Homeಕರ್ನಾಟಕಡಿ. ದೇವರಾಜ ಅರಸು 110ನೇ ಜನ್ಮದಿನೋತ್ಸವ: 'ಭೂಮಿ ಮತ್ತು ವಸತಿ' ಹಕ್ಕು ಮಾನ್ಯ ಮಾಡಲು 'ಒನ್...

ಡಿ. ದೇವರಾಜ ಅರಸು 110ನೇ ಜನ್ಮದಿನೋತ್ಸವ: ‘ಭೂಮಿ ಮತ್ತು ವಸತಿ’ ಹಕ್ಕು ಮಾನ್ಯ ಮಾಡಲು ‘ಒನ್ ಟೈಮ್ ಸೆಟಲ್ಮೆಂಟ್’ಗೆ ಆಗ್ರಹ

- Advertisement -
- Advertisement -

ಬೆಂಗಳೂರು: ದಿವಂಗತ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 110ನೇ ಜನ್ಮದಿನೋತ್ಸವದ ಸಂದರ್ಭದಲ್ಲಿ, ಅರಣ್ಯ ಹಾಗೂ ಬಗರ್ ಹುಕುಂ ಸಾಗುವಳಿದಾರರಿಗೆ ‘ಒನ್ ಟೈಮ್ ಸೆಟಲ್ಮೆಂಟ್’ ಮೂಲಕ ‘ಭೂಮಿ-ವಸತಿ’ ಹಕ್ಕುಗಳನ್ನು ಮಾನ್ಯ ಮಾಡುವಂತೆ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು ಸರ್ಕಾರಕ್ಕೆ ಆಗ್ರಹಿಸಿದೆ.

ಸ್ವಾತಂತ್ರ್ಯದ ಪೂರ್ವದಿಂದಲೂ ಭೂಮಿಯಿಲ್ಲದೆ ಜೀತಗಾರರಾಗಿ ಬದುಕಿದ, ಗೇಣಿಯಲ್ಲೇ ಜೀವನ ಸವೆಸಿದ ಬಡ ಕೂಲಿಕಾರರಿಗೆ ‘ಉಳುವವನೇ ಭೂ ಒಡೆಯ’ ಕಾನೂನು ಜಾರಿಗೆ ತಂದು ಲಕ್ಷಾಂತರ ದಲಿತ ಹಾಗೂ ಹಿಂದುಳಿದ ಸಮುದಾಯಗಳಿಗೆ ಭೂಮಿಯ ಹಕ್ಕು ದೊರಕಿಸಿಕೊಟ್ಟ ಅರಸು ಅವರ ಕೊಡುಗೆಯನ್ನು ಸಮಿತಿಯು ಸ್ಮರಿಸಿಕೊಂಡಿತು. ಆಗಿನ ಸರ್ಕಾರ ಭೂಮಾಲೀಕರಿಂದ ಭೂಮಿಯನ್ನು ಪಡೆದು ಬಡವರಿಗೆ ನೀಡಿದರೆ, ಈಗ ಬಗರ್ ಹುಕುಂ ಸಾಗುವಳಿದಾರರ ಮಾಲೀಕ ಸರ್ಕಾರವೇ ಆಗಿದೆ. ಈ ಸಂದರ್ಭದಲ್ಲಿ ಸರ್ಕಾರ ಬಡವರಿಗೆ ಭೂಮಿ ನೀಡಲು ಕಠಿಣ ನೀತಿಗಳನ್ನು ಅನುಸರಿಸುತ್ತಿದ್ದರೆ, ಕಾರ್ಪೊರೇಟ್ ಕಂಪನಿಗಳಿಗೆ ಸುಲಭವಾಗಿ ಭೂಮಿಯನ್ನು ನೀಡುತ್ತಿದೆ ಎಂದು ಸಮಿತಿ ಆರೋಪಿಸಿತು.

