Homeಕರ್ನಾಟಕಡಿ. ದೇವರಾಜ ಅರಸು 110ನೇ ಜನ್ಮದಿನೋತ್ಸವ: 'ಭೂಮಿ ಮತ್ತು ವಸತಿ' ಹಕ್ಕು ಮಾನ್ಯ ಮಾಡಲು 'ಒನ್...

ಡಿ. ದೇವರಾಜ ಅರಸು 110ನೇ ಜನ್ಮದಿನೋತ್ಸವ: ‘ಭೂಮಿ ಮತ್ತು ವಸತಿ’ ಹಕ್ಕು ಮಾನ್ಯ ಮಾಡಲು ‘ಒನ್ ಟೈಮ್ ಸೆಟಲ್ಮೆಂಟ್’ಗೆ ಆಗ್ರಹ

- Advertisement -
- Advertisement -

ಬೆಂಗಳೂರು: ದಿವಂಗತ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 110ನೇ ಜನ್ಮದಿನೋತ್ಸವದ ಸಂದರ್ಭದಲ್ಲಿ, ಅರಣ್ಯ ಹಾಗೂ ಬಗರ್ ಹುಕುಂ ಸಾಗುವಳಿದಾರರಿಗೆ ‘ಒನ್ ಟೈಮ್ ಸೆಟಲ್ಮೆಂಟ್’ ಮೂಲಕ ‘ಭೂಮಿ-ವಸತಿ’ ಹಕ್ಕುಗಳನ್ನು ಮಾನ್ಯ ಮಾಡುವಂತೆ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು ಸರ್ಕಾರಕ್ಕೆ ಆಗ್ರಹಿಸಿದೆ.

ಸ್ವಾತಂತ್ರ್ಯದ ಪೂರ್ವದಿಂದಲೂ ಭೂಮಿಯಿಲ್ಲದೆ ಜೀತಗಾರರಾಗಿ ಬದುಕಿದ, ಗೇಣಿಯಲ್ಲೇ ಜೀವನ ಸವೆಸಿದ ಬಡ ಕೂಲಿಕಾರರಿಗೆ ‘ಉಳುವವನೇ ಭೂ ಒಡೆಯ’ ಕಾನೂನು ಜಾರಿಗೆ ತಂದು ಲಕ್ಷಾಂತರ ದಲಿತ ಹಾಗೂ ಹಿಂದುಳಿದ ಸಮುದಾಯಗಳಿಗೆ ಭೂಮಿಯ ಹಕ್ಕು ದೊರಕಿಸಿಕೊಟ್ಟ ಅರಸು ಅವರ ಕೊಡುಗೆಯನ್ನು ಸಮಿತಿಯು ಸ್ಮರಿಸಿಕೊಂಡಿತು. ಆಗಿನ ಸರ್ಕಾರ ಭೂಮಾಲೀಕರಿಂದ ಭೂಮಿಯನ್ನು ಪಡೆದು ಬಡವರಿಗೆ ನೀಡಿದರೆ, ಈಗ ಬಗರ್ ಹುಕುಂ ಸಾಗುವಳಿದಾರರ ಮಾಲೀಕ ಸರ್ಕಾರವೇ ಆಗಿದೆ. ಈ ಸಂದರ್ಭದಲ್ಲಿ ಸರ್ಕಾರ ಬಡವರಿಗೆ ಭೂಮಿ ನೀಡಲು ಕಠಿಣ ನೀತಿಗಳನ್ನು ಅನುಸರಿಸುತ್ತಿದ್ದರೆ, ಕಾರ್ಪೊರೇಟ್ ಕಂಪನಿಗಳಿಗೆ ಸುಲಭವಾಗಿ ಭೂಮಿಯನ್ನು ನೀಡುತ್ತಿದೆ ಎಂದು ಸಮಿತಿ ಆರೋಪಿಸಿತು.

