Homeಕರ್ನಾಟಕಡಿ. ದೇವರಾಜ ಅರಸು 110ನೇ ಜನ್ಮದಿನೋತ್ಸವ: 'ಭೂಮಿ ಮತ್ತು ವಸತಿ' ಹಕ್ಕು ಮಾನ್ಯ ಮಾಡಲು 'ಒನ್...

ಡಿ. ದೇವರಾಜ ಅರಸು 110ನೇ ಜನ್ಮದಿನೋತ್ಸವ: ‘ಭೂಮಿ ಮತ್ತು ವಸತಿ’ ಹಕ್ಕು ಮಾನ್ಯ ಮಾಡಲು ‘ಒನ್ ಟೈಮ್ ಸೆಟಲ್ಮೆಂಟ್’ಗೆ ಆಗ್ರಹ

- Advertisement -
- Advertisement -

ಬೆಂಗಳೂರು: ದಿವಂಗತ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 110ನೇ ಜನ್ಮದಿನೋತ್ಸವದ ಸಂದರ್ಭದಲ್ಲಿ, ಅರಣ್ಯ ಹಾಗೂ ಬಗರ್ ಹುಕುಂ ಸಾಗುವಳಿದಾರರಿಗೆ ‘ಒನ್ ಟೈಮ್ ಸೆಟಲ್ಮೆಂಟ್’ ಮೂಲಕ ‘ಭೂಮಿ-ವಸತಿ’ ಹಕ್ಕುಗಳನ್ನು ಮಾನ್ಯ ಮಾಡುವಂತೆ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು ಸರ್ಕಾರಕ್ಕೆ ಆಗ್ರಹಿಸಿದೆ.

ಸ್ವಾತಂತ್ರ್ಯದ ಪೂರ್ವದಿಂದಲೂ ಭೂಮಿಯಿಲ್ಲದೆ ಜೀತಗಾರರಾಗಿ ಬದುಕಿದ, ಗೇಣಿಯಲ್ಲೇ ಜೀವನ ಸವೆಸಿದ ಬಡ ಕೂಲಿಕಾರರಿಗೆ ‘ಉಳುವವನೇ ಭೂ ಒಡೆಯ’ ಕಾನೂನು ಜಾರಿಗೆ ತಂದು ಲಕ್ಷಾಂತರ ದಲಿತ ಹಾಗೂ ಹಿಂದುಳಿದ ಸಮುದಾಯಗಳಿಗೆ ಭೂಮಿಯ ಹಕ್ಕು ದೊರಕಿಸಿಕೊಟ್ಟ ಅರಸು ಅವರ ಕೊಡುಗೆಯನ್ನು ಸಮಿತಿಯು ಸ್ಮರಿಸಿಕೊಂಡಿತು. ಆಗಿನ ಸರ್ಕಾರ ಭೂಮಾಲೀಕರಿಂದ ಭೂಮಿಯನ್ನು ಪಡೆದು ಬಡವರಿಗೆ ನೀಡಿದರೆ, ಈಗ ಬಗರ್ ಹುಕುಂ ಸಾಗುವಳಿದಾರರ ಮಾಲೀಕ ಸರ್ಕಾರವೇ ಆಗಿದೆ. ಈ ಸಂದರ್ಭದಲ್ಲಿ ಸರ್ಕಾರ ಬಡವರಿಗೆ ಭೂಮಿ ನೀಡಲು ಕಠಿಣ ನೀತಿಗಳನ್ನು ಅನುಸರಿಸುತ್ತಿದ್ದರೆ, ಕಾರ್ಪೊರೇಟ್ ಕಂಪನಿಗಳಿಗೆ ಸುಲಭವಾಗಿ ಭೂಮಿಯನ್ನು ನೀಡುತ್ತಿದೆ ಎಂದು ಸಮಿತಿ ಆರೋಪಿಸಿತು.

