Homeಕರ್ನಾಟಕಡಿ. ದೇವರಾಜ ಅರಸು 110ನೇ ಜನ್ಮದಿನೋತ್ಸವ: 'ಭೂಮಿ ಮತ್ತು ವಸತಿ' ಹಕ್ಕು ಮಾನ್ಯ ಮಾಡಲು 'ಒನ್...

ಡಿ. ದೇವರಾಜ ಅರಸು 110ನೇ ಜನ್ಮದಿನೋತ್ಸವ: ‘ಭೂಮಿ ಮತ್ತು ವಸತಿ’ ಹಕ್ಕು ಮಾನ್ಯ ಮಾಡಲು ‘ಒನ್ ಟೈಮ್ ಸೆಟಲ್ಮೆಂಟ್’ಗೆ ಆಗ್ರಹ

- Advertisement -
- Advertisement -

ಬೆಂಗಳೂರು: ದಿವಂಗತ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 110ನೇ ಜನ್ಮದಿನೋತ್ಸವದ ಸಂದರ್ಭದಲ್ಲಿ, ಅರಣ್ಯ ಹಾಗೂ ಬಗರ್ ಹುಕುಂ ಸಾಗುವಳಿದಾರರಿಗೆ ‘ಒನ್ ಟೈಮ್ ಸೆಟಲ್ಮೆಂಟ್’ ಮೂಲಕ ‘ಭೂಮಿ-ವಸತಿ’ ಹಕ್ಕುಗಳನ್ನು ಮಾನ್ಯ ಮಾಡುವಂತೆ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು ಸರ್ಕಾರಕ್ಕೆ ಆಗ್ರಹಿಸಿದೆ.

ಸ್ವಾತಂತ್ರ್ಯದ ಪೂರ್ವದಿಂದಲೂ ಭೂಮಿಯಿಲ್ಲದೆ ಜೀತಗಾರರಾಗಿ ಬದುಕಿದ, ಗೇಣಿಯಲ್ಲೇ ಜೀವನ ಸವೆಸಿದ ಬಡ ಕೂಲಿಕಾರರಿಗೆ ‘ಉಳುವವನೇ ಭೂ ಒಡೆಯ’ ಕಾನೂನು ಜಾರಿಗೆ ತಂದು ಲಕ್ಷಾಂತರ ದಲಿತ ಹಾಗೂ ಹಿಂದುಳಿದ ಸಮುದಾಯಗಳಿಗೆ ಭೂಮಿಯ ಹಕ್ಕು ದೊರಕಿಸಿಕೊಟ್ಟ ಅರಸು ಅವರ ಕೊಡುಗೆಯನ್ನು ಸಮಿತಿಯು ಸ್ಮರಿಸಿಕೊಂಡಿತು. ಆಗಿನ ಸರ್ಕಾರ ಭೂಮಾಲೀಕರಿಂದ ಭೂಮಿಯನ್ನು ಪಡೆದು ಬಡವರಿಗೆ ನೀಡಿದರೆ, ಈಗ ಬಗರ್ ಹುಕುಂ ಸಾಗುವಳಿದಾರರ ಮಾಲೀಕ ಸರ್ಕಾರವೇ ಆಗಿದೆ. ಈ ಸಂದರ್ಭದಲ್ಲಿ ಸರ್ಕಾರ ಬಡವರಿಗೆ ಭೂಮಿ ನೀಡಲು ಕಠಿಣ ನೀತಿಗಳನ್ನು ಅನುಸರಿಸುತ್ತಿದ್ದರೆ, ಕಾರ್ಪೊರೇಟ್ ಕಂಪನಿಗಳಿಗೆ ಸುಲಭವಾಗಿ ಭೂಮಿಯನ್ನು ನೀಡುತ್ತಿದೆ ಎಂದು ಸಮಿತಿ ಆರೋಪಿಸಿತು.

