Homeಕರ್ನಾಟಕಡಿ. ದೇವರಾಜ ಅರಸು 110ನೇ ಜನ್ಮದಿನೋತ್ಸವ: 'ಭೂಮಿ ಮತ್ತು ವಸತಿ' ಹಕ್ಕು ಮಾನ್ಯ ಮಾಡಲು 'ಒನ್...

ಡಿ. ದೇವರಾಜ ಅರಸು 110ನೇ ಜನ್ಮದಿನೋತ್ಸವ: ‘ಭೂಮಿ ಮತ್ತು ವಸತಿ’ ಹಕ್ಕು ಮಾನ್ಯ ಮಾಡಲು ‘ಒನ್ ಟೈಮ್ ಸೆಟಲ್ಮೆಂಟ್’ಗೆ ಆಗ್ರಹ

- Advertisement -
- Advertisement -

ಬೆಂಗಳೂರು: ದಿವಂಗತ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 110ನೇ ಜನ್ಮದಿನೋತ್ಸವದ ಸಂದರ್ಭದಲ್ಲಿ, ಅರಣ್ಯ ಹಾಗೂ ಬಗರ್ ಹುಕುಂ ಸಾಗುವಳಿದಾರರಿಗೆ ‘ಒನ್ ಟೈಮ್ ಸೆಟಲ್ಮೆಂಟ್’ ಮೂಲಕ ‘ಭೂಮಿ-ವಸತಿ’ ಹಕ್ಕುಗಳನ್ನು ಮಾನ್ಯ ಮಾಡುವಂತೆ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು ಸರ್ಕಾರಕ್ಕೆ ಆಗ್ರಹಿಸಿದೆ.

ಸ್ವಾತಂತ್ರ್ಯದ ಪೂರ್ವದಿಂದಲೂ ಭೂಮಿಯಿಲ್ಲದೆ ಜೀತಗಾರರಾಗಿ ಬದುಕಿದ, ಗೇಣಿಯಲ್ಲೇ ಜೀವನ ಸವೆಸಿದ ಬಡ ಕೂಲಿಕಾರರಿಗೆ ‘ಉಳುವವನೇ ಭೂ ಒಡೆಯ’ ಕಾನೂನು ಜಾರಿಗೆ ತಂದು ಲಕ್ಷಾಂತರ ದಲಿತ ಹಾಗೂ ಹಿಂದುಳಿದ ಸಮುದಾಯಗಳಿಗೆ ಭೂಮಿಯ ಹಕ್ಕು ದೊರಕಿಸಿಕೊಟ್ಟ ಅರಸು ಅವರ ಕೊಡುಗೆಯನ್ನು ಸಮಿತಿಯು ಸ್ಮರಿಸಿಕೊಂಡಿತು. ಆಗಿನ ಸರ್ಕಾರ ಭೂಮಾಲೀಕರಿಂದ ಭೂಮಿಯನ್ನು ಪಡೆದು ಬಡವರಿಗೆ ನೀಡಿದರೆ, ಈಗ ಬಗರ್ ಹುಕುಂ ಸಾಗುವಳಿದಾರರ ಮಾಲೀಕ ಸರ್ಕಾರವೇ ಆಗಿದೆ. ಈ ಸಂದರ್ಭದಲ್ಲಿ ಸರ್ಕಾರ ಬಡವರಿಗೆ ಭೂಮಿ ನೀಡಲು ಕಠಿಣ ನೀತಿಗಳನ್ನು ಅನುಸರಿಸುತ್ತಿದ್ದರೆ, ಕಾರ್ಪೊರೇಟ್ ಕಂಪನಿಗಳಿಗೆ ಸುಲಭವಾಗಿ ಭೂಮಿಯನ್ನು ನೀಡುತ್ತಿದೆ ಎಂದು ಸಮಿತಿ ಆರೋಪಿಸಿತು.

