Homeಮುಖಪುಟತೌಕ್ತೆ ಚಂಡಮಾರುತ: ಸಂತ್ರಸ್ತರ ನೆರವಿಗೆ ನಿಲ್ಲಿ ಎಂದು ಕಾರ್ಯಕರ್ತರಲ್ಲಿ ರಾಹುಲ್ ಗಾಂಧಿ ಮನವಿ

ತೌಕ್ತೆ ಚಂಡಮಾರುತ: ಸಂತ್ರಸ್ತರ ನೆರವಿಗೆ ನಿಲ್ಲಿ ಎಂದು ಕಾರ್ಯಕರ್ತರಲ್ಲಿ ರಾಹುಲ್ ಗಾಂಧಿ ಮನವಿ

- Advertisement -
- Advertisement -

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ತೌಕ್ತೆ ಚಂಡಮಾರುತದಿಂದ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಕಾಂಗ್ರೆಸ್ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ‘ತೌಕ್ತೆ’ (Tauktae) ಚಂಡಮಾರುತ ಭೀತಿ ಹಿನ್ನೆಲೆಯಲ್ಲಿ ಕರ್ನಾಟಕ, ಕೇರಳ, ತಮಿಳುನಾಡು, ಗುಜರಾತ್ ಮತ್ತು ಮಹಾರಾಷ್ಟ್ರದ ಕರಾವಳಿ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF)ಯ 53 ತಂಡಗಳನ್ನು ಈಗಾಗಲೇ ನಿಯೋಜಿಸಲಾಗಿದೆ.

“ಕೇರಳ, ಮಹಾರಾಷ್ಟ್ರ, ಗೋವಾ, ತಮಿಳುನಾಡು, ಗುಜರಾತ್ ಮತ್ತು ಕರ್ನಾಟಕದಲ್ಲಿ ಸೈಕ್ಲೋನ್ ಅಲರ್ಟ್ ನೀಡಲಾಗಿದೆ. ತೌಕ್ತೆ ಚಂಡಮಾರುತದಿಂದಾಗಿ ಈಗಾಗಲೇ ಅನೇಕ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದೆ. ಅಗತ್ಯವಿರುವವರಿಗೆ ನಿಮ್ಮಿಂದ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ನಾನು ಕಾಂಗ್ರೆಸ್ ಕಾರ್ಯಕರ್ತರಿಗೆ ಮನವಿ ಮಾಡುತ್ತೇನೆ. ದಯವಿಟ್ಟು ಸುರಕ್ಷಿತವಾಗಿರಿ” ಎಂದು ವಯನಾಡ್ ಸಂಸದ ರಾಹುಲ್ ಗಾಂಧಿ ಟ್ವೀಟ್ ಮಾಡಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ತೌಕ್ತೆ ಚಂಡಮಾರುತ ಭೀತಿ: ಕರ್ನಾಟಕ ಸೇರಿ ಐದು ರಾಜ್ಯಗಳಲ್ಲಿ NDRF ತಂಡ ನಿಯೋಜನೆ

ಭಾರತ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಅರಬ್ಬಿ ಸಮುದ್ರದ ಮೇಲೆ ವಾಯುಭಾರ ಕುಸಿತ ಉಂಟಾಗಿದ್ದು, ಮೇ 16 ರ ಹೊತ್ತಿಗೆ ಕ್ರಮೇಣ ಪೂರ್ವ-ಮಧ್ಯ ಅರಬ್ಬಿ ಸಮುದ್ರದ ಮೇಲೆ ಚಂಡಮಾರುತವಾಗಿ ಬದಲಾಗಬಹುದು. ಮುಂದಿನ 12 ಗಂಟೆಗಳಲ್ಲಿ ಚಂಡಮಾರುತ ತೀವ್ರಗೊಳ್ಳುತ್ತದೆ ಎಂದಿದೆ.

ಕರ್ನಾಟಕ, ಕೇರಳ, ತಮಿಳುನಾಡು, ಗುಜರಾತ್ ಮತ್ತು ಮಹಾರಾಷ್ಟ್ರದ ಕರಾವಳಿ ಪ್ರದೇಶಗಳಲ್ಲಿ ಚಂಡಮಾರುತದ ಪರಿಣಾಮ ಉಂಟಾಗಲಿದೆ ಎಂದು  53 ತಂಡಗಳ ಪೈಕಿ 24 ತಂಡಗಳನ್ನು ಈ ಮೊದಲೇ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ. ಉಳಿದ ತಂಡಗಳನ್ನು ಕಾರ್ಯಾಚಣೆಗೆ ಸಿದ್ಧವಾಗಿ ಇರಿಸಲಾಗಿದೆ ಎಂದು ಎನ್‌ಡಿಆರ್‌ಎಫ್ ಮಹಾನಿರ್ದೇಶಕ ಎಸ್.ಎನ್. ಪ್ರಧಾನ್ ಹೇಳಿದ್ದಾರೆ.

ಉತ್ತರ-ವಾಯುವ್ಯ ಗುಜರಾತ್ ಮತ್ತು ಪಕ್ಕದ ಪಾಕಿಸ್ತಾನ ತೀರಗಳನ್ನು ತೌಕ್ತೆ ಚಂಡಮಾರುತ ಅಪ್ಪಳಿಸಲಿದ್ದು, ಮೇ 18 ರ ಸಂಜೆ ಗುಜರಾತ್ ಕರಾವಳಿಯನ್ನು ತಲುಪುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ  ತಿಳಿಸಿದೆ.


ಇದನ್ನೂ ಓದಿ: ಪೊಲೀಸ್ ವಿಚಾರಣೆಗೆ ಹೆದರುವುದಿಲ್ಲ, ಸಹಾಯ ಕೆಲಸ ಮುಂದುವರೆಸುತ್ತೇವೆ: IYC ಅಧ್ಯಕ್ಷ ಬಿ.ವಿ ಶ್ರೀನಿವಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...