ಸರ್ಕಾರದ ಕಾನೂನು ತೊಡಕುಗಳ ಬಗ್ಗೆ ಆರೋಪ

ರಾಜ್ಯದಲ್ಲಿ 33 ಲಕ್ಷಕ್ಕೂ ಹೆಚ್ಚು ಬಗರ್ ಹುಕುಂ ಅರ್ಜಿಗಳು ಬಾಕಿ ಉಳಿದಿದ್ದು, ಶೇಕಡಾ 90ರಷ್ಟು ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಭೂಮಿ ನೀಡಲು ಕಾನೂನು ತೊಡಕುಗಳಿವೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಹಿಂದಿನ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ಲಕ್ಷಾಂತರ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವು ನೀಡಿದರೆ, ಈಗಿನ ಸರ್ಕಾರ ಕಾನೂನುಗಳನ್ನು ಮುಂದಿಟ್ಟು ಬಡವರ ಹಕ್ಕುಗಳನ್ನು ನಿರಾಕರಿಸುತ್ತಿದೆ. ಅರಣ್ಯ ಹಕ್ಕು ಕಾಯ್ದೆಯಿದ್ದರೂ, ಅದನ್ನು ಸಮರ್ಪಕವಾಗಿ ಜಾರಿಗೆ ತರದೆ ಅರಣ್ಯ ಇಲಾಖೆಯ ಅಧಿಕಾರಿಗಳು ಜನರ ಹಕ್ಕುಗಳನ್ನು ಕಡೆಗಣಿಸುತ್ತಿದ್ದಾರೆ ಎಂದು ಹೋರಾಟ ಸಮಿತಿಯು ತಿಳಿಸಿದೆ.

ಒನ್ ಟೈಮ್ ಸೆಟಲ್ಮೆಂಟ್‌ಗೆ ಆಗ್ರಹ

‘ಭೂಮಿ ರಕ್ಷಿಸಲು ಕಾಯ್ದೆಗಳ ಬೇಲಿಗಳಿವೆ, ಆದರೆ ಬಡವರಿಗೆ ಭೂಮಿ ಮಂಜೂರು ಮಾಡಲು ಕಾನೂನು ತೊಡಕುಗಳಿವೆ. ಕಾರ್ಪೊರೇಟ್ ಕಂಪನಿಗಳಿಗೆ ಭೂಮಿ ದಾಟಲು ಕಾನೂನುಗಳಿವೆ’ ಎಂದು ಸಮಿತಿಯು ಬೇಸರ ವ್ಯಕ್ತಪಡಿಸಿದೆ. ದಲಿತರು, ಅಲೆಮಾರಿ, ಹಿಂದುಳಿದ ವರ್ಗದವರು ತಲೆಮಾರುಗಳಿಂದ ಭೂಮಿಯ ಒಡೆತನದ ಕನಸು ಕಾಣುತ್ತಿದ್ದಾರೆ. ಈ ಸಮಸ್ಯೆಯನ್ನು ನಿವಾರಿಸಲು, ರಾಜಕೀಯ ಪಕ್ಷಗಳು ಮತ ಬ್ಯಾಂಕ್‌ಗಾಗಿ ಬಡವರನ್ನು ಬಳಸಿಕೊಳ್ಳುವ ಬದಲು, ಅರಸು ಅವರ ಸಾಮಾಜಿಕ ನ್ಯಾಯದ ನೀತಿಯನ್ನು ಅನುಸರಿಸಿ, ಸಾಗುವಳಿ ಮಾಡುತ್ತಿರುವ ಎಲ್ಲ ಭೂರಹಿತರಿಗೆ ‘ಒನ್ ಟೈಮ್ ಸೆಟಲ್ಮೆಂಟ್’ ಮೂಲಕ ಭೂಮಿ ಮಂಜೂರು ಮಾಡಬೇಕು ಎಂದು ಸಮಿತಿ ಆಗ್ರಹಿಸಿದೆ.