ಸರ್ಕಾರದ ಕಾನೂನು ತೊಡಕುಗಳ ಬಗ್ಗೆ ಆರೋಪ

ರಾಜ್ಯದಲ್ಲಿ 33 ಲಕ್ಷಕ್ಕೂ ಹೆಚ್ಚು ಬಗರ್ ಹುಕುಂ ಅರ್ಜಿಗಳು ಬಾಕಿ ಉಳಿದಿದ್ದು, ಶೇಕಡಾ 90ರಷ್ಟು ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಭೂಮಿ ನೀಡಲು ಕಾನೂನು ತೊಡಕುಗಳಿವೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಹಿಂದಿನ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ಲಕ್ಷಾಂತರ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವು ನೀಡಿದರೆ, ಈಗಿನ ಸರ್ಕಾರ ಕಾನೂನುಗಳನ್ನು ಮುಂದಿಟ್ಟು ಬಡವರ ಹಕ್ಕುಗಳನ್ನು ನಿರಾಕರಿಸುತ್ತಿದೆ. ಅರಣ್ಯ ಹಕ್ಕು ಕಾಯ್ದೆಯಿದ್ದರೂ, ಅದನ್ನು ಸಮರ್ಪಕವಾಗಿ ಜಾರಿಗೆ ತರದೆ ಅರಣ್ಯ ಇಲಾಖೆಯ ಅಧಿಕಾರಿಗಳು ಜನರ ಹಕ್ಕುಗಳನ್ನು ಕಡೆಗಣಿಸುತ್ತಿದ್ದಾರೆ ಎಂದು ಹೋರಾಟ ಸಮಿತಿಯು ತಿಳಿಸಿದೆ.

ಒನ್ ಟೈಮ್ ಸೆಟಲ್ಮೆಂಟ್‌ಗೆ ಆಗ್ರಹ

‘ಭೂಮಿ ರಕ್ಷಿಸಲು ಕಾಯ್ದೆಗಳ ಬೇಲಿಗಳಿವೆ, ಆದರೆ ಬಡವರಿಗೆ ಭೂಮಿ ಮಂಜೂರು ಮಾಡಲು ಕಾನೂನು ತೊಡಕುಗಳಿವೆ. ಕಾರ್ಪೊರೇಟ್ ಕಂಪನಿಗಳಿಗೆ ಭೂಮಿ ದಾಟಲು ಕಾನೂನುಗಳಿವೆ’ ಎಂದು ಸಮಿತಿಯು ಬೇಸರ ವ್ಯಕ್ತಪಡಿಸಿದೆ. ದಲಿತರು, ಅಲೆಮಾರಿ, ಹಿಂದುಳಿದ ವರ್ಗದವರು ತಲೆಮಾರುಗಳಿಂದ ಭೂಮಿಯ ಒಡೆತನದ ಕನಸು ಕಾಣುತ್ತಿದ್ದಾರೆ. ಈ ಸಮಸ್ಯೆಯನ್ನು ನಿವಾರಿಸಲು, ರಾಜಕೀಯ ಪಕ್ಷಗಳು ಮತ ಬ್ಯಾಂಕ್‌ಗಾಗಿ ಬಡವರನ್ನು ಬಳಸಿಕೊಳ್ಳುವ ಬದಲು, ಅರಸು ಅವರ ಸಾಮಾಜಿಕ ನ್ಯಾಯದ ನೀತಿಯನ್ನು ಅನುಸರಿಸಿ, ಸಾಗುವಳಿ ಮಾಡುತ್ತಿರುವ ಎಲ್ಲ ಭೂರಹಿತರಿಗೆ ‘ಒನ್ ಟೈಮ್ ಸೆಟಲ್ಮೆಂಟ್’ ಮೂಲಕ ಭೂಮಿ ಮಂಜೂರು ಮಾಡಬೇಕು ಎಂದು ಸಮಿತಿ ಆಗ್ರಹಿಸಿದೆ.