ಸರ್ಕಾರದ ಕಾನೂನು ತೊಡಕುಗಳ ಬಗ್ಗೆ ಆರೋಪ

ರಾಜ್ಯದಲ್ಲಿ 33 ಲಕ್ಷಕ್ಕೂ ಹೆಚ್ಚು ಬಗರ್ ಹುಕುಂ ಅರ್ಜಿಗಳು ಬಾಕಿ ಉಳಿದಿದ್ದು, ಶೇಕಡಾ 90ರಷ್ಟು ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಭೂಮಿ ನೀಡಲು ಕಾನೂನು ತೊಡಕುಗಳಿವೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಹಿಂದಿನ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ಲಕ್ಷಾಂತರ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವು ನೀಡಿದರೆ, ಈಗಿನ ಸರ್ಕಾರ ಕಾನೂನುಗಳನ್ನು ಮುಂದಿಟ್ಟು ಬಡವರ ಹಕ್ಕುಗಳನ್ನು ನಿರಾಕರಿಸುತ್ತಿದೆ. ಅರಣ್ಯ ಹಕ್ಕು ಕಾಯ್ದೆಯಿದ್ದರೂ, ಅದನ್ನು ಸಮರ್ಪಕವಾಗಿ ಜಾರಿಗೆ ತರದೆ ಅರಣ್ಯ ಇಲಾಖೆಯ ಅಧಿಕಾರಿಗಳು ಜನರ ಹಕ್ಕುಗಳನ್ನು ಕಡೆಗಣಿಸುತ್ತಿದ್ದಾರೆ ಎಂದು ಹೋರಾಟ ಸಮಿತಿಯು ತಿಳಿಸಿದೆ.

ಒನ್ ಟೈಮ್ ಸೆಟಲ್ಮೆಂಟ್‌ಗೆ ಆಗ್ರಹ

‘ಭೂಮಿ ರಕ್ಷಿಸಲು ಕಾಯ್ದೆಗಳ ಬೇಲಿಗಳಿವೆ, ಆದರೆ ಬಡವರಿಗೆ ಭೂಮಿ ಮಂಜೂರು ಮಾಡಲು ಕಾನೂನು ತೊಡಕುಗಳಿವೆ. ಕಾರ್ಪೊರೇಟ್ ಕಂಪನಿಗಳಿಗೆ ಭೂಮಿ ದಾಟಲು ಕಾನೂನುಗಳಿವೆ’ ಎಂದು ಸಮಿತಿಯು ಬೇಸರ ವ್ಯಕ್ತಪಡಿಸಿದೆ. ದಲಿತರು, ಅಲೆಮಾರಿ, ಹಿಂದುಳಿದ ವರ್ಗದವರು ತಲೆಮಾರುಗಳಿಂದ ಭೂಮಿಯ ಒಡೆತನದ ಕನಸು ಕಾಣುತ್ತಿದ್ದಾರೆ. ಈ ಸಮಸ್ಯೆಯನ್ನು ನಿವಾರಿಸಲು, ರಾಜಕೀಯ ಪಕ್ಷಗಳು ಮತ ಬ್ಯಾಂಕ್‌ಗಾಗಿ ಬಡವರನ್ನು ಬಳಸಿಕೊಳ್ಳುವ ಬದಲು, ಅರಸು ಅವರ ಸಾಮಾಜಿಕ ನ್ಯಾಯದ ನೀತಿಯನ್ನು ಅನುಸರಿಸಿ, ಸಾಗುವಳಿ ಮಾಡುತ್ತಿರುವ ಎಲ್ಲ ಭೂರಹಿತರಿಗೆ ‘ಒನ್ ಟೈಮ್ ಸೆಟಲ್ಮೆಂಟ್’ ಮೂಲಕ ಭೂಮಿ ಮಂಜೂರು ಮಾಡಬೇಕು ಎಂದು ಸಮಿತಿ ಆಗ್ರಹಿಸಿದೆ.