ಸಮಿತಿಯ ಪ್ರಮುಖ ಬೇಡಿಕೆಗಳು:

ಗೋಮಾಳ ಭೂಮಿ: 100 ರಾಸುಗಳಿಗೆ 30 ಎಕರೆ ಗೋಮಾಳ ಭೂಮಿ ಮೀಸಲಿಡುವ ಹಳೆಯ ಮಾನದಂಡವನ್ನು ಬದಲಾಯಿಸಬೇಕು. ಇಂದಿನ ಕೃಷಿ ಮತ್ತು ಪಶುಸಂಗೋಪನೆಯ ವಾಸ್ತವ ಸ್ಥಿತಿಯನ್ನು ಪರಿಗಣಿಸಿ, ಗೋಮಾಳದ ಪರಿಕಲ್ಪನೆಯನ್ನು ಪುನರಾಲೋಚಿಸಬೇಕು.

ಕಂದಾಯ ಭೂಮಿ: ಸರ್ಕಾರಿ ಅ ಖರಾಬ್, ಬ ಖರಾಬ್, ಗೋಮಾಳ, ಹುಲ್ಲುಬನ್ನಿ, ಪೈಸಾರಿ, ಅರಣ್ಯದಂತಹ ನೂರಾರು ವರ್ಷಗಳಿಂದ ಮೂಲ ಸ್ವರೂಪ ಬದಲಿಸಿರುವ ಭೂಮಿಗಳ ಬಗ್ಗೆ ಹೊಸ ನೀತಿ ರೂಪಿಸಬೇಕು.

ನಗರ ಮಿತಿ ಅರ್ಜಿಗಳು: ನಗರ ಮಿತಿಯ ಹೆಸರಿನಲ್ಲಿ ತಿರಸ್ಕರಿಸಲ್ಪಟ್ಟ ಫಾರಂ 50, 53, ಮತ್ತು 57ರ ಅರ್ಜಿಗಳನ್ನು ‘ಒನ್ ಟೈಮ್ ಸೆಟಲ್ಮೆಂಟ್’ ಮೂಲಕ ಇತ್ಯರ್ಥಪಡಿಸಬೇಕು.

ಸಾಮಾಜಿಕ ನ್ಯಾಯ: ಸಾಗುವಳಿ ಮಾಡುತ್ತಿರುವ ಭೂರಹಿತರಲ್ಲಿ ಬಹುತೇಕರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗದವರೇ ಆಗಿದ್ದಾರೆ. ಅವರಿಗೆ ಸಾಮಾಜಿಕ ನ್ಯಾಯದ ಆಧಾರದಲ್ಲಿ ಭೂಮಿ ಹಕ್ಕು ನೀಡಬೇಕು.

ವಸತಿ ಹಕ್ಕು: ಪ್ರತಿ ಪಂಚಾಯಿತಿ ಮಟ್ಟದಲ್ಲಿ ವಸತಿ ರಹಿತರಿಗೆ ಗೌರವಯುತ ಜೀವನ ನಡೆಸಲು ವಸತಿ ಜಾಗವನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಿ ಹಕ್ಕು ಪತ್ರ ನೀಡಬೇಕು.

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು, ಡಿ. ದೇವರಾಜ ಅರಸು ಅವರ 110ನೇ ಜನ್ಮದಿನೋತ್ಸವದ ಸವಿನೆನಪಿಗಾಗಿ ಆಚರಿಸುತ್ತಿರುವ ಸರ್ಕಾರದ ಕಾರ್ಯಕ್ರಮಗಳು ಕೇವಲ ಸಾಂಕೇತಿಕವಾಗಿರದೆ, ಬಡವರ ಬದುಕಿನಲ್ಲಿ ನಿಜವಾದ ಬದಲಾವಣೆ ತರಬೇಕು ಎಂದು ಕರೆ ನೀಡಿದೆ.

ಒಳ ಮೀಸಲಾತಿ | ಜನಗಣತಿ ಅಂಕಿ-ಅಂಶ ಆಧರಿಸಿ ಬದಲಾವಣೆಗೆ ಬದ್ದ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...