ಸಮಿತಿಯ ಪ್ರಮುಖ ಬೇಡಿಕೆಗಳು:

ಗೋಮಾಳ ಭೂಮಿ: 100 ರಾಸುಗಳಿಗೆ 30 ಎಕರೆ ಗೋಮಾಳ ಭೂಮಿ ಮೀಸಲಿಡುವ ಹಳೆಯ ಮಾನದಂಡವನ್ನು ಬದಲಾಯಿಸಬೇಕು. ಇಂದಿನ ಕೃಷಿ ಮತ್ತು ಪಶುಸಂಗೋಪನೆಯ ವಾಸ್ತವ ಸ್ಥಿತಿಯನ್ನು ಪರಿಗಣಿಸಿ, ಗೋಮಾಳದ ಪರಿಕಲ್ಪನೆಯನ್ನು ಪುನರಾಲೋಚಿಸಬೇಕು.

ಕಂದಾಯ ಭೂಮಿ: ಸರ್ಕಾರಿ ಅ ಖರಾಬ್, ಬ ಖರಾಬ್, ಗೋಮಾಳ, ಹುಲ್ಲುಬನ್ನಿ, ಪೈಸಾರಿ, ಅರಣ್ಯದಂತಹ ನೂರಾರು ವರ್ಷಗಳಿಂದ ಮೂಲ ಸ್ವರೂಪ ಬದಲಿಸಿರುವ ಭೂಮಿಗಳ ಬಗ್ಗೆ ಹೊಸ ನೀತಿ ರೂಪಿಸಬೇಕು.

ನಗರ ಮಿತಿ ಅರ್ಜಿಗಳು: ನಗರ ಮಿತಿಯ ಹೆಸರಿನಲ್ಲಿ ತಿರಸ್ಕರಿಸಲ್ಪಟ್ಟ ಫಾರಂ 50, 53, ಮತ್ತು 57ರ ಅರ್ಜಿಗಳನ್ನು ‘ಒನ್ ಟೈಮ್ ಸೆಟಲ್ಮೆಂಟ್’ ಮೂಲಕ ಇತ್ಯರ್ಥಪಡಿಸಬೇಕು.

ಸಾಮಾಜಿಕ ನ್ಯಾಯ: ಸಾಗುವಳಿ ಮಾಡುತ್ತಿರುವ ಭೂರಹಿತರಲ್ಲಿ ಬಹುತೇಕರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗದವರೇ ಆಗಿದ್ದಾರೆ. ಅವರಿಗೆ ಸಾಮಾಜಿಕ ನ್ಯಾಯದ ಆಧಾರದಲ್ಲಿ ಭೂಮಿ ಹಕ್ಕು ನೀಡಬೇಕು.

ವಸತಿ ಹಕ್ಕು: ಪ್ರತಿ ಪಂಚಾಯಿತಿ ಮಟ್ಟದಲ್ಲಿ ವಸತಿ ರಹಿತರಿಗೆ ಗೌರವಯುತ ಜೀವನ ನಡೆಸಲು ವಸತಿ ಜಾಗವನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಿ ಹಕ್ಕು ಪತ್ರ ನೀಡಬೇಕು.

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು, ಡಿ. ದೇವರಾಜ ಅರಸು ಅವರ 110ನೇ ಜನ್ಮದಿನೋತ್ಸವದ ಸವಿನೆನಪಿಗಾಗಿ ಆಚರಿಸುತ್ತಿರುವ ಸರ್ಕಾರದ ಕಾರ್ಯಕ್ರಮಗಳು ಕೇವಲ ಸಾಂಕೇತಿಕವಾಗಿರದೆ, ಬಡವರ ಬದುಕಿನಲ್ಲಿ ನಿಜವಾದ ಬದಲಾವಣೆ ತರಬೇಕು ಎಂದು ಕರೆ ನೀಡಿದೆ.

ಒಳ ಮೀಸಲಾತಿ | ಜನಗಣತಿ ಅಂಕಿ-ಅಂಶ ಆಧರಿಸಿ ಬದಲಾವಣೆಗೆ ಬದ್ದ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....