ಸಮಿತಿಯ ಪ್ರಮುಖ ಬೇಡಿಕೆಗಳು:

ಗೋಮಾಳ ಭೂಮಿ: 100 ರಾಸುಗಳಿಗೆ 30 ಎಕರೆ ಗೋಮಾಳ ಭೂಮಿ ಮೀಸಲಿಡುವ ಹಳೆಯ ಮಾನದಂಡವನ್ನು ಬದಲಾಯಿಸಬೇಕು. ಇಂದಿನ ಕೃಷಿ ಮತ್ತು ಪಶುಸಂಗೋಪನೆಯ ವಾಸ್ತವ ಸ್ಥಿತಿಯನ್ನು ಪರಿಗಣಿಸಿ, ಗೋಮಾಳದ ಪರಿಕಲ್ಪನೆಯನ್ನು ಪುನರಾಲೋಚಿಸಬೇಕು.

ಕಂದಾಯ ಭೂಮಿ: ಸರ್ಕಾರಿ ಅ ಖರಾಬ್, ಬ ಖರಾಬ್, ಗೋಮಾಳ, ಹುಲ್ಲುಬನ್ನಿ, ಪೈಸಾರಿ, ಅರಣ್ಯದಂತಹ ನೂರಾರು ವರ್ಷಗಳಿಂದ ಮೂಲ ಸ್ವರೂಪ ಬದಲಿಸಿರುವ ಭೂಮಿಗಳ ಬಗ್ಗೆ ಹೊಸ ನೀತಿ ರೂಪಿಸಬೇಕು.

ನಗರ ಮಿತಿ ಅರ್ಜಿಗಳು: ನಗರ ಮಿತಿಯ ಹೆಸರಿನಲ್ಲಿ ತಿರಸ್ಕರಿಸಲ್ಪಟ್ಟ ಫಾರಂ 50, 53, ಮತ್ತು 57ರ ಅರ್ಜಿಗಳನ್ನು ‘ಒನ್ ಟೈಮ್ ಸೆಟಲ್ಮೆಂಟ್’ ಮೂಲಕ ಇತ್ಯರ್ಥಪಡಿಸಬೇಕು.

ಸಾಮಾಜಿಕ ನ್ಯಾಯ: ಸಾಗುವಳಿ ಮಾಡುತ್ತಿರುವ ಭೂರಹಿತರಲ್ಲಿ ಬಹುತೇಕರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗದವರೇ ಆಗಿದ್ದಾರೆ. ಅವರಿಗೆ ಸಾಮಾಜಿಕ ನ್ಯಾಯದ ಆಧಾರದಲ್ಲಿ ಭೂಮಿ ಹಕ್ಕು ನೀಡಬೇಕು.

ವಸತಿ ಹಕ್ಕು: ಪ್ರತಿ ಪಂಚಾಯಿತಿ ಮಟ್ಟದಲ್ಲಿ ವಸತಿ ರಹಿತರಿಗೆ ಗೌರವಯುತ ಜೀವನ ನಡೆಸಲು ವಸತಿ ಜಾಗವನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಿ ಹಕ್ಕು ಪತ್ರ ನೀಡಬೇಕು.

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು, ಡಿ. ದೇವರಾಜ ಅರಸು ಅವರ 110ನೇ ಜನ್ಮದಿನೋತ್ಸವದ ಸವಿನೆನಪಿಗಾಗಿ ಆಚರಿಸುತ್ತಿರುವ ಸರ್ಕಾರದ ಕಾರ್ಯಕ್ರಮಗಳು ಕೇವಲ ಸಾಂಕೇತಿಕವಾಗಿರದೆ, ಬಡವರ ಬದುಕಿನಲ್ಲಿ ನಿಜವಾದ ಬದಲಾವಣೆ ತರಬೇಕು ಎಂದು ಕರೆ ನೀಡಿದೆ.

ಒಳ ಮೀಸಲಾತಿ | ಜನಗಣತಿ ಅಂಕಿ-ಅಂಶ ಆಧರಿಸಿ ಬದಲಾವಣೆಗೆ ಬದ್ದ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...