ಸರ್ಕಾರದ ಕಾನೂನು ತೊಡಕುಗಳ ಬಗ್ಗೆ ಆರೋಪ

ರಾಜ್ಯದಲ್ಲಿ 33 ಲಕ್ಷಕ್ಕೂ ಹೆಚ್ಚು ಬಗರ್ ಹುಕುಂ ಅರ್ಜಿಗಳು ಬಾಕಿ ಉಳಿದಿದ್ದು, ಶೇಕಡಾ 90ರಷ್ಟು ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಭೂಮಿ ನೀಡಲು ಕಾನೂನು ತೊಡಕುಗಳಿವೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಹಿಂದಿನ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ಲಕ್ಷಾಂತರ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವು ನೀಡಿದರೆ, ಈಗಿನ ಸರ್ಕಾರ ಕಾನೂನುಗಳನ್ನು ಮುಂದಿಟ್ಟು ಬಡವರ ಹಕ್ಕುಗಳನ್ನು ನಿರಾಕರಿಸುತ್ತಿದೆ. ಅರಣ್ಯ ಹಕ್ಕು ಕಾಯ್ದೆಯಿದ್ದರೂ, ಅದನ್ನು ಸಮರ್ಪಕವಾಗಿ ಜಾರಿಗೆ ತರದೆ ಅರಣ್ಯ ಇಲಾಖೆಯ ಅಧಿಕಾರಿಗಳು ಜನರ ಹಕ್ಕುಗಳನ್ನು ಕಡೆಗಣಿಸುತ್ತಿದ್ದಾರೆ ಎಂದು ಹೋರಾಟ ಸಮಿತಿಯು ತಿಳಿಸಿದೆ.

ಒನ್ ಟೈಮ್ ಸೆಟಲ್ಮೆಂಟ್‌ಗೆ ಆಗ್ರಹ

‘ಭೂಮಿ ರಕ್ಷಿಸಲು ಕಾಯ್ದೆಗಳ ಬೇಲಿಗಳಿವೆ, ಆದರೆ ಬಡವರಿಗೆ ಭೂಮಿ ಮಂಜೂರು ಮಾಡಲು ಕಾನೂನು ತೊಡಕುಗಳಿವೆ. ಕಾರ್ಪೊರೇಟ್ ಕಂಪನಿಗಳಿಗೆ ಭೂಮಿ ದಾಟಲು ಕಾನೂನುಗಳಿವೆ’ ಎಂದು ಸಮಿತಿಯು ಬೇಸರ ವ್ಯಕ್ತಪಡಿಸಿದೆ. ದಲಿತರು, ಅಲೆಮಾರಿ, ಹಿಂದುಳಿದ ವರ್ಗದವರು ತಲೆಮಾರುಗಳಿಂದ ಭೂಮಿಯ ಒಡೆತನದ ಕನಸು ಕಾಣುತ್ತಿದ್ದಾರೆ. ಈ ಸಮಸ್ಯೆಯನ್ನು ನಿವಾರಿಸಲು, ರಾಜಕೀಯ ಪಕ್ಷಗಳು ಮತ ಬ್ಯಾಂಕ್‌ಗಾಗಿ ಬಡವರನ್ನು ಬಳಸಿಕೊಳ್ಳುವ ಬದಲು, ಅರಸು ಅವರ ಸಾಮಾಜಿಕ ನ್ಯಾಯದ ನೀತಿಯನ್ನು ಅನುಸರಿಸಿ, ಸಾಗುವಳಿ ಮಾಡುತ್ತಿರುವ ಎಲ್ಲ ಭೂರಹಿತರಿಗೆ ‘ಒನ್ ಟೈಮ್ ಸೆಟಲ್ಮೆಂಟ್’ ಮೂಲಕ ಭೂಮಿ ಮಂಜೂರು ಮಾಡಬೇಕು ಎಂದು ಸಮಿತಿ ಆಗ್ರಹಿಸಿದೆ.