ಸರ್ಕಾರದ ಕಾನೂನು ತೊಡಕುಗಳ ಬಗ್ಗೆ ಆರೋಪ

ರಾಜ್ಯದಲ್ಲಿ 33 ಲಕ್ಷಕ್ಕೂ ಹೆಚ್ಚು ಬಗರ್ ಹುಕುಂ ಅರ್ಜಿಗಳು ಬಾಕಿ ಉಳಿದಿದ್ದು, ಶೇಕಡಾ 90ರಷ್ಟು ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಭೂಮಿ ನೀಡಲು ಕಾನೂನು ತೊಡಕುಗಳಿವೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಹಿಂದಿನ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ಲಕ್ಷಾಂತರ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವು ನೀಡಿದರೆ, ಈಗಿನ ಸರ್ಕಾರ ಕಾನೂನುಗಳನ್ನು ಮುಂದಿಟ್ಟು ಬಡವರ ಹಕ್ಕುಗಳನ್ನು ನಿರಾಕರಿಸುತ್ತಿದೆ. ಅರಣ್ಯ ಹಕ್ಕು ಕಾಯ್ದೆಯಿದ್ದರೂ, ಅದನ್ನು ಸಮರ್ಪಕವಾಗಿ ಜಾರಿಗೆ ತರದೆ ಅರಣ್ಯ ಇಲಾಖೆಯ ಅಧಿಕಾರಿಗಳು ಜನರ ಹಕ್ಕುಗಳನ್ನು ಕಡೆಗಣಿಸುತ್ತಿದ್ದಾರೆ ಎಂದು ಹೋರಾಟ ಸಮಿತಿಯು ತಿಳಿಸಿದೆ.

ಒನ್ ಟೈಮ್ ಸೆಟಲ್ಮೆಂಟ್‌ಗೆ ಆಗ್ರಹ

‘ಭೂಮಿ ರಕ್ಷಿಸಲು ಕಾಯ್ದೆಗಳ ಬೇಲಿಗಳಿವೆ, ಆದರೆ ಬಡವರಿಗೆ ಭೂಮಿ ಮಂಜೂರು ಮಾಡಲು ಕಾನೂನು ತೊಡಕುಗಳಿವೆ. ಕಾರ್ಪೊರೇಟ್ ಕಂಪನಿಗಳಿಗೆ ಭೂಮಿ ದಾಟಲು ಕಾನೂನುಗಳಿವೆ’ ಎಂದು ಸಮಿತಿಯು ಬೇಸರ ವ್ಯಕ್ತಪಡಿಸಿದೆ. ದಲಿತರು, ಅಲೆಮಾರಿ, ಹಿಂದುಳಿದ ವರ್ಗದವರು ತಲೆಮಾರುಗಳಿಂದ ಭೂಮಿಯ ಒಡೆತನದ ಕನಸು ಕಾಣುತ್ತಿದ್ದಾರೆ. ಈ ಸಮಸ್ಯೆಯನ್ನು ನಿವಾರಿಸಲು, ರಾಜಕೀಯ ಪಕ್ಷಗಳು ಮತ ಬ್ಯಾಂಕ್‌ಗಾಗಿ ಬಡವರನ್ನು ಬಳಸಿಕೊಳ್ಳುವ ಬದಲು, ಅರಸು ಅವರ ಸಾಮಾಜಿಕ ನ್ಯಾಯದ ನೀತಿಯನ್ನು ಅನುಸರಿಸಿ, ಸಾಗುವಳಿ ಮಾಡುತ್ತಿರುವ ಎಲ್ಲ ಭೂರಹಿತರಿಗೆ ‘ಒನ್ ಟೈಮ್ ಸೆಟಲ್ಮೆಂಟ್’ ಮೂಲಕ ಭೂಮಿ ಮಂಜೂರು ಮಾಡಬೇಕು ಎಂದು ಸಮಿತಿ ಆಗ್ರಹಿಸಿದೆ.

