Homeಮುಖಪುಟತೌಕ್ತೆ ಚಂಡಮಾರುತ: ಸಂತ್ರಸ್ತರ ನೆರವಿಗೆ ನಿಲ್ಲಿ ಎಂದು ಕಾರ್ಯಕರ್ತರಲ್ಲಿ ರಾಹುಲ್ ಗಾಂಧಿ ಮನವಿ

ತೌಕ್ತೆ ಚಂಡಮಾರುತ: ಸಂತ್ರಸ್ತರ ನೆರವಿಗೆ ನಿಲ್ಲಿ ಎಂದು ಕಾರ್ಯಕರ್ತರಲ್ಲಿ ರಾಹುಲ್ ಗಾಂಧಿ ಮನವಿ

- Advertisement -
- Advertisement -

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ತೌಕ್ತೆ ಚಂಡಮಾರುತದಿಂದ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಕಾಂಗ್ರೆಸ್ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ‘ತೌಕ್ತೆ’ (Tauktae) ಚಂಡಮಾರುತ ಭೀತಿ ಹಿನ್ನೆಲೆಯಲ್ಲಿ ಕರ್ನಾಟಕ, ಕೇರಳ, ತಮಿಳುನಾಡು, ಗುಜರಾತ್ ಮತ್ತು ಮಹಾರಾಷ್ಟ್ರದ ಕರಾವಳಿ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF)ಯ 53 ತಂಡಗಳನ್ನು ಈಗಾಗಲೇ ನಿಯೋಜಿಸಲಾಗಿದೆ.

“ಕೇರಳ, ಮಹಾರಾಷ್ಟ್ರ, ಗೋವಾ, ತಮಿಳುನಾಡು, ಗುಜರಾತ್ ಮತ್ತು ಕರ್ನಾಟಕದಲ್ಲಿ ಸೈಕ್ಲೋನ್ ಅಲರ್ಟ್ ನೀಡಲಾಗಿದೆ. ತೌಕ್ತೆ ಚಂಡಮಾರುತದಿಂದಾಗಿ ಈಗಾಗಲೇ ಅನೇಕ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದೆ. ಅಗತ್ಯವಿರುವವರಿಗೆ ನಿಮ್ಮಿಂದ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ನಾನು ಕಾಂಗ್ರೆಸ್ ಕಾರ್ಯಕರ್ತರಿಗೆ ಮನವಿ ಮಾಡುತ್ತೇನೆ. ದಯವಿಟ್ಟು ಸುರಕ್ಷಿತವಾಗಿರಿ” ಎಂದು ವಯನಾಡ್ ಸಂಸದ ರಾಹುಲ್ ಗಾಂಧಿ ಟ್ವೀಟ್ ಮಾಡಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ತೌಕ್ತೆ ಚಂಡಮಾರುತ ಭೀತಿ: ಕರ್ನಾಟಕ ಸೇರಿ ಐದು ರಾಜ್ಯಗಳಲ್ಲಿ NDRF ತಂಡ ನಿಯೋಜನೆ

ಭಾರತ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಅರಬ್ಬಿ ಸಮುದ್ರದ ಮೇಲೆ ವಾಯುಭಾರ ಕುಸಿತ ಉಂಟಾಗಿದ್ದು, ಮೇ 16 ರ ಹೊತ್ತಿಗೆ ಕ್ರಮೇಣ ಪೂರ್ವ-ಮಧ್ಯ ಅರಬ್ಬಿ ಸಮುದ್ರದ ಮೇಲೆ ಚಂಡಮಾರುತವಾಗಿ ಬದಲಾಗಬಹುದು. ಮುಂದಿನ 12 ಗಂಟೆಗಳಲ್ಲಿ ಚಂಡಮಾರುತ ತೀವ್ರಗೊಳ್ಳುತ್ತದೆ ಎಂದಿದೆ.

ಕರ್ನಾಟಕ, ಕೇರಳ, ತಮಿಳುನಾಡು, ಗುಜರಾತ್ ಮತ್ತು ಮಹಾರಾಷ್ಟ್ರದ ಕರಾವಳಿ ಪ್ರದೇಶಗಳಲ್ಲಿ ಚಂಡಮಾರುತದ ಪರಿಣಾಮ ಉಂಟಾಗಲಿದೆ ಎಂದು  53 ತಂಡಗಳ ಪೈಕಿ 24 ತಂಡಗಳನ್ನು ಈ ಮೊದಲೇ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ. ಉಳಿದ ತಂಡಗಳನ್ನು ಕಾರ್ಯಾಚಣೆಗೆ ಸಿದ್ಧವಾಗಿ ಇರಿಸಲಾಗಿದೆ ಎಂದು ಎನ್‌ಡಿಆರ್‌ಎಫ್ ಮಹಾನಿರ್ದೇಶಕ ಎಸ್.ಎನ್. ಪ್ರಧಾನ್ ಹೇಳಿದ್ದಾರೆ.

ಉತ್ತರ-ವಾಯುವ್ಯ ಗುಜರಾತ್ ಮತ್ತು ಪಕ್ಕದ ಪಾಕಿಸ್ತಾನ ತೀರಗಳನ್ನು ತೌಕ್ತೆ ಚಂಡಮಾರುತ ಅಪ್ಪಳಿಸಲಿದ್ದು, ಮೇ 18 ರ ಸಂಜೆ ಗುಜರಾತ್ ಕರಾವಳಿಯನ್ನು ತಲುಪುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ  ತಿಳಿಸಿದೆ.


ಇದನ್ನೂ ಓದಿ: ಪೊಲೀಸ್ ವಿಚಾರಣೆಗೆ ಹೆದರುವುದಿಲ್ಲ, ಸಹಾಯ ಕೆಲಸ ಮುಂದುವರೆಸುತ್ತೇವೆ: IYC ಅಧ್ಯಕ್ಷ ಬಿ.ವಿ ಶ್ರೀನಿವಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...