Homeಕರ್ನಾಟಕಡಿ. ದೇವರಾಜ ಅರಸು 110ನೇ ಜನ್ಮದಿನೋತ್ಸವ: 'ಭೂಮಿ ಮತ್ತು ವಸತಿ' ಹಕ್ಕು ಮಾನ್ಯ ಮಾಡಲು 'ಒನ್...

ಡಿ. ದೇವರಾಜ ಅರಸು 110ನೇ ಜನ್ಮದಿನೋತ್ಸವ: ‘ಭೂಮಿ ಮತ್ತು ವಸತಿ’ ಹಕ್ಕು ಮಾನ್ಯ ಮಾಡಲು ‘ಒನ್ ಟೈಮ್ ಸೆಟಲ್ಮೆಂಟ್’ಗೆ ಆಗ್ರಹ

- Advertisement -
- Advertisement -

ಬೆಂಗಳೂರು: ದಿವಂಗತ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 110ನೇ ಜನ್ಮದಿನೋತ್ಸವದ ಸಂದರ್ಭದಲ್ಲಿ, ಅರಣ್ಯ ಹಾಗೂ ಬಗರ್ ಹುಕುಂ ಸಾಗುವಳಿದಾರರಿಗೆ ‘ಒನ್ ಟೈಮ್ ಸೆಟಲ್ಮೆಂಟ್’ ಮೂಲಕ ‘ಭೂಮಿ-ವಸತಿ’ ಹಕ್ಕುಗಳನ್ನು ಮಾನ್ಯ ಮಾಡುವಂತೆ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು ಸರ್ಕಾರಕ್ಕೆ ಆಗ್ರಹಿಸಿದೆ.

ಸ್ವಾತಂತ್ರ್ಯದ ಪೂರ್ವದಿಂದಲೂ ಭೂಮಿಯಿಲ್ಲದೆ ಜೀತಗಾರರಾಗಿ ಬದುಕಿದ, ಗೇಣಿಯಲ್ಲೇ ಜೀವನ ಸವೆಸಿದ ಬಡ ಕೂಲಿಕಾರರಿಗೆ ‘ಉಳುವವನೇ ಭೂ ಒಡೆಯ’ ಕಾನೂನು ಜಾರಿಗೆ ತಂದು ಲಕ್ಷಾಂತರ ದಲಿತ ಹಾಗೂ ಹಿಂದುಳಿದ ಸಮುದಾಯಗಳಿಗೆ ಭೂಮಿಯ ಹಕ್ಕು ದೊರಕಿಸಿಕೊಟ್ಟ ಅರಸು ಅವರ ಕೊಡುಗೆಯನ್ನು ಸಮಿತಿಯು ಸ್ಮರಿಸಿಕೊಂಡಿತು. ಆಗಿನ ಸರ್ಕಾರ ಭೂಮಾಲೀಕರಿಂದ ಭೂಮಿಯನ್ನು ಪಡೆದು ಬಡವರಿಗೆ ನೀಡಿದರೆ, ಈಗ ಬಗರ್ ಹುಕುಂ ಸಾಗುವಳಿದಾರರ ಮಾಲೀಕ ಸರ್ಕಾರವೇ ಆಗಿದೆ. ಈ ಸಂದರ್ಭದಲ್ಲಿ ಸರ್ಕಾರ ಬಡವರಿಗೆ ಭೂಮಿ ನೀಡಲು ಕಠಿಣ ನೀತಿಗಳನ್ನು ಅನುಸರಿಸುತ್ತಿದ್ದರೆ, ಕಾರ್ಪೊರೇಟ್ ಕಂಪನಿಗಳಿಗೆ ಸುಲಭವಾಗಿ ಭೂಮಿಯನ್ನು ನೀಡುತ್ತಿದೆ ಎಂದು ಸಮಿತಿ ಆರೋಪಿಸಿತು.