ಸಮಿತಿಯ ಪ್ರಮುಖ ಬೇಡಿಕೆಗಳು:

ಗೋಮಾಳ ಭೂಮಿ: 100 ರಾಸುಗಳಿಗೆ 30 ಎಕರೆ ಗೋಮಾಳ ಭೂಮಿ ಮೀಸಲಿಡುವ ಹಳೆಯ ಮಾನದಂಡವನ್ನು ಬದಲಾಯಿಸಬೇಕು. ಇಂದಿನ ಕೃಷಿ ಮತ್ತು ಪಶುಸಂಗೋಪನೆಯ ವಾಸ್ತವ ಸ್ಥಿತಿಯನ್ನು ಪರಿಗಣಿಸಿ, ಗೋಮಾಳದ ಪರಿಕಲ್ಪನೆಯನ್ನು ಪುನರಾಲೋಚಿಸಬೇಕು.

ಕಂದಾಯ ಭೂಮಿ: ಸರ್ಕಾರಿ ಅ ಖರಾಬ್, ಬ ಖರಾಬ್, ಗೋಮಾಳ, ಹುಲ್ಲುಬನ್ನಿ, ಪೈಸಾರಿ, ಅರಣ್ಯದಂತಹ ನೂರಾರು ವರ್ಷಗಳಿಂದ ಮೂಲ ಸ್ವರೂಪ ಬದಲಿಸಿರುವ ಭೂಮಿಗಳ ಬಗ್ಗೆ ಹೊಸ ನೀತಿ ರೂಪಿಸಬೇಕು.

ನಗರ ಮಿತಿ ಅರ್ಜಿಗಳು: ನಗರ ಮಿತಿಯ ಹೆಸರಿನಲ್ಲಿ ತಿರಸ್ಕರಿಸಲ್ಪಟ್ಟ ಫಾರಂ 50, 53, ಮತ್ತು 57ರ ಅರ್ಜಿಗಳನ್ನು ‘ಒನ್ ಟೈಮ್ ಸೆಟಲ್ಮೆಂಟ್’ ಮೂಲಕ ಇತ್ಯರ್ಥಪಡಿಸಬೇಕು.

ಸಾಮಾಜಿಕ ನ್ಯಾಯ: ಸಾಗುವಳಿ ಮಾಡುತ್ತಿರುವ ಭೂರಹಿತರಲ್ಲಿ ಬಹುತೇಕರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗದವರೇ ಆಗಿದ್ದಾರೆ. ಅವರಿಗೆ ಸಾಮಾಜಿಕ ನ್ಯಾಯದ ಆಧಾರದಲ್ಲಿ ಭೂಮಿ ಹಕ್ಕು ನೀಡಬೇಕು.

ವಸತಿ ಹಕ್ಕು: ಪ್ರತಿ ಪಂಚಾಯಿತಿ ಮಟ್ಟದಲ್ಲಿ ವಸತಿ ರಹಿತರಿಗೆ ಗೌರವಯುತ ಜೀವನ ನಡೆಸಲು ವಸತಿ ಜಾಗವನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಿ ಹಕ್ಕು ಪತ್ರ ನೀಡಬೇಕು.

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು, ಡಿ. ದೇವರಾಜ ಅರಸು ಅವರ 110ನೇ ಜನ್ಮದಿನೋತ್ಸವದ ಸವಿನೆನಪಿಗಾಗಿ ಆಚರಿಸುತ್ತಿರುವ ಸರ್ಕಾರದ ಕಾರ್ಯಕ್ರಮಗಳು ಕೇವಲ ಸಾಂಕೇತಿಕವಾಗಿರದೆ, ಬಡವರ ಬದುಕಿನಲ್ಲಿ ನಿಜವಾದ ಬದಲಾವಣೆ ತರಬೇಕು ಎಂದು ಕರೆ ನೀಡಿದೆ.

ಒಳ ಮೀಸಲಾತಿ | ಜನಗಣತಿ ಅಂಕಿ-ಅಂಶ ಆಧರಿಸಿ ಬದಲಾವಣೆಗೆ ಬದ್ದ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...