ಸಮಿತಿಯ ಪ್ರಮುಖ ಬೇಡಿಕೆಗಳು:

ಗೋಮಾಳ ಭೂಮಿ: 100 ರಾಸುಗಳಿಗೆ 30 ಎಕರೆ ಗೋಮಾಳ ಭೂಮಿ ಮೀಸಲಿಡುವ ಹಳೆಯ ಮಾನದಂಡವನ್ನು ಬದಲಾಯಿಸಬೇಕು. ಇಂದಿನ ಕೃಷಿ ಮತ್ತು ಪಶುಸಂಗೋಪನೆಯ ವಾಸ್ತವ ಸ್ಥಿತಿಯನ್ನು ಪರಿಗಣಿಸಿ, ಗೋಮಾಳದ ಪರಿಕಲ್ಪನೆಯನ್ನು ಪುನರಾಲೋಚಿಸಬೇಕು.

ಕಂದಾಯ ಭೂಮಿ: ಸರ್ಕಾರಿ ಅ ಖರಾಬ್, ಬ ಖರಾಬ್, ಗೋಮಾಳ, ಹುಲ್ಲುಬನ್ನಿ, ಪೈಸಾರಿ, ಅರಣ್ಯದಂತಹ ನೂರಾರು ವರ್ಷಗಳಿಂದ ಮೂಲ ಸ್ವರೂಪ ಬದಲಿಸಿರುವ ಭೂಮಿಗಳ ಬಗ್ಗೆ ಹೊಸ ನೀತಿ ರೂಪಿಸಬೇಕು.

ನಗರ ಮಿತಿ ಅರ್ಜಿಗಳು: ನಗರ ಮಿತಿಯ ಹೆಸರಿನಲ್ಲಿ ತಿರಸ್ಕರಿಸಲ್ಪಟ್ಟ ಫಾರಂ 50, 53, ಮತ್ತು 57ರ ಅರ್ಜಿಗಳನ್ನು ‘ಒನ್ ಟೈಮ್ ಸೆಟಲ್ಮೆಂಟ್’ ಮೂಲಕ ಇತ್ಯರ್ಥಪಡಿಸಬೇಕು.

ಸಾಮಾಜಿಕ ನ್ಯಾಯ: ಸಾಗುವಳಿ ಮಾಡುತ್ತಿರುವ ಭೂರಹಿತರಲ್ಲಿ ಬಹುತೇಕರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗದವರೇ ಆಗಿದ್ದಾರೆ. ಅವರಿಗೆ ಸಾಮಾಜಿಕ ನ್ಯಾಯದ ಆಧಾರದಲ್ಲಿ ಭೂಮಿ ಹಕ್ಕು ನೀಡಬೇಕು.

ವಸತಿ ಹಕ್ಕು: ಪ್ರತಿ ಪಂಚಾಯಿತಿ ಮಟ್ಟದಲ್ಲಿ ವಸತಿ ರಹಿತರಿಗೆ ಗೌರವಯುತ ಜೀವನ ನಡೆಸಲು ವಸತಿ ಜಾಗವನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಿ ಹಕ್ಕು ಪತ್ರ ನೀಡಬೇಕು.

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು, ಡಿ. ದೇವರಾಜ ಅರಸು ಅವರ 110ನೇ ಜನ್ಮದಿನೋತ್ಸವದ ಸವಿನೆನಪಿಗಾಗಿ ಆಚರಿಸುತ್ತಿರುವ ಸರ್ಕಾರದ ಕಾರ್ಯಕ್ರಮಗಳು ಕೇವಲ ಸಾಂಕೇತಿಕವಾಗಿರದೆ, ಬಡವರ ಬದುಕಿನಲ್ಲಿ ನಿಜವಾದ ಬದಲಾವಣೆ ತರಬೇಕು ಎಂದು ಕರೆ ನೀಡಿದೆ.

ಒಳ ಮೀಸಲಾತಿ | ಜನಗಣತಿ ಅಂಕಿ-ಅಂಶ ಆಧರಿಸಿ ಬದಲಾವಣೆಗೆ ಬದ್ದ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...