ಸರ್ಕಾರದ ಕಾನೂನು ತೊಡಕುಗಳ ಬಗ್ಗೆ ಆರೋಪ

ರಾಜ್ಯದಲ್ಲಿ 33 ಲಕ್ಷಕ್ಕೂ ಹೆಚ್ಚು ಬಗರ್ ಹುಕುಂ ಅರ್ಜಿಗಳು ಬಾಕಿ ಉಳಿದಿದ್ದು, ಶೇಕಡಾ 90ರಷ್ಟು ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಭೂಮಿ ನೀಡಲು ಕಾನೂನು ತೊಡಕುಗಳಿವೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಹಿಂದಿನ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ಲಕ್ಷಾಂತರ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವು ನೀಡಿದರೆ, ಈಗಿನ ಸರ್ಕಾರ ಕಾನೂನುಗಳನ್ನು ಮುಂದಿಟ್ಟು ಬಡವರ ಹಕ್ಕುಗಳನ್ನು ನಿರಾಕರಿಸುತ್ತಿದೆ. ಅರಣ್ಯ ಹಕ್ಕು ಕಾಯ್ದೆಯಿದ್ದರೂ, ಅದನ್ನು ಸಮರ್ಪಕವಾಗಿ ಜಾರಿಗೆ ತರದೆ ಅರಣ್ಯ ಇಲಾಖೆಯ ಅಧಿಕಾರಿಗಳು ಜನರ ಹಕ್ಕುಗಳನ್ನು ಕಡೆಗಣಿಸುತ್ತಿದ್ದಾರೆ ಎಂದು ಹೋರಾಟ ಸಮಿತಿಯು ತಿಳಿಸಿದೆ.

ಒನ್ ಟೈಮ್ ಸೆಟಲ್ಮೆಂಟ್‌ಗೆ ಆಗ್ರಹ

‘ಭೂಮಿ ರಕ್ಷಿಸಲು ಕಾಯ್ದೆಗಳ ಬೇಲಿಗಳಿವೆ, ಆದರೆ ಬಡವರಿಗೆ ಭೂಮಿ ಮಂಜೂರು ಮಾಡಲು ಕಾನೂನು ತೊಡಕುಗಳಿವೆ. ಕಾರ್ಪೊರೇಟ್ ಕಂಪನಿಗಳಿಗೆ ಭೂಮಿ ದಾಟಲು ಕಾನೂನುಗಳಿವೆ’ ಎಂದು ಸಮಿತಿಯು ಬೇಸರ ವ್ಯಕ್ತಪಡಿಸಿದೆ. ದಲಿತರು, ಅಲೆಮಾರಿ, ಹಿಂದುಳಿದ ವರ್ಗದವರು ತಲೆಮಾರುಗಳಿಂದ ಭೂಮಿಯ ಒಡೆತನದ ಕನಸು ಕಾಣುತ್ತಿದ್ದಾರೆ. ಈ ಸಮಸ್ಯೆಯನ್ನು ನಿವಾರಿಸಲು, ರಾಜಕೀಯ ಪಕ್ಷಗಳು ಮತ ಬ್ಯಾಂಕ್‌ಗಾಗಿ ಬಡವರನ್ನು ಬಳಸಿಕೊಳ್ಳುವ ಬದಲು, ಅರಸು ಅವರ ಸಾಮಾಜಿಕ ನ್ಯಾಯದ ನೀತಿಯನ್ನು ಅನುಸರಿಸಿ, ಸಾಗುವಳಿ ಮಾಡುತ್ತಿರುವ ಎಲ್ಲ ಭೂರಹಿತರಿಗೆ ‘ಒನ್ ಟೈಮ್ ಸೆಟಲ್ಮೆಂಟ್’ ಮೂಲಕ ಭೂಮಿ ಮಂಜೂರು ಮಾಡಬೇಕು ಎಂದು ಸಮಿತಿ ಆಗ್ರಹಿಸಿದೆ.

