟಿ ನೀಡಲಿದ್ದಾರೆ. ಇದರ ನಂತರ ಪ್ರಧಾನಿಯು ಅಹಮದಾಬಾದ್‌ನಲ್ಲಿ ಸಿಎಂ ವಿಜಯ್ ರೂಪಾನಿ ಮತ್ತು ರಾಜ್ಯದ ಉನ್ನತ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ” ಎಂದು ಗುಜರಾತ್ ಮುಖ್ಯಮಂತ್ರಿ ಕಚೇರಿಯ ಟ್ವಿಟರ್‌ ಹ್ಯಾಂಡಲ್‌ ಟ್ವೀಟ್ ಮಾಡಿತ್ತು.

‘1998 ನಂತರ ಗುಜರಾತ್ ಮೇಲೆ ಭಾರಿ ಕೆಟ್ಟ ಪರಿಣಾಮ ಬೀರಿದ ಅತ್ಯಂತ ಪ್ರಬಲವಾದ ಚಂಡಮಾರುತವಾಗಿದೆ ತೌತೆ. ಇದು ಗುಜರಾತ್‌ನ ಕರಾವಳಿಯುದ್ದಕ್ಕೂ ವಿನಾಶವನ್ನು ಉಂಟು ಮಾಡಿದ್ದು, ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿದೆ. ಜೊತೆಗೆ ಹಲವಾರು ಮನೆಗಳು ಮತ್ತು ರಸ್ತೆಗಳಿಗೂ ಹಾನಿಯುಂಟು ಮಾಡಿದೆ’ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ತೌತೆ ಚಂಡಮಾರುತವು ಉತ್ತರ ಪ್ರದೇಶ, ಹರಿಯಾಣ, ರಾಜಸ್ಥಾನ ಮತ್ತು ದೆಹಲಿ ಸೇರಿದಂತೆ ಉತ್ತರ ಭಾರತದ ಹಲವಾರು ಭಾಗಗಳಲ್ಲಿನ ಹವಾಮಾನ ವೈಪರೀತ್ಯದ ಮೇಲೆ ಪರಿಣಾಮ ಬೀರಿದೆ.

ಇದನ್ನೂ ಓದಿ: 13 ಐಪಿಎಸ್‌ ಅಧಿಕಾರಿಗಳ ಕಡ್ಡಾಯ ನಿವೃತ್ತಿ: ಕೇಂದ್ರ ಗೃಹ ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...