ಸಮಿತಿಯ ಪ್ರಮುಖ ಬೇಡಿಕೆಗಳು:

ಗೋಮಾಳ ಭೂಮಿ: 100 ರಾಸುಗಳಿಗೆ 30 ಎಕರೆ ಗೋಮಾಳ ಭೂಮಿ ಮೀಸಲಿಡುವ ಹಳೆಯ ಮಾನದಂಡವನ್ನು ಬದಲಾಯಿಸಬೇಕು. ಇಂದಿನ ಕೃಷಿ ಮತ್ತು ಪಶುಸಂಗೋಪನೆಯ ವಾಸ್ತವ ಸ್ಥಿತಿಯನ್ನು ಪರಿಗಣಿಸಿ, ಗೋಮಾಳದ ಪರಿಕಲ್ಪನೆಯನ್ನು ಪುನರಾಲೋಚಿಸಬೇಕು.

ಕಂದಾಯ ಭೂಮಿ: ಸರ್ಕಾರಿ ಅ ಖರಾಬ್, ಬ ಖರಾಬ್, ಗೋಮಾಳ, ಹುಲ್ಲುಬನ್ನಿ, ಪೈಸಾರಿ, ಅರಣ್ಯದಂತಹ ನೂರಾರು ವರ್ಷಗಳಿಂದ ಮೂಲ ಸ್ವರೂಪ ಬದಲಿಸಿರುವ ಭೂಮಿಗಳ ಬಗ್ಗೆ ಹೊಸ ನೀತಿ ರೂಪಿಸಬೇಕು.

ನಗರ ಮಿತಿ ಅರ್ಜಿಗಳು: ನಗರ ಮಿತಿಯ ಹೆಸರಿನಲ್ಲಿ ತಿರಸ್ಕರಿಸಲ್ಪಟ್ಟ ಫಾರಂ 50, 53, ಮತ್ತು 57ರ ಅರ್ಜಿಗಳನ್ನು ‘ಒನ್ ಟೈಮ್ ಸೆಟಲ್ಮೆಂಟ್’ ಮೂಲಕ ಇತ್ಯರ್ಥಪಡಿಸಬೇಕು.

ಸಾಮಾಜಿಕ ನ್ಯಾಯ: ಸಾಗುವಳಿ ಮಾಡುತ್ತಿರುವ ಭೂರಹಿತರಲ್ಲಿ ಬಹುತೇಕರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗದವರೇ ಆಗಿದ್ದಾರೆ. ಅವರಿಗೆ ಸಾಮಾಜಿಕ ನ್ಯಾಯದ ಆಧಾರದಲ್ಲಿ ಭೂಮಿ ಹಕ್ಕು ನೀಡಬೇಕು.

ವಸತಿ ಹಕ್ಕು: ಪ್ರತಿ ಪಂಚಾಯಿತಿ ಮಟ್ಟದಲ್ಲಿ ವಸತಿ ರಹಿತರಿಗೆ ಗೌರವಯುತ ಜೀವನ ನಡೆಸಲು ವಸತಿ ಜಾಗವನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಿ ಹಕ್ಕು ಪತ್ರ ನೀಡಬೇಕು.

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು, ಡಿ. ದೇವರಾಜ ಅರಸು ಅವರ 110ನೇ ಜನ್ಮದಿನೋತ್ಸವದ ಸವಿನೆನಪಿಗಾಗಿ ಆಚರಿಸುತ್ತಿರುವ ಸರ್ಕಾರದ ಕಾರ್ಯಕ್ರಮಗಳು ಕೇವಲ ಸಾಂಕೇತಿಕವಾಗಿರದೆ, ಬಡವರ ಬದುಕಿನಲ್ಲಿ ನಿಜವಾದ ಬದಲಾವಣೆ ತರಬೇಕು ಎಂದು ಕರೆ ನೀಡಿದೆ.

ಒಳ ಮೀಸಲಾತಿ | ಜನಗಣತಿ ಅಂಕಿ-ಅಂಶ ಆಧರಿಸಿ ಬದಲಾವಣೆಗೆ ಬದ್ದ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...